ತೇಜಸ್ವಿ ಸೂರ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

Public TV
1 Min Read
tejaswi surya Nomination

ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಚುನಾವಣಾ ಆಯೋಗದಲ್ಲಿ ದೂರು ದಾಖಲಾಗಿದೆ.

ಬಾಲಕೋಟ್ ವೈಮಾನಿಕ ದಾಳಿಯನ್ನು ಬಿಜೆಪಿಯ ಸಾಧನೆ ಎನ್ನುವ ರೀತಿಯಲ್ಲಿ ಬಿಂಬಿಸಿ ಮತ ಯಾಚನೆ ಆರೋಪದ ಅಡಿ ದೂರು ದಾಖಲಾಗಿದೆ. ವಕೀಲರಾದ ಬಿ.ಸಂಜಯ್ ಯಾದವ್ ಹಾಗೂ ಮಹಮ್ಮದ್ ಅಯೂಬ್ ಅಲಿ ಅವರು ಸರ್ಜಿಕಲ್ ಸ್ಟ್ರೈಕ್ ಪ್ರಸ್ತಾಪಿಸಿ ಚುನಾವಣಾ ನೀತಿ ಸಂಹಿತಿಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.

ಭಾರತೀಯ ಸೇನೆಯು ಪುಲ್ವಾಮಾದಲ್ಲಿ ನಡೆದ ಘಟನೆಗೆ ಪ್ರತೀಕಾರವಾಗಿ ಪಾಕಿಸ್ತಾನದ ನೆಲದಲ್ಲಿ ನಡೆಸಿದ್ದ ವಾಯು ದಾಳಿಯನ್ನು ಉಲ್ಲೇಖಿಸಿ ಕರಪತ್ರ ಮುದ್ರಿಸಿ, ಹಂಚಿಕೆ ಮಾಡುವ ಮೂಲಕ ಮತಯಾಚಿಸಲಾಗಿದೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

tejaswi surya

Share This Article
Leave a Comment

Leave a Reply

Your email address will not be published. Required fields are marked *