ಬೆಂಗಳೂರು: ಗೊಂದಲದ ಗೂಡಾಗಿ ತಾತ್ಕಾಲಿಕವಾಗಿ ನಿಂತಿರುವ ಟೋಯಿಂಗ್ ಮರು ಜೀವ ನೀಡಲು ಹೊಸ ಪೊಲೀಸ್ ಕಮೀಷನರ್ ಪ್ರತಾಪ್ ರೆಡ್ಡಿ ಚಿಂತನೆಯಲ್ಲಿದ್ದಾರೆ.
ಶೀಘ್ರದಲ್ಲೇ ಟೋಯಿಂಗ್ ಸಮಸ್ಯೆಗೆ ಪರಿಹಾರ ಕಂಡುಕೊಂಡು ಪುನಃ ಟೋಯಿಂಗ್ ಪ್ರಾರಂಭ ಮಾಡುವ ನಿಟ್ಟಿನಲ್ಲಿ ಕೆಲಸಗಳು ನಡೆಯುತ್ತವೆ. ಟೋಯಿಂಗ್ ಸಮಸ್ಯೆ ಬಗ್ಗೆ ಸರ್ಕಾರದ ಜೊತೆ ಮಾತನಾಡಿ ಶೀಘ್ರದಲ್ಲೇ ಹೊಸ ಮಾರ್ಗಸೂಚಿಯೊಂದಿಗೆ ಪ್ರಾರಂಭ ಮಾಡಲಾಗುವುದೆಂದು ಪ್ರತಾಪ್ ರೆಡ್ಡಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಇದನ್ನೂ ಓದಿ: ನಮ್ಮಲ್ಲಿ ಪೆಟ್ರೋಲ್ ಮುಗಿದಿದೆ: ಶ್ರೀಲಂಕಾ
ನಗರದಲ್ಲಿ ಎಲ್ಲಾ ಚಟುವಟಿಕೆಗಳು ಮಾಮೂಲಿಯಂತೆ ನಡೆಯುತ್ತಿರುವದರಿಂದ ನಗರದಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ನಗರದಲ್ಲಿ ಆಗುತ್ತಿರುವ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದರ ಜೊತೆಗೆ ಪುನಃ ಟೋಯಿಂಗ್ ಪ್ರಾರಂಭ ಮಾಡುವ ನಿಟ್ಟಿನಲ್ಲಿ ಕೆಲಸಗಳು ಮಾಡಲಾಗುತ್ತದೆ ಎಂದರು. ಇದನ್ನೂ ಓದಿ: ರಫ್ತಿಗೆ ನಿಷೇಧ ಹೇರಿದ ಭಾರತ- ಗೋಧಿ ಬೆಲೆ ದಾಖಲೆ ಮಟ್ಟದಲ್ಲಿ ಏರಿಕೆ