Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕದಿಯುವಾಗ ಶಬ್ದ ಓಡಿ ಹೋಗಿ ತಿರುಗಿದ್ರೆ ಹಂದಿ – ಕಾಡುತ್ತಿರುವ ಕಾಲೇಜಿನ ತುಂಟತನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಕದಿಯುವಾಗ ಶಬ್ದ ಓಡಿ ಹೋಗಿ ತಿರುಗಿದ್ರೆ ಹಂದಿ – ಕಾಡುತ್ತಿರುವ ಕಾಲೇಜಿನ ತುಂಟತನ

Karnataka

ಕದಿಯುವಾಗ ಶಬ್ದ ಓಡಿ ಹೋಗಿ ತಿರುಗಿದ್ರೆ ಹಂದಿ – ಕಾಡುತ್ತಿರುವ ಕಾಲೇಜಿನ ತುಂಟತನ

Public TV
Last updated: December 1, 2018 12:01 pm
Public TV
Share
3 Min Read
COLLEGE
SHARE

ನೆನಪುಗಳನ್ನು ಹಿಡಿಯುವ ಹಂಬಲ. ಆದರೆ ಕೈ ಸಿಗದೇ ಓಡಿ ಹೋಗುತ್ತವೆ. ಪ್ರತಿಯೊಬ್ಬರ ಜೀವನದಲ್ಲೂ ನೆನಪುಗಳು ಸದಾ ಇರುತ್ತವೆ. ಕೆಲವರಿಗೆ ಸಿಹಿ ನೆನಪುಗಳಾದ್ರೆ ಇನ್ನೂ ಕೆಲವರಿಗೆ ಕಹಿ ನೆನಪುಗಳು ಅಚ್ಚಳಿಯದೇ ಉಳಿದಿವೆ. ಆದರೆ ಮನುಷ್ಯನ ಜೀವನ ಮಾತ್ರ ನೆನಪು ಮತ್ತು ಕನಸಿನ ಮಧ್ಯೆ ಸಾಗುತ್ತದೆ.

ನನ್ನ ಬದುಕಿನಲ್ಲಿ ಸದಾ ಹಸಿರಾಗಿ ಉಳಿದುಕೊಂಡಿರುವ ಒಂದು ಸಿಹಿ ನೆನಪಿನ ಪುಟ್ಟ ಕಥೆ ನಿಮಗಾಗಿ….

ನಾನು ಹಳ್ಳಿಯ ಹೊಲ-ಗದ್ದೆ, ಸ್ನೇಹಿತರು, ಜಾತ್ರೆ, ಹಬ್ಬ-ಹರಿದಿನಗಳ ಮಧ್ಯೆ ಅಲೆದಾಡಿ ಬೆಳೆದಿದ್ದೆ. ಆದರೆ ಹುಟ್ಟೂರಿನಿಂದ ಉನ್ನತ ವಿದ್ಯಾಭ್ಯಾಸಕ್ಕಾಗಿ ಪಟ್ಟಣಕ್ಕೆ ಕಾಲಿಟ್ಟಿದ್ದೆ. ಪಟ್ಟಣಕ್ಕಿಂತ ನಮಗೆ ಪಟ್ಟಣದ ಹಾಸ್ಟೆಲ್ ಒಂದು ಜೈಲು ಎಂದು ಅನ್ನಿಸುತ್ತಿತ್ತು. ಆದರೆ ಮೊದ ಮೊದಲು ಹೊಸ ಹಾಸ್ಟೆಲ್ ಜೀವನಕ್ಕೆ ಹೊಂದಿಕೊಳ್ಳುವಾಗ ದಿನಗಳು ವರ್ಷಗಳೇ ಕಳೆದಂತೆ ಭಾಸವಾಗುತ್ತಿತ್ತು. ಕಾಲಕ್ರಮೇಣ ದಿನ ಕಳೆದಂತೆ ತರಗತಿಯಲ್ಲಿನ ಸಹಪಾಠಿಗಳು ಮತ್ತು ಹಾಸ್ಟೆಲ್ ನ ಸ್ನೇಹಿತರು ಹತ್ತಿರವಾದರು. ಬಳಿಕ ನಮ್ಮದೇ ಆದ ಗುಂಪು ಮಾಡಿಕೊಂಡು ಕಾಲೇಜ್, ಸುತ್ತಾಟ, ತರಲೆ ಮತ್ತು ಆಟವಾಡಿಕೊಂಡು ದಿನಗಳನ್ನು ಕಳೆಯುತ್ತಿದ್ದವು.

cropped Petkar Hostel Banner 3

ಆರಂಭದಲ್ಲಿ ಹಾಸ್ಟೆಲ್ ಗೆ ಬಂದಾಗ ಭಾನುವಾರ ಬಂದರೆ ಸಾಕು ಊರಿಗೆ ಹೊರಡಲು ಸಿದ್ಧರಾಗುತ್ತಿದ್ದೆವು. ಆದರೆ ಕೆಲವು ದಿನಗಳ ನಂತರ ಯಾಕಾದರೂ ರಜೆ ಬರುತ್ತದೋ ಎಂದು ಹೇಳುವಂತಾಯಿತು. ಅಷ್ಟರ ಮಟ್ಟಿಗೆ ಸ್ನೇಹಿತರೆಲ್ಲರೂ ಹತ್ತಿರವಾಗಿದ್ದೆವು.

ಕದ್ದ ಹಣ್ಣು ತುಂಬಾ ರುಚಿ:
ರಜೆಯ ಒಂದು ದಿನ ಹಾಸ್ಟೆಲ್ ನಲ್ಲಿ ಕ್ರಿಕೆಟ್ ಆಡಿ ಮುಗಿದ ಬಳಿಕ ವರಾಂಡದಲ್ಲಿ ಕುಳಿತು ಸ್ನೇಹಿತರೆಲ್ಲರೂ ಹರಟೆ ಹೊಡೆಯುತ್ತಿದ್ದೆವು. ಈ ಸಮಯದಲ್ಲಿ ನಮ್ಮಲ್ಲೊಬ್ಬ ಗೆಳೆಯ ಹಾಸ್ಟೆಲ್ ಹಿಂದಿನ ತೋಟದಲ್ಲಿರುವ ಹಲಸಿನ ಹಣ್ಣಿನ ಬಗ್ಗೆ ಹೇಳಿದ್ದ. ಮೊದಲೇ ಕಾಲೇಜ್- ಹಾಸ್ಟೆಲ್ ನ ಜೀವನ. ನಮಗೆ ಆ ರಾತ್ರಿಯೇ ಹಲಸಿನ ಹಣ್ಣನ್ನು ಕದಿಯುವ ಯೋಚನೆಯಾಯಿತು.

ಕೊನೆಗೆ ತಡರಾತ್ರಿಯೇ ಹಣ್ಣು ಕದಿಯಲು ನಿಪುಣ ಕಳ್ಳರಂತೆ ಯೋಜನೆ ರೂಪಿಸಿದೆವು. ಯಾರು ಮರ ಹತ್ತುವರು? ಹಣ್ಣನ್ನು ನೆಲಕ್ಕೆ ಬೀಳದಂತೆ ಕ್ಯಾಚ್ ಹಿಡಿಯುವುದು ಯಾರು? ಹಾಗೂ ತೋಟದ ಮಾಲೀಕ ಬರುವುದೊಳಗೆ ಹಿಂದಿರುಗಬೇಕು ಎಂದು ಪಿಸುಗುಟ್ಟುತ್ತಾ ತೋಟಕ್ಕೆ ನುಗ್ಗಿದೆವು. ಶಬ್ದ ಬರದಂತೆ ಹಣ್ಣನ್ನು ಕೀಳಲು ಪ್ರಯತ್ನಿಸುತ್ತಿದ್ದೆವು. ಆದರೆ ಕೆಲ ಹೊತ್ತಿನಲ್ಲಿ ತೋಟದೊಳಗೆ ಜೋರಾದ ಶಬ್ದ ಕೇಳಿಸಿತು. ಎಲ್ಲರು ತೋಟದ ಮಾಲೀಕ ಬಂದನೆಂದು ಹೆದರಿ ತೋಟದಿಂದ ಕಾಲ್ಕಿತ್ತೆವು.

COLLEGE 1

ನಾವು ಓಡಿ ಹೋಗುತ್ತಿದ್ದಂತೆ ನಮ್ಮ ಹಿಂದೆಯೇ ಯಾರೋ ಇದ್ದಾರೆಂದು ಭಾಸವಾಯಿತು. ಒಮ್ಮೆ ಎಲ್ಲರೂ ಧೈರ್ಯ ಮಾಡಿ ಹಿಂದೆ ತಿರುಗಿ ನೋಡಿದರೆ ಗುಟುರಾಕುತ್ತಿದ್ದ ಹಂದಿಗಳು. ನಕ್ಕರೇ ತೋಟದ ಮಾಲೀಕ ಬರುತ್ತಾರೆ ಎಂದು ಮನಸಿನಲ್ಲೇ ನಕ್ಕು ಅವುಗಳನ್ನು ಓಡಿಸಿದೆವು. ಬಳಿಕ ಹಲಸಿನ ಹಣ್ಣಿನ ಜೊತೆ ಸಪೋಟ ಹಣ್ಣನ್ನು ಕಿತ್ತು ತೋಟದಿಂದ ಬಂದೆವು. ‘ಕದ್ದು ತಿನ್ನುವ ರುಚಿಯೇ ಬೇರೆ’ ಎಂಬ ಗಾದೆಯಂತೆ ತಂದಿಟ್ಟ ಹಣ್ಣುಗಳು ಕೇವಲ ಮೂರು ದಿನಗಳಲ್ಲಿ ಖಾಲಿಯಾಗುತ್ತಿದ್ದವು. ಯಾರನ್ನು ಕೇಳಿದರು ‘ತಿಂದವರ್ಯಾರು’ ಎಂಬ ಮರು ಪ್ರಶ್ನೆ ಹುಟ್ಟಿಕೊಳ್ಳುತ್ತಿತ್ತು.

ಹಾಸ್ಟೆಲ್ ನ ಸಪ್ಪೆ ಊಟ ತಿಂದು ಮರಗಟ್ಟಿದ್ದ ನಾಲಗೆಗೆ ರುಚಿ ಬೇಕೆನಿಸಿದಾಗ ಕೋಳಿ ಸುಟ್ಟು ತಿನ್ನುವ ಖಯಾಲಿ. ಉಪ್ಪು-ಖಾರ ಸರಿಯಾಗಿಲ್ಲ ಎಂದರೂ ಹಾಸ್ಟೆಲ್ ಊಟಕ್ಕಿನ್ನ ಮೋಸವಿಲ್ಲ ಎಂದು ಬಾಯಿ ಚಪ್ಪರಿಸಿಕೊಂಡು ತಿನ್ನುವಾಗ ಬಿಸಿ ಕೋಳಿ ತುಟಿ ಸುಟ್ಟ ನೆನಪು. ಆದರೆ ಹಳ್ಳಿಯಿಂದ ಕಾಲೇಜಿಗೆ ಈಗ ಬಂದಂತೆ ಭಾವನೆ, ನೋಡಿದರೆ ಕಾಲೇಜು ಜೀವನವೇ ಮುಗಿದು ಹೋಯಿತು.

ಕದ್ದು ತಿಂದ ಹಣ್ಣು, ತುಟಿ ಸುಟ್ಟ ಕೋಳಿ, ಕಾಲೇಜಿನಲ್ಲಿ ಸ್ನೇಹಿತರ ಕೋಳಿ ಜಗಳ, ಸೆಂಡಾಫ್ ದಿನದ ಹುಚ್ಚು ಕುಣಿತ, ಪಕ್ಕದ ಡಿಪಾರ್ಟ್ ಮೆಂಟಿನ ಊಟ, ಜೂನಿಯರ್ ಗಳ ಹರಟೆ… ಇವೆಲ್ಲವೂ ಈಗ ಬರೀ ನೆನಪು ಮಾತ್ರ…

 – ಪವನ್ 

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv 

TAGGED:citycollegefriendsMemoryPublic TVvillageಕಾಲೇಜ್ನೆನಪುಪಟ್ಟಣಪಬ್ಲಿಕ್ ಟಿವಿಸ್ನೇಹಿತರುಹಳ್ಳಿ
Share This Article
Facebook Whatsapp Whatsapp Telegram

Cinema news

vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories

You Might Also Like

Raichur
Districts

ರಾಯಚೂರಿನಲ್ಲಿ ರೊಟ್ಟಿ ಕೇಂದ್ರಗಳಿಗೆ ತಟ್ಟಿದ ಗ್ಯಾಸ್ ಸಿಲಿಂಡರ್ ಬಿಸಿ

Public TV
By Public TV
2 minutes ago
Tourist Killed 6 Others Injured In Terrorist Attack In Jammu and Kashmir Pahalgam
Latest

ಆಪರೇಷನ್ ಅರಹಮಾ | ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಪಾಕ್‌ ಉಗ್ರನ ಹತ್ಯೆ

Public TV
By Public TV
15 minutes ago
Shell Petrol Bunk
Bengaluru City

ಮತ್ತೆ ಶಾಕ್ ಕೊಟ್ಟ ಶೆಲ್ ಪೆಟ್ರೋಲ್ ಬಂಕ್ – ಪೆಟ್ರೋಲ್ 7 ರೂ., ಡೀಸೆಲ್ 25 ರೂ. ಹೆಚ್ಚಳ

Public TV
By Public TV
45 minutes ago
Train Ticket Cancel Refund Policy
Latest

ರೈಲು ಹೊರಡುವ 8 ಗಂಟೆಯೊಳಗೆ ಟಿಕೆಟ್‌ ರದ್ದು ಮಾಡಿದ್ರೆ ಸಿಗಲ್ಲ ಹಣ – ಇಂದಿನಿಂದ ಹೊಸ ನಿಯಮ ಜಾರಿ, ಏನೇನು ಬದಲಾವಣೆ?

Public TV
By Public TV
1 hour ago
bengaluru mysuru expressway e1677512075362
Districts

ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ವೇ ನಲ್ಲಿ ಇಂದಿನಿಂದ ಟೋಲ್‌ ದರ ಏರಿಕೆ; ಯಾವ ವಾಹನಕ್ಕೆ ಎಷ್ಟು?

Public TV
By Public TV
1 hour ago
Tumakuru Siddaganga Math Shivakumara Swamiji birth anniversary
Districts

ಶಿವೈಕ್ಯ ಶಿವಕುಮಾರ ಶ್ರೀಗಳ 119ನೇ ಜಯಂತ್ಯೋತ್ಸವ – ಸಿದ್ದಗಂಗಾ ಮಠದಲ್ಲಿ ಕಳೆಗಟ್ಟಿದ ಸಂಭ್ರಮ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?