ಚಿಕ್ಕಮಗಳೂರು: ರಸ್ತೆ ಅಗಲೀಕರಣದ ಕಾಮಗಾರಿ ವೇಳೆ ಜೆಸಿಬಿಗೆ ಸಿಲುಕಿದ್ದ ನಾಗರಹಾವನ್ನು ಸ್ಥಳೀಯರು ರಕ್ಷಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮದ ಬಳಿ ರಸ್ತೆ ಅಗಲೀಕರಣದ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ 7 ಅಡಿ ಉದ್ದದ ನಾಗರಹಾವು ಕಾರ್ಯ ನಿರ್ವಹಿಸುತ್ತಿದ್ದ ಜೆಸಿಬಿ ಅಡಿ ಸಿಲುಕಿತ್ತು. ಗಾಯಗೊಂಡಿದ್ದ ನಾಗರಹಾವನ್ನು ನೋಡಿದ ಸ್ಥಳೀಯರು ಕೂಡಲೇ ಉರಗ ತಜ್ಞ ಆರೀಫ್ ಎಂಬವರಿಗೆ ವಿಷಯ ತಿಳಿಸಿದ್ದಾರೆ.
- Advertisement 2
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಆರೀಫ್ ಗಾಯಗೊಂಡಿದ್ದ ಹಾವಿಗೆ ಮೊದಲಿಗೆ ನೀರು ಕುಡಿಸಿದ್ದಾರೆ. ನಿಧಾನವಾಗಿ ಹಾವನ್ನು ಸೆರೆ ಹಿಡಿದು ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಹಾವು ಸುಧಾರಿಸಿಕೊಳ್ಳುತ್ತಿದ್ದಂತೆ ಅದನ್ನು ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.
- Advertisement 3
https://youtu.be/CP307VET23I
- Advertisement 4
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv