Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಕಾಂಗ್ರೆಸ್, ಬಿಜೆಪಿ ನಡುವೆ ಮೆಗಾ ಟ್ವೀಟ್ ವಾರ್- ‘ನ’ಮಗೆ ‘ಮೋ’ಸ ಅಂತಾ 10 ಸವಾಲ್ ಎಸೆದ ಕಾಂಗ್ರೆಸ್
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್, ಬಿಜೆಪಿ ನಡುವೆ ಮೆಗಾ ಟ್ವೀಟ್ ವಾರ್- ‘ನ’ಮಗೆ ‘ಮೋ’ಸ ಅಂತಾ 10 ಸವಾಲ್ ಎಸೆದ ಕಾಂಗ್ರೆಸ್

Bengaluru City

ಕಾಂಗ್ರೆಸ್, ಬಿಜೆಪಿ ನಡುವೆ ಮೆಗಾ ಟ್ವೀಟ್ ವಾರ್- ‘ನ’ಮಗೆ ‘ಮೋ’ಸ ಅಂತಾ 10 ಸವಾಲ್ ಎಸೆದ ಕಾಂಗ್ರೆಸ್

Public TV
Last updated: March 13, 2018 9:26 am
Public TV
Share
3 Min Read
CONGRESS BJP
SHARE

ಬೆಂಗಳೂರು: ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವಾರ್ ನಡೆಯುತ್ತಿದೆ. ರಾಜಕೀಯ ನಾಯಕರು ಟ್ವಿಟ್ಟರ್ ಮೂಲಕ ತಮ್ಮ ವಿರೋಧಿಗಳ ಕಾಲನ್ನು ಎಳೆಯುತ್ತಿದ್ದಾರೆ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಟ್ವಿಟ್ಟರ್ ನಲ್ಲಿ ಟ್ವೀಟ್ ವಾರ್ ನಡೆಸುತ್ತಿವೆ. ಎರಡು ಪಕ್ಷಗಳು ಅಧಿಕೃತ ಟ್ವಟ್ಟರ್ ಖಾತೆ ಮೂಲಕ ಆರೋಪ, ಪ್ರತ್ಯಾರೋಪಗಳನ್ನು ಮಾಡುತ್ತಿವೆ.

ಕರ್ನಾಟಕ ಕಾಂಗ್ರೆಸ್ ಈ ಬಾರಿ ಟ್ವಿಟ್ಟರ್ ನಲ್ಲಿ ಬಿಜೆಪಿಗೆ ಬಹಿರಂಗವಾಗಿ 10 ಸವಾಲಗಳನ್ನು ಹಾಕಿದೆ. ‘ನ’ಮಗೆ ‘ಮೋ’ಸ (ನಮೋ) ಎಂಬ ಶೀರ್ಷಿಕೆಯಲ್ಲಿ ಕಾಂಗ್ರೆಸ್, ಕರ್ನಾಟಕ ವಿರೋಧಿ ಬಿಜೆಪಿ ಎಂಬ ಹ್ಯಾಶ್ ಟ್ಯಾಗ್ ಬಳಸಿಕೊಂಡಿದೆ. ಕಾಂಗ್ರೆಸ್ ಟ್ವಿಟ್ಟರ್ ನಲ್ಲಿ ಬಿಜೆಪಿಗೆ ಕೇಳಿದ ಪ್ರಶ್ನೆಗಳು ಹೀಗಿವೆ.

congress

ಪ್ರಶ್ನೆ 1. ಕನ್ನಡ ಹಿತಾಸಕ್ತಿ: ಬಿಜೆಪಿ ನಿರಂತರವಾಗಿ ಕನ್ನಡೇತರ ಅಭ್ಯರ್ಥಿಗಳನ್ನು ರಾಜ್ಯಸಭಾ ಸದಸ್ಯರನ್ನಾಗಿ ಮಾಡುತ್ತಿದೆ. ಕನ್ನಡೇತರ ನಾಯಕರು ಸಂಸತ್ತಿನಲ್ಲಿ ಕರ್ನಾಟಕದ ಹಿತಾಸಕ್ತಿಗೆ ನ್ಯಾಯ ಒದಗಿಸಿಕೊಡುವರೇ?

ಪ್ರಶ್ನೆ 2. ಮಹದಾಯಿ: ರಾಜ್ಯ ಸರ್ಕಾರ ಮಹದಾಯಿ ಜಲವಿವಾದ ಬಗೆಹರಿಸುವಂತೆ ಮೋದಿ ಬಳಿ ಮನವಿ ಮಾಡಿಕೊಂಡಿದೆ. ಸಿಎಂ ಸಿದ್ದರಾಮಯ್ಯ ಮೂರು ರಾಜ್ಯ ಸರ್ಕಾರಗಳ ಜಂಟಿ ಸಭೆ ನಡೆಸಿ ಸಮಸ್ಯೆ ಇತ್ಯರ್ಥಪಡಿಸಬೇಕೆಂದು ಮೋದಿಯವರಿಗೆ ಮನವಿ ಕೊಟ್ಟಿದ್ದು ಆಗಿದೆ. ಆದ್ರೆ ಮೋದಿ ಸರ್ಕಾರ ಕೀಳು ಮಟ್ಟದ ರಾಜಕಾರಣ ಮಾಡ್ತಿದೆ.

ಪ್ರಶ್ನೆ 3. ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಮೋಸ: ಭಾರತದಲ್ಲಿ ಪ್ರಾದೇಶಿಕ ಗ್ರಾಮೀಣ ಬ್ಯಾಂಕಿಂಗ್ ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆಯನ್ನು ತಂದಿದ್ದು, ಪರೀಕ್ಷೆಗಳನ್ನು ಕೇವಲ ಇಂಗ್ಲಿಷ್/ಹಿಂದಿಯಲ್ಲಿ ಬರೆಯುವ ಅವಕಾಶ ನೀಡಿ ಕನ್ನಡ ಮಾಧ್ಯಮವನ್ನು ನಿರ್ಬಂಧಿಸಿದೆ.

ಪ್ರಶ್ನೆ 4. ಬರ ಪರಿಹಾರದಲ್ಲಿ ಮೋಸ: ಕೊಟ್ಟ ಬರ ಪರಿಹಾರ ಕೇವಲ 1,435.95 ಕೋಟಿ ರೂ. ಆದ್ರೆ ಬಿಜೆಪಿ ಆಳ್ವಿಕೆಯ ರಾಜ್ಯಗಳು ಮೋದಿ ಕೃಪಕಟಾಕ್ಷದಿಂದ ಅತ್ಯಧಿಕ ಬರ ಪರಿಹಾರ ಪಡೆದಿವೆ. ಮಹಾರಾಷ್ಟ್ರ-8.195 ಕೋಟಿ. ಗುಜರಾತ್- 3,894 ಕೋಟಿ, ರಾಜಸ್ಥಾನ-2,153 ಕೋಟಿ.

ಪ್ರಶ್ನೆ 5. ಸಿಆರ್ ಪಿಎಫ್: ಮೋದಿ ಸರ್ಕಾರ ನಗರದ ಹೊರವಲಯದ ತರಳು ಗ್ರಾಮದಲ್ಲಿದ್ದ ಸಿಆರ್ ಪಿಎಫ್ ಕಚೇರಿಯನ್ನು ಉತ್ತರಪ್ರದೇಶದಲ್ಲಿರುವ ರಾಜನಾಥ್ ಸಿಂಗ್ ತವರು ಪ್ರದೇಶ ಚಾಂದೌಅಗೆ ಎತ್ತಂಗಡಿ ಮಾಡಿದೆ.

bjp

ಪ್ರಶ್ನೆ 6. ಕರ್ನಾಟಕ ಬಾವುಟ: ರಾಜ್ಯ ಸರ್ಕಾರವು ಕನ್ನಡದ ಕಂಪನ್ನು ಪಸರಿಸುವ ನಾಡಧ್ವಜಕ್ಕೆ ಹೊಸ ರೂಪು ನೀಡಿ ಕನ್ನಡದ ಮೆರುಗನ್ನು ಹೆಚ್ಚಿಸಿದೆ. ಪ್ರತ್ಯೇಕ ಕನ್ನಡ ಬಾವುಟಕ್ಕೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದು, ಕನ್ನಡ ವಿರೋಧಿ ಧೋರಣೆ ತಾಳಿದ್ದಾರೆ.

ಪ್ರಶ್ನೆ 7. ರಫಾಲ್ ಹೆಚ್‍ಎಎಲ್: ಕೇಂದ್ರ ಬಿಜೆಪಿ ಸರ್ಕಾರದ ಹೊಸ ವಿಮಾನದ ಗುತ್ತಿಗೆಯನ್ನು ದೇಶದ ಹೆಮ್ಮೆಯ ಹೆಚ್‍ಎಎಲ್ ಗೆ ನೀಡದೇ ಮೋದಿ ಮಿತ್ರ ಅನಿಲ್ ಅಂಬಾನಿ ಸಂಸ್ಥೆಗೆ ನೀಡಿ ನಾಡಿನ ಯುವಜನತೆಯ ಉದ್ಯೋಗಗಳಿಗೆ ಕಲ್ಲು ಹಾಕಿದೆ.

ಪ್ರಶ್ನೆ 8. ಸಾಲ ಮನ್ನಾ ವಿರೋಧಿ ಸರ್ಕಾರ: ರಾಷ್ಟ್ರೀಕೃತ ಹಾಗು ವಾಣಿಜ್ಯ ಬ್ಯಾಂಕ್ ಗಳಲ್ಲಿರುವ ರೈತರ ಸಾಲ ಮನ್ನಾ ಮಾಡಲು ಕೇಂದ್ರ ಸರ್ಕಾರವನ್ನು ಕೇಳಿಕೊಂಡಾಗ ಯಾವುದೇ ಸಹಕಾರ ನೀಡದೇ ಮೋದಿ ಸರ್ಕಾರವು ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರಿದೆ.

ಪ್ರಶ್ನೆ 9. ಬಲವಂತವಾಗಿ ಹಿಂದಿ ಹೇರಿಕೆ: ಕೇಂದ್ರ ಸರ್ಕಾರವು ಕರ್ನಾಟಕದಲ್ಲಿ ಬಲವಂತವಾಗಿ ಹಿಂದಿಯನ್ನು ಹೇರುತ್ತಿದೆ (ಉದಾಹರಣೆ ನಮ್ಮ ಮೆಟ್ರೊ ಪ್ರದರ್ಶನ ಫಲಕಗಳಲ್ಲಿ ಹಿಂದಿ ಭಾಷೆ). ಈ ನಿಲುವು ಕೆಚ್ಚೆದೆಯ ಕನ್ನಡಿಗರನ್ನು ಕೆರಳಿಸಿದ್ದು ರಾಜ್ಯ ಸರ್ಕಾರವು ಕನ್ನಡ ಭಾಷೆಯ ಬೆಳವಣಿಗೆಗೆ ಹಾಗೂ ಸಂರಕ್ಷಣೆಗೆ ಬದ್ಧವಾಗಿದೆ.

ಪ್ರಶ್ನೆ 10. ಕಾವೇರಿ: 2016ನೇ ಸಾಲಿನಲ್ಲಿ ಕಾವೇರಿ ನೀರಿನ ಸಮಸ್ಯೆ ರಾಜ್ಯದಲ್ಲಿ ಸ್ಫೋಟಗೊಂಡಿತ್ತು. ಆಗಲೇ ಸಿಎಂ ಕಾವೇರಿ ನೀರು ಹಂಚಿಕೆ ವಿವಾದವನ್ನು ಬಗೆಹರಿಸಿಕೊಡುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದರು. ಆದ್ರೆ ಸಿಎಂ ಪತ್ರಕ್ಕೆ ಮೋದಿ ಉತ್ತರ ನೀಡಲಿಲ್ಲ. ಈ ವಿಚಾರ ಬಗೆಹರಿಸುವ ಕುರಿತು ಸರ್ವಪಕ್ಷ ಸಭೆ ಕರೆದರೂ ಬಿಜೆಪಿ ಸಂಸದರು ಹಾಗು ಕೇಂದ್ರ ಸಚಿವರು ಬರಲಿಲ್ಲ.

ಕಾಂಗ್ರೆಸ್ ನ ಈ 10 ಪ್ರಶ್ನೆಗಳಿಗೂ ಬಿಜೆಪಿ ತಿರುಗೇಟು ನೀಡಿದೆ. ಕೇರಳ ಮೂಲದ ಶಾಸಕ ಹ್ಯಾರಿಸ್ ಗೆ ಟಿಕೆಟ್ ನೀಡಿದ್ದೀರಿ, ಬಿಜೆಪಿ ಸರ್ಕಾರ ರೈಲ್ವೆ ಟಿಕೆಟ್ ಗಳಲ್ಲಿ ಕನ್ನಡ ಮುದ್ರಣಕ್ಕೆ ಚಾಲನೆ ನೀಡಿದೆ. ನೀಟ್ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯುವ ಅವಕಾಶವನ್ನ ನೀಡಿದೆ ಅಂತಾ ತಿರುಗೇಟು ನೀಡಿದೆ.

TAGGED:bjpcongresskarnataka electionsPublic TVtwitterಕರ್ನಾಟಕ ಚುನಾವಣೆಕಾಂಗ್ರೆಸ್ಟ್ವಟ್ಟರ್ಪಬ್ಲಿಕ್ ಟಿವಿಬಿಜೆಪಿ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

Modi 1
Latest

ಸಂಸತ್ತಿನಲ್ಲಿ ಮೀಸಲಾತಿ ವಿರೋಧಿಸಿದ ವಿಪಕ್ಷಗಳನ್ನ ಮಹಿಳೆಯರು ಚುನಾವಣೆಯಲ್ಲಿ ಶಿಕ್ಷಿಸಿದ್ದಾರೆ: ಮೋದಿ ಸಿಡಿಮಿಡಿ

Public TV
ByPublic TV
9 minutes ago
Mamata Banerjee West Bengal Suvendu Adhikari
Latest

ಮಮತಾಗೆ 15,000ಕ್ಕೂ ಹೆಚ್ಚು ಮತಗಳಿಂದ ಹೀನಾಯ ಸೋಲು – ಸುವೆಂದು ಅಧಿಕಾರಿಗೆ ಜಯ

Public TV
ByPublic TV
16 minutes ago
Pinarayi Vijayan
Latest

ಕೇರಳ‌ ಸಿಎಂ ಪಿಣರಾಯಿ ವಿಜಯನ್ ರಾಜೀನಾಮೆ

Public TV
ByPublic TV
56 minutes ago
Ratna Debnath Mother Of RG Kar Victim
Latest

West Bengal: ಬಿಜೆಪಿಯಿಂದ ಕಣಕ್ಕಿಳಿದಿದ್ದ ಆರ್‌ಜಿ ಕರ್‌ ಅತ್ಯಾಚಾರ ಸಂತ್ರಸ್ತೆ ತಾಯಿಗೆ ಜಯ

Public TV
ByPublic TV
1 hour ago
Vijay Rahul Gandhi
Latest

ತಮಿಳುನಾಡಿನಲ್ಲಿ ಟಿವಿಕೆ ಗೆಲುವು – ವಿಜಯ್‌ಗೆ ಶುಭಹಾರೈಸಿದ ರಾಹುಲ್ ಗಾಂಧಿ

Public TV
ByPublic TV
1 hour ago
ಸಾಂದರ್ಭಿಕ ಚಿತ್ರ
Latest

ಬಂಗಾಳದಲ್ಲಿ ಕೇಸರಿ ಸುನಾಮಿ – ಮಮತಾ ಆಡಳಿತಕ್ಕೆ ಅಂತ್ಯ ಹಾಡಲು ಆರ್‌ಎಸ್‌ಎಸ್ ‘ಸೈಲೆಂಟ್ ಆಪರೇಷನ್’ ಯಶಸ್ವಿ!

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?