Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Election News

ಕಾಂಗ್ರೆಸ್‌ ಪತನ 2014 ರಿಂದ ಅಲ್ಲ1996 ರಿಂದ ಆರಂಭ!

Public TV
Last updated: April 23, 2024 6:49 pm
Public TV
Share
3 Min Read
congress flag
SHARE

– ಈ ಬಾರಿ ಅತಿ ಕಡಿಮೆ ಕ್ಷೇತ್ರದಲ್ಲಿ ಸ್ಪರ್ಧೆ
– 2019 ರಲ್ಲಿ 52 ಸ್ಥಾನ ಗೆದ್ದಿದ್ದ ಕಾಂಗ್ರೆಸ್‌

ಸತತ ಎರಡು ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದ್ದರಿಂದ ಕಾಂಗ್ರೆಸ್‌ (Congress) ಹಿನ್ನಡೆ 2014ರಿಂದ ಆರಂಭವಾಯಿತು ಎಂದು ನೀವು ಎಣಿಸಿಕೊಂಡಿದ್ದರೆ ನಿಮ್ಮ ಊಹೆ ತಪ್ಪಾದಿತು. ಕಾಂಗ್ರೆಸ್‌ಗೆ 1996 ರಿಂದ ಹಿನ್ನಡೆ ಆರಂಭವಾಗಿತ್ತು.

ಹೌದು. ಕಾಂಗ್ರೆಸ್‌ 1991-92ರ ಚುನಾವಣೆಯಲ್ಲಿ 500 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 244 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಈ ಚುನಾವಣೆಯ ನಂತರ ನಡೆದ ಯಾವುದೇ ಚುನಾವಣೆಯಲ್ಲಿ ಕಾಂಗ್ರೆಸ್‌ 240ರ ಗಡಿಯನ್ನು ದಾಟಿಲ್ಲ.

lk advani

1991ರಲ್ಲಿ ಬಾಬ್ರಿ ಮಸೀದಿ ಧ್ವಂಸವಾದ (Babri Mosque Demolition) ನಂತರ ದೇಶದ ರಾಜಕೀಯ ಇತಿಹಾಸವೇ ಬದಲಾಗತೊಡಗಿತು. ಎಲ್‌ಕೆ ಅಡ್ವಾಣಿ (LK Adavani) ಅವರು ರಥಯಾತ್ರೆ ನಡೆಸಿ ಬಿಜೆಪಿಯನ್ನು ಬಲ ಪಡಿಸಿದರು. ಪಿವಿ ನರಸಿಂಹ ರಾವ್‌ (PV Narasimha Rao) ಸರ್ಕಾರದಲ್ಲಿ ಬಹಳಷ್ಟು ಭ್ರಷ್ಟಾಚಾರದ ಆರೋಪಗಳು ಕೇಳಿ ಬಂದ ಕಾರಣ 1996ರ ಚುನಾವಣೆಯಲ್ಲಿ ಕಾಂಗ್ರೆಸ್‌ 529 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 140 ಸ್ಥಾನಗಳನ್ನು ಗೆದ್ದುಕೊಂಡಿತು. ಬಿಜೆಪಿ ಬರೋಬ್ಬರಿ 161 ಸ್ಥಾನಗಳನ್ನು ಗೆದ್ದುಕೊಂಡಿತು.

ಈ ಚುನಾವಣೆಯ ನಂತರ ದೇಶದ ಹಲವು ಭಾಗಗಳಲ್ಲಿ ಪ್ರಾದೇಶಿಕ ಪಕ್ಷಗಳು (Regional Parties) ಬಲಿಷ್ಠವಾಗತೊಡಗಿ ಕಾಂಗ್ರೆಸ್‌ ಮತವನ್ನು ತನ್ನ ಬುಟ್ಟಿಗೆ ಹಾಕಿದವು. ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳು ನಾವು ಬಡವರ ಕಲ್ಯಾಣ ಮಾಡುತ್ತೇವೆ ಎಂದು ಭರವಸೆ ನೀಡುತ್ತಿದ್ದರಿಂದ ಬಡವರು ಈ ಪಕ್ಷಗಳ ಕೈಯನ್ನು ಬಲಪಡಿಸಿದರು. ಪರಿಣಾಮ ಕಾಂಗ್ರೆಸ್‌ ಮತಗಳು ಚದುರಿ ಹೋದವು.  ಇದನ್ನೂ ಓದಿ: ಕಾಂಗ್ರೆಸ್‌ Vs ಬಿಜೆಪಿ – ಗ್ರಾಮೀಣ, ನಗರದ ಜನತೆ ಈ ಬಾರಿ ಯಾರ ಪರ? 2019 ರಲ್ಲಿ ಏನಾಗಿತ್ತು?

Mayawati BSP

2009ರ ಚುನಾವಣೆಯಲ್ಲಿ ಕಾಂಗ್ರೆಸ್‌ 440 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 206 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಈ ಚುನಾವಣೆಯ ನಂತರ ಕಾಂಗ್ರೆಸ್‌ ಪಕ್ಷ ಹಲವು ರಾಜ್ಯಗಳಲ್ಲಿ ತನ್ನ ನೆಲೆಯನ್ನು ಕಳೆದುಕೊಂಡಿತ್ತು. ವಿಶೇಷವಾಗಿ ಹಿಂದಿ ಭಾಷೀಕರು ಹೆಚ್ಚಿರುವ ರಾಜ್ಯಗಳಲ್ಲಿ ಹಲವು ಕಾಂಗ್ರೆಸ್‌ ನಾಯಕರು ಕಮಲದ ಕೈ ಹಿಡಿದ ಪರಿಣಾಮ ದೇಶದೆಲ್ಲೆಡೆ ಬಿಜೆಪಿ ಬಲ ಹೆಚ್ಚಾಯಿತು. ಇದರೊಂದಿಗೆ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್‌ ಪ್ರಾದೇಶಿಕ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡಿತು. ಈ ಕಾರಣದಿಂದಾಗಿ ಕಾಂಗ್ರೆಸ್‌ ಆ ರಾಜ್ಯಗಳಲ್ಲೂ ದುರ್ಬಲವಾಯಿತು.

ಯಾವ ವರ್ಷ ಎಷ್ಟು ಸ್ಥಾನ ಗೆದ್ದಿದೆ?
1996- 140
1998 – 141
1999 – 114
2004 – 145
2009 – 206
2014 – 45
2019 – 52

narendra modi

ಮೋದಿ ಅವಧಿಯಲ್ಲಿ ಕಳಪೆ ಸಾಧನೆ:
ಯುಪಿಎ (UPA) ಎರಡನೇ ಅವಧಿಯಲ್ಲಿ ವಿಪರೀತ ಭ್ರಷ್ಟಾಚಾರದ ಆರೋಪಗಳು ಸರ್ಕಾರದ ಮೇಲೆ ಬಂದಿತ್ತು. ಇದರ ಪರಿಣಾಮ 2014ರಲ್ಲಿ ಕಾಂಗ್ರೆಸ್‌ ಸಾಧನೆ ಕಳಪೆಯಾಗಿತ್ತು. 464 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 44 ಸ್ಥಾನ ಮಾತ್ರ ಗೆದ್ದಿತ್ತು. 2019 ರ ಚುನಾವಣೆಯಲ್ಲಿ ಕಾಂಗ್ರೆಸ್‌ 421 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 52 ಸ್ಥಾನ ಗೆದ್ದುಕೊಂಡಿತ್ತು. ಇದನ್ನೂ ಓದಿ: ಬಿಜೆಪಿಗೆ ವೋಟ್‌ ಹಾಕಿ.. ದೀದಿ ಗೂಂಡಾಗಳನ್ನು ತಲೆಕೆಳಗಾಗಿ ನೇತು ಹಾಕ್ತೀವಿ: ಅಮಿತ್‌ ಶಾ

ಈ ಬಾರಿ ಅತಿ ಕಡಿಮೆ ಕ್ಷೇತ್ರಗಳಲ್ಲಿ ಸ್ಪರ್ಧೆ:
ಮೋದಿ (PM NarendraModi) ಹ್ಯಾಟ್ರಿಕ್‌ ಜಯವನ್ನು ತಡೆಯಲು ಕಾಂಗ್ರೆಸ್‌ ಈ ಬಾರಿ INDIA ಒಕ್ಕೂಟದ ಪಕ್ಷಗಳಿಗೆ ಹೆಚ್ಚಿನ ಸ್ಥಾನವನ್ನು ಬಿಟ್ಟುಕೊಟ್ಟಿದೆ. ಒಟ್ಟು 543 ಕ್ಷೇತ್ರಗಳ ಪೈಕಿ 330 ಕಡೆ ಮಾತ್ರ ಅಭ್ಯರ್ಥಿಯನ್ನು ಹಾಕಿದೆ. 1951 ರಿಂದ ನಡೆದ ಚುನಾವಣೆಯಲ್ಲಿ 2004ರ ಚುನಾವಣೆಯಲ್ಲಿ 417 ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧಿಸಿತ್ತು. ಇಲ್ಲಿಯವರೆಗೆ 400ಕ್ಕಿಂತ ಕಡಿಮೆ ಕ್ಷೇತ್ರಗಳಲ್ಲಿ ಸ್ಪರ್ಧಿಸಿರಲಿಲ್ಲ. ಆದರೆ ಈ ಬಾರಿ ಕೇವಲ 330 ಕಡೆ ಮಾತ್ರ ಅಭ್ಯರ್ಥಿಯನ್ನು ಹಾಕಿದೆ.

ಯಾವ ರಾಜ್ಯದಲ್ಲಿ ಎಷ್ಟು ಕ್ಷೇತ್ರಗಳಲ್ಲಿ ಸ್ಪರ್ಧೆ?
ಕರ್ನಾಟಕ, ತೆಲಂಗಾಣ, ಪಂಜಾಬ್‌, ಜಾರ್ಖಂಡ್‌, ಒಡಿಶಾ, ಛತ್ತೀಸ್‌ಗಢದ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದರೆ ದೊಡ್ಡ ರಾಜ್ಯಗಳಾದ ಉತ್ತರ ಪ್ರದೇಶ, ಬಿಹಾರ, ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳದಲ್ಲಿ ಮೈತ್ರಿ ಮಾಡಿಕೊಂಡು ಕಣಕ್ಕೆ ಇಳಿದಿದೆ.

 

 

TAGGED:bjpcongressindiaLok Sabha electionಕಾಂಗ್ರೆಸ್ಬಿಜೆಪಿಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema Updates

Upendra
ಇನ್ಮುಂದೆ ಉಪ್ಪಿ ʻನೆಕ್ಸ್ಟ್‌ ಲೆವೆಲ್‌ʼ – ಸದ್ದಿಲ್ಲದೇ ಸೆಟ್ಟೇರುತ್ತಿದೆ ಹೊಸ ಸಿನಿಮಾ
Cinema Latest Sandalwood
Pavithra Gowda Insta Profile
ಟೆನ್ಷನ್ ಹೊತ್ತಲ್ಲಿ ಬದಲಾಯ್ತು ಪವಿತ್ರಾ ಗೌಡ ಪ್ರೊಫೈಲ್
Cinema Latest Top Stories
S O Muttanna
ದೇವರಾಜ್ ಪುತ್ರ ಪ್ರಣಂ ಸಿನಿಮಾ ಹಾಡಿಗೆ ಸಂಜಿತ್ ಹೆಗ್ಡೆ ದನಿ
Cinema Latest Sandalwood Top Stories
Kantara Chapter 1
ಕಾಂತಾರ ಚಾಪ್ಟರ್‌ 1 – ಇದು ಬರೀ ಸಿನಿಮಾ ಅಲ್ಲ `ಶಕ್ತಿ’ ಎಂದ ರಿಷಬ್ ಶೆಟ್ಟಿ
Cinema Latest Top Stories
rishab shetty 1
3 ವರ್ಷದ ಸಿನಿ ಪಯಣದ ಒಂದು ಝಲಕ್: ಕಾಂತಾರ ಅದ್ಭುತ ಲೋಕ
Cinema Latest Main Post Sandalwood

You Might Also Like

Maharashtra Murder
Crime

ʻದೃಶ್ಯಂʼ ಸಿನಿಮಾ ಸ್ಟೈಲ್‌ನಲ್ಲಿ ಕೊಲೆ – ಪ್ರಿಯಕರನ ಜೊತೆಗೂಡಿ ಗಂಡನನ್ನ ಕೊಂದು ಟೈಲ್ಸ್‌ ಕೆಳಗೆ ಹೂತಿದ್ದ ಪತ್ನಿ

Public TV
By Public TV
30 minutes ago
Siddaramaiah 9
Bengaluru City

ಪತ್ನಿ ವಿರುದ್ಧ ಅಪಪ್ರಚಾರ ಮಾಡಿದ ವಿಪಕ್ಷಗಳು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು: ಸಿಎಂ

Public TV
By Public TV
38 minutes ago
Parliament in brijesh chowta
Karnataka

ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ

Public TV
By Public TV
42 minutes ago
Darshan Pavithra
Bengaluru City

ನಾಳೆ ದರ್ಶನ್‌ ಪಾಲಿಗೆ ಬಿಗ್‌ ಡೇ – ಸುಪ್ರೀಂ ಕೋರ್ಟ್‌ ತೀರ್ಪಿನತ್ತ ಚಿತ್ತ, ಮತ್ತೆ ಜೈಲುಪಾಲಾಗ್ತಾರಾ ನಟ?

Public TV
By Public TV
1 hour ago
Govt Schools copy
Dakshina Kannada

ದಕ್ಷಿಣ ಕನ್ನಡದಲ್ಲಿ ಮಳೆ ಪೀಡಿತ ಪ್ರದೇಶದ 11 ಶಾಲೆಗಳ ದುರಸ್ತಿಗೆ ಕೇಂದ್ರ ಸರ್ಕಾರದ ಅನುಮೋದನೆ

Public TV
By Public TV
1 hour ago
Dharmasthala 1
Bengaluru City

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ SIT ಹೆಗಲಿಗೆ – ನಿಷ್ಪಕ್ಷಪಾತ ತನಿಖೆ ಬಗ್ಗೆ ಗೃಹ ಸಚಿವ ಪರಂ ಭರವಸೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?