Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ಸರ್ಕಾರ ನಾಟಕದ ಕಂಪನಿ: ಗೋವಿಂದ ಕಾರಜೋಳ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ಕಾಂಗ್ರೆಸ್ ಸರ್ಕಾರ ನಾಟಕದ ಕಂಪನಿ: ಗೋವಿಂದ ಕಾರಜೋಳ

Chitradurga

ಕಾಂಗ್ರೆಸ್ ಸರ್ಕಾರ ನಾಟಕದ ಕಂಪನಿ: ಗೋವಿಂದ ಕಾರಜೋಳ

Public TV
Last updated: February 15, 2025 4:39 pm
Public TV
Share
3 Min Read
Govinda Karajola
SHARE

ಚಿತ್ರದುರ್ಗ: ಕಾಂಗ್ರೆಸ್ (Congress) ಸರ್ಕಾರವೊಂದು ದೊಡ್ಡಾಟ ಹಾಗೂ ಬಯಲಾಟ ಆಡುವ ನಾಟಕದ ಕಂಪನಿ ಎಂದು ಚಿತ್ರದುರ್ಗ (Chitradurga) ಸಂಸದ ಗೋವಿಂದ ಕಾರಜೋಳ (Govinda Karajola) ಹೇಳಿದರು.

ಚಿತ್ರದುರ್ಗದಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ ರಾಜ್ಯದಲ್ಲಿ ದಲಿತ ಸಮಾವೇಶ ನಡೆಸಲು ಭರದ ಸಿದ್ಧತೆ ವಿಚಾರವಾಗಿ ಪ್ರತಿಕ್ರಿಯಿಸಿದರು. ದೇಶಕ್ಕೆ ಸ್ವಾತಂತ್ರ್ಯ ಬಂದನಂತರ 70 ವರ್ಷದಲ್ಲಿ 60 ವರ್ಷ ಕಾಂಗ್ರೆಸ್ ಅಧಿಕಾರ ಚಲಾಯಿಸಿದೆ. ಕಾಂಗ್ರೆಸ್ ಆಡಳಿತದಲ್ಲಿ ಇಂಥ ಗಿಮಿಕ್ ಬಹಳ ಮಾಡಿದ್ದಾರೆ. ಅವರಿಗೆ ಕುರ್ಚಿಕಂಟಕ ಬಂದಾಗ, ಪಕ್ಷದಿಂದ ಜನ ದೂರವಾದಾಗ, ಮತದಾರರು ಅವರನ್ನು ತಿರಸ್ಕರಿಸಿದಾಗ ಹೊಸ ನಾಟಕ ಶುರು ಮಾಡುತ್ತಾರೆ. ಹೀಗಾಗಿ ಈ ಸರ್ಕಾರ ಬಯಲಾಟ ಹಾಗೂ ದೊಡ್ಡಾಟ ಅಡುವ ದೊಡ್ದ ನಾಟಕ ಕಂಪನಿ ಎನಿಸಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: Photo Gallery: ಮೈಸೂರಲ್ಲಿ ನಟ ಡಾಲಿ ಧನಂಜಯ್‌ ಮದುವೆ ಸಂಭ್ರಮ

Siddaramaiah 5

ಈ ಹಿಂದೆ ನಾಟಕ ಆಡಲು ಹೆಚ್ಚು ಬೆಳಕು ಇರುತ್ತಿರಲಿಲ್ಲ. ಆಗ ಕಲಾವಿದರು ಕಂದಿಲ್ ಬೆಳಕಲ್ಲಿ ನಾಟಕ ನಡೆಸುತಿದ್ದರು. ಅಂತೆಯೇ ಈ ಕಾಂಗ್ರೆಸ್ ಸರ್ಕಾರವೊಂದು ದೊಡ್ಡ ನಾಟಕದ ಕಂಪನಿ. ಈಗ ಜನರಿಗೆ ಕಾಂಗ್ರೆಸ್ಸಿಗರ ಬಂಡವಾಳ ಅರ್ಥ ಆಗಿದೆ. ಅವರಿಗೆ ಅಷ್ಟೊಂದು ದಲಿತರ ಮೇಲೆ ಕಾಳಜಿಯಿದ್ದರೆ ದಲಿತರ 25 ಸಾವಿರ ಕೋಟಿ ಎಸ್ಸಿಪಿಟಿಎಸ್ ದುರುಪಯೋಗ ಮಾಡಿಕೊಳ್ಳುತ್ತಿರಲಿಲ್ಲ. ದಲಿತರ ಹಣಕ್ಕೆ ಕತ್ತರಿ ಹಾಕಿದ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ನೈತಿಕತೆ ಇಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮುತ್ತತ್ತಿ ದೇವಾಲಯಕ್ಕೆ ಬಂದಿದ್ದ ಇಬ್ಬರು ನೀರುಪಾಲು

ಇನ್ನು ದಲಿತರ ಸಮಾವೇಶ ನಡೆಸುವ ನೈತಿಕತೆ ಕಾಂಗ್ರೆಸ್‌ಗೆ ಇಲ್ಲ. ಆರ್ಥಿಕವಾಗಿ ಈ ಸರ್ಕಾರ ದಿವಾಳಿಯಾಗಿದೆ. ದಲಿತರ ಮೇಲೆ ಅಷ್ಟೊಂದು ಕಾಳಜಿಯಿದ್ದರೆ ಈ ಸರ್ಕಾರ ಶಿಕ್ಷಣ ಮತ್ತು ದಲಿತರ ಏಳಿಗೆಗೆ ಅನುದಾನ ಕೊಡಿಸಬೇಕು ಎಂದರು. ಇದನ್ನೂ ಓದಿ: ಬೆಳಗಾವಿಯಲ್ಲಿ ಗೋವಾ ಮಾಜಿ ಶಾಸಕ, ಕಾಂಗ್ರೆಸ್‌ ನಾಯಕನ ಬರ್ಬರ ಹತ್ಯೆ, ಆರೋಪಿ ಅರೆಸ್ಟ್‌

ರಾಜ್ಯದ 9 ವಿವಿಗಳನ್ನು ಮುಚ್ಚುತ್ತಿರೋದು ನೋಡಿದರೆ ಸರ್ಕಾರದಲ್ಲಿ ಆರ್ಥಿಕ ದಿವಾಳಿ ಎದ್ದು ಕಾಣಿಸುತ್ತಿದೆ. ಈ ಸರ್ಕಾರದ ಭೂಮಿಯನ್ನು ಕಾಂಗ್ರೆಸ್ ನುಂಗಿ ಹಾಕಿದೆ. ಹೀಗಾಗಿ ನೂರಾರು ಎಕರೆ ಜಾಗ ಕೊಟ್ಟು ವಿಶ್ವವಿದ್ಯಾಲಯ ಮುಚ್ಚದಂತೆ ಉಳಿಸಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಬಾಲಕಿ ಕಿಡ್ನ್ಯಾಪ್, ಅತ್ಯಾಚಾರ ಕೇಸ್ – ಆರೋಪಿಗೆ 20 ವರ್ಷ ಜೈಲು, 45 ಸಾವಿರ ದಂಡ

ಇದೇ ವೇಳೆ ಕಾಂಗ್ರೆಸ್‌ನಲ್ಲಿ ದಲಿತ ಸಿಎಂ ಕೂಗು ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌ನವರು ದಲಿತರನ್ನು ಸಿಎಂ ಮಾಡಲ್ಲ. ದೀರ್ಘಾವಧಿ ಅಧಿಕಾರದಲ್ಲಿದ್ದ ಮಲ್ಲಿಕಾರ್ಜುನ ಖರ್ಗೆಯವರನ್ನೇ ಸಿಎಂ ಮಾಡಲಿಲ್ಲ. ಅವರ ನರಿಗದ್ದಲ ಕೈ ನಾಯಕರಿಗೆ ಕೇಳಲ್ಲ. ಕಾಂಗ್ರೆಸ್ಸನ್ನು ದಲಿತರೆಲ್ಲಾ ಸೇರಿ ಚಿಂದಿ ಮಾಡಿದಾಗ ಅವರಿಗೆ ಬುದ್ದಿ ಬರಲಿದೆ ಎಂದು ಹರಿಹಾಯ್ದರು. ಇದನ್ನೂ ಓದಿ: ಮೇನಲ್ಲಿ ಜೆಡಿಎಸ್‌ನಿಂದ ಬೃಹತ್ ಸಮಾವೇಶ: ಹೆಚ್‌ಡಿಡಿ

ಉದಯಗಿರಿ ಗಲಾಟೆ ಪ್ರಕರಣ ಕಂಡಾಗ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎನ್ನಿಸಿದೆ. ಈ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ರಾಜ್ಯಾದ್ಯಂತ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕೇವಲ ಉದಯಗಿರಿ ಒಂದೇ ಅಲ್ಲ. ಹುಬ್ಬಳ್ಳಿ ಗಲಾಟೆಯಲ್ಲಿ ಠಾಣೆಗೆ ಮುತ್ತಿಗೆ ಹಾಕಿ ಪೊಲೀಸರ ಮೇಲೆ ಹಲ್ಲೆ ನಡೆಸಿದರು. ಈ ರಾಜ್ಯದ ಪರಿಸ್ಥಿತಿ ಸರಿಯಿಲ್ಲ. ನಮ್ಮ ದೇಶಕ್ಕೆ ಸ್ವಾತಂತ್ರ‍್ಯ ಬಂದ ಬಳಿಕ ನಮ್ಮ ಪೂರ್ವಜರು ಸಂವಿಧಾನದ ಆಶಯಕ್ಕೆ ಅನುಗುಣವಾಗಿ ಅಧಿಕಾರ ನಡೆಸಿದ್ದಾರೆ. ಪೊಲೀಸ್ ಠಾಣೆ ಮೇಲೆ ಅಟ್ಯಾಕ್, ಪೊಲೀಸರ ಮೇಲೆ ದೌರ್ಜನ್ಯ ನಡೆಸಿದವರನ್ನು ಎಂದೂ ಬಿಟ್ಟಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ದೇವರಾಜ್ ಅರಸುರವರ ದಾಖಲೆ ಸರಿಗಟ್ಟುತ್ತಾರೆ: ಕೆಎನ್ ರಾಜಣ್ಣ

ಇಂದು ಗೂಂಡಗಳು, ಕೋಮುವಾದಿ ಗಲಬೆ ಹುಟ್ಟಿಸಿ, ಶಾಂತಿ ಕದಡುವವರಿಗೆ ಪ್ರೋತ್ಸಾಹಿಸುವ ಸರ್ಕಾರ ಅಧಿಕಾರದಲ್ಲಿದೆ ಇದನ್ನು ಖಂಡಿಸುತ್ತೇನೆ. ಎಂಟು ದಿನಗಳ ಬಳಿಕ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ತೆರಳಿ ಸಭೆ ನಡೆಸಿದ್ದಾರೆ. ಯಾರನ್ನು ಬಿಡಲ್ಲವೆಂದು ಕೆಲವು ಪದಗಳನ್ನು ಬಳಸಿದ್ದಾರೆ. ರಾಜ್ಯದ ಗೃಹಮಂತ್ರಿ, ಡಿಸಿಎಂ, ಸಿಎಂ ಯಾರನ್ನು ಬಿಡಲ್ಲವೆಂದು ಹೇಳಿದ್ದಾರೆ. ಯಾರನ್ನು ಬಿಡಲ್ಲ ಅನ್ನೋದನ್ನು ಸಾಬೀತು ಮಾಡಿ ತೋರಿಸಬೇಕು. ಎಫ್‌ಐಆರ್‌ನಲ್ಲಿ ಸಾವಿರ ಮಂದಿ ಇದ್ದರು ಎಂಬ ಅಂಶವಿದೆ. ಸಿಸಿಟಿವಿಯಲ್ಲಿ ರೆಕಾರ್ಡ್, ಮೀಡಿಯಾ ಕ್ಯಾಮೆರಾಗಳಲ್ಲಿ 1,000 ಮಂದಿ ಇರೋದು ಸೆರೆಯಾಗಿದೆ, ಪತ್ರಿಕೆಗಳಲ್ಲಿ ವರದಿಯಾಗಿದೆ. ತಿಣುಕಾಡಿ 13 ಮಂದಿ ಬಂಧಿಸಿರುವ ನಿಮಗೆ ನಾಚಿಕೆಯಾಗಬೇಕು ಎಂದು ಗುಡುಗಿದರು. ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಅನುಮತಿ ಕೊಡಿ ಅಂತ ನಾನೇ ಕೇಂದ್ರಕ್ಕೆ ಪತ್ರ ಬರೆದಿದ್ದೇನೆ: ಹೆಚ್‌ಡಿಡಿ

ಇನ್ನು 1,000 ಮಂದಿ ನಡೆಸಿದ ಗಲಾಟೆಯಲ್ಲಿ ಜೈಲು ತುಂಬುವಷ್ಟು ಜನರನ್ನು ಬಂದಿಸಬೇಕಿತ್ತು. ಆಡಳಿತ ನಡೆಸಲು ಸರ್ಕಾರಕ್ಕೆ ಯೋಗ್ಯತೆ ಇಲ್ಲ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ಸಾರ್ವಜನಿಕರ ಬಳಿ ಕ್ಷಮೆಯಾಚಿಸುವಂತೆ ಆಗ್ರಹಿದರು. ಇದನ್ನೂ ಓದಿ: ಗೋದಾವರಿ-ಕೃಷ್ಣ-ಕಾವೇರಿ ಯೋಜನೆಯಲ್ಲಿ ಕರ್ನಾಟಕಕ್ಕೆ 25 TMC ನೀರು ಕೊಡಬೇಕು: ಹೆಚ್.ಡಿ.ದೇವೇಗೌಡ

TAGGED:Chitradurgacongressgovinda karajolasiddaramaiahಕಾಂಗ್ರೆಸ್ಗೋವಿಂದ ಕಾರಜೋಳಚಿತ್ರದುರ್ಗಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

MS Dhoni
Cricket

CSK ಫ್ಯಾನ್ಸ್‌ಗೆ ಶಾಕ್‌ – ಐಪಿಎಲ್ 2026ರ ಮೊದಲೆರಡು ವಾರಗಳಲ್ಲಿ ಧೋನಿ ಆಡೋದು ಡೌಟ್

Public TV
By Public TV
6 minutes ago
NAMMA METRO 4
Bengaluru City

IPL ಪಂದ್ಯದ ದಿನ ತಡರಾತ್ರಿ 2ರವರೆಗೆ ಸಂಚಾರ ಅವಧಿ ವಿಸ್ತರಿಸಿದ ʻನಮ್ಮ ಮೆಟ್ರೋʼ

Public TV
By Public TV
1 hour ago
Bengaluru Police
Bengaluru City

ಬೆಂಗಳೂರಿಂದ ತಿರುಪತಿಗೆ ಹೋರಟಿದ್ದ ಕಾರು ಅಪಘಾತ; ಅಪ್ಪ-ಅಮ್ಮ, 4 ವರ್ಷದ ಮಗು ಸ್ಥಳದಲ್ಲೇ ಸಾವು

Public TV
By Public TV
1 hour ago
Udupi Fishing 2
Districts

ಮೀನುಗಾರಿಕೆಗೂ ತಟ್ಟಿದ ಮಧ್ಯಪ್ರಾಚ್ಯ ಯುದ್ಧದ ಬಿಸಿ; ಇಂಧನ ಸಂಕಷ್ಟ, ಆಳ ಸಮುದ್ರ ಮೀನುಗಾರಿಕೆಗೆ ಆತಂಕ

Public TV
By Public TV
1 hour ago
Petrol Bunk 4
Bengaluru City

ಬೆಂಗಳೂರಿನಲ್ಲಿ ಪೆಟ್ರೋಲ್ ಅಭಾವ ವದಂತಿ – ಬಾಟಲ್‌, ಕ್ಯಾನ್‌ ಹಿಡಿದು ಬಂಕ್‌ಗಳಿಗೆ ಮುಗಿಬಿದ್ದ ಜನ

Public TV
By Public TV
2 hours ago
Gangavathi Inscription
Districts

ಗಂಗಾವತಿಯಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ಶಿಲಾಶಾಸನ ಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?