[Ruby_E_Template id="1354606"]
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕಾಂಗ್ರೆಸ್ ಬಂದ್ಮೇಲೆ ಸಂಕ್ರಾಂತಿಗೆ ಹಸುವಿನ ಕೆಚ್ಚಲು ಕೊಯ್ದಿರೋ ಗಿಫ್ಟ್ ಕೊಟ್ಟಿದ್ದಾರೆ: ಅಶೋಕ್ ಕಿಡಿ

Public TV
Last updated: January 12, 2025 1:29 pm
Public TV
2 Min Read

– 1 ಲಕ್ಷ ರೂ. ವೈಯಕ್ತಿಕ ಪರಿಹಾರ ಘೋಷಿಸಿದ ಅಶೋಕ್
– ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೇ ಕರಾಳ ಸಂಕ್ರಾಂತಿ ಆಚರಣೆ

ಬೆಂಗಳೂರು: ಗೋ ಪೂಜೆ ಬಹಳ ಪವಿತ್ರ. ಸಂಕ್ರಾಂತಿಗೆ ಸಂಭ್ರಮ ಇರುತ್ತದೆ. ಕಾಂಗ್ರೆಸ್ (Congress) ಸರ್ಕಾರ ಬಂದಮೇಲೆ ಸಂಕ್ರಾಂತಿಗೆ ಹಸುವಿನ ಕೆಚ್ಚಲು ಕೊಯ್ದಿರೋ ಗಿಫ್ಟ್ ಕೊಟ್ಟಿದ್ದಾರೆ. ಜಿಹಾದಿ ಮನಸ್ಥಿತಿ ಇದು ಎಂದು ವಿಪಕ್ಷ ನಾಯಕ ಆರ್ ಅಶೋಕ್ (R Ashok) ಆಕ್ರೋಶ ಹೊರಹಾಕಿದ್ದಾರೆ.

ಚಾಮರಾಜಪೇಟೆಯಲ್ಲಿ (Chamrajpet) ಹಸುವಿನ ಕೆಚ್ಚಲು ಕೊಯ್ದ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಾಲು ಕೊಡುವ ಹಸುವಿನ ಕೆಚ್ಚಲು ಕೊಯ್ದಿದ್ದಾರೆ. ಹಸುವಿನ ಮಾಲೀಕ ಆರ್‌ಎಸ್‌ಎಸ್ ಕಾರ್ಯಕರ್ತ. ಸ್ಥಳೀಯ ಪಶು ಆಸ್ಪತ್ರೆ ಉಳಿವಿಗಾಗಿ ಹಸುವಿನ ಮಾಲೀಕರು ಹೋರಾಟ ಮಾಡಿದರು. ಹಸುಗಳನ್ನ ಪಶು ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದರು. ಪ್ರತಿಭಟನೆಯಲ್ಲಿ ಭಾಗಿಯಾಗಿದ್ದವು ಎಂಬುದಕ್ಕೆ ಕಾಲು ಕಟ್ ಮಾಡಿದ್ದಾರೆ. ಕೆಚ್ಚಲಿಗೆ ಹಾನಿ ಮಾಡಿದ್ದಾರೆ. ಕಾಂಗ್ರೆಸ್ ಮಾತೆತ್ತಿದರೆ ದೇವಸ್ಥಾನ, ಹೋಮ ಮಾಡುತ್ತಾರೆ. ಇದು ವೋಟ್‌ಗಾಗಿ ಮಾಡುತ್ತಿರುವುದು ಎಂದು ಕಿಡಿಕಾರಿದರು. ಇದನ್ನೂ ಓದಿ: ಹಸುಗಳನ್ನು ಹೋರಾಟಕ್ಕೆ ಕರೆದುಕೊಂಡು ಹೋಗಿದ್ದಕ್ಕೆ ಕೆಚ್ಚಲಿಗೆ ಕತ್ತರಿ!

ಹಿಂದೂಗಳನ್ನು ಭಯಭೀತರನ್ನಾಗಿ ಮಾಡುವ ಉದ್ದೇಶ ಇದು. ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಕರಾಳ ಸಂಕ್ರಾಂತಿ ಆಚರಣೆ ಮಾಡುತ್ತೇವೆ. ಸಿಸಿಟಿವಿಗಳನ್ನು ಒಡೆದು ಹಾಕಿದ್ದಾರಂತೆ. ಪಶು ಆಸ್ಪತ್ರೆ ಉಳಿವಿಗಾಗಿ ಹೋರಾಟ ಮಾಡಿದ ಹಸುಗಳ ಮಾಲೀಕರಿಗೆ ಭಯ ಶುರುವಾಗಿದೆ.ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ. ಗೌರವ ಇದೆಯಾ ಇವ್ರಿಗೆ? ಸ್ಥಳೀಯ ಶಾಸಕರು ಬಂದಿಲ್ಲ ಎಂದು ಹರಿಹಾಯ್ದರು. ಇದನ್ನೂ ಓದಿ: ಅಂಬೇಡ್ಕರ್ ಆಶಯದಂತೆ ನರೇಂದ್ರ ಮೋದಿ ಸರ್ಕಾರ ಕೆಲಸ ಮಾಡುತ್ತಿದೆ: ಹೆಚ್‌ಡಿಕೆ

ಅಸೆಂಬ್ಲಿಯಲ್ಲಿ ಈ ಬಗ್ಗೆ ಮಾತನಾಡಿದ್ದೆ. ಹಾಗಿದ್ದರೂ ಸರ್ಕಾರ ಎಚ್ಚೆತ್ತುಕೊಳ್ಳಲಿಲ್ಲ. ವೈಯಕ್ತಿಕವಾಗಿ ನಾನು ಸಹಾಯ ಮಾಡುತ್ತೇನೆ. ಪಶು ಆಸ್ಪತ್ರೆ ವಕ್ಫ್ ಆಸ್ತಿ ಎಂದು ಹೇಳಲಾಗುತ್ತಿದೆ. ಅದನ್ನು ಉಳಿಸಿಕೊಳ್ಳಲು ನಾವು ಹೋರಾಟ ಮಾಡಿದ್ದೆವು. ಕೋಟ್ಯಂತರ ರೂ. ಬೆಲೆ ಬಾಳುವ ಆಸ್ಪತ್ರೆ, ಪಶು ಆಸ್ಪತ್ರೆಯಾಗಿಯೇ ಉಳಿಬೇಕು. ಆದರೆ ಇದನ್ನು ವಕ್ಫ್ ಆಸ್ತಿ ಎಂದು ಹೇಳಲಾಗುತ್ತಿದೆ. ಕೋರ್ಟ್‌ನಲ್ಲಿ ಪ್ರಕರಣ ಇದೆ. ಇದಕ್ಕೆ ನಾವು ತಡೆಯಾಜ್ಞೆ ಕೂಡ ತಂದಿದ್ದೇವೆ. ಅಷ್ಟರಲ್ಲಿ ಹೀಗೆ ಆಗಿದೆ. ಹೋರಾಟಗಾರರಿಗೆ ಭಯ ಪಡಿಸುವ ಕೆಲಸ ಆಗಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಹಸುವಿನ ಕೆಚ್ಚಲು ಕೊಯ್ದ ನೀಚರನ್ನು ಬಂಧಿಸದಿದ್ದರೇ ಜಮೀರ್ ವಿರುದ್ಧ ಹೋರಾಟ: ಮುತಾಲಿಕ್ ಎಚ್ಚರಿಕೆ

ಇನ್ನು ಪ್ರಕರಣ ಸಂಬಂಧ ಚಾಮರಾಜಪೇಟೆಯ ಪಶು ಆಸ್ಪತ್ರೆಯ ಆವರಣದಲ್ಲಿ ಹಸುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪರಿಶೀಲನೆ ಬಳಿಕ ಅಶೋಕ್ 1 ಲಕ್ಷ ರೂ. ವೈಯಕ್ತಿಕ ಪರಿಹಾರ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಗಂಡುಮಕ್ಕಳು ಮಾತ್ರ ಕೆಟ್ಟವರು, ಹುಡುಗಿಯರು ಏನೇ ಮಾಡಿದ್ರೂ ಲೆಕ್ಕಕ್ಕೆ ಬರಲ್ಲ – ಸಾಯುವ ಮುನ್ನ ಯುವಕ ಮಾಡಿದ್ದ ವೀಡಿಯೋ ವೈರಲ್

TAGGED:bengalurubjpChamrajpetcongressCow's Udderr ashokಆರ್ ಅಶೋಕ್ಕಾಂಗ್ರೆಸ್ಚಾಮರಾಜಪೇಟೆಬಿಜೆಪಿಬೆಂಗಳೂರುಹಸುವಿನ ಕೆಚ್ಚಲು

You Might Also Like

Bollywood

ಸಿದ್ಧಾರ್ಥ್ ಮಲ್ಹೋತ್ರಾ, ಕಿಯಾರಾ ಅಡ್ವಾಣಿ ದಂಪತಿಗೆ ಹೆಣ್ಣು ಮಗು ಜನನ

Public TV
By Public TV
7 hours ago
Bengaluru City

ಬೇಕರಿ, ದಿನಸಿ ಅಂಗಡಿಗಳಿಗೆ ಲಕ್ಷ ಲಕ್ಷ ಟ್ಯಾಕ್ಸ್‌ – ಬಂದ್‌ ಎಚ್ಚರಿಕೆ ಕೊಟ್ಟ ಮಾಲೀಕರು

Public TV
By Public TV
8 hours ago
Crime

ವಾಕಿಂಗ್ ವೇಳೆ ಕಾರು ಡಿಕ್ಕಿ – ಮ್ಯಾರಥಾನ್ ಓಟಗಾರ ಶತಾಯುಷಿ ಫೌಜಾ ಸಿಂಗ್ ಸಾವು

Public TV
By Public TV
8 hours ago
Bengaluru City

ಬೆಂಗಳೂರಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಹತ್ಯೆ

Public TV
By Public TV
8 hours ago
Latest

ಉಕ್ರೇನ್ ಪ್ರಧಾನಿ ಡೆನಿಸ್ ಶ್ಮಿಹಾಲ್ ರಾಜೀನಾಮೆ

Public TV
By Public TV
8 hours ago
Bengaluru City

ಬೆಂಗಳೂರು ಕಾಲ್ತುಳಿತ ಕೇಸ್‌ – ವರದಿ ಬಹಿರಂಗಪಡಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account