ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿ ಬಾಲಿವುಡ್ ನಟ ಅಜಯ್ ದೇವಗನ್ (Ajay Devgan) ಸೇರಿದಂತೆ ಮೂವರು ಮೇಲೆ ದೂರು ದಾಖಲಾಗಿದೆ. ಇನ್ನೆಷ್ಟೇ ರಿಲೀಸ್ ಆಗಬೇಕಿರುವ ಅಜಯ್ ದೇವಗನ್ ನಟನೆಯ ‘ಥ್ಯಾಂಕ್ ಗಾಡ್’ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಅದರಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಸನ್ನಿವೇಶವಿದೆ ಎಂದು ಹಿಮಾಂಶು ಶ್ರೀವಾಸ್ತವ್ ಎನ್ನುವವರು ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಮೋನಿಕಾ ಮಿಶ್ರಾ ಅವರ ನ್ಯಾಯಾಲದಲ್ಲಿ ಪ್ರಕರಣ (Complaint) ದಾಖಲಾಗಿದೆ.
ಥ್ಯಾಂಕ್ ಗಾಡ್ (Thank God) ಸಿನಿಮಾದಲ್ಲಿ ಚಿತ್ರಗುಪ್ತ ದೇವರನ್ನು ಪೂಜಿಸುವ ಕಾಯಸ್ಥ ಸಮುದಾಯದ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಹಿಮಾಂಶು ಆರೋಪ ಮಾಡಿದ್ದು, ಚಿತ್ರದ ನಟ ಅಜಯ್ ದೇವಗನ್, ಸಿದ್ಧಾರ್ಥ ಮಲ್ಹೋತ್ರಾ ಹಾಗೂ ಇಂದ್ರ ಕುಮಾರ್ ಮೇಲೆ ದೂರು ನೀಡಿದ್ದರು. ಹಿಮಾಂಶು (Himanshu Srivastav) ಅವರ ಹೇಳಿಕೆಯನ್ನು ದಾಖಲಿಸಲು ನ್ಯಾಯಾಧೀಶರು ನವೆಂಬರ್ 18 ದಿನಾಂಕ ನಿಗದಿ ಮಾಡಿದ್ದಾರೆ. ಇದನ್ನೂ ಓದಿ:ಬಿಗ್ ಬಾಸ್ ಟಿವಿ ಸೀಸನ್ನಲ್ಲಿ ಮತ್ತೆ ಪ್ರಶಾಂತ್ ಸಂಬರಗಿ, ಅನುಪಮಾ ಗೌಡ, ದೀಪಿಕಾ ದಾಸ್
ಅಜಯ್ ದೇವಗನ್ ಮುಖ್ಯ ಭೂಮಿಕೆಯ ಥ್ಯಾಂಕ್ ಗಾಡ್ ಸಿನಿಮಾ ತನ್ನದೇ ಆದ ಕಾರಣಗಳಿಂದಾಗಿ ಕುತೂಹಲ ಮೂಡಿಸಿದೆ. ಈಗಾಗಲೇ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಸಖತ್ ಮನರಂಜನೆ ಜೊತೆಗೆ ಒಂದೊಳ್ಳೆ ಸಂದೇಶವನ್ನು ನೀಡುವಂತಹ ಸಿನಿಮಾ ಇದಾಗಿದೆ. ಅಜಯ್ ದೇವಗನ್ ಕೂಡ ತುಂಬಾ ಚೆನ್ನಾಗಿ ನಟಿಸಿದ್ದಾರೆ. ಅಕ್ಟೋಬರ್ 25ಕ್ಕೆ ಈ ಸಿನಿಮಾ ರಿಲೀಸ್ ಆಗುತ್ತಿದ್ದು, ಅದಕ್ಕೂ ಮುನ್ನ ಟ್ರೈಲರ್ ಸದ್ದು ಮಾಡುತ್ತಿದೆ.