ಹಾವೇರಿ: ಕಾಂಗ್ರೆಸ್ (Congress) ಸರ್ಕಾರ ಹಣದ ಹೊಳೆಯನ್ನೇ ಹರಿಸಿದೆ ಎಂದು ಶಿಗ್ಗಾಂವಿ (Shiggaon) ಪರಾಜಿತ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ (Bharath Bommai) ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇವತ್ತು ಇಡೀ ಸರ್ಕಾರ ಬಂದು ಹಣದ ಹೊಳೆಯನ್ನೇ ಹರಿಸಿದೆ. ಹಾಗಾಗಿ ಇಂದು ಕಾಂಗ್ರೆಸ್ ಗೆದ್ದಿದೆ. ನಾನು ಯಾವತ್ತಿದ್ದರೂ ಶಿಗ್ಗಾಂವಿ ಸವಣೂರು ಕ್ಷೇತ್ರದ ಜನರಿಗೆ ಒಳಿತು ಆಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಕ್ಷೇತ್ರದ ಜನರ ಜೊತೆಗೆ ಎಂದೆಂದಿಗೂ ಇರುತ್ತೇನೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಸಿಎಂಗೆ ಮುಹೂರ್ತ ಇಡ್ತಿದ್ರು, ಈಗ ಯಾರು ಬದಲಾಗ್ತಾರೆ ನೋಡೋಣ – ಬಿವೈವಿಗೆ ಮಧು ಬಂಗಾರಪ್ಪ ತಿರುಗೇಟು
ನಮ್ಮ ಸೋಲಿಗೆ ಕಾರಣ ಏನೆಂಬುವುದನ್ನು ಪಕ್ಷದ ಹಿರಿಯರು ಹಾಗೂ ಯುವಕರೆಲ್ಲ ಸೇರಿ ಅವಲೋಕನ ಮಾಡುತ್ತೇವೆ. ಈ ಬಗ್ಗೆ ಎಲ್ಲರೂ ಒಟ್ಟು ಸೇರಿ ಚರ್ಚಿಸುತ್ತೇವೆ ಎಂದರು. ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಗೆದ್ದ ಸೈನಿಕ, ಸೋತ ಅಭಿಮನ್ಯು