Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಲೇಜಿನತ್ತ ಕಲಬುರಗಿ ರಂಗಾಯಣ – ಜ.10 ರಿಂದ ಮೂರು ದಿನ ಸಿಂಧನೂರಿನಲ್ಲಿ ಕಾಲೇಜು ʻರಂಗೋತ್ಸವʼ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಾಲೇಜಿನತ್ತ ಕಲಬುರಗಿ ರಂಗಾಯಣ – ಜ.10 ರಿಂದ ಮೂರು ದಿನ ಸಿಂಧನೂರಿನಲ್ಲಿ ಕಾಲೇಜು ʻರಂಗೋತ್ಸವʼ

Districts

ಕಾಲೇಜಿನತ್ತ ಕಲಬುರಗಿ ರಂಗಾಯಣ – ಜ.10 ರಿಂದ ಮೂರು ದಿನ ಸಿಂಧನೂರಿನಲ್ಲಿ ಕಾಲೇಜು ʻರಂಗೋತ್ಸವʼ

Public TV
Last updated: January 9, 2025 5:10 pm
Public TV
Share
3 Min Read
Rangabhoomi
SHARE

ಕಲಬುರಗಿ: ಕಾಲೇಜು ವಿದ್ಯಾರ್ಥಿಗಳಲ್ಲಿ ರಂಗಭೂಮಿ (Rangabhoomi) ಕುರಿತು ಆಸಕ್ತಿ ಮೂಡಿಸುವುದರ ಜೊತೆಗೆ ವಿದ್ಯಾರ್ಥಿಗಳ ಮನೋವಿಕಾಸ ಮತ್ತು ಶೈಕ್ಷಣಿಕ ಕಲಿಕಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶದಿಂದ ಇದೇ ಜನವರಿ 10 ರಿಂದ 12ರ ವರೆಗೆ ಮೂರು ದಿನಗಳ ಕಾಲ ʻಕಾಲೇಜು ರಂಗೋತ್ಸವʼ (College Theatre Festival) ಕಾರ್ಯಕ್ರಮ ಆಯೋಜಿಸಿದೆ ಎಂದು ಕಲಬುರಗಿ ರಂಗಾಯಣದ ನಿರ್ದೇಶಕಿ ಡಾ.ಸುಜಾತಾ ಜಂಗಮಶೆಟ್ಟಿ ತಿಳಿಸಿದ್ದಾರೆ.

ರಾಯಚೂರು (Raichur) ಜಿಲ್ಲೆಯ ಸಿಂಧನೂರಿನ ಟೌನ್ ಹಾಲ್ ರಂಗಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದೆ. ಟಿ.ವಿ, ಸಿನಿಮಾ, ಕಂಪ್ಯೂಟರ್, ಸಾಮಾಜಿಕ ಜಾಲತಾಣಗಳ ಪ್ರಭಾವದಲ್ಲಿ ರಂಗಭೂಮಿ ಮರೆಯಾಗಿ ಹೋಯಿತು ಎನ್ನುವದರ ನಡುವೆ ಕಾಲೇಜು ಮಟ್ಟದಲ್ಲಿ ರಂಗಭೂಮಿಯತ್ತ ವಿದ್ಯಾರ್ಥಿಗಳು ವಾಲುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಇಂತಹ ಯುವ ಪೀಳಿಗೆಯನ್ನು ಮತ್ತಷ್ಟು ರಂಗಭೂಮಿಯತ್ತ ಸೆಳೆಯುವ ಉದ್ದೇಶದಿಂದ ಕಾಲೇಜು ರಂಗೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಲಬುರಗಿಯೊಂದೇ ಕೇಂದ್ರವಾಗಿ ಕಾರ್ಯಕ್ರಮ ರೂಪಿತವಾಗಬಾರದೆಂಬ ಉದ್ದೇಶದಿಂದ ಪ್ರದೇಶದ 7 ಜಿಲ್ಲೆಗಳಲ್ಲಿ ತಲಾ ಒಂದು ಕಾಲೇಜು ಆಯ್ಕೆ ಮಾಡಿಕೊಳ್ಳಲಾಗಿದೆ. ಸುಮಾರು 20 ದಿನಗಳ ಕಾಲ ನಾಟಕ ನಿರ್ದೇಶಕರಿಂದ ತರಬೇತಿ ಪಡೆದ ವಿದ್ಯಾರ್ಥಿಗಳು ಇಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲಿದ್ದಾರೆ ಎಂದಿದ್ದಾರೆ.

3 ದಿನಗಳ 7 ನಾಟಕ ಪ್ರದರ್ಶನ:
ಸಿಂಧನೂರಿನಲ್ಲಿ ಆಕ್ಸ್‌ಫರ್ಡ್‌ ಸಮೂಹ ಸಂಸ್ಥೆಗಳ ಸಹಯೋಗದೊಂದಿಗೆ ಆಯೋಜಿಸಿರುವ ಮೂರು ದಿನಗಳ ಕಾಲೇಜು ರಂಗೋತ್ಸವಕ್ಕೆ ಜನವರಿ 10ರಂದು ಬೆಳಗ್ಗೆ 11 ಗಂಟೆಗೆ ಚಾಲನೆ ನೀಡಲಾಗುತ್ತದೆ. ಶ್ರೀ ಸಿದ್ದರಾಮೇಶ್ವರ ಶರಣರ ಸಾನಿಧ್ಯದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಉದ್ಘಾಟಿಸಲಿದ್ದು, ಅಧಿಕಾರಿಗಳು, ಕಲಾವಿದರು ಹಾಗೂ ಚುನಾಯಿತ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಜನವರಿ 10 ರಂದು ಮಧ್ಯಾಹ್ನ 12.30 ಗಂಟೆಗೆ ಶ್ರೀನಿವಾಸ ದೋರನಹಳ್ಳಿ ಅವರ ರಚನೆ ಮತು ನಿರ್ದೇಶನದ “ಶಪಥದ ಮಹಾಭಾರತ” ನಾಟಕವು ಯಾದಗಿರಿ ಜಿಲ್ಲೆಯ ಭೀಮರಾಯನಗುಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಮಧ್ಯಾಹ್ನ 2.30 ಗಂಟೆಗೆ ಮೈಸೂರಿನ ಎಸ್.ರಾಮನಾಥ ಅವರ ರಚನೆ ಮತು ಮಹೇಶ ಭೋವಿ ಅವರ ನಿರ್ದೇಶನದ “ಅಶ್ವ ಪರ್ವ” ನಾಟಕವನ್ನು ಸ್ಥಳೀಯ ಸಿಂಧನೂರಿನ ಆಕ್ಸ್‌ಫರ್ಡ್‌ ಸಮೂಹ ಸಂಸ್ಥೆಗಳ ಪಿಯು ಕಾಲೇಜಿನ ವಿದ್ಯಾರ್ಥಿಗಳು ಪ್ರದರ್ಶನ ಮಾಡಲಿದ್ದಾರೆ.

ಜನವರಿ 11 ರಂದು ಬೆಳಿಗ್ಗೆ 11 ಗಂಟೆಗೆ ದಲಿತ ಕವಿ ಡಾ.ಸಿದ್ದಲಿಂಗಯ್ಯ ಅವರ ರಚನೆಯ ʻಒಂದಾನೊಂದು ಊರು (ನನ್ನ ಕತ್ತೆ ನಿಮ್ಮ ಧರ್ಮ)ʼ ಎಂಬ ನಾಟಕವನ್ನು ಮಹೇಶ ವಿ. ಪಾಟೀಲ ಅವರ ನಿರ್ದೇಶನದಲ್ಲಿ ಬೀದರ ಜಿಲ್ಲೆಯ ಫೋಡಂಪಳ್ಳಿಯ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಸ್ತುತಪಡಿಸಲಿದ್ದಾರೆ. ಮಧ್ಯಾಹ್ನ 12.30 ಗಂಟೆಗೆ ಶಾಂತಲಿಂಗಯ್ಯ ಎಸ್.ಮಠಪತಿ ಅವರ ರಚನೆಯ ʻಕರ್ಮʼ ಎಂಬ ನಾಟಕವನ್ನು ಗಂಗೋತ್ರಿ ಎಸ್.ಮಠಪತಿ ನಿರ್ದೇಶನದಲ್ಲಿ ಕಲಬುರಗಿಯ ಎಂ.ಎ ಟೆಂಗಳೀಕರ್ ಕಾಲೇಜಿನ ವಿದ್ಯಾರ್ಥಿಗಳು ಪ್ರದರ್ಶಿಸಲಿದ್ದಾರೆ. ಮಧ್ಯಾಹ್ನ 2.30 ಗಂಟೆಗೆ ಡಾ.ಚನ್ನಣ್ಣ ವಾಲೀಕರ ರಚನೆಯ “ಬಾಲಿ” ನಾಟಕವನ್ನು ರೇಣುಶ್ರೀ ಅವರ ನಿರ್ದೇಶನದಲ್ಲಿ ಕೊಪ್ಪಳ ಜಿಲ್ಲೆಯ ಕಿನ್ನಾಳ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಸ್ತುತಪಡಿಸಲಿದ್ದಾರೆ.

ಕೊನೆಯ ದಿನವಾದ ಜ.12 ರಂದು ಬೆಳಿಗ್ಗೆ 11 ಗಂಟೆಗೆ ಡಾ.ಚಂದ್ರಶೇಖರ ಕಂಬಾರ ಅವರ “ಸಂಗ್ಯಾ ಬಾಳ್ಯಾ” ನಾಟಕವನ್ನು ಚಂದ್ರಶೇಖರ ಬಸಾಪುರ ಅವರ ನಿರ್ದೇಶನದಲ್ಲಿ ಬಳ್ಳಾರಿಯ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಮಧ್ಯಾಹ್ನ 12.30 ಗಂಟೆಗೆ ಹನುಮಂತ ಹಾಲಿಗೇರಿ ರಚನೆ ಮತ್ತು ಡಾ.ಸಹನ ಪಿಂಜಾರ್ ಅವರ ನಿರ್ದೇಶನದ “ಊರು ಸುಟ್ಟರು ಹನುಮಪ್ಪ ಹೊರಗ್” ಎಂಬ ನಾಟಕವನ್ನು ವಿಜಯನಗರ ಜಿಲ್ಲೆಯ ಹೊಸಪೇಟೆಯ ಟಿ.ಎಂ.ಎ.ಇ.ಎಸ್. ಪಾಲಿಟೆಕ್ನಿಕ್ ಕಾಲೇಜಿನ ತಾಂತ್ರಿಕ ವಿದ್ಯಾರ್ಥಿಗಳು ತಮ್ಮ ಕಲಾ ಪ್ರದರ್ಶನ ನೀಡಲಿದ್ದಾರೆ. ಸಂಜೆ ವೇಳೆಗೆ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಸುಜಾತಾ ಜಂಗಮಶೆಟ್ಟಿ ತಿಳಿಸಿದ್ದಾರೆ.

TAGGED:College Theatre FestivalKalaburagiRangabhoomiSujatha Jangamashettytheatreಕಲಬುರಗಿಕಾಲೇಜು ರಂಗೋತ್ಸವರಂಗಭೂಮಿಸುಜಾತಾ ಜಂಗಮಶೆಟ್ಟಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Accident Sakleshpura
Crime

ಕೇರಳಕ್ಕೆ ಮತ ಚಲಾಯಿಸಲು ಹೊರಟಿದ್ದಾಗ ಕಾರು ಅಪಘಾತ – ವ್ಯಕ್ತಿಯ ಸ್ಥಿತಿ ಗಂಭೀರ

Public TV
By Public TV
8 minutes ago
Iran Uranium Enrichment 3
Latest

ಯುರೇನಿಯಂ ಸಂವರ್ಧನೆ ತನ್ನ ಸಾರ್ವಭೌಮ ಹಕ್ಕು – ಇರಾನ್‌ ಪ್ರಸ್ತಾಪಕ್ಕೆ ಅಮೆರಿಕ ಒಪ್ಪಿಗೆ ನೀಡಿದ್ಯಾ? ಯಾಕೆ ಈ ಗೊಂದಲ?

Public TV
By Public TV
36 minutes ago
Gold Silver 2
Bengaluru City

ಇರಾನ್, ಇಸ್ರೇಲ್ ಕದನ ವಿರಾಮ ಬೆನ್ನಲ್ಲೇ ಚಿನ್ನ, ಬೆಳ್ಳಿ ಬೆಲೆ ಭಾರೀ ಏರಿಕೆ

Public TV
By Public TV
45 minutes ago
Bagalkote Lovers Suicide
Bagalkot

ಪ್ರೇಯಸಿ ಆತ್ಮಹತ್ಯೆ – ಮನನೊಂದು ಪ್ರಿಯಕರನೂ ನೇಣಿಗೆ ಶರಣು

Public TV
By Public TV
1 hour ago
A young man drowned in Tunga River and died in Thirthahalli
Crime

ತೀರ್ಥಹಳ್ಳಿ | ತುಂಗಾ ನದಿಯಲ್ಲಿ ಮುಳುಗಿ ಯುವಕ ದುರ್ಮರಣ

Public TV
By Public TV
1 hour ago
Benjamin Netanyahu 1
Latest

ಪಾಕಿಗೆ ಮುಖಭಂಗ – ಲೆಬನಾನ್‌ ಮೇಲೆ ದಾಳಿ ಮುಂದುವರಿಯಲಿದೆ ಎಂದ ಇಸ್ರೇಲ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?