Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆಯೇ ಹೆಚ್ಚು – ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರು ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆಯೇ ಹೆಚ್ಚು – ಡಿಕೆಶಿ

Bengaluru City

ಬೆಂಗಳೂರು ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆಯೇ ಹೆಚ್ಚು – ಡಿಕೆಶಿ

Public TV
Last updated: June 1, 2025 11:37 pm
Public TV
Share
5 Min Read
DK Shivakumar
SHARE

ಬೆಂಗಳೂರು: ಸಿಲಿಕಾನ್ ಸಿಟಿಯ ಅಭಿವೃದ್ಧಿಗೆ ಕಾಂಗ್ರೆಸ್ (Congress) ಸರ್ಕಾರಗಳ ಕೊಡುಗೆಯೇ ಹೆಚ್ಚು. ಸಮಗ್ರ ಅಭಿವೃದ್ಧಿಗೆ ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ ನಮ್ಮ ಸರ್ಕಾರ 1 ಲಕ್ಷ ಕೋಟಿ ರೂ. ಮೊತ್ತದ ದೊಡ್ಡ ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DCM DK Shivakumar) ಹೇಳಿದರು.

DK Shivakumar 2

ದಾಸರಹಳ್ಳಿ (Dasarahalli) ವಿಧಾನಸಭಾ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ 20 ವರ್ಷಗಳಲ್ಲಿ ಬೆಂಗಳೂರಿನ ಜನಸಂಖ್ಯೆ 70 ಲಕ್ಷ ನಿಂದ 1.50 ಕೋಟಿ ಏರಿಕೆಯಾಗಿದೆ. ಹೀಗಾಗಿ ಬೆಂಗಳೂರಿನ (Bengaluru) ಅಭಿವೃದ್ಧಿಗೆ ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ 1 ಲಕ್ಷ ಕೋಟಿ ರೂ. ಮೊತ್ತದ ಯೋಜನೆಗಳನ್ನು ರೂಪಿಸಿದ್ದೇವೆ ಎಂದರು.ಇದನ್ನೂ ಓದಿ: ದೆಹಲಿ | ಲ್ಯಾಂಡಿಂಗ್‌ ವೇಳೆ ತೀವ್ರ ಪ್ರಕ್ಷುಬ್ಧತೆ – 38 ನಿಮಿಷ ಆಕಾಶದಲ್ಲೇ ಗಿರಕಿ ಹೊಡೆದು ಲ್ಯಾಂಡ್‌ ಆದ ಇಂಡಿಗೋ ಫ್ಲೈಟ್

ನಿಮ್ಮ ಕ್ಷೇತ್ರದಲ್ಲಿ ಹಾದು ಹೋಗುವ ನೆಲಮಂಗಲ (Nelamangala) ಮೇಲ್ಸೇತುವೆ ಬಿಜೆಪಿಯವರು ಮಾಡಿದ್ದಲ್ಲ, ಕೃಷ್ಣ ಬೈರೇಗೌಡ ಅವರ ಕ್ಷೇತ್ರದಲ್ಲಿ ವಿಮಾನ ನಿಲ್ದಾಣಕ್ಕೆ ಹೋಗುವ ಮೇಲ್ಸೇತುವೆ, ಹೊಸೂರು ರಸ್ತೆಯಲ್ಲಿರುವ ಮೇಲ್ಸೇತುವೆ, ಕೋಲಾರಕ್ಕೆ ಡಬಲ್ ರೋಡ್ ಮಾಡಿದ್ದು, ಮನಮೋಹನ್ ಸಿಂಗ್ ಅವರ ಸರ್ಕಾರ. ಬೆಂಗಳೂರಿನಲ್ಲಿ ಇಂತಹ ಯಾವುದೇ ಕಾರ್ಯಕ್ರಮವಿದ್ದರೂ ಅದು ಕಾಂಗ್ರೆಸ್ ಸರ್ಕಾರದ ಕೊಡುಗೆಯೇ ವಿನಃ ಬಿಜೆಪಿ ಸರ್ಕಾರದ್ದಲ್ಲ. ಬೆಂಗಳೂರು ಬೆಳೆಯುತ್ತಿದೆ. ಹೀಗಾಗಿ ನಾವು ಗ್ರೇಟರ್ ಬೆಂಗಳೂರು (Greater Bengaluru) ಪ್ರಾಧಿಕಾರ ರಚನೆ ಮಾಡಿದ್ದೇವೆ. ಇದರಲ್ಲಿ ಎಷ್ಟು ಪಾಲಿಕೆ ಮಾಡಬೇಕು ಎಂದು ಚರ್ಚೆ ಮಾಡಲು ಸಚಿವರು ಹಾಗೂ ಶಾಸಕರ ಸಭೆ ಮಾಡಿದ್ದೇನೆ. ಇನ್ನೊಂದು ವಾರದಲ್ಲಿ ಮತ್ತೊಂದು ಸಭೆ ಮಾಡಿ, ಅಂತಿಮ ತೀರ್ಮಾನ ಮಾಡಲಾಗುವುದು. ಪಾಲಿಕೆ ರಚಿಸಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಯನ್ನು ಮಾಡುತ್ತೇವೆ. ಹೊಸ ಪಾಲಿಕೆ ಸದಸ್ಯರು ಆಯ್ಕೆಯಾಗಬೇಕು. ಮುಂದೆ ದಾಸರಹಳ್ಳಿಯಲ್ಲಿ ಶಾಸಕ ಹಾಗೂ ಕಾರ್ಪೊರೇಟರ್ ಸ್ಥಾನಗಳು ಕಾಂಗ್ರೆಸ್ ಪಕ್ಷಕ್ಕೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

DK Shivakumar 1

ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸಲು ಇತ್ತೀಚಿಗೆ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಮಾಡಿದ್ದೆವು. ಅದರಲ್ಲಿ 10 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದೆ. ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ಅಧಿಕಾರ ಸ್ವೀಕಾರ ಮಾಡಿದಾಗ ಒಂದು ಮಾತು ಹೇಳಿದ್ದೆ. ಮಹಿಳೆಯರು ಹಾಗೂ ಯುವಕರು ಮನಸ್ಸು ಮಾಡಿದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದಿದ್ದೆ. ಮಹಿಳೆಯರಿಗೆ ಉಪಕಾರ ಸ್ಮರಣೆ ಇರುತ್ತದೆ. ಹೀಗಾಗಿ ನಮ್ಮ ಐದು ಗ್ಯಾರಂಟಿ ಯೋಜನೆಗಳ ಪೈಕಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ, ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ ಯೋಜನೆಗಳನ್ನು ಮಹಿಳೆಯರಿಗಾಗಿ ಮಾಡಲಾಗಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನವೇ ಐದೂ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಅನುಮೋದನೆ ನೀಡಲಾಯಿತು. ಆ ಮೂಲಕ ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ನಮ್ಮ ಸರ್ಕಾರ 2 ವರ್ಷ ಪೂರೈಸಿದ್ದು, ಸಚಿವ ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ 1,11,111 ಕುಟುಂಬಗಳಿಗೆ ಉಚಿತವಾಗಿ ಪಟ್ಟಾ ಖಾತೆಯನ್ನು ನೀಡುವ ಮೂಲಕ 6ನೇ ಗ್ಯಾರಂಟಿ ಯೋಜನೆ ಭೂ ಗ್ಯಾರಂಟಿಯನ್ನು ನೀಡಿದ್ದೇವೆ ಎಂದು ತಿಳಿಸಿದರು.

ಬೆಂಗಳೂರಿನ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡೆನು.

ಕಾಂಗ್ರೆಸ್ ಪಕ್ಷಕ್ಕೆ ಸುದೀರ್ಘವಾದ ಇತಿಹಾಸವಿದೆ.‌ ಪ್ರತಿಯೊಬ್ಬ ಕಾರ್ಯಕರ್ತರೂ ಕಾಂಗ್ರೆಸ್‌‌‌ನ ಆಸ್ತಿ. 2028ರ ಚುನಾವಣೆಯಲ್ಲೂ ನಮ್ಮ
ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವಿದೆ. ಪಕ್ಷದ ಆಶಯಗಳನ್ನು,… pic.twitter.com/eLDVW7D1sQ

— DK Shivakumar (@DKShivakumar) June 1, 2025

ಕಳೆದ ವಿಧಾನಸಭೆ ಚುನಾವಣೆಗೂ ಮುನ್ನ ಮಾಜಿ ಶಾಸಕ ಮಂಜುನಾಥ್‌ಗೆ ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ ಎಂದು ಹೇಳಿದ್ದೆ. ಮಂಜಣ್ಣ ನನ್ನ ಮಾತು ಕೇಳಿದ್ದರೆ, ನನ್ನ ಹಾಗೂ ಕೃಷ್ಣ ಬೈರೇಗೌಡ ಅವರ ಮಧ್ಯೆ ವಿಧಾನಸೌಧದಲ್ಲಿ ಕೂರುತ್ತಿದ್ದರು. ಮಂಜಣ್ಣ ಇಲ್ಲಿ ಶಾಸಕರಾಗಿ ಗೆದ್ದಿದ್ದು, ತನ್ನ ಸಾಮರ್ಥ್ಯದ ಮೇಲೆ ಹೊರತು ಜೆಡಿಎಸ್ ಪಕ್ಷದಿಂದ ಅಲ್ಲ. ಈಗ ಆಗಿರುವುದನ್ನು ಬಿಟ್ಟು, ಮುಂಬರುವ 2028ರ ಚುನಾವಣೆಯಲ್ಲಿ ನೀವು ಮಂಜಣ್ಣ ಅವರನ್ನು ವಿಧಾನಸೌಧದಲ್ಲಿ ಕೂರಿಸಬೇಕು. ನಮ್ಮ ಸರ್ಕಾರ ಈ ದೇಶಕ್ಕೆ ಮಾದರಿ. ಬಿಜೆಪಿ ಭಾವನೆ ಮೇಲೆ ರಾಜಕೀಯ ಮಾಡಿದರೆ, ನಾವು ಬದುಕಿನ ಮೇಲೆ ರಾಜಕೀಯ ಮಾಡುತ್ತೇವೆ. ನಮಗೆ ನಿಮ್ಮ ಬದುಕು ಮುಖ್ಯ, ನಿಮಗೆ ಪ್ರತಿ ತಿಂಗಳು ಕನಿಷ್ಠ 5 ಸಾವಿರ ರೂ. ಉಳಿತಾಯ ಆದರೆ ನಿಮಗೆ ಅನುಕೂಲವಾಗುತ್ತದೆ ಎಂಬ ಉದ್ದೇಶದಿಂದ ನಾವು ಗ್ಯಾರಂಟಿ ಯೋಜನೆ ಜಾರಿಗೆ ತಂದೆವು. ಬೆಲೆ ಏರಿಕೆ ಸಮಸ್ಯೆಯಿಂದ ಜನರನ್ನು ರಕ್ಷಣೆ ಮಾಡಲಾಗಿದೆ ಎಂದರು.

DK Shivakumar 2

ರಾಜ್ಯದಲ್ಲಿ ಬಿಜೆಪಿ ಸರ್ಕಾರ ನಾಲ್ಕು ವರ್ಷ ಅಧಿಕಾರದಲ್ಲಿತ್ತು. ಬಿಜೆಪಿ ಇಂತಹ ಒಂದೇ ಒಂದು ಯೋಜನೆಯನ್ನು ನೀಡಲಿಲ್ಲ. ನಿಮ್ಮ ಶಾಸಕರು ಕೇವಲ ಬರಿ ಮಾತಲ್ಲೇ ನಿಮನ್ನು ಮರಳು ಮಾಡುತ್ತಿದ್ದಾರೆ. ಖಾಲಿ ಡಬ್ಬಾದಂತೆ ಕೇವಲ ಸದ್ದು ಮಾತ್ರ ಮಾಡುತ್ತಾರೆ. ಮಂಜಣ್ಣ ಇಲ್ಲಿ ಸೋತಿದ್ದರು. 8 ಸಾವಿರ ಕುಟುಂಬಗಳ ಆಸ್ತಿಯನ್ನು ಇ-ಖಾತಾ ಮಾಡಿಸಿದ್ದಾರೆ. ನಮ್ಮ ಪಾಲಿಗೆ ಇಲ್ಲಿ ಮಂಜುನಾಥ್ ಅವರೇ ಶಾಸಕರು. ಅವರು ಹೇಳಿದಂತೆ ನಾವು ಕೇಳುತ್ತೇವೆ. ನಿಮ್ಮ ಆಸ್ತಿ ದಾಖಲೆ ಸರಿಪಡಿಸಿ, ಅದನ್ನು ನಿಮ್ಮ ಮನೆಬಾಗಿಲಿಗೆ ಉಚಿತವಾಗಿ ತಲುಪಿಸುವ ಐತಿಹಾಸಿಕ ತೀರ್ಮಾನ ಮಾಡಿದ್ದೇವೆ. ಕಾಂಗ್ರೆಸ್ ಪಕ್ಷ ಸದಾ ಜನರ ಬದುಕಿನ ಬಗ್ಗೆ ಆಲೋಚನೆ ಮಾಡುತ್ತದೆ. ಕಾಂಗ್ರೆಸ್ ಪಕ್ಷಕ್ಕೆ ಅದರದ್ದೇ ಇತಿಹಾಸವಿದೆ ಎಂದರು.

ಇತ್ತೀಚೆಗೆ ದೇಶದಲ್ಲಿ ಯುದ್ಧದ ವಾತಾವರಣ ಸೃಷ್ಟಿಯಾಗಿತ್ತು. ಈ ಸಂದರ್ಭದಲ್ಲಿ ಜನ ಇಂದಿರಾಗಾಂಧಿ ಅವರನ್ನು ಸ್ಮರಿಸುತ್ತಿದ್ದರು. ಇಂದಿರಾಗಾಂಧಿ ಇದ್ದಿದ್ದರೆ ದೇಶವನ್ನು ಹೇಗೆ ಮುನ್ನಡೆಸುತ್ತಿದ್ದರು ಎಂದು ಜನ ಆಲೋಚನೆ ಮಾಡಿದರು. ಇಂದಿರಾಗಾಂಧಿ, ರಾಜೀವ್ ಗಾಂಧಿ ಅವರು ದೇಶಕ್ಕಾಗಿ ಪ್ರಾಣ ಬಿಟ್ಟರು. ಸೋನಿಯಾ ಗಾಂಧಿ ಅವರು ಈ ದೇಶಕ್ಕಾಗಿ ಪ್ರಧಾನಮಂತ್ರಿ ಸ್ಥಾನವನ್ನು ಎರಡು ಬಾರಿ ತ್ಯಾಗ ಮಾಡಿದರು. ಇದು ಕಾಂಗ್ರೆಸ್ ಪಕ್ಷದ ಶಕ್ತಿ. ಬಿಜೆಪಿಯಲ್ಲಿ ಇಂತಹ ತ್ಯಾಗ ಮಾಡಿರುವವರು ಒಬ್ಬರಾದರೂ ಇದ್ದಾರಾ? ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸಿರುವುದು ಬಹಳ ಸಂತೋಷ. ಆರಂಭದಲ್ಲಿ ನನಗೆ ಇದು ಮಹಿಳಾ ಕಾಂಗ್ರೆಸ್ ಸಭೆಯೇ ಎಂದು ಅನುಮಾನ ಮೂಡಿತು. ಇಲ್ಲಿ ಗಂಡಸರಿಗೆ ಜಾಗ ಕೊಡದೇ ಅವರು ರಸ್ತೆಯಲ್ಲಿ ನಿಂತಿದ್ದಾರೆ. ಮುಂದೆ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ 33% ಮೀಸಲಾತಿ ಕೊಟ್ಟ ಬಳಿಕ ನಮ್ಮ ಪರಿಸ್ಥಿತಿ ಏನಾಗುತ್ತದೆಯೋ ಗೊತ್ತಿಲ್ಲ ಎಂದು ತಿಳಿಸಿದರು.ಇದನ್ನೂ ಓದಿ: ‘ಥಗ್‌ ಲೈಫ್‌’ ಟೀಂ ಉದ್ಧಟತನ ಬಟಾಬಯಲು – ಕನ್ನಡ ಬಿಟ್ಟು 4 ಭಾಷೆಗಳಿಗೆ ಸಿನಿಮಾ ಡಬ್‌

TAGGED:bengalurucongressDK Shivakumarಕಾಂಗ್ರೆಸ್ಡಿ.ಕೆ.ಶಿವಕುಮಾರ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Pawan Khera
Court

ಬಂಧನ ಭೀತಿಯಿಂದ ಪಾರು – ಪವನ್ ಖೇರಾಗೆ ಸುಪ್ರೀಂ ಜಾಮೀನು

Public TV
By Public TV
13 minutes ago
Untitled 1 copy 1
Crime

ಪ್ರೀತಿ ಹೆಸರಲ್ಲಿ ವಂಚನೆ ಆರೋಪ – ಕಾಂಗ್ರೆಸ್‌ ಮುಖಂಡ ಮದನ್‌ ರಾಜ್‌ ವಿರುದ್ಧ ದೂರು

Public TV
By Public TV
21 minutes ago
ಸಾಂದರ್ಭಿಕ ಚಿತ್ರ
Latest

24 ಗಂಟೆಯಲ್ಲಿ ಇಸ್ರೇಲಿಗೆ ಅಮೆರಿಕದಿಂದ ಬಂತು 6,500 ಟನ್ ಯುದ್ಧಸಾಮಗ್ರಿ – ಮತ್ತೆ ಯುದ್ಧ ಆರಂಭ?

Public TV
By Public TV
43 minutes ago
Young man arrested for pursuing her in the name of love Bengaluru
Bengaluru City

ತರಬೇತಿ ನಿರತ ಗಗನಸಖಿಗೆ ಕಿರುಕುಳ: ಪ್ರೀತಿ ಹೆಸರಲ್ಲಿ ಬೆನ್ನಟ್ಟಿದ್ದ ಕಾಮುಕ ಅರೆಸ್ಟ್‌

Public TV
By Public TV
1 hour ago
Mother dies trying to save drowning children in Chintamani Murugamalla Dargah Lake
Chikkaballapur

ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ತಾಯಿ ಸಾವು

Public TV
By Public TV
2 hours ago
West Bengal exit poll sparks alarm in Dhaka Bangladesh MP Akhter Hossen fears refugee crisis if BJP wins
Latest

ಬಂಗಾಳದಲ್ಲಿ ಬಿಜೆಪಿಗೆ ಗೆಲುವಿನ ಮುನ್ಸೂಚನೆ – ದೊಡ್ಡ ಚಿಂತೆಯ ವಿಷಯ ಎಂದ ಬಾಂಗ್ಲಾ ಸಂಸದ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?