ನಿಂತಿದ್ದ BMTC ಬಸ್ಸಿನಲ್ಲಿ ಬೆಂಕಿ- ಮಲಗಿದ್ದಲ್ಲೇ ಕಂಡಕ್ಟರ್ ಸಜೀವ ದಹನ

Public TV
1 Min Read
BMTC FIRE

ಬೆಂಗಳೂರು: ನಿಂತಿದ್ದ ಬಿಎಂಟಿಸಿ (BMTC) ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡು ನಿರ್ವಾಹಕ (Conductor) ಸಜೀವ ದಹನವಾದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

BMTC FIRE 2

ಮೃತ ದುರ್ದೈವಿಯನ್ನು ಮುತ್ತಯ್ಯ ಸ್ವಾಮಿ (45) ಎಂದು ಗುರುತಿಸಲಾಗಿದೆ. ಬಸ್ ಡಿಪೋ 31ಕ್ಕೆ ಸೇರಿದ್ದಾಗಿದೆ. ಮುಂಜಾನೆ 4 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಇದನ್ನೂ ಓದಿ: ಹೋಳಿ ಹಬ್ಬಕ್ಕೆ ಕೋಳಿ ಸಾರು ಮಾಡಲ್ಲ ಅಂದಿದ್ದಕ್ಕೆ ಹೆಂಡತಿ ಕೈಮುರಿದ ಪತಿರಾಯ

BMTC FIRE 1

ರಾತ್ರಿ ರೂಟ್ ಮುಗಿಸಿ ಲಿಂಗಧೀರನಹಳ್ಳಿ ನಿಲ್ದಾಣ (Lingadheeranahalli Bustand) ದಲ್ಲಿ ಚಾಲಕ ಹಾಗೂ ನಿರ್ವಾಹಕ ಬಸ್‍ನಲ್ಲಿ ಮಲಗಿದ್ದರು. ಮುತ್ತಯ್ಯ ಸ್ವಾಮಿ ಅವರು ಬಸ್ಸಿನ ಸಿಟ್‍ನಲ್ಲಿಯೇ ಮಲಗಿದ್ದರು. ಈ ವೇಳೆ ಬಸ್ಸಿಗೆ ದಿಢೀರ್ ಬೆಂಕಿ (Fire On BMTC) ಹೊತ್ತಿಕೊಂಡಿದ್ದು, ಮುತ್ತಯ್ಯ ಅವರು ಮಲಗಿದ್ದಲ್ಲೇ ಸಂಪೂರ್ಣ ಸುಟ್ಟು ಕರಕಲಾಗಿದ್ದಾರೆ. ಇತ್ತ ಮುಂಜಾನೆ ಚಾಲಕ ಎದ್ದು ಶೌಚಕ್ಕೆ ಹೋದ ವೇಳೆ ಘಟನೆ ಬೆಳಕಿಗೆ ಬಂದಿದೆ.

BMTC FIRE 3

ಘಟನೆ ಸಂಬಂಧ ಚಾಲಕ ಪ್ರಕಾಶ್ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ರಾತ್ರಿ 10.30ಕ್ಕೆ ರೂಟ್ ಮುಗಿಸಿ ಬಂದಿದ್ದೆವು. ನಾನು ಪಕ್ಕದ ಬಸ್ ನಿಲ್ದಾಣದಲ್ಲಿ ಮಲಗಿದ್ದೆ. ಬೆಳಗ್ಗೆ 4.45 ಕ್ಕೆ ಎದ್ದು ಆಚೆ ಬಂದು ನೋಡಿದಾಗ ಬೆಂಕಿ ಉರಿಯುತ್ತಿತ್ತು. ಈ ವೇಳೆ ನಾನು ಕಂಡಕ್ಟರ್ ಅವರನ್ನು ಆಚೆ ಬರುವಂತೆ ಕಿರುಚಾಡಿದ್ರು, ಪ್ರಯೋಜನವಾಗಲಿಲ್ಲ. ಅವರು ಮಲಗಿದ್ದ ಜಾಗದಲ್ಲೇ ಸುಟ್ಟು ಕರಕಲಾಗಿದ್ದಾರೆ ಎಂದು ಹೇಳಿದರು.

BMTC FIRE 4

ಗದಗ ಜಿಲ್ಲೆಯ ಹಾಲೂರ ಗ್ರಾಮದ ಮುತ್ತಯ್ಯ ಸ್ವಾಮಿ, ಕಳೆದ ಹಲವು ವರ್ಷಗಳಿಂದ ಬಿಎಂಟಿಸಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಸದ್ಯ ಬಿಎಂಟಿಸಿಯ 31 ರ ಡಿಪೋದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಸ್ಥಳಕ್ಕೆ ಬ್ಯಾಡರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಅವರ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *