ಕೋಚಿಂಗ್‌ ಸೆಂಟರ್‌ಗಳು ಡೆತ್‌ ಚೇಂಬರ್‌ಗಳಾಗಿ ಮಾರ್ಪಟ್ಟಿವೆ – ಸುಪ್ರೀಂ ಚಾಟಿ

Public TV
2 Min Read
Coaching center

ನವದೆಹಲಿ: ಸ್ಮರ್ಧಾತ್ಮಕ ಪರೀಕ್ಷೆಗಳಿಗಾಗಿ ತೆರೆಯುತ್ತಿರುವ ಕೋಚಿಂಗ್‌ ಸೆಂಟರ್‌ಗಳು (Coaching center) ವಿದ್ಯಾರ್ಥಿಗಳ ಜೀವನದ ಜೊತೆ ಆಟವಾಡುತ್ತಿವೆ ಮತ್ತು ಸಾವಿನ ಕೋಣೆಗಳಾಗಿ (ಡೆತ್‌ ಚೇಂಬರ್‌) ಮಾರ್ಪಟ್ಟಿವೆ ಎಂದು ಸುಪ್ರೀಂ ಕೋರ್ಟ್ (Supreme Court,) ಚಾಟಿ ಬೀಸಿದೆ.

ಓಲ್ಡ್ ರಾಜೇಂದರ್ ನಗರದಲ್ಲಿನ ಕೋಚಿಂಗ್‌ ಸೆಂಟರ್‌ನ ನೆಲ ಮಹಡಿಯಲ್ಲಿ ಸಿಲುಕಿ ಮೂವರು ವಿದ್ಯಾರ್ಥಿಗಳು (IAS Aspirants) ಸಾವನ್ನಪ್ಪಿದ್ದ ಪ್ರಕರಣದ ಸಂಬಂಧ ಸ್ವಯಂ ದೂರು ದಾಖಲಿಸಿಕೊಂಡಿದೆ. ಇದನ್ನೂ ಓದಿ: ಆಪ್‌ಗೆ ಹಿನ್ನಡೆ, ಎಂಸಿಡಿಗೆ ಸದಸ್ಯರ ನಾಮನಿರ್ದೇಶನದ ಅಧಿಕಾರ ಎಲ್‌ಜಿಗಿದೆ – ಸುಪ್ರೀಂ

SUPREME COURT

ಸೋಮವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರಿದ್ದ ದ್ವಿಸದಸ್ಯ ಪೀಠವು, ಕೋಚಿಂಗ್ ಸೆಂಟರ್‌ಗಳಲ್ಲಿ ಸುರಕ್ಷತಾ ನಿಯಮಗಳನ್ನು ಅಳವಡಿಸಲಾಗಿದೆಯೇ ಎಂದು ಕೇಳಿ ನ್ಯಾಯಾಲಯ ಕೇಂದ್ರ ಸರ್ಕಾರ ಮತ್ತು ದೆಹಲಿಯ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದೆ. ಈ ವಿಷಯದಲ್ಲಿ ನ್ಯಾಯಾಲಯಕ್ಕೆ ಸಹಾಯ ಮಾಡುವಂತೆ ಸುಪ್ರೀಂ ಕೋರ್ಟ್ ಅಟಾರ್ನಿ ಜನರಲ್ ಅವರನ್ನು ಕೇಳಿದೆ. ಇದನ್ನೂ ಓದಿ: ಅಮೆರಿಕದಲ್ಲಿ ನಿರುದ್ಯೋಗ ದರ ಏರಿಕೆ, ಆರ್ಥಿಕ ಹಿಂಜರಿತ ಭೀತಿ – ಕರಗಿತು ಹೂಡಿಕೆದಾರರ 17 ಲಕ್ಷ ಕೋಟಿ ರೂ. ಸಂಪತ್ತು

UPSC Aspirants

ದೆಹಲಿಯ ಎನ್‌ಸಿಟಿ ಅಥವಾ ಕೇಂದ್ರ ಸರ್ಕಾರ ಇಲ್ಲಿಯವರೆಗೆ ಯಾವ ಪರಿಣಾಮಕಾರಿ ಕ್ರಮವನ್ನು ತೆಗೆದುಕೊಂಡಿದೆ ಎಂದು ನಮಗೆ ಖಚಿತವಿಲ್ಲ. ತಮ್ಮ ವೃತ್ತಿಜೀವನಕ್ಕಾಗಿ ಕೋಚಿಂಗ್ ಸೆಂಟರ್‌ಗಳಿಗೆ ಸೇರಿದ ಕೆಲವು ಯುವಕರ ಜೀವನವನ್ನು ಕಸಿದುಕೊಳ್ಳುವ ದುರದೃಷ್ಟಕರ ಘಟನೆಗಳು ಎಲ್ಲರ ಕಣ್ಣು ತೆರೆಸುತ್ತವೆ. ನಾವು ಎಚ್ಚರಗೊಳ್ಳುವ ಅಗತ್ಯವಿದೆ ಎಂದು ನ್ಯಾಯಮೂರ್ತಿಗಳು ಹೇಳಿದರು.

ಜುಲೈ 27 ರಂದು ಭಾರೀ ಮಳೆಯ ನಂತರ ಪ್ರವಾಹದಿಂದಾಗಿ ಓಲ್ಡ್ ರಾಜೇಂದ್ರನಗರದಲ್ಲಿರುವ ರಾವ್ಸ್ ಐಎಎಸ್ ಸ್ಟಡಿ ಸರ್ಕಲ್‌ನ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು. ತಾನಿಯಾ ಸೋನಿ (25), ಶ್ರೇಯಾ ಯಾದವ್ (25) ಮತ್ತು ನವೀನ್ ಡೆಲ್ವಿನ್ (28) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಕೋಚಿಂಗ್ ಸೆಂಟರ್‌ಗೆ ಮಳೆ ನೀರು ನುಗ್ಗಿ ಮೂವರು UPSC ಆಕಾಂಕ್ಷಿಗಳು ಸಾವು – ಮಾಲೀಕ ಸೇರಿ ಇಬ್ಬರು ಅರೆಸ್ಟ್‌

Delhi

ಸಾವು ಸಂಭವಿಸಲು ಕಾರಣ ಏನು?
ಕೋಚಿಂಗ್‌ ಸೆಂಟರ್‌ನಿಂದ ನೆಲಮಾಳಿಗೆಯಲ್ಲಿ ಪಾರ್ಕಿಂಗ್‌ ಮತ್ತು ಸ್ಟೋರ್‌ ರೂಮ್‌ಗಳಿಗಾಗಿ ಅನುಮತಿ ಪಡೆಯಲಾಗಿತ್ತು. 2 ನೆಲಮಾಳಿಗೆಗಳನ್ನ ಪಾರ್ಕಿಂಗ್ ಮತ್ತು ಸ್ಟೋರ್‌ ರೂಮ್‌ಗಾಗಿ ಕಳೆದ ತಿಂಗಳ ಜುಲೈ 9ರಂದು ಎನ್‌ಒಸಿ ಪಡೆದುಕೊಂಡಿತ್ತು. ಆದರೆ ನಿಯಮಕ್ಕೆ ವಿರುದ್ಧವಾಗಿ ಗ್ರಂಥಾಲಯ ನಿರ್ಮಾಣ ಮಾಡಲಾಗಿತ್ತು. ಈ ಗ್ರಂಥಾಲದಲ್ಲಿ 7 ವಿದ್ಯಾರ್ಥಿಗಳು ಓದುತ್ತಿದ್ದಾಗ ಏಕಾಏಕಿ ನೀರು ನುಗ್ಗಿದ ಪರಿಣಾಮ, ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share This Article