Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮೇಶ್ವರಂ ಕೆಫೆ ತಿಂಡಿಯಲ್ಲಿ ಜಿರಳೆ ಪತ್ತೆ ಕೇಸ್ – ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಆರೋಪದಡಿ ಗ್ರಾಹಕನ ವಿರುದ್ಧ ದೂರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಮೇಶ್ವರಂ ಕೆಫೆ ತಿಂಡಿಯಲ್ಲಿ ಜಿರಳೆ ಪತ್ತೆ ಕೇಸ್ – ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಆರೋಪದಡಿ ಗ್ರಾಹಕನ ವಿರುದ್ಧ ದೂರು

Bengaluru City

ರಾಮೇಶ್ವರಂ ಕೆಫೆ ತಿಂಡಿಯಲ್ಲಿ ಜಿರಳೆ ಪತ್ತೆ ಕೇಸ್ – ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಆರೋಪದಡಿ ಗ್ರಾಹಕನ ವಿರುದ್ಧ ದೂರು

Public TV
Last updated: July 24, 2025 7:41 pm
Public TV
Share
2 Min Read
Rameshwaram Cafe
SHARE

ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನ ರಾಮೇಶ್ವರಂ ಕೆಫೆ (Rameshwaram Cafe) ತಿಂಡಿಯಲ್ಲಿ ಜಿರಳೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಹಕನ ವಿರುದ್ಧ ಹಣಕ್ಕಾಗಿ ಬ್ಲ್ಯಾಕ್‌ಮೇಲ್ (Blackmail) ಆರೋಪದಡಿ ದೂರು ದಾಖಲಾಗಿದೆ.

ಗುರುವಾರ ಬೆಳಿಗ್ಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ (Bengaluru Airport) ರಾಮೇಶ್ವರಂ ಕೆಫೆಯಲ್ಲಿ ಗ್ರಾಹಕನೋರ್ವ ಪೊಂಗಲ್ ಖರೀದಿಸಿ, ಸೇವಿಸುತ್ತಿರುವಾಗ ಅದರಲ್ಲಿ ಜಿರಳೆ ಪತ್ತೆಯಾಗಿದೆ. ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆ ರಾಮೇಶ್ವರಂ ಕೆಫೆ ಸ್ಪಷ್ಟನೆ ನೀಡಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಗ್ರಾಹಕರು ಆಹಾರ ಮಾಲಿನ್ಯದ ಬಗ್ಗೆ ಸುಳ್ಳು ಆರೋಪ ಹೊರಿಸುತ್ತಿದ್ದು, ಈ ಮೂಲಕ ಬ್ರ್ಯಾಂಡ್‌ಮೇಲ್‌ಗೆ ಹಾನಿ ಮಾಡಲು ಹೊರಟಿದ್ದಾರೆ. ಜೊತೆಗೆ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ ಎಂದು ಆರೋಪಿಸಿದೆ. ಈ ಸಂಬಂಧ ಗ್ರಾಹಕನ ವಿರುದ್ಧ ದಾಖಲಾಗಿದೆ.ಇದನ್ನೂ ಓದಿ: ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ

ಸ್ಪಷ್ಟನೆ ಏನು?
ಭಾರತದ ಅತ್ಯಂತ ಜನಪ್ರಿಯ ಕ್ವಿಕ್ ಸರ್ವಿಸ್ ರೆಸ್ಟೋರೆಂಟ್ ಬ್ರ್ಯಾಂಡ್‌ಗಳಲ್ಲಿ ಒಂದಾದ ರಾಮೇಶ್ವರಂ ಕೆಫೆ, ತನ್ನ ಬೆಂಗಳೂರು ವಿಮಾನ ನಿಲ್ದಾಣದ ಔಟ್‌ಲೆಟ್‌ನಲ್ಲಿ ಆಹಾರ ಮಾಲಿನ್ಯದ ಸುಳ್ಳು ಘಟನೆಯನ್ನು ಪ್ರದರ್ಶಿಸಿ, ಬ್ರ‍್ಯಾಂಡ್‌ಗೆ ಹಾನಿಯಾಗಿದೆ. ಜೊತೆಗೆ ಹಣ ಸುಲಿಗೆ ಮಾಡಲು ಯತ್ನಿಸಿದ ವ್ಯಕ್ತಿಗಳ ಗುಂಪಿನ ವಿರುದ್ಧ ಅಧಿಕೃತ ಪೊಲೀಸ್ ದೂರು ದಾಖಲಿಸಿದೆ.

ಬ್ರ‍್ಯಾಂಡ್‌ನ ಮುಖ್ಯಸ್ಥರು ನೀಡಿದ ಔಪಚಾರಿಕ ದೂರಿನ ಪ್ರಕಾರ, ಜು.24ರ ಬೆಳಿಗ್ಗೆ ಈ ಘಟನೆ ಸಂಭವಿಸಿದೆ, 5-7 ವ್ಯಕ್ತಿಗಳ ಗುಂಪು ಸಾರ್ವಜನಿಕವಾಗಿ ಗೊಂದಲ ಸೃಷ್ಟಿಸಿದ್ದಾರೆ. ನೀಡಿದ ಆಹಾರದಲ್ಲಿ ಜಿರಳೆಯಿದೆ ಎಂದು ತಪ್ಪಾಗಿ ಆರೋಪಿಸಿದ್ದಾರೆ. ಬಳಿಕ ವ್ಯಕ್ತಿಗಳು ನಮಗೆ ಪರಿಹಾರ ನೀಡದಿದ್ದಲ್ಲಿ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಉಲ್ಲೇಖಿಸಿದೆ.

ಸ್ವಲ್ಪ ಸಮಯದ ನಂತರ ಕೆಫೆಗೆ 25 ಲಕ್ಷ ರೂ. ನಗದು ನೀಡುವಂತೆ ಬೆದರಿಕೆ ಕರೆ ಬಂದಿತ್ತು. ಬಳಿಕ ಕೆಫೆಯು ಕರೆ ದಾಖಲೆಗಳು, ಸಂದೇಶಗಳ ಸ್ಕ್ರೀನ್‌ಶಾಟ್ ಮತ್ತು ಇತರ ದಾಖಲಾತಿಗಳನ್ನು ಪೊಲೀಸರಿಗೆ ಸಲ್ಲಿಸಿದೆ.

ಈ ಆರೋಪವನ್ನು ತಳ್ಳಿಹಾಕಿರುವ ರಾಮೇಶ್ವರಂ ಕೆಫೆಯ ಸಂಸ್ಥಾಪಕಿ ದಿವ್ಯಾ ರಾಘವ್, ನಮ್ಮ ಆಹಾರದಲ್ಲಿ ಹುಳು ಅಥವಾ ಕೀಟ ಕಂಡುಬಂದಿದೆ ಎಂಬ ಆಧಾರರಹಿತ ಆರೋಪವನ್ನು ನಾವು ಒಪ್ಪುವುದಿಲ್ಲ. ನಾವು ಕಟ್ಟುನಿಟ್ಟಾದ, ಗುಣಮಟ್ಟದ ಪ್ರೋಟೋಕಾಲ್‌ಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತೇವೆ. ವಿಶೇಷವಾಗಿ ವಿಮಾನ ನಿಲ್ದಾಣಗಳು ಮತ್ತು ಸೂಕ್ಷ್ಮ ಸ್ಥಳಗಳಲ್ಲಿ ಇದು ಸ್ಪಷ್ಟವಾಗಿ ಹಣ ಸುಲಿಗೆ ಮಾಡುವ ಮತ್ತು ನಮ್ಮ ಬ್ರ‍್ಯಾಂಡ್‌ಗೆ ಹಾನಿ ಮಾಡುವ ದುರುದ್ದೇಶದ ಕೃತ್ಯವಾಗಿದೆ ಎಂದಿದ್ದಾರೆ.

ಈ ಹಿಂದೆಯೂ ಇದೇ ರೀತಿಯ ಪ್ರಯತ್ನಗಳು ನಡೆದಿವೆ, ಗ್ರಾಹಕರು ಆಹಾರದಲ್ಲಿ ಕಲ್ಲು, ಕೀಟಗಳನ್ನು ಹಾಕಿದಾಗ ರೆಡ್‌ಹ್ಯಾಂಡ್‌ಗೆ ಸಿಕ್ಕಿಬಿದ್ದಿದ್ದಾರೆ. ನಾವು ಬೆದರಿಕೆ ಅಥವಾ ಬ್ಲ್ಯಾಕ್‌ಮೇಲ್‌ಗೆ ಮಣಿಯುವುದಿಲ್ಲ. ನಾವು ಅಧಿಕಾರಿಗಳೊಂದಿಗೆ ಸಂಪೂರ್ಣವಾಗಿ ಸಹಕರಿಸುತ್ತೇವೆ ಮತ್ತು ಅಂತಹ ಕೃತ್ಯಗಳನ್ನು ಬಹಿರಂಗಪಡಿಸಲು ಮತ್ತು ತಡೆಯಲು ಕಠಿಣ ಕಾನೂನು ಕ್ರಮವನ್ನು ಅನುಸರಿಸುತ್ತೇವೆ. ಗ್ರಾಹಕರನ್ನು ದಾರಿತಪ್ಪಿಸುವ ಕೆಲಸ ಮಾಡುವ ವ್ಯವಹಾರಗಳ ವಿಷಯವನ್ನು ಹಂಚಿಕೊಳ್ಳುವುದನ್ನು ತಡೆಯಲು ರಾಮೇಶ್ವರಂ ಕೆಫೆ ಸಾರ್ವಜನಿಕರು ಮತ್ತು ಮಾಧ್ಯಮಗಳನ್ನು ಒತ್ತಾಯಿಸುತ್ತದೆ ಎಂದಿದ್ದಾರೆ.ಇದನ್ನೂ ಓದಿ: ಕರ್ನಾಟಕದಲ್ಲಿ ವಂಚನೆ | ರಾಹುಲ್‌ ಆರೋಪಕ್ಕೆ ಹೈಕೋರ್ಟ್ ತೀರ್ಪಿಗಾಗಿ ಕಾಯಿರಿ ಎಂದ ಚುನಾವಣಾ ಆಯೋಗ

TAGGED:airportbengalurubengaluru airportRameshwaram Cafeಅಂತಾರಾಷ್ಟ್ರೀಯ ವಿಮಾನ ನಿಲ್ದಾಣಬೆಂಗಳೂರುರಾಮೇಶ್ವರ ಕೆಫೆ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

IRGC
Latest

ಯುದ್ಧ ನಿಲ್ಲಿಸೋ ನಿರ್ಧಾರ ಅಮೆರಿಕದ್ದಲ್ಲ, ನಮ್ಮದು – ದಾಳಿ ಮುಂದುವರಿದ್ರೆ 1 ಲೀಟರ್‌ ತೈಲವೂ ಸಿಗಲ್ಲ: ಇರಾನ್‌

Public TV
By Public TV
23 minutes ago
donald trump
Latest

ನಾವು ಈಗಾಗಲೇ ಗೆದ್ದಿದ್ದೇವೆ, ಯುದ್ಧ ಶೀಘ್ರದಲ್ಲೇ ಕೊನೆಗೊಳ್ಳಬಹುದು: ಟ್ರಂಪ್‌

Public TV
By Public TV
27 minutes ago
LPG Commercial Cylinder
Latest

ಕಮರ್ಷಿಯಲ್ ಸಿಲಿಂಡರ್ ಅಭಾವ – ತಮಿಳುನಾಡಲ್ಲಿ ರೆಸ್ಟೋರೆಂಟ್‌ಗಳು ಬಂದ್‌

Public TV
By Public TV
43 minutes ago
Haryana Gurugram Wall Collapse
Latest

ಹರಿಯಾಣ | ನಿರ್ಮಾಣ ಹಂತದ ಗೋಡೆ ಕುಸಿತ – 7 ಕಾರ್ಮಿಕರು ಸಾವು, ಐವರ ಸ್ಥಿತಿ ಚಿಂತಾಜನಕ

Public TV
By Public TV
47 minutes ago
Bengaluru Kempegowda International Airport 4
Bengaluru City

ನಗ್ನ ಜೋಡಿ ಫೋಟೋ ಪಾರ್ಸೆಲ್ – ಬೆಂಗ್ಳೂರು ಏರ್‌ಪೋರ್ಟ್‌ಗೆ ವಾಮಾಚಾರ?

Public TV
By Public TV
1 hour ago
White Phosphorus Bomb
Latest

ಕಾನೂನು ಉಲ್ಲಂಘಿಸಿದ ಇಸ್ರೇಲ್‌ – ಲೆಬನಾನ್‌ ವಸತಿ ಪ್ರದೇಶದ ಮೇಲೆ ಬಿಳಿ ರಂಜಕ ಬಳಸಿ ದಾಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?