ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು (CM Siddaramaiah) ತನ್ನ ಇಲಾಖೆಯ ವ್ಯವಹಾರದಲ್ಲಿ ಕೈ ಆಡಿಸಿದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸಿಟ್ಟಾಗಿ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿ ಮುಖ್ಯಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ಜಲಸಂಪನ್ಮೂಲ ಇಲಾಖೆಯಲ್ಲಿ ಅಧಿಕಾರಿಗಳ ವರ್ಗಾವಣೆಯಾಗಿದ್ದಕ್ಕೆ ಸಿಟ್ಟಾದ ಡಿಕೆಶಿ ಮೇ 13 ರಂದು ಮುಖ್ಯ ಕಾರ್ಯದರ್ಶಿಗೆ ಖಾರವಾದ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಐವರು ಎಂಜಿನಿಯರ್ಗಳ ವರ್ಗಾವಣೆಯನ್ನು ಹಿಂದಕ್ಕೆ ಪಡೆಯಿರಿ ಎಂದು ಆಗ್ರಹಿಸಿದ್ದಾರೆ.
ನಿಜಕ್ಕೂ ಆಗಿದ್ದೇನು?
ಹಲವು ತಿಂಗಳುಗಳುಗಳಿಂದ ಜಲಸಂಪನ್ಮೂಲ ಇಲಾಖೆಯಲ್ಲಿ (Water Resources Ministry) ಕರ್ತವ್ಯದಲ್ಲಿದ್ದ ಐವರು ಮುಖ್ಯ ಎಂಜಿನಿಯರ್ಗಳು ಹುದ್ದೆಯ ನಿರೀಕ್ಷೆಯಲ್ಲಿದ್ದರು. ಐವರು ಎಂಜಿನಿಯರ್ಗಳನ್ನು ಖಾಲಿ ಇದ್ದ ಲೋಕೋಪಯೋಗಿ ಇಲಾಖೆಯ ಹುದ್ದೆಗಳಿಗೆ ವರ್ಗಾವಣೆ ಮಾಡಿ ಮೇ 9ರಂದು ಡಿಪಿಎಆರ್ ಅಧಿಸೂಚನೆ ಹೊರಡಿಸಿತ್ತು. ಅಧಿಸೂಚನೆ ಬೆನ್ನಲ್ಲೇ ಲೋಕೋಪಯೋಗಿ ಇಲಾಖೆಯಲ್ಲಿ ಎಂಜಿನಿಯರ್ಗಳು ಕರ್ತವ್ಯಕ್ಕೆ ಸೇರಿದ್ದರು.
ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡಲಾಗಿದೆ. ಸ್ಥಳ ನಿಯುಕ್ತಿಗೊಳಿಸಿದ ಹುದ್ದೆಯಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಂಡು, ಪ್ರಭಾರ ವರ್ಗಾವಣೆ ಪ್ರಮಾಣ ಪತ್ರವನ್ನು (ಸಿಟಿಸಿ) ಸಲ್ಲಿಸಬೇಕು ಎಂದೂ ಡಿಪಿಎಆರ್ ನಿರ್ದೇಶನ ನೀಡಿತ್ತು. ಅದರ ಅನ್ವಯ ಎಲ್ಲಾ ಐವರು ಎಂಜಿನಿಯರ್ಗಳು ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದರು. ಇದನ್ನೂ ಓದಿ: ಸಿಎಂ Vs ಡಿಸಿಎಂ – ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳ ವರ್ಗ, ಡಿಕೆಶಿ ಕೆಂಡಾಮಂಡಲ|ಖಾರವಾದ ಪತ್ರದಲ್ಲಿ ಏನಿದೆ?
ವರ್ಗಾವಣೆಗೊಂಡ ಅಧಿಕಾರಿಗಳು ಯಾರು?
1.ಎಚ್.ಸಿ.ರಮೇಂದ್ರ
ಅಂತರರಾಜ್ಯ ಜಲ ವಿವಾದ, ಬೆಂಗಳೂರು
2.ವಿನಾಯಕ ಜಿ.ಸುಗೂರ
ನೀರಾವರಿ ಯೋಜನೆಗಳ ವಲಯ, ಕರ್ನಾಟಕ ನೀರಾವರಿ ನಿಗಮ, ತುಮಕೂರು
3.ಜೆ.ಇ. ಯತೀಶ್ ಚಂದ್ರನ್
ಎತ್ತಿನಹೊಳೆ ಯೋಜನಾ ವಲಯ, ಕರ್ನಾಟಕ ನೀರಾವರಿ ನಿಗಮ, ತುಮಕೂರು
4.ಶಿವಾನಂದ ಆರ್.ನಾಯಕ್
ಆಡಳಿತಾಧಿಕಾರಿ, ಕಾಡಾ ನೀರಾವರಿ ಯೋಜನೆಗಳ ವಲಯ, ಕಲಬುರಗಿ
5.ಪಿ.ಬಿ.ಪ್ರಕಾಶ್
ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ, ಬೆಂಗಳೂರು