Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

Naxal Surrender | ಶಸ್ತ್ರ ತ್ಯಜಿಸಿ ಶರಣಾದ ನಕ್ಸಲರ ಬದುಕು ರೋಚಕ – ಇಲ್ಲಿದೆ ಕಂಪ್ಲೀಟ್‌ ವಿವರ!

Public TV
Last updated: January 8, 2025 8:18 pm
Public TV
Share
4 Min Read
SHARE

ಬೆಂಗಳೂರು: `ಬಂದೂಕಿನ ಮೂಲಕ ನ್ಯಾಯ’ ಪಡೆಯಲು ಪಶ್ಚಿಮ ಘಟ್ಟದಲ್ಲಿ ದಶಕಗಳ ಕಾಲ ಹೋರಾಟ ನಡೆಸಿದ್ದ 6 ನಕ್ಸಲರು ಶಸ್ತ್ರತ್ಯಾಗ ಮಾಡಿದ್ದಾರೆ. ಮುಖ್ಯವಾಹಿನಿಗೆ ಬರಲು ನಿರ್ಧರಿಸಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಸಮ್ಮುಖದಲ್ಲೇ ಶರಣಾಗಿದ್ದಾರೆ.

Contents
ಮುಂಡಗಾರು ಲತಾಸುಂದರಿ ಕುತ್ಲೂರುವನಜಾಕ್ಷಿಜಯಣ್ಣ ಅರೋಲಿವಸಂತ್ ಆರ್ಕಾಟ್ಜಿಶ

ನಕ್ಸಲರಾದ ಮುಂಡಗಾರು ಲತಾ (Mundagaru Latha), ಸುಂದರಿ ಕುತ್ಲೂರು, ವನಜಾಕ್ಷಿ ಬಾಳೆಹೊಳೆ, ಮಾರೆಪ್ಪ ಅರೋಲಿ, ವಸಂತ್, ಜಿಶಾ ಶರಣಾಗಿದ್ದು, ಸಿಎಂ ಎಲ್ಲರಿಗೂ ಸಂವಿಧಾನ ಪುಸ್ತಕ ನೀಡಿದ್ದಾರೆ. ಈ ವೇಳೆ, ಹಲವು ಬೇಡಿಕೆ ಒಳಗೊಂಡ ಮನವಿ ಪತ್ರವನ್ನು ಸಿಎಂಗೆ ನೀಡಿದ್ದಾರೆ. ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ, ಸಂಪುಟದಲ್ಲಿ ಚರ್ಚಿಸಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂಬ ಭರವಸೆ ನೀಡಿದ್ದಾರೆ. ಈ ಹೊತ್ತಿನಲ್ಲಿ ಶರಣಾಗತರಾದ ನಕ್ಸಲರು ಹೋರಾಟಕ್ಕೆ ಧುಮುಕಿದ್ದು ಹೇಗೆ ಅನ್ನೋ ರೋಚಕ ಸಂಗತಿಗಳನ್ನು ತಿಳಿಯಲೇಬೇಕಿದೆ. ಅದಕ್ಕಾಗಿ ಮುಂದೆ ಓದಿ…

Naxal 033

ಮುಂಡಗಾರು ಲತಾ

ಮೂಲತಃ ಕೊಪ್ಪ ತಾಲೂಕು ಬುಕಡಿಬೈಲು ಮುಂಡಗಾರು ಗ್ರಾಮದ ಮಹಿಳೆ. ಲೋಕಮ್ಮ, ಶ್ಯಾಮಲಾ ಎಂದೂ ಗುರುತಿಸಿಕೊಂಡಿದ್ದ ಈಕೆ ಮಲೆನಾಡು ಭಾಗಗಳಲ್ಲಿ ಲತಾ ಎಂದು ಗುರುತಿಸಿಕೊಂಡಿದ್ದಾರೆ. ಮೋಸ್ಟ್ ವಾಂಟೆಡ್ ಲಿಸ್ಟ್‌ ನಲ್ಲಿದ್ದ ನಕ್ಸಲರ ಪೈಕಿ ಮುಂಡಗಾರು ಲತಾ ಕೂಡ ಒಬ್ಬಾಕೆ. ಶೃಂಗೇರಿಯಲ್ಲಿ ಜೆಸಿಬಿಎಂ ಕಾಲೇಜಿನಲ್ಲಿ ಪಿಯುಸಿಗೆ ವಿದ್ಯಾಭ್ಯಾಸ ಮೊಟಕುಗೊಳಿಸಿ ನಕ್ಸಲ್ ನಾಯಕಿಯಾಗಿ ಗುರುತಿಸಿಕೊಂಡರು. ಕುದುರೆಮುಖ ರಾಷ್ಟ್ರೀಯ ಉದ್ಯಾನ ಯೋಜನೆ ಪ್ರಕಾರ ಮನೆ ಕಳೆದುಕೊಳ್ಳುವ ಸ್ಥಿತಿ ಬಂದಾಗ, 2000ನೇ ಇಸವಿಯಲ್ಲಿ ಮಾವೋವಾದಿ ಚಳವಳಿಗೆ ಧುಮುಕಿದರು. ಕರ್ನಾಟಕ, ಕೇರಳದಲ್ಲಿ ಮಾವೋವಾದಿ ದಳದಲ್ಲಿದ್ದು, ಇತ್ತೀಚೆಗೆ ನಕ್ಸಲ್ ತಂಡದ ನಾಯಕಿಯಾಗಿ ಗುರುತಿಸಿಕೊಂಡಿದ್ದರು. ಪೊಲೀಸ್ ದಾಳಿ ಸಂದರ್ಭದಲ್ಲಿ ಹಲವು ಬಾರಿ ತಪ್ಪಿಸಿಕೊಂಡಿದ್ದ ಲತಾ ಈಗ ಮುಖ್ಯವಾಹಿನಿಗೆ ಬರಲು ನಿರ್ಧರಿಸಿ, ಶರಣಾಗಿದ್ದಾರೆ.

Naxal 3

ಸುಂದರಿ ಕುತ್ಲೂರು

ಸುಂದರಿ ಕುತ್ಲೂರು ಮೂಲತಃ ಆದಿವಾಸಿ ಮಹಿಳೆ. ಬಡತನ ಹಾಗೂ ಶಾಲೆ ದೂರವಿದ್ದುದರಿಂದ 3ನೇ ತರಗತಿಯ ನಂತರ ಶಾಲೆ ತೊರೆದರು. ಕುದುರೆಮುಖ ರಾಷ್ಟ್ರೀಯ ಉದ್ಯಾನ ಯೋಜನೆಯಿಂದಾಗಿ ಇವರ ಕುಟುಂಬ ಇದ್ದ ನೆಲೆಯನ್ನೂ ಕಳೆದುಕೊಳ್ಳುವ ಅಪಾಯ ಎದುರಿಸುತ್ತಿತ್ತು. ಪ್ರಜಾಸತ್ತಾತ್ಮಕ ಚಳುವಳಿ ಫಲ ನೀಡದೆಂದು ಕಂಡಾಗ ಆಗಿನ ಹಲವು ಯುವಜನರಂತೆ ಸುಂದರಿಯೂ ಸಹ ಆಯುಧ ಕೈಗೆತ್ತಿಕೊಂಡರು. ತನ್ನ 19ನೇ ವಯಸ್ಸಿನಲ್ಲಿ 2004ರಲ್ಲಿ ಮಾವೋವಾದಿ ಪಕ್ಷದ ಸದಸ್ಯರಾಗಿದ್ದು ಅಂದಿನಿಂದ ಕೇರಳ ಹಾಗೂ ಕರ್ನಾಟಕದಲ್ಲಿ ಸಂಚರಿಸುತ್ತಿರುವ ದಳದ ಭಾಗವಾಗಿದ್ದರು. ತನ್ನ ಹಾಗೂ ನೆರೆಹೊರೆಯ ಕುಟುಂಬಗಳ ಮೇಲೆ ಪೊಲೀಸರು ನಡೆಸುತ್ತಿದ್ದ ದಾಳಿಗಳು ದೌರ್ಜನ್ಯಗಳನ್ನು ಇಂದಿಗೂ ನೋವಿನಿಂದ ನೆನಪಿಸಿಕೊಳ್ಳುವ ಸುಂದರಿ ತನ್ನ ಹೋರಾಟದ ಕೆಚ್ಚನ್ನು ಉಳಿಸಿಕೊಂಡಿದ್ದರು. ಇನ್ಮುಂದೆ ಪ್ರಜಾತಾಂತ್ರಿಕ ಚಳುವಳಿಯ ಭಾಗವಾಗಲು ಮುಖ್ಯ ವಾಹಿನಿಯನ್ನು ಸೇರಬಯಸಿದ್ದಾರೆ.

Naxal 2

ವನಜಾಕ್ಷಿ

ಎಸ್‌ಎಸ್‌ಎಲ್‌ಸಿ ವರೆಗೂ ಓದಿರುವ ವನಜಾಕ್ಷಿ ಈ ತಂಡದ ಅತಿ ಹಿರಿಯ ಸದಸ್ತೆ. 1985 ರಲ್ಲಿ ಓದು ನಿಲ್ಲಿಸಿದ ಈ ಆದಿವಾಸಿ ಮಹಿಳೆ ತನ್ನ ಗ್ರಾಮದಲ್ಲಿ ಸಾರ್ವಜನಿಕ ಜೀವನದ ಭಾಗವಾಗಿ 1992 ಮತ್ತು 1997ರಲ್ಲಿ ಗ್ರಾಮ ಪಂಚಾಯಿತಿ ಸದಸ್ಯಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. 8 ಜನ ಮಕ್ಕಳ ದೊಡ್ಡ ಕುಟುಂಬದ ಹೆಣ್ಣು ಮಗಳಾಗಿ ಜನಿಸಿದ್ದ ಈಕೆ, ಹೊಲಿಗೆಯನ್ನೇ ಜೀವನಾಧಾರವಾಗಿಸಿಕೊಂಡಿದ್ದರು. ರಾಜಕೀಯವಾಗಿ ಸಕ್ರಿಯವಾಗಿದ್ದರು ಸಹ ಇವರಿಗೆ ಮತ್ತು ಇವರ ಕುಟುಂಬಕ್ಕೆ ಬಲಾಢ್ಯರಿಂದ ತಮ್ಮ ತುಂಡುಭೂಮಿಯನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಪರಿಣಾಮವಾಗಿ ತಾಯಿ ಮಾನಸಿಕ ಅಸ್ವಸ್ಥತೆಗೆ ಗುರಿಯಾದರೆ ಒಬ್ಬ ತಮ್ಮ ಆತ್ಮಹತ್ಯೆಗೆ ಶರಣಾದ. ಅಲ್ಲದೇ ಸುತ್ತಮುತ್ತ ಇದ್ದ ಹಲವು ಕುಟುಂಬಗಳು ಸಹ ತಮ್ಮಂತೆ ಬಡತನ ಶೋಷಣೆಗಳಿಗೆ ಬಲಿಯಾಗುತ್ತಿದ್ದುದ್ದನ್ನು ಕಂಡ ವನಜಾಕ್ಷಿ ವ್ಯವಸ್ಥೆಯಲ್ಲಿ ನಂಬಿಕೆ ಕಳೆದುಕೊಂಡರು. ಸಶಸ್ತ್ರ ಹೋರಾಟವೇ ದಾರಿ ಎಂಬ ನಿರ್ಧಾರಕ್ಕೂ ಬಂದ ಇವರು, ಆ ಕಾಲದಲ್ಲಿ ನಡೆಯುತ್ತಿದ್ದ ಸಶಸ್ತ್ರ ಚಳುವಳಿಗೆ ಧುಮುಕಿದರು. 2000ನೇ ಇಸವಿಯಿಂದ ಮಾವೋವಾದಿ ಪಕ್ಷದ ಭಾಗವಾಗಿ ಕರ್ನಾಟಕ ಹಾಗೂ ಕೇರಳದಲ್ಲಿ ಸಂಚರಿಸುವ ದಳದ ಸದಸ್ಯೆಯಾಗಿದ್ದರು. ತನ್ನ ಹೋರಾಟವನ್ನು ಪ್ರಜಾಸತ್ತಾತ್ಮಕ ರೀತಿಯಲ್ಲಿಯೂ ಮುಂದುವರಿಸಬಹುದಾದ ಅವಕಾಶಗಳನ್ನು ಅರ್ಥ ಮಾಡಿಕೊಂಡು ಈಗ ಮುಖ್ಯವಾಹಿನಿಯ ಭಾಗವಾಗಲು ಸಿದ್ಧರಾಗಿದ್ದಾರೆ.

ಜಯಣ್ಣ ಅರೋಲಿ

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಅರೋಲಿ ಗ್ರಾಮದ ಜಯಣ್ಣ ದ್ವಿತೀಯ ಬಿ.ಎ ವರೆಗೆ ವ್ಯಾಸಂಗ ಮಾಡಿರುವ ದಲಿತ ಯುವಕ. ಕಾಲೇಜಿನಲ್ಲಿರುವಾಗಲೇ ಆ ಭಾಗದಲ್ಲಿ ನಡೆಯುತ್ತಿದ್ದ ಮಾವೋವಾದಿ ಚಳುವಳಿಯ ಕಡೆ ಆಕರ್ಷಿತರಾದರು. ಆಸಕ್ತಿಯಿಂದ ಚಳುವಳಿಯನ್ನು ಗಮನಿಸುತ್ತಿದ್ದ ಅವರಿಗೆ ಭಾಸ್ಕರ್ ಅವರ ಎನ್‌ಕೌಂಟರ್‌ ಆಘಾತ ಉಂಟುಮಾಡಿತು. ಬಳಿಕ 2000ನೇ ಇಸವಿಯಲ್ಲಿ ತನ್ನ 24ನೇ ವಯಸ್ಸಿನಲ್ಲಿ ದಳದ ಭಾಗವಾದರು. ಅಂದಿನಿಂದ ಕೇರಳ, ಕರ್ನಾಟಕಗಳಲ್ಲಿ ಇವರ ಹೋರಾಟದ ಚಟುವಟಿಕೆಗಳು ನಡೆದಿದೆ. 2018 ರಲ್ಲಿ ಮತ್ತೆ ಸಶಸ್ತ್ರ ಚಳುವಳಿಗೆ ಮರಳಿದರು. ಇದೀಗ ಜನರ ಜೊತೆ ಸೇರಿ ಜನಪರ ಹೋರಾಟಗಳನ್ನು ನಡೆಸಲು ಬಯಸಿದ್ದಾರೆ. ಸರ್ಕಾರ ಪ್ರಕಟಿಸಿರುವ ಪ್ಯಾಕೇಜ್ ಭಾಗವಾಗಿ ತಮಗೆ ಸಂದಾಯವಾಗಬಹುದಾದ ಹಣದ ಅರ್ಧ ಭಾಗವನ್ನು ತನ್ನ ಹಳ್ಳಿಯ ಶಾಲೆಯ ಅಭಿವೃದ್ಧಿಗಾಗಿ ನೀಡಬೇಕೆಂದು ತೀರ್ಮಾನಿಸಿದ್ದಾರೆ.

ವಸಂತ್ ಆರ್ಕಾಟ್

ತಮಿಳುನಾಡಿನ ವೆಲ್ಲೂರು ಮೂಲದ ವಸಂತ್ ಬಿ-ಟೆಕ್ ಪದವೀಧರ. ವೆಲ್ಲೂರು ಜಿಲ್ಲೆಯ ಆರ್ಕಾಟ್ ಅವರ ಊರು. ಸಮಾಜಮುಖಿ ಚಿಂತನೆಗಳಿಂದ ಪ್ರಭಾವಿತರಾದ ಇವರು ಹೋರಾಟಗಳನ್ನು ಗಮನಿಸುತ್ತಾ, ಬೆಳೆದವರು 2010ರಲ್ಲಿ ಪದವಿ ಮುಗಿಸಿದ ತಕ್ಷಣವೇ ಸಶಸ್ತ್ರ ಹೋರಾಟದ ಭಾಗವಾಗಿ ಚಳವಳಿಗೆ ಧುಮುಕಿದರು. ಅಂದಿನಿಂದಲೂ ಕೇರಳ, ಕರ್ನಾಟಕಗಳಲ್ಲಿರುವ ದಳದ ಸದಸ್ಯರಾಗಿದ್ದರು. ಮಿತ ಭಾಷೆಯಾಗಿರುವ ವಸಂತ್ ತನ್ನ ಆದರ್ಶಗಳನ್ನು ಬಿಟ್ಟುಕೊಡದೇ ಹೋರಾಟದ ಮಾರ್ಗವನ್ನು ಬದಲಿಸಿ ಮುಖ್ಯವಾಹಿನಿ ಸೇರಬಯಸಿದ್ದಾರೆ.

ಜಿಶ

ಜಿಶ ತಂಡದಲ್ಲಿನ ಎಲ್ಲರಿಗಿಂತಲೂ ತುಂಬಾ ಚಿಕ್ಕವರು. ಕೇರಳದ ಜಿಶ ವಯನಾಡ್ ಜಿಲ್ಲೆಯ ಮಕ್ಕಿಮಲದ ಆದಿವಾಸಿ ಮಹಿಳೆ. 8ನೇ ತರಗತಿಯವರೆಗೂ ವಿದ್ಯಾಭ್ಯಾಸ ಮಾಡಿದ್ದ ಈಕೆ 2018ರಲ್ಲಿ ಕೇರಳದಲ್ಲಿ ಸಶಸ್ತ್ರ ಹೋರಾಟದ ಭಾಗವಾಗಿದ್ದು, 2023ರಲ್ಲಿ ತಂಡದ ಇತರೆ ಸದಸ್ಯರೊಂದಿಗೆ ಕೇರಳದಿಂದ ಕರ್ನಾಟಕಕ್ಕೆ ಬಂದರು.

TAGGED:bengaluruChikkamagaluruMundagaru Lathanaxalssiddaramaiahಚಿಕ್ಕಮಗಳೂರುನಕ್ಸಲರುಬೆಂಗಳೂರುಮುಂಡಗಾರು ಲತಾಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
9 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 day ago

You Might Also Like

dentist Nirali patel died in plane crash
Latest

ಅಹಮದಾಬಾದ್ ವಿಮಾನ ದುರಂತ – ದಂತವೈದ್ಯೆಯಾಗಿದ್ದ ಭಾರತೀಯ ಮೂಲದ ಕೆನಡಾ ಪ್ರಜೆ ಸಾವು

Public TV
By Public TV
20 minutes ago
Foreign woman arrested for smuggling drugs worth Rs 10 crore in Bengaluru
Bengaluru City

ಬೆಂಗಳೂರು | 10 ಕೋಟಿ ಮೌಲ್ಯದ ಮಾದಕವಸ್ತು ಸಾಗಾಟ – ವಿದೇಶಿ ಮಹಿಳೆ ಅರೆಸ್ಟ್

Public TV
By Public TV
29 minutes ago
Arjun Patolia
Crime

Plane Crash – ಪತ್ನಿಯ ಕೊನೆಯ ಆಸೆಯನ್ನು ಈಡೇರಿಸಿ ಹಿಂತಿರುಗುವಾಗ ಪತಿ ಸಾವು!

Public TV
By Public TV
50 minutes ago
Team India Tribute to Plane crash in london
Cricket

ಏರ್ ಇಂಡಿಯಾ ವಿಮಾನ ದುರಂತ – ಕಪ್ಪು ಪಟ್ಟಿ ಧರಿಸಿ ಟೀಂ ಇಂಡಿಯಾ ಆಟಗಾರರಿಂದ ಮೌನಾಚರಣೆ

Public TV
By Public TV
1 hour ago
wild elephant crops destroys
Chamarajanagar

ಚಾ.ನಗರ| ಜಮೀನಿಗೆ ನುಗ್ಗಿ ತೆಂಗು ಬೆಳೆ ನಾಶಪಡಿಸಿದ ಕಾಡಾನೆಗಳ ಹಿಂಡು

Public TV
By Public TV
1 hour ago
https publictv.in i lost my love in a plane crash young man tears in front of the ahmedabad hospital
Latest

ವಿಮಾನ ದುರಂತ | ನಾನು ನನ್ನ ಪ್ರೀತಿ ಕಳೆದುಕೊಂಡೆ – ಆಸ್ಪತ್ರೆ ಮುಂದೆ ಯುವಕನ ಕಣ್ಣೀರು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?