– ಸದನಗಳಲ್ಲಿ ಕಾಂಗ್ರೆಸ್ಸಿಗರ ನಡೆ ಬೇಜವಾಬ್ದಾರಿಯ ಪರಮಾವಧಿ
ನವದೆಹಲಿ: ಕಾಂಗ್ರೆಸ್ (Congress) ಪಕ್ಷಕ್ಕೆ ದೇಶದ ಹಿತಾಸಕ್ತಿ ಮತ್ತು ಚರ್ಚೆಯ ಮೇಲೆ ಆಸಕ್ತಿಯೇ ಇಲ್ಲ. ಅವ್ಯವಸ್ಥೆ ಸೃಷ್ಟಿಸುವುದಷ್ಟೇ ಅದರ ಏಕೈಕ ಗುರಿಯಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಟೀಕಿಸಿದರು.
ಸಂಸತ್ ಆವರಣದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, ಲೋಕಸಭೆ, ರಾಜ್ಯಸಭೆ ಸದನಗಳಲ್ಲಿ ಕಾಂಗ್ರೆಸ್ ಪಕ್ಷದ ನಡವಳಿಕೆ ಬೇಜವಾಬ್ದಾರಿಯ ಪರಮಾವಧಿಯಿಂದ ಕೂಡಿದೆ ಎಂದು ಖಂಡಿಸಿದರು. ವಿರೋಧ ಪಕ್ಷವು ದೇಶದ ಹಿತಾಸಕ್ತಿ ಮತ್ತು ಅಭಿವೃದ್ಧಿ ವಿಚಾರದ ಚರ್ಚೆಯಲ್ಲಿ ನಿರಾಸಕ್ತಿ ತೋರುತ್ತದೆ. ಯಾವುದೇ ವಿಷಯವಿರಲಿ ಅದರ ಬಗ್ಗೆ ಚರ್ಚೆ ನಡೆಸುವ ಬದಲು ಅವ್ಯವಸ್ಥೆ ಸೃಷ್ಟಿಸುವುದನ್ನೇ ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಕರೂರು ಕಾಲ್ತುಳಿತ – ಮಾ.10ಕ್ಕೆ ವಿಚಾರಣೆಗೆ ಹಾಜರಾಗುವಂತೆ ವಿಜಯ್ಗೆ ಸಿಬಿಐ ಸಮನ್ಸ್
ಸದನಗಳಲ್ಲಿ (Parliament) ಕಾಂಗ್ರೆಸ್ ಪಕ್ಷ ಸಾಂವಿಧಾನಿಕ ಜವಾಬ್ದಾರಿಯಿಂದ ನಡೆದುಕೊಳ್ಳುತ್ತಿಲ್ಲ. ಬದಲಾಗಿ ‘ಕುಟುಂಬ ಮೊದಲು’ ಎಂಬ ನಿಯಮ ಅನುಸರಿಸುತ್ತಿರುವಂತೆ ಕಾಣುತ್ತಿದೆ. ಆ ಪಕ್ಷದಲ್ಲಿ ಎಲ್ಲದೂ ಒಂದು ಕುಟುಂಬವನ್ನು ಸಂತುಷ್ಟಪಡಿಸಲು ಮತ್ತು ಅವರ ರಾಜಕುಮಾರ ರಾಹುಲ್ ಗಾಂಧಿಯನ್ನು ಉತ್ತೇಜಿಸುವ ಸಲುವಾಗಿಯೇ ನಡೆಯುತ್ತದೆ ಎಂದು ಟೀಕಿಸಿದರು. ‘ಮೊದಲು ಒತ್ತಾಯಿಸಿ, ನಂತರ ಅಡ್ಡಿಪಡಿಸಿ’ ಎಂಬುದು ಸಂಸತ್ತಿನಲ್ಲಿ ಕಾಂಗ್ರೆಸ್ ಪಕ್ಷದ ಸಾಮಾನ್ಯ ವಿಧಾನವಾಗಿದೆ. ರಾಜ್ಯಸಭೆಯಲ್ಲಿ ಇಂದು ವಿದೇಶಾಂಗ ಸಚಿವರು ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿ ಬಗ್ಗೆ ಸದನಕ್ಕೆ ವಿವರಿಸಲು ಮುಂದಾದರೆ ವಿರೋಧ ಪಕ್ಷಕ್ಕೆ ಅದನ್ನು ಕೇಳುವ ವ್ಯವಧಾನವೇ ಇಲ್ಲದಂತೆ ವರ್ತಿಸಿತು ಎಂದು ಕಿಡಿಕಾರಿದರು. ಇದನ್ನೂ ಓದಿ: ಟೀ ಕುಡಿಯುವ ಫೋಟೋ ಅಪ್ಲೋಡ್ ಮಾಡಿ ಪಾಕಿಸ್ತಾನವನ್ನು ಟ್ರೋಲ್ ಮಾಡಿದ ಚಕ್ರವರ್ತಿ
ಸದನದಲ್ಲಿ ಕಾಂಗ್ರೆಸ್ ಸದಸ್ಯರು, ಭಾರತದ ಅಧಿಕೃತ ನಿಲುವನ್ನು ಕೇಳುವ ಬದಲು ಘೋಷಣೆ ಕೂಗಿ ಹೊರನಡೆಯ ತೊಡಗಿದರು. ಲೋಕಸಭೆಯಲ್ಲಿ ಸಹ ಇದೇ ವರ್ತನೆ ತೋರಿದ್ದರು. ಅಲ್ಲಿ ವಿರೋಧ ಪಕ್ಷದ ಸಂಸದರು ಹೇಳಿಕೆ ನೀಡುವಾಗಲೂ ಫಲಕಗಳನ್ನು ಬೀಸಿ ಘೋಷಣೆ ಕೂಗಿದರು. ಬಳಿಕ ಸಂಸತ್ ಆವರಣದಲ್ಲಿ ಪ್ರತಿಭಟನೆ ಮುಂದುವರೆಸಿದರು. ಗೌರವಾನ್ವಿತ ಲೋಕಸಭಾ ಸ್ಪೀಕರ್ ವಿರುದ್ಧವೇ ಅವಿಶ್ವಾಸ ನಿರ್ಣಯ ಸಹ ಮಂಡಿಸಿದರು. ಇದೆಲ್ಲಾ ಅವ್ಯವಸ್ಥೆ ಸೃಷ್ಟಿಸುವ ಅವರ ಯೋಜಿತ ಕಾರ್ಯವಾಗಿದೆ ಎಂದು ಆಕ್ಷೇಪಿಸಿದರು. ಇದನ್ನೂ ಓದಿ: ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ಸಾವು

