Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕದಿಯುವಾಗ ಶಬ್ದ ಓಡಿ ಹೋಗಿ ತಿರುಗಿದ್ರೆ ಹಂದಿ – ಕಾಡುತ್ತಿರುವ ಕಾಲೇಜಿನ ತುಂಟತನ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಕದಿಯುವಾಗ ಶಬ್ದ ಓಡಿ ಹೋಗಿ ತಿರುಗಿದ್ರೆ ಹಂದಿ – ಕಾಡುತ್ತಿರುವ ಕಾಲೇಜಿನ ತುಂಟತನ

Public TV
Last updated: December 1, 2018 12:01 pm
Public TV
Share
3 Min Read
COLLEGE
SHARE

ನೆನಪುಗಳನ್ನು ಹಿಡಿಯುವ ಹಂಬಲ. ಆದರೆ ಕೈ ಸಿಗದೇ ಓಡಿ ಹೋಗುತ್ತವೆ. ಪ್ರತಿಯೊಬ್ಬರ ಜೀವನದಲ್ಲೂ ನೆನಪುಗಳು ಸದಾ ಇರುತ್ತವೆ. ಕೆಲವರಿಗೆ ಸಿಹಿ ನೆನಪುಗಳಾದ್ರೆ ಇನ್ನೂ ಕೆಲವರಿಗೆ ಕಹಿ ನೆನಪುಗಳು ಅಚ್ಚಳಿಯದೇ ಉಳಿದಿವೆ. ಆದರೆ ಮನುಷ್ಯನ ಜೀವನ ಮಾತ್ರ ನೆನಪು ಮತ್ತು ಕನಸಿನ ಮಧ್ಯೆ ಸಾಗುತ್ತದೆ.

ನನ್ನ ಬದುಕಿನಲ್ಲಿ ಸದಾ ಹಸಿರಾಗಿ ಉಳಿದುಕೊಂಡಿರುವ ಒಂದು ಸಿಹಿ ನೆನಪಿನ ಪುಟ್ಟ ಕಥೆ ನಿಮಗಾಗಿ….

ನಾನು ಹಳ್ಳಿಯ ಹೊಲ-ಗದ್ದೆ, ಸ್ನೇಹಿತರು, ಜಾತ್ರೆ, ಹಬ್ಬ-ಹರಿದಿನಗಳ ಮಧ್ಯೆ ಅಲೆದಾಡಿ ಬೆಳೆದಿದ್ದೆ. ಆದರೆ ಹುಟ್ಟೂರಿನಿಂದ ಉನ್ನತ ವಿದ್ಯಾಭ್ಯಾಸಕ್ಕಾಗಿ ಪಟ್ಟಣಕ್ಕೆ ಕಾಲಿಟ್ಟಿದ್ದೆ. ಪಟ್ಟಣಕ್ಕಿಂತ ನಮಗೆ ಪಟ್ಟಣದ ಹಾಸ್ಟೆಲ್ ಒಂದು ಜೈಲು ಎಂದು ಅನ್ನಿಸುತ್ತಿತ್ತು. ಆದರೆ ಮೊದ ಮೊದಲು ಹೊಸ ಹಾಸ್ಟೆಲ್ ಜೀವನಕ್ಕೆ ಹೊಂದಿಕೊಳ್ಳುವಾಗ ದಿನಗಳು ವರ್ಷಗಳೇ ಕಳೆದಂತೆ ಭಾಸವಾಗುತ್ತಿತ್ತು. ಕಾಲಕ್ರಮೇಣ ದಿನ ಕಳೆದಂತೆ ತರಗತಿಯಲ್ಲಿನ ಸಹಪಾಠಿಗಳು ಮತ್ತು ಹಾಸ್ಟೆಲ್ ನ ಸ್ನೇಹಿತರು ಹತ್ತಿರವಾದರು. ಬಳಿಕ ನಮ್ಮದೇ ಆದ ಗುಂಪು ಮಾಡಿಕೊಂಡು ಕಾಲೇಜ್, ಸುತ್ತಾಟ, ತರಲೆ ಮತ್ತು ಆಟವಾಡಿಕೊಂಡು ದಿನಗಳನ್ನು ಕಳೆಯುತ್ತಿದ್ದವು.

cropped Petkar Hostel Banner 3

ಆರಂಭದಲ್ಲಿ ಹಾಸ್ಟೆಲ್ ಗೆ ಬಂದಾಗ ಭಾನುವಾರ ಬಂದರೆ ಸಾಕು ಊರಿಗೆ ಹೊರಡಲು ಸಿದ್ಧರಾಗುತ್ತಿದ್ದೆವು. ಆದರೆ ಕೆಲವು ದಿನಗಳ ನಂತರ ಯಾಕಾದರೂ ರಜೆ ಬರುತ್ತದೋ ಎಂದು ಹೇಳುವಂತಾಯಿತು. ಅಷ್ಟರ ಮಟ್ಟಿಗೆ ಸ್ನೇಹಿತರೆಲ್ಲರೂ ಹತ್ತಿರವಾಗಿದ್ದೆವು.

ಕದ್ದ ಹಣ್ಣು ತುಂಬಾ ರುಚಿ:
ರಜೆಯ ಒಂದು ದಿನ ಹಾಸ್ಟೆಲ್ ನಲ್ಲಿ ಕ್ರಿಕೆಟ್ ಆಡಿ ಮುಗಿದ ಬಳಿಕ ವರಾಂಡದಲ್ಲಿ ಕುಳಿತು ಸ್ನೇಹಿತರೆಲ್ಲರೂ ಹರಟೆ ಹೊಡೆಯುತ್ತಿದ್ದೆವು. ಈ ಸಮಯದಲ್ಲಿ ನಮ್ಮಲ್ಲೊಬ್ಬ ಗೆಳೆಯ ಹಾಸ್ಟೆಲ್ ಹಿಂದಿನ ತೋಟದಲ್ಲಿರುವ ಹಲಸಿನ ಹಣ್ಣಿನ ಬಗ್ಗೆ ಹೇಳಿದ್ದ. ಮೊದಲೇ ಕಾಲೇಜ್- ಹಾಸ್ಟೆಲ್ ನ ಜೀವನ. ನಮಗೆ ಆ ರಾತ್ರಿಯೇ ಹಲಸಿನ ಹಣ್ಣನ್ನು ಕದಿಯುವ ಯೋಚನೆಯಾಯಿತು.

ಕೊನೆಗೆ ತಡರಾತ್ರಿಯೇ ಹಣ್ಣು ಕದಿಯಲು ನಿಪುಣ ಕಳ್ಳರಂತೆ ಯೋಜನೆ ರೂಪಿಸಿದೆವು. ಯಾರು ಮರ ಹತ್ತುವರು? ಹಣ್ಣನ್ನು ನೆಲಕ್ಕೆ ಬೀಳದಂತೆ ಕ್ಯಾಚ್ ಹಿಡಿಯುವುದು ಯಾರು? ಹಾಗೂ ತೋಟದ ಮಾಲೀಕ ಬರುವುದೊಳಗೆ ಹಿಂದಿರುಗಬೇಕು ಎಂದು ಪಿಸುಗುಟ್ಟುತ್ತಾ ತೋಟಕ್ಕೆ ನುಗ್ಗಿದೆವು. ಶಬ್ದ ಬರದಂತೆ ಹಣ್ಣನ್ನು ಕೀಳಲು ಪ್ರಯತ್ನಿಸುತ್ತಿದ್ದೆವು. ಆದರೆ ಕೆಲ ಹೊತ್ತಿನಲ್ಲಿ ತೋಟದೊಳಗೆ ಜೋರಾದ ಶಬ್ದ ಕೇಳಿಸಿತು. ಎಲ್ಲರು ತೋಟದ ಮಾಲೀಕ ಬಂದನೆಂದು ಹೆದರಿ ತೋಟದಿಂದ ಕಾಲ್ಕಿತ್ತೆವು.

COLLEGE 1

ನಾವು ಓಡಿ ಹೋಗುತ್ತಿದ್ದಂತೆ ನಮ್ಮ ಹಿಂದೆಯೇ ಯಾರೋ ಇದ್ದಾರೆಂದು ಭಾಸವಾಯಿತು. ಒಮ್ಮೆ ಎಲ್ಲರೂ ಧೈರ್ಯ ಮಾಡಿ ಹಿಂದೆ ತಿರುಗಿ ನೋಡಿದರೆ ಗುಟುರಾಕುತ್ತಿದ್ದ ಹಂದಿಗಳು. ನಕ್ಕರೇ ತೋಟದ ಮಾಲೀಕ ಬರುತ್ತಾರೆ ಎಂದು ಮನಸಿನಲ್ಲೇ ನಕ್ಕು ಅವುಗಳನ್ನು ಓಡಿಸಿದೆವು. ಬಳಿಕ ಹಲಸಿನ ಹಣ್ಣಿನ ಜೊತೆ ಸಪೋಟ ಹಣ್ಣನ್ನು ಕಿತ್ತು ತೋಟದಿಂದ ಬಂದೆವು. ‘ಕದ್ದು ತಿನ್ನುವ ರುಚಿಯೇ ಬೇರೆ’ ಎಂಬ ಗಾದೆಯಂತೆ ತಂದಿಟ್ಟ ಹಣ್ಣುಗಳು ಕೇವಲ ಮೂರು ದಿನಗಳಲ್ಲಿ ಖಾಲಿಯಾಗುತ್ತಿದ್ದವು. ಯಾರನ್ನು ಕೇಳಿದರು ‘ತಿಂದವರ್ಯಾರು’ ಎಂಬ ಮರು ಪ್ರಶ್ನೆ ಹುಟ್ಟಿಕೊಳ್ಳುತ್ತಿತ್ತು.

ಹಾಸ್ಟೆಲ್ ನ ಸಪ್ಪೆ ಊಟ ತಿಂದು ಮರಗಟ್ಟಿದ್ದ ನಾಲಗೆಗೆ ರುಚಿ ಬೇಕೆನಿಸಿದಾಗ ಕೋಳಿ ಸುಟ್ಟು ತಿನ್ನುವ ಖಯಾಲಿ. ಉಪ್ಪು-ಖಾರ ಸರಿಯಾಗಿಲ್ಲ ಎಂದರೂ ಹಾಸ್ಟೆಲ್ ಊಟಕ್ಕಿನ್ನ ಮೋಸವಿಲ್ಲ ಎಂದು ಬಾಯಿ ಚಪ್ಪರಿಸಿಕೊಂಡು ತಿನ್ನುವಾಗ ಬಿಸಿ ಕೋಳಿ ತುಟಿ ಸುಟ್ಟ ನೆನಪು. ಆದರೆ ಹಳ್ಳಿಯಿಂದ ಕಾಲೇಜಿಗೆ ಈಗ ಬಂದಂತೆ ಭಾವನೆ, ನೋಡಿದರೆ ಕಾಲೇಜು ಜೀವನವೇ ಮುಗಿದು ಹೋಯಿತು.

ಕದ್ದು ತಿಂದ ಹಣ್ಣು, ತುಟಿ ಸುಟ್ಟ ಕೋಳಿ, ಕಾಲೇಜಿನಲ್ಲಿ ಸ್ನೇಹಿತರ ಕೋಳಿ ಜಗಳ, ಸೆಂಡಾಫ್ ದಿನದ ಹುಚ್ಚು ಕುಣಿತ, ಪಕ್ಕದ ಡಿಪಾರ್ಟ್ ಮೆಂಟಿನ ಊಟ, ಜೂನಿಯರ್ ಗಳ ಹರಟೆ… ಇವೆಲ್ಲವೂ ಈಗ ಬರೀ ನೆನಪು ಮಾತ್ರ…

 – ಪವನ್ 

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv 

Share This Article
Facebook Whatsapp Whatsapp Telegram
Previous Article pagal premi collage ಪ್ರೀತಿ ನಿರಾಕರಿಸಿದ್ದಕ್ಕೆ ಪ್ರಿಯತಮೆ ಎದುರೇ ಟೆಕ್ಕಿ ಆತ್ಮಹತ್ಯೆ
Next Article money ಬೆತ್ತಲೆ ಫೋಟೋ ಅಡ ಇಟ್ಟರೆ ಸಿಗುತ್ತೆ ಸಾಲ!

Latest Cinema News

S Narayan
ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ – ಎಸ್.ನಾರಾಯಣ್, ಪತ್ನಿ, ಪುತ್ರನಿಗೆ ನೋಟಿಸ್
Bengaluru City Cinema Latest Sandalwood Top Stories
vishnuvardhan b.saroja devi
ಸಾಹಸಸಿಂಹ ವಿಷ್ಣುವರ್ಧನ್‌, ಬಿ.ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ
Bengaluru City Cinema Latest Main Post Sandalwood
Madenur Manu 22
`ಮುತ್ತರಸ’ನಾದ ಮಡೆನೂರು ಮನು
Cinema Latest Sandalwood
Vinay Rajkumar Ramya
ವಿನಯ್ ಜೊತೆ ರಮ್ಯಾ ಸುತ್ತಾಟ ಎಂದವರಿಗೆ ತಿರುಗೇಟು ಕೊಟ್ಟ ಮೋಹಕತಾರೆ
Cinema Latest Sandalwood Top Stories Uncategorized
ramesh aravinds daiji teaser unveiled 1
ರಮೇಶ್ ಅರವಿಂದ್ ಹುಟ್ಟುಹಬ್ಬಕ್ಕೆ ದೈಜಿ ಟೀಸರ್
Cinema Latest Sandalwood

You Might Also Like

Mysuru Murder
Crime

ಪರಿಹಾರ ಹಣದ ಆಸೆಗೆ ಪತಿಗೆ ಚಟ್ಟ ಕಟ್ಟಿದ ಧರ್ಮಪತ್ನಿ – ತಿಪ್ಪೆ ಗುಂಡಿಯಲ್ಲಿ ಗಂಡನ ಶವ ಪತ್ತೆ

13 minutes ago
Dharmasthala 2
Dakshina Kannada

ಧರ್ಮಸ್ಥಳ ಪ್ರಕರಣಕ್ಕೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್‌ – ಬಂಗ್ಲೆ ಗುಡ್ಡ ಕಾಡಿನಲ್ಲಿ 3 ಅಸ್ಥಿಪಂಜರ ಪತ್ತೆ

31 minutes ago
US Motel 2
Latest

ಅಮೆರಿಕದಲ್ಲಿ ಪತ್ನಿ, ಮಗನ ಮುಂದೆ ಕರ್ನಾಟಕದ ವ್ಯಕ್ತಿಯ ಶಿರಚ್ಛೇದ – ಮೈ ನಡುಗಿಸುವ ವಿಡಿಯೋ ವೈರಲ್‌

1 hour ago
BJP MLA Yatnal
Districts

ಮದ್ದೂರಲ್ಲಿ ಪ್ರಚೋದನಕಾರಿ ಭಾಷಣ – ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಎಫ್‌ಐಆರ್

2 hours ago
Beer
Latest

ಆದಾಯ ನಷ್ಟ ತಡೆಗೆ ಪ್ಲ್ಯಾನ್‌ – ಬಿಯರ್ ಕುಡಿಯುವ ಕಾನೂನುಬದ್ಧ ವಯಸ್ಸು 21ಕ್ಕೆ ಇಳಿಕೆ

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?