Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅತೃಪ್ತರಿಗೆ ಖೆಡ್ಡಾ ತೋಡಲು ದೋಸ್ತಿಗಳಿಂದ ರಣತಂತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅತೃಪ್ತರಿಗೆ ಖೆಡ್ಡಾ ತೋಡಲು ದೋಸ್ತಿಗಳಿಂದ ರಣತಂತ್ರ

Bengaluru City

ಅತೃಪ್ತರಿಗೆ ಖೆಡ್ಡಾ ತೋಡಲು ದೋಸ್ತಿಗಳಿಂದ ರಣತಂತ್ರ

Public TV
Last updated: July 27, 2019 7:32 am
Public TV
Share
3 Min Read
dosthi
SHARE

ಬೆಂಗಳೂರು: ಸಮ್ಮಿಶ್ರ ಸರ್ಕಾರ ಉರುಳಿಸಿದ ಬಂಡಾಯ ಶಾಸಕರಿಗೆ ಶತಾಯಗತಾಯ ಬುದ್ಧಿ ಕಲಿಸಲೇಬೇಕು ಎಂದು ದೋಸ್ತಿ ನಾಯಕರು ಮುಂದಾಗಿದ್ದಾರೆ. ಹೀಗಾಗಿ ರಾಜೀನಾಮೆ ಕೊಟ್ಟ ಶಾಸಕರ ಕ್ಷೇತ್ರಗಳಲ್ಲಿ ಉಪಚುನಾವಣೆಗೆ ಈಗಲೇ ದೋಸ್ತಿ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸುತ್ತಿದ್ದಾರೆ.

ಅದರಲ್ಲೂ ಕಾಂಗ್ರೆಸ್-ಜೆಡಿಎಸ್ ಪ್ರಾಬಲ್ಯದ ಹಳೆ ಮೈಸೂರು ಭಾಗದ ಏಳು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲೇಬೇಕು ಅನ್ನೋದು ದೋಸ್ತಿಗಳ ಪ್ಲಾನ್ ಆಗಿದೆ. ಅದಕ್ಕಾಗಿ ಹುಣಸೂರು, ಕೆ.ಆರ್ ಪೇಟೆ, ಯಶವಂತಪುರ, ರಾಜರಾಜೇಶ್ವರಿ ನಗರ, ಮಹಾಲಕ್ಷ್ಮಿ ಲೇಔಟ್, ಕೆ.ಆರ್ ಪುರಂ, ಹೊಸಕೋಟೆ ಹಾಗೂ ಚಿಕ್ಕಾಬಳ್ಳಾಪುರದಲ್ಲಿ ಬಂಡಾಯಗಾರರಿಗೆ ಬಿಸಿ ಮುಟ್ಟಿಸಲೇ ಬೇಕು ಎಂದು ದೋಸ್ತಿಗಳು ಸಿದ್ಧ ಮಾಡಿಕೊಳ್ಳುತ್ತಿದ್ದಾರೆ.

ಮುಂದೆ ಬರುವ ಉಪ ಚುನಾವಣೆಗೆ ಈಗಲೇ ಅಭ್ಯರ್ಥಿ ಆಯ್ಕೆ ಕಸರತ್ತು ಆರಂಭಿಸಿದ್ದು, ಒಳಗೊಳಗೆ ಬಹುತೇಕ ಅಭ್ಯರ್ಥಿಗಳನ್ನು ಅಂತಿಮ ಪಡಿಸಿ ಅಖಾಡಕ್ಕೆ ಇಳಿಸಲು ಸಿದ್ಧತೆಯನ್ನು ದೋಸ್ತಿ ನಾಯಕರು ಆರಂಭಿಸಿದ್ದಾರೆ. ಎಂಟರಲ್ಲಿ ನಾಲ್ಕು ಜೆಡಿಎಸ್ ಅಭ್ಯರ್ಥಿಗಳು ಹಾಗೂ ನಾಲ್ಕು ಕಾಂಗ್ರೆಸ್ ಅಭ್ಯರ್ಥಿಗಳು ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.

Rebel MLAs C 1

ಯಾರ‍್ಯಾರು ಯಾವ್ಯಾವ ಕ್ಷೇತ್ರ:
1) ಹುಣಸೂರು ಕ್ಷೇತ್ರ: ಜೆಡಿಎಸ್ ಮಾಜಿ ರಾಜ್ಯಾಧ್ಯಕ್ಷ ವಿಶ್ವನಾಥ್ ಕೈ ಕೊಟ್ಟ ಕ್ಷೇತ್ರದಲ್ಲಿ ಕಾಂಗ್ರೆಸ್ ಮಾಜಿ ಶಾಸಕ ಮಂಜುನಾಥ್ ಅಖಾಡಕ್ಕೆ ಇಳಿಯಲಿದ್ದಾರೆ. ಜೆಡಿಎಸ್ ಶಾಸಕರಿದ್ದ ಈ ಕ್ಷೇತ್ರವನ್ನ ಕಾಂಗ್ರೆಸ್‍ಗೆ ಬಿಟ್ಟು ಕೊಡುವುದು ಖಚಿತವಾಗಿದೆ.

2) ಕೆ.ಆರ್.ಪುರಂ ಕ್ಷೇತ್ರ: ಜೆಡಿಎಸ್‍ನ ನಾರಾಯಣ ಗೌಡ ಕೈ ಕೊಟ್ಟ ಈ ಕ್ಷೇತ್ರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಅಖಾಡಕ್ಕೆ ಇಳಿಯುವುದು ಖಚಿತವಾಗಿದೆ. ಲೋಕಸಭಾ ಚುನಾವಣೆಯ ಸೋಲಿನ ನೋವಿನಲ್ಲಿರುವ ನಿಖಿಲ್‍ಗೆ ಕೆ.ಆರ್.ಪೇಟೆ ಉಪ ಚುನಾವಣೆ ಗೆಲುವು ತಂದು ಕೊಡುತ್ತಾ ಕಾದು ನೋಡಬೇಕಾಗಿದೆ.

3) ಯಶವಂತಪುರ ಕ್ಷೇತ್ರ: ಬೆಂಗಳೂರಿನ ಯಶವಂತಪುರ ಕ್ಷೇತ್ರದಲ್ಲಿ ಕಾಂಗ್ರೆಸ್‍ನ ಎಸ್.ಟಿ.ಸೋಮಶೇಖರ್ ಬಂಡಾಯದ ಬಾವುಟ ಹಾರಿಸಿ ರಾಜೀನಾಮೆ ಕೊಟ್ಟಿದ್ದಾರೆ. ಆದರೆ ಇಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಪೈಪೋಟಿ ಇರುವುದರಿಂದ ಕ್ಷೇತ್ರವನ್ನ ಜೆಡಿಎಸ್‍ಗೆ ಕಾಂಗ್ರೆಸ್ ಬಿಟ್ಟು ಕೊಡಲಿದೆ. ಜೆಡಿಎಸ್‍ನ ಜವರಾಯಿಗೌಡ ಇಲ್ಲಿ ಅಭ್ಯರ್ಥಿಯಾಗಲಿದ್ದಾರೆ.

4) ರಾಜರಾಜೇಶ್ವರಿ ಕ್ಷೇತ್ರ: ಕಾಂಗ್ರೆಸ್‍ನ ಮುನಿರತ್ನ ಗೆದ್ದಿದ್ದ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರ ಅವರ ಬಂಡಾಯದಿಂದ ತೆರವಾಗಿದೆ. ಹೀಗಾಗಿ ಕಾಂಗ್ರೆಸ್ ಭದ್ರ ಕೋಟೆ ಅನ್ನಿಸಿಕೊಂಡಿರುವ ಅಲ್ಲಿ ಮಾಜಿ ಶಾಸಕ ಪ್ರಿಯಾ ಕೃಷ್ಣರನ್ನ ಅಖಾಡಕ್ಕೆ ಇಳಿಸಲು ಕಾಂಗ್ರೆಸ್ ಮುಂದಾಗಿದೆ. ಕಾಂಗ್ರೆಸ್ ಮುಖಂಡ ರಾಜಕುಮಾರ್ ಸಹ ಟಿಕೆಟ್ ಆಕಾಂಕ್ಷಿ ಆಗಿದ್ದಾರೆ.

5) ಮಹಾಲಕ್ಷ್ಮಿ ಲೇಔಟ್: ಜೆಡಿಎಸ್‍ನ ಗೋಪಾಲಯ್ಯ ಗೆದ್ದಿದ್ದ ಮಹಾಲಕ್ಷ್ಮಿಲೇಔಟ್ ಕ್ಷೇತ್ರ ಸಹಾ ಕಾಂಗ್ರೆಸ್‍ಗೆ ಒಲಿಯಲಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನಿಂದ ಸ್ಪರ್ಧಿಸಿದ್ದ ಎನ್‍ಎಸ್ ಯುಐ ರಾಜ್ಯಾಧ್ಯಕ್ಷ ಹಾಗೂ ಡಿ.ಕೆ ಶಿವಕುಮಾರ್ ಪಟ್ಟ ಶಿಷ್ಯ ಮಂಜುನಾಥ್ ಗೌಡ ಈ ಬಾರಿ ಅಖಾಡಕ್ಕೆ ಇಳಿಯೋದು ಖಚಿತವಾಗಿದೆ.

419424

6) ಕೆ.ಆರ್.ಪುರಂ ಕ್ಷೇತ್ರ: ಕಾಂಗ್ರೆಸ್‍ನ ಬೈರತಿ ಬಸವರಾಜು ಗೆದ್ದಿದ್ದ ಈ ಕ್ಷೇತ್ರದಲ್ಲಿ ಉಪ ಚುನಾವಣೆಗೆ ವೇದಿಕೆ ಬಹುತೇಕ ಸಿದ್ಧವಾಗಿದೆ. ಕಾಂಗ್ರೆಸ್ಸಿನಿಂದ ವಕೀಲ ಧನಂಜಯ್ ಹಾಗೂ ಕಾರ್ಪೊರೇಟರ್ ಉದಯ ಕುಮಾರ್ ನಡುವೆ ಸ್ಪರ್ಧೆಯಿದ್ದು, ಇಬ್ಬರಲ್ಲಿ ಒಬ್ಬರು ಶಾಸಕರಾಗುವುದು ಬಹುತೇಕ ಖಚಿತವಾಗಿದೆ.

7) ಹೊಸಕೋಟೆ ಕ್ಷೇತ್ರ: ಕಾಂಗ್ರೆಸ್‍ನ ಎಂ.ಟಿ.ಬಿ ನಾಗರಾಜ್ ಶಾಸಕರಾಗಿದ್ದ ಹೊಸಕೋಟೆ ಕ್ಷೇತ್ರ ಎಂಟಿಬಿ ರಾಜೀನಾಮೆಯಿಂದ ತೆರವಾಗಿದೆ. ಮಾಜಿ ಶಾಸಕ ಮಾಲೂರು ಮಂಜುನಾಥ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಖಾಡಕ್ಕೆ ಇಳಿಯಲಿದ್ದಾರೆ. .

8) ಚಿಕ್ಕಬಳ್ಳಾಪುರ ಕ್ಷೇತ್ರ: ಕಾಂಗ್ರೆಸ್‍ನ ಡಾ.ಸುಧಾಕರ್ ರಾಜೀನಾಮೆಯಿಂದ ತೆರವಾಗಲಿರುವ ಈ ಕ್ಷೇತ್ರದಲ್ಲಿ ಜೆಡಿಎಸ್‍ನಿಂದ ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ಅಂಜನಪ್ಪ ಹಾಗೂ ಚಿಂತಾಮಣಿ ಮಾಜಿ ಶಾಸಕ ಸುಧಾಕರ್ ಇಬ್ಬರಲ್ಲಿ ಒಬ್ಬರು ಅಭ್ಯರ್ಥಿ ಆಗಲಿದ್ದಾರೆ.

ಹೀಗೆ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಗೆ ದೋಸ್ತಿ ನಾಯಕರುಗಳು ಸದ್ದಿಲ್ಲದೆ ಸಿದ್ಧತೆ ನಡೆಸಿದ್ದಾರೆ. ತಮಗೆ ಕೈಕೊಟ್ಟು ಸರ್ಕಾರ ಕೆಡವಿದ ಬಂಡಾಯಗಾರರಿಗೆ ಶತಾಯಗತಾಯ ಸೋಲಿನ ರುಚಿ ತೋರಿಸಲು ದೋಸ್ತಿಗಳು ಮುಂದಾಗಿದ್ದು, ಉಪ ಸಮರದ ಕಾವು ಚುನಾವಣೆ ಘೋಷಣೆಗೆ ಮೊದಲೇ ಏರುವಂತೆ ಮಾಡಿದ್ದಾರೆ.

TAGGED:bengaluruCoalition GovernmentdevegowdameetingMLA'sPublic TVಪಬ್ಲಿಕ್ ಟಿವಿಬೆಂಗಳೂರುಶಾಸಕರುಸಭೆಸಮ್ಮಿಶ್ರ ಸರ್ಕಾರ
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

ICC Mens T20 World Cup ind vs Namibia Jasprit Bumrahs stunning catch Axar Patel shocked
Cricket

ಬುಮ್ರಾ ಸ್ಟನ್ನಿಂಗ್‌ ಕ್ಯಾಚ್‌ – ಅಕ್ಷರ್‌ ಪಟೇಲ್‌ ಶಾಕ್‌!

Public TV
By Public TV
27 minutes ago
kids died accident
Districts

ಶಾಲಾ ಬಸ್ ಹರಿದು ಮಕ್ಕಳು ಸಾವು – ಸ್ವಗ್ರಾಮದಲ್ಲಿ ನೆರವೇರಿದ ಅಂತ್ಯಕ್ರಿಯೆ

Public TV
By Public TV
1 hour ago
Ishan Kishan Hardik Pandya
Cricket

ಕಿಶನ್‌ ದಾಖಲೆಯ ಫಿಫ್ಟಿ, ಪಾಂಡ್ಯ ಆಲ್‌ರೌಂಡರ್‌ ಆಟ – ನಮೀಬಿಯಾ ವಿರುದ್ಧ 93 ರನ್‌ಗಳ ಭರ್ಜರಿ ಜಯ

Public TV
By Public TV
1 hour ago
01 6
Big Bulletin

ಬಿಗ್‌ ಬುಲೆಟಿನ್‌ 12 February 2026 ಭಾಗ-1

Public TV
By Public TV
1 hour ago
02 7
Big Bulletin

ಬಿಗ್‌ ಬುಲೆಟಿನ್‌ 12 February 2026 ಭಾಗ-2

Public TV
By Public TV
1 hour ago
03 6
Big Bulletin

ಬಿಗ್‌ ಬುಲೆಟಿನ್‌ 12 February 2026 ಭಾಗ-3

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?