ಮಾಜಿ ಸಚಿವ ನಾಗೇಂದ್ರಗೆ ಮತ್ತೆ ಜೈಲೇ ಗತಿ – ಆ.3 ರವರೆಗೆ ನ್ಯಾಯಾಂಗ ಬಂಧನ

Public TV
1 Min Read
B NAGENDRA

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki Corporation Case) ಬಹುಕೋಟಿ ಹಗರಣದಲ್ಲಿ ಕಾಂಗ್ರೆಸ್‌ನ (Congress) ಮಾಜಿ ಸಚಿವ ನಾಗೇಂದ್ರಗೆ ಮತ್ತೆ ಜೈಲೇ ಗತಿಯಾಗಿದೆ. ಆ.3 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ನಾಗೇಂದ್ರ (Nagendra) ಅವರನ್ನು ಇಂದು ಕೋರ್ಟ್‌ಗೆ ಇ.ಡಿ ಅಧಿಕಾರಿಗಳು ಹಾಜರುಪಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ. ಇದನ್ನೂ ಓದಿ: ಪ್ರಜ್ವಲ್, ಸೂರಜ್ ರೇವಣ್ಣ ಅರ್ಜಿ ವಿಚಾರಣೆ ಇಂದು – ಸಹೋದರರಿಗೆ ಸಿಗುತ್ತಾ ಜಾಮೀನು?

Rs 87 Crore Maharshi Valmiki Scheduled Tribe Development Corporation What is the Scam 1

ಪ್ರಕರಣದಲ್ಲಿ ಈಗಾಗಲೇ 5 ದಿನಗಳಂತೆ ಎರಡು ಬಾರಿ ಈಗಾಗಲೇ ಇ.ಡಿ ಕಸ್ಟಡಿಗೆ ಪಡೆದಿತ್ತು. ಆದರೆ ಅಕ್ರಮದ ಬಗ್ಗೆ ಇ.ಡಿ ಅಧಿಕಾರಿಗಳ ಪ್ರಶ್ನೆಗೆ ನಾಗೇಂದ್ರ ಸರಿಯಾಗಿ ಉತ್ತರಿಸಿಲ್ಲ. ಹೀಗಾಗಿ ಮತ್ತೆ ಕಷ್ಟಡಿಗೆ ಕೇಳಲು ಇಡಿ ಸಿದ್ಧತೆ ನಡೆಸಿತ್ತು.

ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರ ಅವರ ಬಂಧನವಾಗಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಒತ್ತಡ ಸೃಷ್ಟಿಯಾದ ಹಿನ್ನೆಲೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪ್ರಕರಣದಲ್ಲಿ ಈಗಾಗಲೇ ಹಲವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಡಿಸಿಎಂ ಡಿಕೆ ಶಿವಕುಮಾರ್ ನಮ್ಮ ಸೈನಿಕರಿಗೆ ಅಪಮಾನ ಮಾಡಿದ್ದಾರೆ: ಹೆಚ್‌ಡಿಕೆ

Share This Article