ಜ್ಯೋತಿಷಿಗಳಿಗೂ ತಟ್ಟಿದ ನೀತಿ ಸಂಹಿತೆಯ ಬಿಸಿ!

Public TV
1 Min Read
MND ELECTION EFFECT AV

ಮಂಡ್ಯ: ಜ್ಯೋತಿಷ್ಯ ಮಂದಿರದ ಬೋರ್ಡ್ ನಲ್ಲಿ ಹಸ್ತದ ಚಿಹ್ನೆ ಇದ್ದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಬೋರ್ಡ್ ಗೆ ಪೇಪರ್ ಹಚ್ಚಿ ಮುಚ್ಚಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರದಿಂದ ನೀತಿ ಸಂಹಿತೆ ಜಾರಿಯಾಗಿದೆ. ಹೀಗಾಗಿ ಅಶೋಕ ನಗರದಲ್ಲಿರುವ ಜ್ಯೋತಿಷ್ಯ ಮಂದಿರದ ಬೋರ್ಡ್ ಗೆ ಅಧಿಕಾರಿಗಳು ಪೇಪರ್ ಹಚ್ಚಿ ಮುಚ್ಚಿದ್ದಾರೆ.

Election Commission

ಸಾಮಾನ್ಯವಾಗಿ ಹಲವು ಜ್ಯೋತಿಷ್ಯ ಕೇಂದ್ರಗಳಲ್ಲಿ ನಿಮ್ಮ ಹಸ್ತವನ್ನು ನೋಡಿ ಜ್ಯೋತಿಷ್ಯ ಹೇಳುತ್ತೇವೆ ಅಂತ ಜ್ಯೋತಿಷಿಗಳು ಹಸ್ತದ ಚಿಹ್ನೆ ಇರುವ ಬೋರ್ಡ್ ಗಳನ್ನು ಹಾಕಿರುತ್ತಾರೆ. ಆದ್ರೆ ಈ ಹಸ್ತ ಕಾಂಗ್ರೆಸ್ ಪಕ್ಷದ ಚಿಹ್ನೆ ಕೂಡ ಆಗಿರುವುದರಿಂದ ಚುನಾವಣಾ ಅಧಿಕಾರಿಗಳು ಈ ಬಗ್ಗೆ ಕ್ರಮ ತೆಗೆದುಕೊಂಡಿದ್ದಾರೆ.

ಸದ್ಯ ಜಾರಿಯಲ್ಲಿರುವ ನೀತಿ ಸಂಹಿತೆ ಅವಧಿ ಮುಗಿಯುವವರೆಗೂ ಜ್ಯೋತಿಷಿ ಕೇಂದ್ರದ ಮುಂದೆ ಹಸ್ತ ಚಿಹ್ನೆ ಇರುವ ಬೋರ್ಡ್ ಹಾಕಬಾರದು ಎಂದು ಚುನಾವಣಾ ಅಧಿಕಾರಿಗಳು ಸೂಚಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *