ಕಲಬುರಗಿ: ಹಿಟ್ & ರನ್ (Hit and Run) ಅಪಘಾತದ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 26 ಸಂತ್ರಸ್ತರಿಗೆ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರ ಅಧ್ಯಕ್ಷತೆಯಲ್ಲಿ ಪರಿಹಾರಕ್ಕೆ ಅನುಮೋದನೆ ನೀಡಲಾಯಿತು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಂಡಿಸಲಾದ 27 ಪ್ರಕರಣಗಳಲ್ಲಿ 26 ಪ್ರಕರಣಗಳನ್ನು ಜಿಲ್ಲಾಧಿಕಾರಿ, ಜನರಲ್ ಇನ್ಸೂರೆನ್ಸ್ ಕೌನ್ಸಿಲ್ ಕಮಿಷನರ್ ಹಾಗೂ ಕಲಬುರಗಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಅವರ ಸಹಮತದೊಂದಿಗೆ ಪರಿಹಾರ ಧನ ಮಂಜೂರಾತಿ ಮಾಡಲು ಅನುಮೋದಿಸಲಾಯಿತು. ಇದನ್ನೂ ಓದಿ: ಗ್ಯಾಸ್ ಸಮಸ್ಯೆ – ನಮ್ಮ ಕೈಯಲ್ಲಿ ಏನೂ ಇಲ್ಲ, ಕೇಂದ್ರ ಮುನ್ನೆಚ್ಚರಿಕೆ ವಹಿಸಬೇಕಿತ್ತು: ಡಿಕೆಶಿ
ಹಿಟ್ & ರನ್ ಅಪಘಾತ ಪ್ರಕರಣಗಳು ಸಂಭವಿಸಿದ್ದಲ್ಲಿ ಸಂಬಂಧಪಟ್ಟ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಡಿಕ್ಕಿ ಮಾಡಿದ ವಾಹನವು ಪತ್ತೆಯಾಗದೇ ಇದ್ದಲ್ಲಿ ಅಂತಹ ಪ್ರಕರಣಗಳಿಗೆ ಸಂಬಂಧಪಟ್ಟ ಸಹಾಯಕ ಆಯುಕ್ತರು Claim Enquiry Officer ಆಗಿದ್ದು, ಅವುಗಳನ್ನು ವಿಚಾರಣೆ ಮಾಡಿ ಸದರಿ Hit and Run ಅಪಘಾತದ ಸಭೆಯ ಅಧ್ಯಕ್ಷರಾದ ಜಿಲ್ಲಾಧಿಕಾರಿಗಳು Settlement Commissioner ಆಗಿದ್ದು, General Insurance Council ಗೆ ಪರಿಹಾರ ಧನ ನೀಡಲು ಅನುಮೋದನೆ ನೀಡುತ್ತಾರೆ.
General Insurance Council ಕಂಪನಿಯವರ ಇತ್ತೀಚಿನ ಭಾರತದ ಹೆದ್ದಾರಿ ಮತ್ತು ಸಾರಿಗೆ ಮಂತ್ರಾಲಯ ಆದೇಶದಂತೆ ಮೃತಪಟ್ಟವರಿಗೆ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರ ಧನವನ್ನು ನೇರವಾಗಿ ಮೃತ ವಾರಸುದಾರರು ಮತ್ತು ಗಾಯಗೊಂಡವರ ಖಾತೆಗೆ ಪಾವತಿಸಲಾಗುತ್ತದೆ. ಈ ಸಂಬಂಧ ಕೆಲ ಪ್ರಮಾಣ ಪತ್ರಗಳನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗೆ ನೀಡಬೇಕಾಗುತ್ತದೆ. ಇದರ ಉಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಲು ಜಿಲ್ಲಾಧಿಕಾರಿಗಳು ಸಭೆಯಲ್ಲಿ ತಿಳಿಸಿದರು. ಇದನ್ನೂ ಓದಿ: ಗ್ಯಾಸ್ ಸಮಸ್ಯೆ ಬಗೆಹರಿಸದ ಸರ್ಕಾರದ ವಿರುದ್ಧ ವಾಟಾಳ್ ತಮಟೆ ಚಳುವಳಿ
ಸಭೆಯಲ್ಲಿ ಎಸ್ಪಿ ಅಡ್ಡೂರು ಶ್ರೀನಿವಾಸಲು, ಸಹಾಯಕ ಆಯುಕ್ತೆ ಆಲದಕಟ್ಟಿ, ಸೇಡಂ ಸಹಾಯಕ ಆಯುಕ್ತ ಪ್ರಭು ರಡ್ಡಿ, ಉಪಸಾರಿಗೆ ಆಯುಕ್ತರು ಮತ್ತು ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಆನಂದ ಪಾರ್ಥನಹಳ್ಳಿ, ಸಂಚಾರಿ ಪೊಲೀಸ್ ಇನ್ಸ್ಪೆಕ್ಟರ್ ಶಕೀಲ, ಯುನೈಟೆಡ್ ಇನ್ಸೂರೆನ್ಸ್, ಕಂಪನಿಯ ಅಧಿಕಾರಿ ರಾಜೀವ ರೆಡ್ಕ್ರಾಸ್ ಪರವಾಗಿ ರವೀಂದ್ರ ಶಾಬಾದಿ ಉಪಸ್ಥಿತರಿದ್ದರು.

