ಬಳ್ಳಾರಿ: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೇವೇಂದ್ರಪ್ಪ ಪರವಾಗಿ ಶಾಸಕ ಶ್ರೀರಾಮುಲು ಭರ್ಜರಿ ಪ್ರಚಾರಕ್ಕೆ ಇಳಿದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಅಲೆಯ ಮುಂದೆ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಅಲೆ ನಡೆಯಲ್ಲ ಎಂದು ಶಾಸಕ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.
- Advertisement 2
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ವೇಳೆ ಸರಿಯಾದ ದಾಖಲೆಗಳನ್ನ ನೀಡಿಲ್ಲ. ಹೀಗಾಗಿ ಅವರ ನಾಮಪತ್ರ ರದ್ದಾಗಬೇಕಿತ್ತು. ಆದ್ರೆ ಸಿಎಂ ಕುಮಾರಸ್ವಾಮಿ ತಮ್ಮ ಪ್ರಭಾವ ಬಳಸಿ ಅಧಿಕಾರಗಳನ್ನ ಹಿಡಿತದಲ್ಲಿಟ್ಟುಕೊಂಡಿದ್ದಾರೆ. ನಾಮಪತ್ರ ಸಲ್ಲಿಕೆ ನಂತರ ದಾಖಲೆಗಳನ್ನ ನೀಡಿ ಸರಿ ಮಾಡಿಕೊಂಡಿದ್ದಾರೆ. ಕುಮಾರಸ್ವಾಮಿಗೆ ಮಂಡ್ಯ, ಹಾಸನ, ತುಮಕೂರಿನಲ್ಲಿ ಮಾತ್ರ ಚುನಾವಣೆ ಕಂಡು ಬರುತ್ತಿದೆ. ಅದಕ್ಕೆ ಅಲ್ಲಿ ಮಾತ್ರ ಪ್ರಚಾರ ಮಾಡಿಕೊಂಡು ಬ್ಯುಸಿಯಾಗಿದ್ದಾರೆ. ಆದ್ರೆ ಈ ಮೂರು ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಸೋಲುತ್ತಾರೆ ಎಂದು ಭವಿಷ್ಯ ನುಡಿದರು.
- Advertisement 3
- Advertisement 4
ಅಷ್ಟೇ ಅಲ್ಲದೆ, ಈ ಬಾರಿ ಬಿಜೆಪಿ ರಾಜ್ಯದಲ್ಲಿ ಕನಿಷ್ಠ 24 ಕ್ಷೇತ್ರದಲ್ಲಿ ಗೆಲ್ಲುತ್ತದೆ. ಮೋದಿ ಅಲೆ ಮುಂದೆ ಮೈತ್ರಿ ಅಲೆ ನಡೆಯಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಾಮಪತ್ರ ಸಲ್ಲಿಕೆಗೆ ಇನ್ನೂ ಎರಡು ದಿನ ಇರುವಾಗಲೇ ದೇವೆಂದ್ರಪ್ಪ ಪರವಾಗಿ ಶಾಸಕ ಶ್ರೀರಾಮುಲು ಹಾಗೂ ಮಾಜಿ ಶಾಸಕ ಸುರೇಶಬಾಬು ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿಂದು ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದರು. ಕಪ್ಪಗಲ್, ಹಿರೇಹಡ್ಲಗಿ, ಚಾನಾಳ್ ಸೇರಿದಂತೆ ವಿವಿಧ ಗ್ರಾಮಗಳಲ್ಲಿಂದು ಬಿಜೆಪಿ ಅಭ್ಯರ್ಥಿ ದೇವೇಂದ್ರಪ್ಪ ಜೊತೆಗೆ ಮತಯಾಚನೆ ಮಾಡಿದರು. ಈ ವೇಳೆ ಕಪ್ಪಗಲ್ ಗ್ರಾಮದಲ್ಲಿ ಮತಯಾಚನೆ ವೇಳೆ ಮಹಿಳೆಯೊಬ್ಬರು ರಸ್ತೆ ಮಾಡಿಲ್ಲ, ಕುಡಿಯೋಕೆ ನೀರಿಲ್ಲ ಅಂತ ಕ್ಲಾಸ್ ತೆಗೆದುಕೊಂಡರು. ಆಗ ಕಾಲಿಗೆ ಬಿದ್ದು ಕೆಲಸ ಮಾಡುತ್ತೇವೆ ಮತ ಹಾಕಿ ಎಂದು ಮಹಿಳೆಯರಿಗೆ ಸಾಮಾಧಾನ ಮಾಡಿ ಮುಂದೆ ಸಾಗಿದರು.