-ಬೆಳಗಾವಿಗೆ ಬಂದ ಡಿಕೆಶಿ ಸ್ವಾಗತಕ್ಕೆ ಕಾಂಗ್ರೆಸ್ ನಾಯಕರು ಬರಲೇ ಇಲ್ಲ
ಬೆಳಗಾವಿ: ಕಾಂಗ್ರೆಸ್ ನಾಯಕರಾದ ಡಿ.ಕೆ.ಶಿವಕುಮಾರ್ ಮತ್ತು ರಮೇಶ್ ಜಾರಕಿಹೊಳಿ ಇಬ್ಬರ ನಡುವಿನ ಶೀತಲ ಸಮರ ಮುಂದುವರೆದಂತೆ ಕಾಣುತ್ತಿದೆ. ಆದ್ರೆ ಇಬ್ಬರು ನಾಯಕರು ರಾಜಕೀಯದಲ್ಲಿ ಸ್ವಲ್ಪ ಬಿನ್ನಾಬಿಪ್ರಾಯಗಳು ಇರಬಹುದು. ನಾವಿಬ್ಬರು ವೈಯಕ್ತಿಕವಾಗಿ ಒಳ್ಳೆಯ ಸ್ನೇಹಿತರು ಎಂದು ಹೇಳಿಕೊಂಡು ಬರುತ್ತಿದ್ದಾರೆ. ಗುರುವಾರ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಂದ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಸ್ವಾಗತಿಸಲು ಯಾವ ಕಾಂಗ್ರೆಸ್ ಮುಖಂಡರು ಬರದೇ ಇರೋದು ಹಲವು ಚರ್ಚೆಗಳಿಗೆ ಎಡೆಮಾಡಿಕೊಟ್ಟಿದೆ.
ರಮೇಶ್ ಜಾರಕಿಹೊಳಿ ಅವರಿಗೆ ಹೆದರಿ ಸ್ಥಳೀಯ ಕಾಂಗ್ರೆಸ್ ಮುಖಂಡರು ಡಿಕೆ ಶಿವಕುಮಾರ್ ಅವರನ್ನು ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಬಂದಿಲ್ಲ ಎಂಬ ಸುದ್ದಿಗಳು ಬೆಳಗಾವಿ ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿರುವ ಮಾತುಗಳು. ಇನ್ನು ವಿಮಾನ ನಿಲ್ದಾಣಕ್ಕೆ ಬಂದ ಸಚಿವರನ್ನು ಬಿಜೆಪಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಸ್ವಾಗತಿಸಿದರು.
ಕೆಎಲ್ಇ ಸಂಸ್ಥೆಯಲ್ಲಿ ನಡೆಯುವ ಕಾನ್ಪೆರೆನ್ಸ್ ಮತ್ತು ಐಪಿಪಿ ಕಾನ್ಫೆರನ್ಸ್ ಗಳಲ್ಲಿ ಭಾಗಿಯಾಗಲಿದ್ದೇನೆ. ಸಿಎಂ ಈಗಾಗಲೇ ರೈತರು ಸಕ್ಕರೆ ಕಾರ್ಖಾನೆಯ ಮಾಲೀಕರ ಜೊತೆ ಮಾತನಾಡಿದ್ದಾರೆ. ನಮ್ಮ ಸರ್ಕಾರ ಯಾವತ್ತು ರೈತರ ಕೈಯನ್ನು ಬಿಡುವುದಿಲ್ಲ. ರೈತರಿಗೆ ಏನು ಕೊಡಬೇಕು ಅದನ್ನು ಆದಷ್ಟು ಬೇಗ ನೀಡುವಂತೆ ಮಾಡಲಾಗುತ್ತದೆ. ರಮೇಶ್ ಜಾರಕಿಹೊಳಿ ನಾವು ಒಳ್ಳೆಯ ಗೆಳೆಯರು ಅಂತಾ ಡಿಕೆ ಶಿವಕುಮಾರ್ ಹೇಳಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv