Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮನವಮಿ ರ‍್ಯಾಲಿ ವೇಳೆ ಕೋಮುಸಂಘರ್ಷ: 4 ರಾಜ್ಯಗಳಲ್ಲಿ ನಡೆದಿದ್ದೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ರಾಮನವಮಿ ರ‍್ಯಾಲಿ ವೇಳೆ ಕೋಮುಸಂಘರ್ಷ: 4 ರಾಜ್ಯಗಳಲ್ಲಿ ನಡೆದಿದ್ದೇನು?

Crime

ರಾಮನವಮಿ ರ‍್ಯಾಲಿ ವೇಳೆ ಕೋಮುಸಂಘರ್ಷ: 4 ರಾಜ್ಯಗಳಲ್ಲಿ ನಡೆದಿದ್ದೇನು?

Public TV
Last updated: April 11, 2022 12:13 pm
Public TV
Share
3 Min Read
BENKI
SHARE

ನವದೆಹಲಿ: ರಾಮನವಮಿ ಆಚರಣೆಯ ವೇಳೆ ಭಾನುವಾರ ಗುಜರಾತ್, ಮಧ್ಯಪ್ರದೇಶ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ನಡೆಯುತ್ತಿದ್ದ ಮೆರವಣಿಗೆಯು ಹಿಂಸಾಚಾರಕ್ಕೆ ತಿರುಗಿದ್ದು, ಕೋಮು ಸಂಘರ್ಷ ಏರ್ಪಟ್ಟಿದೆ. ಇದೇ ವೇಳೆ 10 ಮಂದಿ ಗಾಯಗೊಂಡಿದ್ದು, ಓರ್ವ ಮೃತಪಟ್ಟಿದ್ದಾನೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

ಮಧ್ಯಪ್ರದೇಶದ ಖರ್ಗಾನ್‌ನ ಕೆಲವು ಪ್ರದೇಶಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ. ರಾಮ ನವಮಿ ಮೆರವಣಿಗೆ ಸಂದರ್ಭದಲ್ಲಿ ಹಿಂಸಾಚಾರ ಮತ್ತು ಗಲಭೆ ನಡೆದಿದೆ. ಅನೇಕ ಕಡೆ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಸಂಘರ್ಷ ಭುಗಿಲೇಳುವುದನ್ನು ತಡೆಯಲು ಪೊಲೀಸರು ಬಿಗಿ ಭದ್ರತೆ ನಿಯೋಜಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಕಲಬುರಗಿ ವಿವಿ ಆವರಣದಲ್ಲಿ ರಾಮನವಮಿ ಆಚರಿಸ್ತಿದ್ದ ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಹಲ್ಲೆ

FIRE

ಧ್ವನಿವರ್ಧಕ ವಿಚಾರಕ್ಕೆ ಗಲಾಟೆ: ಧ್ವನಿವರ್ಧಕಗಳಿಂದ ಸಂಗೀತ ಪ್ರಸಾರ ಮಾಡುತ್ತಿದ್ದ ವಿಚಾರವಾಗಿ ನಡೆದ ಜಗಳದ ಬಳಿಕ ತಲಬ್ ಚೌಕ್‌ನಲ್ಲಿ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆದಿದೆ. ಈ ವೇಳೆ ಘರ್ಷಣೆ ಶುರುವಾಗಿದೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಅಶ್ರುವಾಯುಗಳನ್ನು ಸಿಡಿಸಬೇಕಾಯಿತು ಎಂದು ಹೆಚ್ಚುವರಿ ಕಲೆಕ್ಟರ್ ಎಸ್.ಎಸ್.ಮುಜಾಲ್ದೆ ತಿಳಿಸಿದ್ದಾರೆ. ಇದನ್ನೂ ಓದಿ: ಮುಸ್ಕಾನ್‍ರನ್ನು ತನಿಖೆ ನಡೆಸುವಂತೆ ಸಿಎಂಗೆ ಅನಂತ್‍ಕುಮಾರ್ ಹೆಗ್ಡೆ ಪತ್ರ

ದೇವಸ್ಥಾನ ಧ್ವಂಸ, ಮನೆಗಳಿಗೆ ಬೆಂಕಿ: ಘಟನೆ ವೇಳೆ ಕೆಲವರು ಕಲ್ಲು ತೂರಾಟ ನಡೆಸಿದ್ದು, ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಅಲ್ಲದೆ, ಎಸ್‌ಪಿ ಸಿದ್ಧಾರ್ಥ್ ಚೌಧರಿ ಸೇರಿದಂತೆ ಅನೇಕ ಪೊಲೀಸರು ಕೂಡ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಒಂದು ದೇವಸ್ಥಾನ ಧ್ವಂಸಗೊಳಿಸಿ, 4 ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ದೃಶ್ಯಗಳು ವೀಡಿಯೋಗಳಲ್ಲಿ ಸೆರೆಯಾಗಿವೆ.

crime

ಗುಜರಾತ್‌ನಲ್ಲಿ ಕಲ್ಲುತೂರಾಟ: ಗುಜರಾತ್‌ನ ಆನಂದ್ ಜಿಲ್ಲೆಯ ಕಂಭಾಟ್ ಮತ್ತು ಸಬರ್ಕಾಂತಾ ಜಿಲ್ಲೆಯ ಹಿಮ್ಮತ್ ನಗರದಲ್ಲಿ ಸಂಘರ್ಷದ ವೇಳೆ ಕಲ್ಲು ತೂರಾಟ ಹಾಗೂ ಬೆಂಕಿ ಹಚ್ಚಿರುವ ಘಟನೆಗಳು ನಡೆದಿವೆ. ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರು ಅಶ್ರುವಾಯು ಶೆಲ್ ಪ್ರಯೋಗ ಮಾಡಿದ್ದಾರೆ.

ಗುಂಪು ಘರ್ಷಣೆ: ರಾಮನವಮಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಈ ಜಾಗದಲ್ಲಿ ಸುಮಾರು 65 ವರ್ಷದ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ ಎಂದು ಕಂಭಾಟ್ ಪೊಲೀಸ್ ವರಿಷ್ಠಾಧಿಕಾರಿ ಅಜೀತ್ ರಜ್ಯಾನ್ ತಿಳಿಸಿದ್ದಾರೆ. ಇದನ್ನೂ ಓದಿ: ನನ್ನ ಮಗಳಿಗೆ ಬಂದ ಹಣವನ್ನು ಜನ ಸೇವೆಗೆ ಕೊಡ್ತೀನಿ: ಮುಸ್ಕಾನ್‌ ತಂದೆ

ಹಿಮ್ಮತ್ ನಗರದಲ್ಲಿ ಗುಂಪೊಂದು ಕೆಲವು ವಾಹನಗಳು ಮತ್ತು ಅಂಗಡಿಗಳಿಗೆ ಹಾನಿ ಮಾಡಿದೆ. ರಾಮನವಮಿ ಆಚರಣೆ ವೇಳೆ ಕೆಲವರಿಗೆ ಕಲ್ಲೇಟು ಬಿದ್ದಿದೆ ಎಂದು ಸಬರ್ಕಾಂತಾ ಪೊಲೀಸ್ ಮುಖ್ಯಸ್ಥ ವಿಶಾಲ್ ವಾಘೇಲಾ ಹೇಳಿದ್ದಾರೆ.

RAMANAVAMI
ಸಾಂದರ್ಭಿಕ ಚಿತ್ರ

ಪೊಲೀಸರ ಮೇಲೆ ದಾಳಿ ಆರೋಪ: ಪಶ್ಚಿಮ ಬಂಗಾಳದ ಹೌರಾದಲ್ಲಿ ಶಿಬ್‌ಪುರ್ ಪ್ರದೇಶದಲ್ಲಿ ರಾಮನವಮಿ ಮೆರವಣಿಗೆ ಸಂದರ್ಭದಲ್ಲಿ ಘರ್ಷಣೆಗಳು ವರದಿಯಾಗಿದ್ದು, ಭಾರೀ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ರಾಮನವಮಿ ಮೆರವಣಿಗೆ ಮೇಲೆ ಪೊಲೀಸರೇ ದಾಳಿ ನಡೆಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಮೆರವಣಿಗೆಯಲ್ಲಿ ತೆರಳುತ್ತಿದ್ದ ಜನರ ಮೇಲೆ ಪೊಲೀಸ್ ಸಿಬ್ಬಂದಿ ಮನಬಂದಂತೆ ಪ್ರಹಾರ ನಡೆಸಿದ್ದಾರೆ ಎಂದು ವಿಧಾನಸಭೆಯಲ್ಲಿನ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಆರೋಪಿಸಿದ್ದಾರೆ. ಇದನ್ನೂ ಓದಿ: ಮಂಡ್ಯ ವಿದ್ಯಾರ್ಥಿನಿಗೆ ಐಫೋನ್, ಸ್ಮಾರ್ಟ್‍ವಾಚ್ ಗಿಫ್ಟ್ ಕೊಟ್ಟ ಕಾಂಗ್ರೆಸ್ ಶಾಸಕ

RAMANAVAMI

ಹೌರಾದ ನಿವಾಸಿಗಳು ಸಾಮಾಜಿಕ ಮಾಧ್ಯಮದಲ್ಲಿ ಏನನ್ನಾದರೂ ಬಿತ್ತರಿಸುವಾಗ ಸಂಯಮ ಕಾಪಾಡಿಕೊಳ್ಳಿ ಹಾಗೂ ಯಾವುದೇ ನಕಲಿ ಸುದ್ದಿಗಳನ್ನು ಹರಡದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಜಾರ್ಖಂಡ್‌ನ ಲೊಹರ್ದಗಾದಲ್ಲಿ ಕೂಡ ರಾಮನವಮಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಹಾಗೂ ಬೆಂಕಿ ಹಚ್ಚಿದ ಘಟನೆಗಳು ವರದಿಯಾಗಿವೆ. 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಶಾಂತಿ ಕಾಪಾಡಲು ಬೃಹತ್ ಸಂಖ್ಯೆಯಲ್ಲಿ ಪೊಲೀಸರನ್ನು ಜಮಾವಣೆ ಮಾಡಲಾಗಿದೆ.

TAGGED:communal clashCurfewgujaratpoliceRamanavami rallyWest Bengalಕರ್ಫ್ಯೂಕೋಮುಸಂಘರ್ಷಗುಜರಾತ್ಪಶ್ಚಿಮಬಂಗಾಳಪೊಲೀಸ್ರಾಮನವಮಿ ರ‍್ಯಾಲಿ
Share This Article
Facebook Whatsapp Whatsapp Telegram

Cinema news

Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood
Arijith Singh
ಹಿನ್ನೆಲೆ ಗಾಯನಕ್ಕೆ ಗುಡ್ ಬೈ ಹೇಳಿದ ಅರಿಜಿತ್ ಸಿಂಗ್
Bollywood Cinema Latest Main Post
kavya gowda
ನಟಿ ಕಾವ್ಯ ಗೌಡ, ಪತಿ ಮೇಲೆ ಹಲ್ಲೆ ಆರೋಪ; ದೂರು ದಾಖಲು
Cinema Latest Main Post Sandalwood
Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories

You Might Also Like

ajit pawar plane crash
Latest

ದಟ್ಟ ಮಂಜಿನಿಂದಾಗಿ ವಿಮಾನ ಪತನ; ವಾಚ್‌, ಬಟ್ಟೆಯಿಂದ ಅಜಿತ್‌ ಪವಾರ್‌ ಗುರುತು ಪತ್ತೆ

Public TV
By Public TV
33 minutes ago
Bombardier Learjet 45 Ajit Pawars Private Jet
Latest

ಮೂರು ವರ್ಷದ ಒಳಗಡೆ ಎರಡನೇ ಬಾರಿ ವಿಎಸ್‌ಆರ್‌ ಕಂಪನಿಯ ವಿಮಾನ ಪತನ

Public TV
By Public TV
2 hours ago
delta beach boat accident disha death
Latest

ಉಡುಪಿಯ ಪ್ರವಾಸಿ ಬೋಟ್ ದುರಂತ ಕೇಸ್; ಯೂಟ್ಯೂಬರ್ ನಿಶಾ, ಮಧು ಗೌಡ ಸ್ನೇಹಿತೆ ಸಾವು

Public TV
By Public TV
2 hours ago
ajit pawars plane crashes during second landing attempt
Latest

2ನೇ ಬಾರಿ ಲ್ಯಾಂಡಿಂಗ್‌ ಪ್ರಯತ್ನದಲ್ಲಿದ್ದಾಗ ಅಜಿತ್‌ ಪವಾರ್‌ ವಿಮಾನ ಪತನ

Public TV
By Public TV
2 hours ago
sanjay gandhi ajit pawar vijay rupani
Latest

ವಿಮಾನ, ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣಕ್ಕೀಡಾದ ಪ್ರಮುಖ ರಾಜಕಾರಣಿಗಳು..!

Public TV
By Public TV
3 hours ago
Ajit Pawar Dies Plane plane was headed towards the runway but it fell down a 100 feet before it Eyewitness
Latest

Ajit Pawar Dies | ಲ್ಯಾಂಡ್‌ ಆಗಲು ಇನ್ನೇನು 100 ಅಡಿ ಬಾಕಿಯಿದ್ದಾಗ ಪತನಗೊಂಡು ಸ್ಫೋಟ: ಪ್ರತ್ಯಕ್ಷದರ್ಶಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?