ಬೆಂಗಳೂರು: ಪಬ್ಲಿಕ್ ಟಿವಿ (PUBLiC TV) ಬೆಳಕು (Belaku) ಕಾರ್ಯಕ್ರಮ 200ನೇ ಸಂಚಿಕೆಯನ್ನು ಪೂರೈಸಿದೆ. ಈ ಸುಂದರ ಕ್ಷಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸಾಕ್ಷಿಯಾಗಿದ್ದರು.
ಪಬ್ಲಿಕ್ ಟಿವಿ ಕಚೇರಿಯಲ್ಲಿ ನಡೆದ 200ನೇ ಕಾರ್ಯಕ್ರಮದಲ್ಲಿ ಭಾಗಿಯಾದ ಮುಖ್ಯಮಂತ್ರಿ ಪಬ್ಲಿಕ್ ಟಿವಿಯ ಒಂದೊಳ್ಳೆ ಕಾರ್ಯಕ್ರಮವನ್ನು ಶ್ಲಾಘಿಸಿದರು. ಈ ವೇಳೆ ಕುಶಾಲನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ (Kushalnagar Govt Primary School) ನಿರ್ಮಿಸಲಾದ ಸುಸಜ್ಜಿತ ಕಂಪ್ಯೂಟರ್ ಕೊಠಡಿಯನ್ನು (Computer Room) ಮುಖ್ಯಮಂತ್ರಿಗಳು ವರ್ಚುಯಲ್ ಮೂಲಕ ಉದ್ಘಾಟಿಸಿದರು.
ಈ ಕ್ಷಣಕ್ಕೆ ಶಾಲೆಯ 400 ಮಕ್ಕಳು, ಹಳೆಯ ವಿದ್ಯಾರ್ಥಿಗಳು, ಶಿಕ್ಷಣಾಧಿಕಾರಿಗಳು, ಕೊಡಗು ಜಿಲ್ಲಾ ಪಂಚಾಯತ್ ಸಿಇಓ ಸೇರಿ ಸಾರ್ವಜನಿಕರು ಸಾಕ್ಷಿಯಾದರು. ಇದನ್ನೂ ಓದಿ: ಕಳೆದ 14 ವರ್ಷಗಳಿಂದ ಇದ್ದು, ಭಯ ಇಲ್ಲ: ಇಸ್ರೇಲಿನಲ್ಲಿದ್ದ ಕನ್ನಡಿಗನ ಮಾತು
ಕಂಪ್ಯೂಟರ್ ಕಲಿಯಲು ಅವಕಾಶ ಮಾಡಿಕೊಟ್ಟ ಪಬ್ಲಿಕ್ ಟಿವಿಗೆ ಮಕ್ಕಳು ಧನ್ಯವಾದ ಹೇಳಿದರು. ಕಳೆದ ಜನವರಿ ತಿಂಗಳ ಬೆಳಕು ಕಾರ್ಯಕ್ರಮದಲ್ಲಿ ಕುಶಾಲನಗರದ ಸರ್ಕಾರಿ ಶಾಲೆಯಲ್ಲಿ ಕಂಪ್ಯೂಟರ್ ಕೊಠಡಿ ಇಲ್ಲದ ಬಗ್ಗೆ ವರದಿ ಆಗಿತ್ತು. ಹಿರಿಯ ವಿದ್ಯಾರ್ಥಿಗಳು ಕಂಪ್ಯೂಟರ್ ರೂಂ ನಿರ್ಮಿಸಿಕೊಡುವಂತೆ ಮನವಿ ಮಾಡಿದ್ದರು. ನಾವೇ ನಿರ್ಮಿಸಿಕೊಡುತ್ತೇವೆ ಎಂಬ ಭರವಸೆಯನ್ನು ಪಬ್ಲಿಕ್ ಟಿವಿ ನೀಡಿತ್ತು. ಈ ಭರವಸೆಯಂತೆ ಕಂಪ್ಯೂಟರ್ ಕೊಠಡಿಯನ್ನು ನಿರ್ಮಿಸಿಕೊಡುವ ಮೂಲಕ ಪಬ್ಲಿಕ್ ಟಿವಿ ನಡೆದುಕೊಂಡಿದೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]