Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಜರಂಗದಳ ಶಿವಮೊಗ್ಗ ಜಿಲ್ಲಾ ಸಂಚಾಲಕನ ಮೇಲೆ ಕೇಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬಜರಂಗದಳ ಶಿವಮೊಗ್ಗ ಜಿಲ್ಲಾ ಸಂಚಾಲಕನ ಮೇಲೆ ಕೇಸ್

Districts

ಬಜರಂಗದಳ ಶಿವಮೊಗ್ಗ ಜಿಲ್ಲಾ ಸಂಚಾಲಕನ ಮೇಲೆ ಕೇಸ್

Public TV
Last updated: February 27, 2017 5:03 pm
Public TV
Share
2 Min Read
dayalu1
SHARE

ಶಿವಮೊಗ್ಗ: ನಗರದಲ್ಲಿ ನಡೆದ ಗೋ ಸತ್ಯಾಗ್ರಹದಲ್ಲಿ ಬಜರಂಗದಳ ಜಿಲ್ಲಾ ಸಂಚಾಲಕ ದೀನದಯಾಳು ಕೋಮು ಪ್ರಚೋದಕ ಭಾಷಣ ಮಾಡಿದ್ದಾರೆ ಎಂದು ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ. ನಗರದ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯಕ್ಕೆ ಎಫ್‍ಐಆರ್ ಸಲ್ಲಿಸಲಾಗಿದೆ.

ಜಿಲ್ಲಾಧಿಕಾರಿಗಳ ಕಚೇರಿ ಅವರಣದಲ್ಲಿ ಸಾಧುಸಂತರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಗೋ ಸತ್ಯಾಗ್ರಹದದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಶಾಸಕ ಭಾನುಪ್ರಕಾಶ್ ಸೇರಿದಂತೆ ಹಲವಾರು ಮುಖಂಡರು ಮಾತನಾಡಿದ್ದರು. ಹಿರಿಯೂರು ಮಠದ ಲಕ್ಷ್ಮಣಾರ್ಯ ಸ್ವಾಮೀಜಿ, ಭದ್ರಗಿಗಿರಿಯ ಮುರುಗೇಶ್ ಸ್ವಾಮೀಜಿ, ಗೊಂದಿ ಮಠದ ನಾಮಾನಂದ ಸ್ವಾಮೀಜಿ, ಅರಕೆರೆಯ ಕರಿಸಿದ್ದೇಶ್ವರ ಸ್ವಾಮೀಜಿಗಳು ಸಾನಿಧ್ಯದಲ್ಲಿ ಗೋ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬಜರಂಗದಳ ಜಿಲ್ಲಾ ಸಂಚಾಲಕ ದೀನದಯಾಳು ಅವರು, ನಗರದಲ್ಲಿ 60 ಕಸಾಯಿ ಖಾನೆಗಳಿವೆ. ಇವುಗಳನ್ನು ತೆರವುಗೊಳಿಸುವಲ್ಲಿ ಜಿಲ್ಲಾಧಿಕಾರಿ, ಹಾಗೂ ಜಿಲ್ಲಾ ರಕ್ಷಣಾಧಿಕಾರಿ ಯಾವುದೇ ಕ್ರಮಕೈಗೊಂಡಿಲ್ಲ. ಈ ಬಗ್ಗೆ ನಾವು ನೀಡಿದ ಮನವಿಗೆ ಯಾವುದೇ ರೀತಿಯಲ್ಲೂ ಸ್ಪಂದಿಸಿಲ್ಲ ಎಂದು ಒಂದು ಕೋಮಿನ ವಿರುದ್ಧ ಪ್ರಚೋದನಕಾರಿಯಾಗಿ ಮಾತನಾಡಿ, ತಮ್ಮ ಕಾರ್ಯಕರ್ತರನ್ನು ಹುರಿದುಂಬಿಸಿದ್ದಾರೆ ಎಂದು ಎಫ್‍ಐಆರ್ ನಲ್ಲಿ ಹೇಳಲಾಗಿದೆ.

ದೀನ ದಯಾಳು ಅವರು, ಶಿವಮೊಗ್ಗದಂತ ಕೋಮು ಸೂಕ್ಷ್ಮ ಪ್ರದೇಶದಲ್ಲಿ ಸೌಹಾರ್ದತೆ ಹದಗೆಡಿಸಲು ಪ್ರಯತ್ನಿಸುತ್ತಿದ್ದಾರೆ. ಮುಂದಿನ ದಿನಗಳಲ್ಲೂ ಇದೇ ರೀತಿ ಸಭೆ ಸಮಾರಂಭಗಳಲ್ಲಿ ಕೋಮು ಪ್ರಚೋದಕ ಭಾಷಣ ಮಾಡಿ, ಶಾಂತಿ- ಸುವ್ಯವಸ್ಥೆಗೆ ಧಕ್ಕೆ ತರುವ, ಪ್ರಾಣ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವನ್ನುಂಟು ಮಾಡುವ ಹಾಗೂ ಸಾರ್ವಜನಿಕರ ನೆಮ್ಮದಿಗೆ ಭಂಗ ತರುವ ಸಾಧ್ಯತೆಗಳು ಹೆಚ್ಚಿವೆ ಎಂದು ಎಫ್‍ಐಆರ್ ನಲ್ಲಿ ನಮೂದಿಲಾಗಿದೆ.

ಶಿವಮೊಗ್ಗ ನಗರದಲ್ಲಿ ಕೋಮು ಸೌಹಾರ್ದತೆ ಕಾಪಾಡಲು ಹಾಗೂ ದಯಾಳು ಅವರ ಸದ್ವರ್ತನೆಗಾಗಿ ಸಿಆರ್‍ಪಿಸಿ 108 ಕಲಂ ಅನ್ವಯ ಒಂದು ವರ್ಷದ ಜಾಮೀನಿನ ಮುಚ್ಚಳಿಕೆ ಪಡೆಯುವಂತೆ ಎಫ್‍ಐಆರ್‍ನಲ್ಲಿ ನ್ಯಾಯಾಲಯವನ್ನು ಕೋರಲಾಗಿದೆ.

ಮಾಡಿದವರಿಗೆ ಶಿಕ್ಷೆ ಇಲ್ಲ- ಆಡಿದವರಿಗೆ ಶಿಕ್ಷೆಯೇ?
ಶಿವಮೊಗ್ಗದಲ್ಲಿ 60 ಅಕ್ರಮ ಕಸಾಯಿಖಾನೆಗಳಿವೆ. ಇವುಗಳನ್ನು ತಕ್ಷಣ ನಿಲ್ಲಿಸಿ ಎಂದು ನಾನು ಭಾಷಣದಲ್ಲಿ ಹೇಳಿದ್ದೆ. ಗೋಹತ್ಯೆ ನಿರಂತರವಾಗಿ ನಡೆಯುತ್ತಿದ್ದರೂ ಜಿಲ್ಲಾಡಳಿತ ಹಾಗೂ ಪೊಲೀಸರು ಕ್ರಮಕೈಗೊಳ್ಳುವುದರಲ್ಲಿ ವಿಫಲರಾಗಿದ್ದಾರೆ. ಗೋಹತ್ಯೆ ಮಾಡಿದವರಿಗೆ ಯಾವುದೇ ಶಿಕ್ಷೆ ಇಲ್ಲ. ಈ ಬಗ್ಗೆ ಮಾತನಾಡಿದ ನನಗೆ ಶಿಕ್ಷೆಯೇ? ಎಂದು ಬಜರಂಗದಳ ಜಿಲ್ಲಾ ಸಂಚಾಲಕ ದೀನ ದಯಾಳು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ನಾನು ಸತ್ಯವನ್ನೇ ಮಾತಾನಾಡಿದ್ದೇನೆ. ಈ ಸತ್ಯಕ್ಕೆ ಶಿಕ್ಷೆ ನೀಡಲು ಹೊರಟಿರುವ ಪೊಲೀಸರ ಕ್ರಮ ಸರಿಯಲ್ಲ. ಬೇಕಾದರೆ ನಾನು ಶಿವಮೊಗ್ಗದಲ್ಲಿ ಇರುವ ಕಸಾಯಿಖಾನೆಗಳ ವಿವರ ಕೊಡುವೆ. ಪೊಲೀಸ್ ಇಲಾಖೆ ನನ್ನೊಂದಿಗೆ ಈ ವಿಷಯವಾಗಿ ಬಹಿರಂಗ ಚರ್ಚೆಗೆ ಬರಲಿ ಎಂದು ಅವರು ಹೇಳಿದ್ದಾರೆ.

 

TAGGED:Bajarang dalaCow SlaughterPublic TVshivamoggaಗೋ ಹತ್ಯೆಪಬ್ಲಿಕ್ ಟಿವಿಬಜರಂಗದಳಶಿವಮೊಗ್ಗ
Share This Article
Facebook Whatsapp Whatsapp Telegram

Cinema news

Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories

You Might Also Like

Ukraines Kharkiv missile hits
Latest

ಉಕ್ರೇನ್‌ನ ಖಾರ್ಕಿವ್ ಮೇಲೆ ರಷ್ಯಾ ಮಿಸೈಲ್ ದಾಳಿ – ಇಬ್ಬರು ಮಕ್ಕಳು ಸೇರಿ 8 ಮಂದಿ ಸಾವು

Public TV
By Public TV
23 minutes ago
Vaibhav Sooryavanshi Uncle Abhishek Chauhan
Cricket

UPSC ಪರೀಕ್ಷೆಯಲ್ಲಿ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಅಂಕಲ್ ಪಾಸ್

Public TV
By Public TV
46 minutes ago
Raichuru Crime
Court

ಕಲ್ಲಿನಿಂದ ಜಜ್ಜಿ ಮಹಿಳೆ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Public TV
By Public TV
1 hour ago
Chalavadi narayanaswamy
Bengaluru City

ಕಾಂಗ್ರೆಸ್‌ ಅಧಿಕಾರದಲ್ಲಿದ್ರೆ ಮನೆ-ಮನೆಗಳಲ್ಲಿ ಚುನಾವಣೆ ಮಾಡಿ ಗಂಡ-ಹೆಂಡ್ತಿಗೆ ಜಗಳ ತಂದಿಡ್ತಾರೆ: ಛಲವಾದಿ ಕಿಡಿ

Public TV
By Public TV
2 hours ago
Yadagiri UPSC Student
Districts

UPSC ಪರೀಕ್ಷೆಯಲ್ಲಿ ರ‍್ಯಾಂಕ್ ಗಿಟ್ಟಿಸಿಕೊಂಡ ಯಾದಗಿರಿಯ ನಾಲ್ವರು

Public TV
By Public TV
2 hours ago
women falls pit bengaluru
Bengaluru City

ಬೆಂಗಳೂರು| ಕಾಲು ಜಾರಿ 25 ಅಡಿ ಆಳದ ಗುಂಡಿಗೆ ಬಿದ್ದ ಮಹಿಳೆ – 8 ಗಂಟೆ ಗುಂಡಿಯಲ್ಲೇ ಪರದಾಟ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?