ಬೆಂಗಳೂರು: ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಜೊತೆಗೆ ನೀವು ನಿಂತರೆ ಭಾರತೀಯರು. ಒಂದು ವೇಳೆ ಮೋದಿ ಅವರ ವಿರುದ್ಧ ನಿಂತರೆ ನೀವು ದೇಶ ವಿರೋಧಿಗಳು ಎಂದು ತೇಜಸ್ವಿ ಸೂರ್ಯ ಭಾಷಣ ಮಾಡಿದ್ದರು. ಕಾಂಗ್ರೆಸ್ ಈ ಹೇಳಿಕೆಯ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಭಾಷಣದಲ್ಲಿ ಏನಿದೆ?
ಕಳೆದ 60 ವರ್ಷಗಳಿಂದ ಪ್ರಜೆಗಳಲ್ಲಿರುವ ದೇಶಪ್ರೇಮವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಒಂದು ವೇಳೆ ಅವರು ದೇಶಪ್ರೇಮಿಗಳಾಗಿದ್ದರೆ ಭಾರತವನ್ನು ಬಡರಾಷ್ಟ್ರವನ್ನಾಗಿ ಇರಲು ಬಿಡುತ್ತಿರಲಿಲ್ಲ. ಆದರೆ ಈಗ ಅಭಿವೃದ್ಧಿ ಕಾರ್ಯದಲ್ಲಿ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಲ್ಲರೂ ಒಂದಾಗಿ ನಿಂತಿದ್ದಾರೆ. ಪ್ರಧಾನಿ ಮೋದಿ ವಿರುದ್ಧ ನಿಲ್ಲುವವರು ಯಾರಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಆಡಳಿತಕ್ಕೆ ಬಂದರೆ ಕಾಂಗ್ರೆಸ್ ಸರ್ಕಾರ ಮತ್ತೆ ಆಡಳಿತಕ್ಕೆ ಬರುವುದಿಲ್ಲ. ಮೋದಿ ಪರ ನೀವು ನಿಂತರೆ ಭಾರತೀಯರು. ಒಂದು ವೇಳೆ ಮೋದಿ ಅವರ ವಿರುದ್ಧ ನಿಂತರೆ ನೀವು ದೇಶ ವಿರೋಧಿಗಳು ಎಂದು ತೇಜಸ್ವಿ ಸೂರ್ಯ ಭಾಷಣ ಮಾಡಿದ್ದರು. ತಮ್ಮ ಭಾಷಣದಲ್ಲಿ ಕುಟುಂಬ ರಾಜಕಾರಣದ ವಿರುದ್ಧವೂ ವಾಗ್ದಾಳಿ ನಡೆಸಿದ್ದರು.
https://twitter.com/Tejasvi_Surya/status/1108973963747614720