ರಾಯಚೂರು: ಜಿಲ್ಲೆಯ ಸಿಂಧನೂರು (Sindhnur) ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಲಾರಿ ಹಾಗೂ ಟಾಟಾ ಏಸ್ ವಾಹನಗಳ ನಡುವೆ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ್ದಾರೆ.
ಟಾಟಾ ಏಸ್ನಲ್ಲಿದ್ದ ಅಂಬರೀಶ್ (30) ರಮೇಶ್ (28) ರವಿ (20) ಚಾಲಕ ಇಸ್ಮಾಯಿಲ್ (27) ಮೃತಪಟ್ಟವರು. ಈ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಓರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಅಪಘಾತದಲ್ಲಿ (Accident) ಇನ್ನೋರ್ವನಿಗೆ ಗಂಭೀರ ಗಾಯಗಳಾಗಿದ್ದು ಸಿಂಧನೂರು ತಾಲೂಕಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಮೃತರೆಲ್ಲರೂ ಸಿಂಧನೂರಿನ ಸಾಯಿ ಸಂಗಮ್ ಸಪ್ಲಾಯರ್ನ ಕೆಲಸಗಾರರಾಗಿದ್ದು, ಮದುವೆ ಸಮಾರಂಭವೊಂದಕ್ಕೆ ಡೆಕೋರೇಷನ್ ಮಾಡಲು ಹೊರಟಿದ್ದಾಗ ಅಪಘಾತ ಸಂಭವಿಸಿದೆ. ಸಿಂಧನೂರಿನಿಂದ ಮಸ್ಕಿಯ ಮದ್ಲಾಪುರ ಗ್ರಾಮಕ್ಕೆ ಹೊರಟಿದ್ದ ಟಾಟಾ ಏಸ್ ವಾಹನ ಸಿಂಧನೂರು ಕಡೆಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮನೆ ಮುಂದೆಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಕೊಂಡು ಭಸ್ಮವಾದ!
ಘಟನೆ ಸಂಬಂಧ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಶವಗಳನ್ನು ಸಿಂಧನೂರು ತಾಲೂಕು ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ. ಇದನ್ನೂ ಓದಿ: ಮದುವೆಗೆ ಬಂದ ಅತಿಥಿಗಳ ಮೇಲೆ ಬಿತ್ತು ಮುಸುರೆ ತಟ್ಟೆ – ವೈಟರ್ನನ್ನೇ ಹೊಡೆದು ಕೊಂದ್ರು