ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಸ್ಲಿಂ ಸಂಘಟನೆಯಿಂದ ಕೋಮು ಪಾಠ – ಹಿಂದೂ ಜಾಗರಣ ವೇದಿಕೆಯಿಂದ ಕಾರ್ಯಾಗಾರ ಸ್ಥಗಿತ

Public TV
2 Min Read
dakshin kannada school

ಮಂಗಳೂರು: ಕೋಮು ಸೂಕ್ಷ್ಮ ಜಿಲ್ಲೆ ಕರಾವಳಿಯಲ್ಲಿ ಮತಾಂತರಕ್ಕೆ ಸಂಬಂಧಪಟ್ಟಂತೆ ಹಲವಾರು ವಿಚಾರಗಳು ವಿವಾದಕ್ಕೆ ಕಾರಣವಾಗಿದೆ. ಈ ನಡುವೆ ಶೈಕ್ಷಣಿಕ ಕಾರ್ಯಾಗಾರ ಹೆಸರಿನಲ್ಲಿ ಮತಾಂತರ ಪ್ರಚೋದನೆಯ ಪಾಠ ಮಾಡಿದ್ದಾರೆನ್ನುವ ವಿಚಾರ ಭಾರೀ ವಿವಾದಕ್ಕೆ ಎಡೆಯಾಗಿದೆ.

ಶೈಕ್ಷಣಿಕ ಕಾರ್ಯಾಗಾರ ಎನ್ನುವ ಹೆಸರಿನಲ್ಲಿ ಮತಾಂತರಕ್ಕೆ (Conversion) ಪ್ರಚೋದನೆಯಾಗವಂತಹ ಪಾಠ ಮಾಡಲಾಗಿದೆ ಎನ್ನುವ ವಿಚಾರ ಕರಾವಳಿಯ ಗಡಿಭಾಗದಲ್ಲಿ ವಿವಾದಕ್ಕೆ ಕಾರಣವಾಗಿದೆ. ಖಾಸಗಿ ಹಾಲ್‌ನಲ್ಲಿ ಮುಸ್ಲಿಂ ಸಂಘಟನೆಯೊಂದರಿಂದ ಕಾರ್ಯಾಗಾರ ನಡೆದಿದ್ದು, ಕಾರ್ಯಾಗಾರಕ್ಕೆ ಸ್ಥಳೀಯ ಶಾಲೆಯ ಎಲ್ಲಾ ವಿದ್ಯಾರ್ಥಿಗಳನ್ನು ಕರೆಸಿಕೊಳ್ಳಲಾಗಿತ್ತು. ಅಲ್ಲಿ ಕೋಮುಪ್ರಚೋದನೆ ಮಾಡಿ ಮತ ಪ್ರಚಾರ ಮಾಡಿರುವ ಆರೋಪ ಕೇಳಿಬಂದಿದ್ದು, ಅಲ್ಲಿಗೆ ಭೇಟಿ ನೀಡಿದ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಕಾರ್ಯಾಗಾರ ನಿಲ್ಲಿಸಿದ್ದಾರೆ. ಜೊತೆಗೆ ಕಾರ್ಯಕ್ರಮ ಆಯೋಜಕರು, ಶಾಲಾ ಮುಖ್ಯಶಿಕ್ಷಕರ ಮೇಲೆ ಕೇಸ್ ದಾಖಲಿಸಿದ್ದಾರೆ.

ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳ ತಾಲೂಕಿನ ಅಡ್ಯನಡ್ಕ ಗ್ರಾಮದಲ್ಲಿ ಯಂಗ್ ಮೆನ್ಸ್ ಅಸೋಸಿಯೇಷನ್‌ನಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ (Student) ಶೈಕ್ಷಣಿಕ ಕಾರ್ಯಾಗಾರವನ್ನು ಆಯೋಜನೆ ಮಾಡಲಾಗಿತ್ತು. ಇಲ್ಲಿಗೆ ಸ್ಥಳೀಯ ಜನತಾ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳನ್ನು ಕರೆಸಿಕೊಳ್ಳಲಾಗಿತ್ತು. ಅಲ್ಲಿ ಕೋಮು ಪ್ರಚೋದನೆ ಮಾಡಿ ಮತ ಪ್ರಚಾರ ಮಾಡಿರುವ ಆರೋಪ ಕೇಳಿಬಂದಿದ್ದು, ಸ್ಥಳಕ್ಕೆ ಧಾವಿಸಿದ ಹಿಂದು ಜಾಗರಣಾ ವೇದಿಕೆ ಕಾರ್ಯಕರ್ತರು ಕಾರ್ಯಾಗಾರ ನಿಲ್ಲಿಸಿದ್ದಾರೆ. ಶಾಲೆಯ (School) ಮುಖ್ಯಶಿಕ್ಷಕರು ಕಡ್ಡಾಯವಾಗಿ ಎಲ್ಲ ವಿದ್ಯಾರ್ಥಿಗಳು ತೆರಳಲೇಬೇಕು ಎಂದು ತಾಕೀತು ಮಾಡಿ ವಿದ್ಯಾರ್ಥಿಗಳನ್ನು ಕಳಿಸಿರುವ ಬಗ್ಗೆ ವಿದ್ಯಾರ್ಥಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕರ್ಮ ಯಾರನ್ನೂ ಬಿಡಲ್ಲ, ನಾನು ದೇವರನ್ನು ನಂಬ್ತೀನಿ: ಕುಸುಮಾ

ಈ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಸಂಘಟನೆ ಮುಖಂಡರು ದೂರು ದಾಖಲಿಸಿದ್ದಾರೆ. ಶಾಲಾ ಮುಖ್ಯೋಪಾಧ್ಯಾಯ ಟಿ.ಆರ್.ನಾಯಕ್, ರಫೀಕ್ ಮಾಸ್ಟರ್ ಅತೂರು ಹಾಗೂ ನುಸ್ರುತುಲ್ ಇಸ್ಲಾಂ ಯಂಗ್ ಮೆನ್ಸ್ ಅಸೋಸಿಯೇಷನ್ ಸಂಘಟನೆ ಮೇಲೆ ದೂರು ದಾಖಲಾಗಿದೆ. ಇದನ್ನೂ ಓದಿ: ಅಶ್ವಥ್ ನಾರಾಯಣ್‌ ಆಡಿದ ಮಾತುಗಳು ಬೊಮ್ಮಾಯಿ, ಕಟೀಲ್, ಮೋದಿಯದ್ದು : ಸುರ್ಜೆವಾಲಾ

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *