ಬೆಂಗಳೂರು: ಸಿನಿಮಾ ನಟರ ವಿರುದ್ಧ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ದೂರು ದಾಖಲಿಸಿದೆ.
ಕರವೇ ಸಿನಿಮಾ ನಟರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಚಿತ್ರ ನಟರು ಬಹಿರಂಗವಾಗಿ ಒಬ್ಬರ ಪರ ಮತ ಯಾಚಿಸುತ್ತಿದ್ದಾರೆ. ಹಾಗಾಗಿ ಚುನಾವಣಾ ಮುಗಿಯುವವರೆಗು ಅವರ ಚಿತ್ರಗಳನ್ನು ಬ್ಯಾನ್ ಮಾಡುವಂತೆ ಅಧ್ಯಕ್ಷ ಜಯರಾಮ್ ನಾಯ್ಡು ದೂರು ದಾಖಲಿಸಿದ್ದಾರೆ.
- Advertisement 2
- Advertisement 3
ಈ ಬಗ್ಗೆ ಮಾತನಾಡಿದ ಅಧ್ಯಕ್ಷ ಜಯರಾಮ್ ನಾಯ್ದು, ಕರ್ನಾಟಕ ರಕ್ಷಣಾ ವೇದಿಕೆಯಿಂದ ನಾವು ದೂರು ದಾಖಲಿಸಿದ್ದೇವೆ. ಯಾವುದೇ ಸ್ಟಾರ್ ನಟ ಅಥವಾ ಪ್ರಚಾರಕ ಚುನಾವಣೆಯ ಪ್ರಚಾರದಲ್ಲಿ ಭಾಗಿಯಾದ್ರೆ, ಅವರೆಲ್ಲರೂ ಚುನಾವಣಾ ನೀತಿ ಸಂಹಿತೆ ಅಡಿಯಲ್ಲಿ ಬರುತ್ತಾರೆ. ಈ ಸಂಬಂಧ ನಮ್ಮ ವಕೀಲರ ಬಳಿ ಕೇಳಿದ್ದಾಗ ಪ್ರಚಾರಕರೆಲ್ಲರೂ ಕೋಡ್ ಆಫ್ ಕಂಡೆಕ್ಟ್ ಗೆ ಬರುತ್ತೆ ಎಂದು ಹೇಳಿದ್ದಾರೆ.
- Advertisement 4
ಸೋಮವಾರ ನಡೆದ ಸುದ್ದಿಗೋಷ್ಟಿಯಲ್ಲಿ ಕೆಲ ನಟರು ನಾವು ಗೆಲ್ಲಿಸುತ್ತೇವೆ. ಅಭಿಮಾನಿ ಸಂಘಗಳು ಕೂಡ ಸಾಥ್ ನೀಡುತ್ತಾರೆ ಎಂದು ಹೇಳಿದ್ದಾರೆ. ಹಾಗಾಗಿ ಇದು ಕೋಡ್ ಆಫ್ ಕಂಡೆಕ್ಟ್ ಗೆ ಬರುತ್ತೆ ಎಂಬ ಕಾರಣಕ್ಕೆ ಚುನಾವಣೆ ಆಯೋಗಕ್ಕೆ ದೂರು ನೀಡಿದ್ದೇನೆ. ಚುನಾವಣೆ ಮುಗಿಯುವವರೆಗೂ ನಟರ ಚಿತ್ರ ಹಾಗೂ ಜಾಹೀರಾತು ನಿಷೇಧ ಮಾಡಬೇಕು ಎಂದು ಜಯರಾಮ್ ಚುನಾವಣಾ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv