ಬೆಳಗಾವಿ: ದಕ್ಷಿಣ ಶಾಸಕ ಅಭಯ್ ಪಾಟೀಲ್ ಅವರು ತಮ್ಮ ಸ್ವಂತ ಜಾಗದ ಎದುರುಗಿನ ಸಾಯಿ ಮಂದಿರ ತೆರವು ಮಾಡಿರುವ ಆರೋಪ ಕೇಳಿಬಂದಿದ್ದು, ಈ ಕುರಿತು ಕಾಂಗ್ರೆಸ್ ಮುಖಂಡ ಮನ್ಸೂರ್ ಖಾನ್ ಸಾಯಿ ಮಂದಿರ ತೆರವು ಮಾಡಿದ್ದಾರೆ ಎಂಬ ಗಂಭೀರ ಆರೋಪವನ್ನು ಮಾಡಿದ್ದಾರೆ.
ತಾಲೂಕಿನ ಆನಗೋಳ ನಗರದ ಅನಗೋಳ ಮುಖ್ಯ ರಸ್ತೆಯಲ್ಲಿರುವ ಸಾಯಿ ಮಂದಿರ ತೆರವು ಮಾಡಿರುವ ಆರೋಪ ಕೇಳಿಬಂದಿದೆ. ಶಾಸಕ ಅಭಯ್ ಪಾಟೀಲ್ ತಮ್ಮ ಸ್ವಂತ ಜಾಗದ ಎದುರುಗಿನ ಸಾಯಿ ಮಂದಿರವನ್ನು 2011ರಲ್ಲಿ ತೆರವುಗೊಳಿಸಿದ್ದಾರೆ ಎನ್ನಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಫೋಟೋ ವೈರಲ್ ಆಗಿದೆ. ಇನ್ನು ಹಿಂದುತ್ವ ಎನ್ನುವ ಅಭಯ್ ಪಾಟೀಲ್ ಇದರ ಬಗ್ಗೆ ಉತ್ತರಿಸಬೇಕು ಎಂದು ಮುಸ್ಲಿಂ ಮುಖಂಡ ಮನ್ಸೂರ್ ಆರೋಪಿಸಿದ್ದಾರೆ. ಇದನ್ನೂ ಓದಿ: ಪಠ್ಯದಲ್ಲಿರುವ ತಮ್ಮ ಕವಿತೆ ವಾಪಸ್ ಪಡೆದ ಮತ್ತೊಬ್ಬ ಸಾಹಿತಿ
- Advertisement 2
- Advertisement 3
ಇನ್ನೂ ತಮ್ಮ ಮೇಲಿನ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಶಾಸಕ ಅಭಯ್ ಪಾಟೀಲ್, ರಸ್ತೆಯ ಮಾಸ್ಟರ್ ಪ್ಲ್ಯಾನ್ ವೇಳೆ ಸಾಯಿ ಮಂದಿರ ತೆರವು ಮಾಡಲಾಗಿದೆ. ಅಲ್ಲಿಯ ಜನರ ಮನವೊಲಿಸಿ ಸಾಯಿ ಮಂದಿರ ತೆರವು ಮಾಡಲಾಗಿದೆ. ನಾಥ್ ಪೈ ಸರ್ಕಲ್ನಿಂದ ಯಳ್ಳೂರ ಸರ್ಕಲ್ವರೆಗೆ ಮಾಸ್ಟರ್ ಪ್ಲ್ಯಾನ್ ಮಾಡಲಾಗಿತ್ತು. ರಸ್ತೆಯ ಮಾಸ್ಟರ್ ಪ್ಲ್ಯಾನ್ನಲ್ಲಿ ಮನವೊಲಿಸಿ ಅನಗೋಳ ಮುಖ್ಯ ರಸ್ತೆಯಲ್ಲಿರುವ ಸಣ್ಣ ಸಾಯಿ ಮಂದಿರ ತೆರವು ಮಾಡಿದ್ದೇವೆ. ಸಾಯಿ ಮಂದಿರ ಒಡೆಯಲು ಹೋಗಿಲ್ಲ. ಮನವೊಲಿಸಿ ಮಾಸ್ಟರ್ ಪ್ಲ್ಯಾನ್ಗಾಗಿ ಮಾಡಿದ್ದೇವೆ. ಕೆಲವೊಂದು ಕಡೆ ಇನ್ನೂ ಇವೆ. ಅವರ ಮನವೊಲಿಸುವ ಕಾರ್ಯ ನಡೆಯುತ್ತಿದೆ ಎಂದರು. ಇದನ್ನೂ ಓದಿ: ನಮ್ಮ ಕುಟುಂಬದಿಂದ ಮೂರನೇ ವ್ಯಕ್ತಿ ಚುನಾವಣೆಗೆ ಸ್ಪರ್ಧಿಸಿದ್ರೆ ರಾಜೀನಾಮೆ ಕೊಟ್ತೇನೆ: ನಿರಾಣಿ