ಡಿಕೆಶಿ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

Public TV
1 Min Read
DKSHI 1

ನವದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ತಿಹಾರ್ ಜೈಲು ಸೇರಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ.

ದೆಹಲಿ ಹೈಕೋರ್ಟಿನ ನ್ಯಾ. ಸುರೇಶ್ ಕುಮಾರ್ ಕೈಟಾ ನೇತೃತ್ವದ ಏಕ ಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಬೇಕಿತ್ತು. ಆದರೆ ಕೋರ್ಟಿಗೆ ಡಿಕೆಶಿ ಪರ ವಕೀಲರು ಬರಲಿಲ್ಲ. ಹೀಗಾಗಿ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ.

DELHI CPURT

ಕಳೆದ ವಿಚಾರಣೆಯಲ್ಲಿ ಡಿಕೆಶಿ ಪ್ರಕರಣದ ಸಂಪೂರ್ಣ ತನಿಖಾ ಪ್ರಗತಿಯನ್ನು ಕೋರ್ಟಿಗೆ ಸಲ್ಲಿಸಬೇಕು ಅಂತ ನ್ಯಾಯಾಧೀಶರು ಇಡಿ ಅಧಿಕಾರಿಗಳಿಗೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ, ತನಿಖೆ ಪ್ರಗತಿ ವರದಿಯನ್ನು ಕೋರ್ಟಿಗೆ ಇಡಿ ಅಧಿಕಾರಿಗಳು ಸಲ್ಲಿಸಿ, ಹೆಚ್ಚುವರಿ ವರದಿ ಸಲ್ಲಿಸಬೇಕಿದೆ ಎಂದು ತಿಳಿಸಿದ್ದಾರೆ.

ಡಿಕೆಶಿ ನ್ಯಾಯಂಗ ಬಂಧನ ನಾಳೆಗೆ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಇಡಿ ಕೋರ್ಟಿಗೆ ನಾಳೆ ಡಿಕೆಶಿ ಹಾಜರಾಗಲಿದ್ದಾರೆ. ಇತ್ತ ಹೈಕೋರ್ಟಿನಲ್ಲಿ ವಿಚಾರಣೆ ಇನ್ನೂ ಬಾಕಿಯಿದೆ.

ಈ ಹಿಂದೆ ವಿಚಾರಣೆ ನಡೆಸಿದ್ದ ಪೀಠ ದಸರಾ ಹಬ್ಬದ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡಲಾಗಿತ್ತು. ಡಿಕೆಶಿ ಪರ ಹಿರಿಯ ವಕೀಲರಾದ ಅಭಿಷೇಕ್ ಮನುಸಿಂಘ್ವಿ, ಮುಕುಲ್ ರೋಹಟಗಿ, ದಯಾನ್ ಕೃಷ್ಣನ್ ವಾದ ಮಂಡಿಸಬೇಕಿತ್ತು.

DK Shivakumar 1 1

Share This Article
Leave a Comment

Leave a Reply

Your email address will not be published. Required fields are marked *