Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶ್ರುತಿ, ಸಪ್ತಮಿ ಗೌಡ ಪರಿಚಯಿಸಿದ ಸೀರಿಯಲ್‌ಗೆ ಪ್ರೇಕ್ಷಕರಿಂದ ಸಿಕ್ತು ಅದ್ಭುತ ರೆಸ್ಪಾನ್ಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಶ್ರುತಿ, ಸಪ್ತಮಿ ಗೌಡ ಪರಿಚಯಿಸಿದ ಸೀರಿಯಲ್‌ಗೆ ಪ್ರೇಕ್ಷಕರಿಂದ ಸಿಕ್ತು ಅದ್ಭುತ ರೆಸ್ಪಾನ್ಸ್

Cinema

ಶ್ರುತಿ, ಸಪ್ತಮಿ ಗೌಡ ಪರಿಚಯಿಸಿದ ಸೀರಿಯಲ್‌ಗೆ ಪ್ರೇಕ್ಷಕರಿಂದ ಸಿಕ್ತು ಅದ್ಭುತ ರೆಸ್ಪಾನ್ಸ್

Public TV
Last updated: February 5, 2025 10:04 am
Public TV
Share
3 Min Read
vadhu yajamana serial
SHARE

ಸಿನಿಮಾ ತಾರೆಯರಾದ ಶ್ರುತಿ (Shruthi Krishna) ಮತ್ತು ಸಪ್ತಮಿ ಗೌಡ (Sapthami Gowda) ಪರಿಚಯಿಸಿದ ಎರಡು ಹೊಸ ಕತೆಗಳು ಕನ್ನಡ ವೀಕ್ಷಕರ ಮನಸ್ಸಿಗೆ ಲಗ್ಗೆ ಇಡುವಲ್ಲಿ ಸಕ್ಸಸ್ ಕಂಡಿದೆ. ಸದಾ ವಿಭಿನ್ನ ಕತೆಗಳನ್ನು ಹೇಳುತ್ತಾ ಬಂದಿರುವ ಕಲರ್ಸ್ ಕನ್ನಡ ಚಾನೆಲ್ ಇದೀಗ ಮತ್ತೆರೆಡು ಹೊಸ ಧಾರಾವಾಹಿಗಳ ಮೋಡಿ ಮಾಡುತ್ತಿದ್ದಾರೆ. ‘ವಧು’ ಮತ್ತು ‘ಯಜಮಾನ’ ದೈನಿಕ ಧಾರಾವಾಹಿಗಳು ಜ.27ರಂದು ಶುರುವಾಗಿ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸುತ್ತಿದೆ.

 

View this post on Instagram

 

A post shared by Colors Kannada Official (@colorskannadaofficial)

ಜ.27ರಂದು ಶುರುವಾದ ಜೋಡಿ ಕತೆಗಳಾದ ಡಿವೋರ್ಸ್ ಲಾಯರ್ ಮದುವೆ ಕತೆ ‘ವಧು’ ರಾತ್ರಿ 9.30ಕ್ಕೆ, ಕಾಂಟ್ರಾಕ್ಟ್ ಮದುವೆ ಕತೆ ‘ಯಜಮಾನ’ ರಾತ್ರಿ 10 ಗಂಟೆಗೆ ಪ್ರಸಾರವಾಗುತ್ತಿದೆ. ಎರಡು ಸೀರಿಯಲ್‌ಗಳನ್ನು ಟಿವಿ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ.

 

View this post on Instagram

 

A post shared by Colors Kannada Official (@colorskannadaofficial)

ಸಂಬಂಧಗಳನ್ನು ಪ್ರೀತಿಸೋ, ಅಷ್ಟೇ ಗೌರವಿಸುವ ‘ವಧು’ ಒಬ್ಬ ಅವಿವಾಹಿತೆ, ವೃತ್ತಿಯಲ್ಲಿ ಡಿವೋರ್ಸ್ ಲಾಯರ್. ಮನುಷ್ಯ ಸಂಬಂಧಗಳ ಬಗ್ಗೆ ಅವಳಿಗಿರುವ ಗೌರವವೇ ಅವಳನ್ನು ತನ್ನ ವೃತ್ತಿಯಲ್ಲಿ ಹಿಂದುಳಿಯುವಂತೆ ಮಾಡಿದೆ ಅಂದ್ರೂ ತಪ್ಪಾಗಲ್ಲ. ಗಂಡ ಹೆಂಡ್ತಿ ನಡುವೆ ಬಿರುಕು ಮೂಡಿ ಡಿವೋರ್ಸ್ ಕೇಳಿ ಬಂದ ಜೋಡಿಗಳ ನಡುವೆ ಸಾಮರಸ್ಯ ಮೂಡಿಸಿ ಅವ್ರನ್ನ ಒಂದು ಮಾಡುವುದರಲ್ಲೇ ಅವಳಿಗೆ ಆಸಕ್ತಿ. ಹೀಗಿರುವಾಗ ಒಂದು ಮಹತ್ವದ ಕೇಸು ಎಲ್ಲವನ್ನೂ ತಲೆಕೆಳಗು ಮಾಡುತ್ತದೆ. ಮೋಸ್ಟ್ ಸಕ್ಸಸ್ ಫುಲ್ ಬ್ಯುಸಿನೆಸ್ ಮ್ಯಾನ್ ಸಾರ್ಥಕ್ ದಾಂಪತ್ಯದಲ್ಲಿ ಬಿರುಕುಂಟಾಗಿ, ಪತ್ನಿ ಪ್ರಿಯಾಂಕಾ ಡಿವೋರ್ಸ್ ಕೇಸ್ ಫೈಲ್ ಮಾಡಿದಾಗ ವಧು ಹತ್ತಿರ ಸಹಾಯ ಕೋರಿ ಬರುತ್ತಾರೆ. ಈ ವೇಳೆ ಕತೆ ಕುತೂಹಲಕರ ತಿರುವು ಪಡೆಯುತ್ತದೆ.

ಸಂಬಂಧಗಳನ್ನು ಪರೀಕ್ಷೆಗೊಳಪಡಿಸುವ ‘ವಧು’ ಧಾರಾವಾಹಿಯು ವೃತ್ತಿಧರ್ಮ ಮತ್ತು ಆತ್ಮಸಾಕ್ಷಿಗಳ ನಡುವಿನ ತಿಕ್ಕಾಟವನ್ನು ಹೇಳುತ್ತದೆ. ಪ್ರೀತಿ, ಮೋಸ ಮತ್ತು ನಂಬಿಕೆಗಳು ನಮ್ಮನ್ನು ಹೇಗೆಲ್ಲಾ ಘಾಸಿಗೊಳಿಸಬಹುದೆಂಬುದನ್ನು ಬಿಡಿಸಿಡುತ್ತದೆ. ತನ್ನ ಭಾವನೆಗಳ ಜೊತೆಗೆ ಗುದ್ದಾಡುತ್ತಲೇ ತನಗೆ ಸಿಕ್ಕಿರುವ ಈ ಹೊಸ ಕೇಸನ್ನು ‘ವಧು’ ಸರಿಯಾಗಿ ನಿಭಾಯಿಸುತ್ತಾಳಾ? ಪ್ರೀತಿ ಮತ್ತು ಬದ್ಧತೆಗಳ ಬಗೆಗಿನ ಅವಳ ನಿಲುವುಗಳನ್ನು ಈ ಕೇಸ್ ಬದಲಾಯಿಸುತ್ತಾ ಅನ್ನುವುದೇ ಕತೆಯನ್ನು ಮುನ್ನೆಡೆಸುವ ಎಳೆಯಾಗಿದೆ. ಇನ್ನೂ ಹೆಸರಾಂತ ಕಲಾವಿದರಾದ ವಿನಯಾ ಪ್ರಸಾದ್, ಸುಧಾ ಬೆಳವಾಡಿ, ರವಿ ಭಟ್, ರವಿ ಕುಮಾರ್ ಮತ್ತು ರೇಖಾ ಸಾಗರ್ ಅವರು ಅಭಿನಯಿಸಿದ್ದಾರೆ. ಸಾರ್ಥಕ್ ಪಾತ್ರದಲ್ಲಿ ‘ಲಕ್ಷಣ’ ಧಾರಾವಾಹಿ ಖ್ಯಾತಿಯ ಅಭಿಷೇಕ್ ಶ್ರೀಕಾಂತ್, ವಧು ಪಾತ್ರದಲ್ಲಿ ದುರ್ಗಾಶ್ರೀ ಮತ್ತು ಪ್ರಿಯಾಂಕಾ ಪಾತ್ರದಲ್ಲಿ ಸೋನಿ ಮುಲೇವಾ ನಟಿಸುತ್ತಿದ್ದಾರೆ.

ಇನ್ನೂ ‘ಯಜಮಾನ’ ಸೀರಿಯಲ್‌ನಲ್ಲಿ ಚೂರೂ ಸ್ವಾರ್ಥವಿಲ್ಲದ ಸರಳ ವ್ಯಕ್ತಿ ರಘುಗೆ ತನ್ನ ಕುಟುಂಬದ ಪ್ರೀತಿ ಗಳಿಸುವ ಮಹದಾಸೆ. ಝಾನ್ಸಿ ಹಾಗಲ್ಲ. ತಾತನ ಮಡಿಲಲ್ಲಿ ಬೆಳೆದ ಈಕೆ ಗಂಡಸರನ್ನು ದ್ವೇಷಿಸುವ ಹಠಮಾರಿ ಹುಡುಗಿ. ವಿಧಿ ಇವರಿಬ್ಬರನ್ನೂ ಒಂದು ಮದುವೆಯ ರೂಪದಲ್ಲಿ ಹತ್ತಿರ ತರುತ್ತದೆ. ತನ್ನ ಕಷ್ಟದಲ್ಲಿರುವ ಕುಟುಂಬದ ಒಳಿತಿಗೆ ಈ ಮದುವೆ ದಾರಿಯಾದೀತೆಂದು ಬಗೆಯುವ ರಘು ಮದುವೆಗೆ ಒಪ್ಪುತ್ತಾನೆ. ಮದುವೆಯ ನಂತರ ಅನೇಕ ಅನೂಹ್ಯ ತಿರುವುಗಳು ಬಂದು ಕತೆಯನ್ನು ಮತ್ತೆಲ್ಲಿಗೋ ಸೆಳೆದೊಯ್ಯುತ್ತವೆ. ರಘು ಮತ್ತು ಝಾನ್ಸಿ ತಮ್ಮ ವ್ಯಕ್ತಿತ್ವದಲ್ಲಿರುವ ಭಿನ್ನತೆಯನ್ನು ಎದುರಿಸಬೇಕಾಗುತ್ತದೆ. ಅನುಕೂಲಕ್ಕೆಂದು ಆರಂಭವಾದ ಅವರಿಬ್ಬರ ಸಂಬಂಧ ಈಗ ಗಾಢವಾಗುತ್ತಾ ಬೆಳೆದರೂ ಯಾವುದೇ ಕ್ಷಣದಲ್ಲೂ ಒಡೆದುಹೋಗುವ ಭಯವನ್ನೂ ಹುಟ್ಟಿಸುತ್ತದೆ.

 

View this post on Instagram

 

A post shared by Colors Kannada Official (@colorskannadaofficial)

ಪ್ರೀತಿ, ಮಹತ್ವಾಕಾಂಕ್ಷೆ ಮತ್ತು ಸ್ವಾರ್ಥದ ಆಟ ‘ಯಜಮಾನ’ದ ಕತೆಯಾಗಿದೆ. ರಘು ಮತ್ತು ಝಾನ್ಸಿ ಎಂದಾದರೂ ಬದುಕು ತಮಗೆ ಒಡ್ಡುವ ಸವಾಲುಗಳನ್ನು ಗೆಲ್ಲುತ್ತಾರಾ? ಸೀರಿಯಲ್‌ನಲ್ಲಿ ಉತ್ತರ ಸಿಗಲಿದೆ. ಹೊಸ ಮುಖಗಳಾದ ಹರ್ಷ ಬಿ. ಎಸ್. ಮತ್ತು ಮಧುಶ್ರೀ ಭೈರಪ್ಪ ‘ಯಜಮಾನ’ದ ಮುಖ್ಯ ಭೂಮಿಕೆಯಲ್ಲಿದ್ದಾರೆ. ಅವರಿಗೆ ಬೆಂಬಲವಾಗಿ ರಮೇಶ್ ಭಟ್, ನಾಗಾಭರಣ, ಮಂಜುಳ, ಅಂಕಿತಾ ಜೈರಾಮ್, ತಿಲಕ್, ಸ್ಪೂರ್ತಿ, ಪ್ರದೀಪ್ ಮತ್ತು ವಿಶ್ವ ನಟಿಸುತ್ತಿದ್ದಾರೆ.

‘ವಧು’ ಮತ್ತು ‘ಯಜಮಾನ’ ಎರಡೂ ಕತೆಗಳು ಆಧುನಿಕ ಬದುಕಿನ ಸಂಬಂಧಗಳ ಹೊಸ ಸಂಕೀರ್ಣತೆಯನ್ನು ಎಳೆಎಳೆಯಾಗಿ ಬಿಡಿಸಿಡುವ ಹೊಸ ಬಗೆಯ ಕತೆಗಳು. ಈ ಸೀರಿಯಲ್ ಶುರುವಾದ ಕೆಲವೇ ದಿನಗಳಲ್ಲಿ ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.

TAGGED:sandalwoodvadhu serialYajamana serialಬಿಗ್‌ ಬಾಸ್‌ ಕನ್ನಡ 11ಯಜಮಾನ ಸೀರಿಯಲ್‌ವಧು
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

supreme Court 1
Court

ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ’ ಅಸ್ತು

Public TV
By Public TV
8 hours ago
d.k.shivakumar dinner party
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ – ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ

Public TV
By Public TV
9 hours ago
Gas Emergency
Latest

ಎಲ್‌ಪಿಜಿ ಸಿಲಿಂಡರ್‌ಗಳ ಕೃತಕ ಅಭಾವ – ಬುಕ್ಕಿಂಗ್ ಅವಧಿಯನ್ನು 21ರಿಂದ 25 ದಿನಕ್ಕೆ ಹೆಚ್ಚಿಸಿದ ಕೇಂದ್ರ

Public TV
By Public TV
9 hours ago
OPD
Bengaluru City

ಮುಷ್ಕರದಿಂದ ಹಿಂದೆ ಸರಿದ ವೈದ್ಯರು – ನಾಳೆಯಿಂದ ಎಂದಿನಂತೆ ಓಪಿಡಿ ಓಪನ್

Public TV
By Public TV
9 hours ago
smriti irani lakshmi hebbalkar
Bengaluru City

ಸ್ಮೃತಿ ಇರಾನಿ ಕಾಣುತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವ್ಯಂಗ್ಯ

Public TV
By Public TV
10 hours ago
Eshwar Khandre
Bengaluru City

1 ಮರ ಕಡಿದರೆ 10 ಸಸಿ ನೆಡಲು ವಿಧಿಸುವ ಶುಲ್ಕಕ್ಕೆ ವಿನಾಯಿತಿ ಇಲ್ಲ: ಈಶ್ವರ ಖಂಡ್ರೆ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?