Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಲ್ಲ ಭಾಗ್ಯಗಳನ್ನು ಹಿಂಪಡೆದು ಮೂರು ನಾಮ ಹಾಕಲು ಸಿದ್ಧತೆ – ಗೊಂದಲ, ಘರ್ಷಣೆ ತಪ್ಪಿಸಿ: ಅಶ್ವತ್ಥ ನಾರಾಯಣ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎಲ್ಲ ಭಾಗ್ಯಗಳನ್ನು ಹಿಂಪಡೆದು ಮೂರು ನಾಮ ಹಾಕಲು ಸಿದ್ಧತೆ – ಗೊಂದಲ, ಘರ್ಷಣೆ ತಪ್ಪಿಸಿ: ಅಶ್ವತ್ಥ ನಾರಾಯಣ್

Bengaluru City

ಎಲ್ಲ ಭಾಗ್ಯಗಳನ್ನು ಹಿಂಪಡೆದು ಮೂರು ನಾಮ ಹಾಕಲು ಸಿದ್ಧತೆ – ಗೊಂದಲ, ಘರ್ಷಣೆ ತಪ್ಪಿಸಿ: ಅಶ್ವತ್ಥ ನಾರಾಯಣ್

Public TV
Last updated: October 4, 2025 4:35 pm
Public TV
Share
2 Min Read
Ashwath Narayana
SHARE

ಬೆಂಗಳೂರು: ಕಾಂಗ್ರೆಸ್ ನಾಯಕರು ಅಭಿವೃದ್ಧಿ ಮರೆತು, ಮತಗಳವು, ಸಮಾಜದಲ್ಲಿ ಗೊಂದಲ ನಿರ್ಮಾಣ ಕೆಲಸದಲ್ಲಿ ತೊಡಗಿದ್ದಾರೆ ಎಂದು ಶಾಸಕ ಡಾ‌. ಸಿ.ಎನ್.ಅಶ್ವಥ್ ನಾರಾಯಣ ವಾಗ್ದಾಳಿ ನಡೆಸಿದರು.

ಬೆಂಗಳೂರಿನಲ್ಲಿ ಮಾತಾಡಿದ ಅಶ್ವಥ್‌ ನಾರಾಯಣ್, ರಣದೀಪ್ ಸುರ್ಜೇವಾಲಾ ಅವರು ಮತಗಳ್ಳತನದ ವಿಷಯ ಬಿಟ್ಟು ‌’ಐ ಲವ್ ಮೊಹಮ್ಮದ್’ ಆಗುವುದನ್ನು ಹೋಗಿ ನೋಡಬೇಕು. ಐ ಲವ್ ಮೊಹಮ್ಮದ್‌ ನಡೆಸುವ ವ್ಯಕ್ತಿಗಳ ವಿರುದ್ಧ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಸಮಾಜ ಉರಿದು ಹೋಗುತ್ತಿದೆ. ಇದರ ಬಗ್ಗೆ ಗಮನಿಸುವ ಬದಲು ಸರ್ಕಾರ, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು, ಮಂತ್ರಿಗಳು ಏನು ಮಾಡಲು ಹೊರಟಿದ್ದೀರಿ? ಒಳ್ಳೆಯದಂತೂ ಮಾಡುತ್ತಿಲ್ಲ, ಅಭಿವೃದ್ಧಿ ಮಾಡುವುದಿಲ್ಲ, ಆಡಳಿತ ಮಾಡುತ್ತಿಲ್ಲ, ಗುಣಮಟ್ಟದ ಶಿಕ್ಷಣ ಕೊಡುವುದಿಲ್ಲ, ಮನೆ – ನೀರು ಕೊಡುವುದಿಲ್ಲ ಎಂದು ದೂರಿದರು. ನೀವು ಬಾಯಿಗೆ ಮಣ್ಣು ಹಾಕುತ್ತೀರಿ ಎಂದು ಟೀಕಿಸಿದರು. ಗೃಹ ಸಚಿವರೇ ನೀವೇನಾದರೂ ಎಚ್ಚರವಿದ್ದರೆ ಕ್ರಮ ಕೈಗೊಳ್ಳಿ. ನೀವು ಮುಖ್ಯಮಂತ್ರಿ ಲೋಕದಲ್ಲಿದ್ದೀರಿ. ಜನರು ಇಂಥ ಗೊಂದಲಗಳ ನಡುವೆ ಘರ್ಷಣೆಗಳಲ್ಲಿ ಸಿಲುಕುವುದು ಬೇಡ ಎಂದು ತಿಳಿಸಿದರು.

ಐ ಲವ್ ಮೊಹಮ್ಮದ್ ಎಂಬ ಮೆರವಣಿಗೆಯನ್ನು ಯಾಕೆ ಮಾಡುತ್ತಿದ್ದಾರೆ? ಇದರ ಹಿಂದೆ ಇರುವವರು ಯಾರು ಎಂದು ಪ್ರಶ್ನಿಸಿದರು. ಸಮಾಜದಲ್ಲಿ ಈ ರೀತಿ ಕೋಮುಗಲಭೆ ಮಾಡಲು, ಪ್ರಚೋದಿಸಲು, ಸಮಾಜದಲ್ಲಿ ಶಾಂತಿ ಇರಬಾರದು, ಗಲಭೆ ಹುಟ್ಟುಹಾಕಬೇಕೆಂಬ ದುರುದ್ದೇಶದಿಂದ ಮಾಡುತ್ತಿರುವ ಪ್ರಯತ್ನ ಇದು. ಈ ಮುಂಚೆಯೂ ಮೆರವಣಿಗೆ ಪ್ರಾರಂಭ ಆಗುವ ಮೊದಲು ಐ ಲವ್ ಮೊಹಮ್ಮದ್ ಪೋಸ್ಟರ್‌ಗಳಿಂದ ಪ್ರಾರಂಭವಾಗಿದೆ ಎಂದು ತಿಳಿಸಿದರು.

ಸರ್ಕಾರವಂತೂ ನಿಷ್ಕ್ರಿಯವಾಗಿದೆ. ಇದರ ಬಗ್ಗೆ ಕ್ರಮ ವಹಿಸುತ್ತಿಲ್ಲ. ಬೇಹುಗಾರಿಕೆ ನಿಷ್ಕ್ರಿಯವಾಗಿದ್ದು, ಇದಕ್ಕೆ ಕುಮ್ಮಕ್ಕು ಕೊಡುವ ಕೆಲಸ ಸರ್ಕಾರದಿಂದ ನಡೆಯುತ್ತಿದೆ ಎಂದರಲ್ಲದೇ, ಇದಕ್ಕೆ ಪ್ರತಿಕ್ರಿಯೆ ಕೊಡದಿರಿ ಎಂದು ಸಮಾಜಕ್ಕೆ ಮನವಿ ಮಾಡಿದರು.

ರಾಜ್ಯಕ್ಕೆ ಜಾತಿಗಣತಿ ಅಧಿಕಾರ ಇದೆಯೇ?
ಇವರಿಗೆ ಏನು ಕೊಟ್ಟರೂ ತೃಪ್ತಿ ಇಲ್ಲ. ಯಾರೂ ಸಮಾಧಾನದಿಂದ ನೆಮ್ಮದಿಯಿಂದ ಬಾಳಬಾರದು ಎಂಬುದೇ ಸ್ಪಷ್ಟ ಉದ್ದೇಶ. ಕೇಂದ್ರ ಸರ್ಕಾರ ಜಾತಿಗಣತಿ ಮಾಡುತ್ತದೆಯಲ್ಲವೇ? ಜಾತಿಗಣತಿ ಮಾಡಲು ಯಾರಿಗೆ ಅಧಿಕಾರ ಇದೆ? ರಾಜ್ಯಕ್ಕೆ ಅಧಿಕಾರ ಇದೆಯೇ ಎಂದು ಡಾ.ಸಿ.ಎನ್.ಅಶ್ವತ್ಥನಾರಾಯಣ್ ಪ್ರಶ್ನಿಸಿದರು. ಇದು ಕಡ್ಡಾಯವಲ್ಲ ಎಂದು ಹೈಕೋರ್ಟ್ ತಿಳಿಸಿದೆ. ಇದು ಪರಿಪೂರ್ಣ ಗಣತಿ ಆಗಲು ಸಾಧ್ಯವೇ ಎಂದು ಕೇಳಿದರು. ಜನರು ಇದರಲ್ಲಿ ಭಾಗವಹಿಸಬೇಕೆಂದು ತಿಳಿಸುವುದಾಗಿ ಹೇಳಿದರು.

ಬಿಪಿಎಲ್ ಕಾರ್ಡ್ ರದ್ದು ಮಾಡುವ ಮಹಾನುಭಾವರು ಯಾರು? ಮಾಡಿಸಿದ ಆದಾಯ ದೃಢಪತ್ರ ಪಡೆಯುವ ಸರ್ಕಾರದಲ್ಲಿ ಇರುವವರು ಯಾರು? ಸರ್ಕಾರ ಎಲ್ಲ ಭಾಗ್ಯಗಳನ್ನು ಹಿಂಪಡೆದು ಮೂರು ನಾಮ ಹಾಕಲು ಸಿದ್ಧವಾಗಿದೆ. ಈ ಗಣತಿ, ಈ ಸರ್ವೇ ನಮ್ಮ ದೌರ್ಭಾಗ್ಯ ಆಗಲಿದೆ ಎಂಬ ಆತಂಕ ವ್ಯಕ್ತವಾಗಿದೆ. ಜನಕಲ್ಯಾಣ ಯೋಜನೆಗಳನ್ನು ಹಿಂಪಡೆಯುವ ಹುನ್ನಾರ ಇದರ ಹಿಂದಿದೆ ಎಂದು ಆರೋಪಿಸಿದರು.

ಸಮಾಜ ಒಡೆಯುವವರು, ದೇಶ ಒಡೆಯುವ ಕೆಲಸವನ್ನು ಅಥವಾ ತುಷ್ಟೀಕರಣ ರಾಜಕೀಯ, ಜಾತಿ ಜಾತಿಗಳ ನಡುವೆ ಎತ್ತಿ ಕಟ್ಟುವ ಕೆಲಸ, ಭಾಷೆಗಳ ಮೇಲೆ ಎತ್ತಿ ಕಟ್ಟುವವರು ಇದ್ದಾರೆ. ಒಂದೆಡೆ ವಿವಿಧತೆಯಲ್ಲಿ ಏಕತೆ ಎನ್ನುತ್ತಾರೆ. ಇನ್ನೊಂದೆಡೆ ವಿವಿಧತೆಯಲ್ಲಿ ವಿವಿಧತೆ ಮಾಡುವವರಿದ್ದಾರೆ ಎಂದು ಆಕ್ಷೇಪಿಸಿದರು. ಅಂಥ ಮಹಾನುಭಾವರೇ ಕಾಂಗ್ರೆಸ್ಸಿಗರು ಎಂದು ದೂರಿದರು.

TAGGED:bengaluruC. N. Ashwath Narayancongress govtಕಾಂಗ್ರೆಸ್ಬಿಜೆಪಿಬೆಂಗಳೂರುಸಿ.ಎನ್.ಅಶ್ವಥ್‌ ನಾರಾಯಣ್
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

HD Kumaraswamy
Districts

ಆಟೋ ಚಾಲಕರಿಗೆ ಸರ್ಕಾರ ಮಾಸಿಕ 15 ಸಾವಿರ ನೀಡಿ 6ನೇ ಗ್ಯಾರಂಟಿ ಘೋಷಣೆ ಮಾಡಬೇಕು: ಹೆಚ್‌ಡಿಕೆ

Public TV
By Public TV
7 minutes ago
D.K Shivakumar
Bagalkot

ಗ್ಯಾಸ್‌ ಸಮಸ್ಯೆ – ನಮ್ಮ ಕೈಯಲ್ಲಿ ಏನೂ ಇಲ್ಲ, ಕೇಂದ್ರ ಮುನ್ನೆಚ್ಚರಿಕೆ ವಹಿಸಬೇಕಿತ್ತು: ಡಿಕೆಶಿ

Public TV
By Public TV
42 minutes ago
monkey
Districts

ಪ್ರವಾಸಿಗರು, ಭಕ್ತರ ಮೇಲೆ ದಾಳಿ ಮಾಡಿದ ವಾನರ ಸೇನೆ – 15ಕ್ಕೂ ಹೆಚ್ಚು ಜನರಿಗೆ ತೀವ್ರ ಗಾಯ

Public TV
By Public TV
48 minutes ago
Strait of Hormuz Indian Ship
Latest

ಹಾರ್ಮುಜ್ ಜಲಸಂಧಿ ದಾಟಿದ ಭಾರತದ 8ನೇ ಹಡಗು

Public TV
By Public TV
51 minutes ago
Cyber Crime
Crime

ಸೈಬರ್ ವಂಚಕರ ಹೊಸ ಗೇಮ್ ಪ್ಲಾನ್ – ಮ್ಯಾರಥಾನ್ ಹೆಸರಲ್ಲಿ ಅಕೌಂಟ್‌ನ ಹಣಕ್ಕೆ ಕನ್ನ ಹಾಕಲು ಯತ್ನ

Public TV
By Public TV
2 hours ago
Telangana Man Kills Pregnant Wife
Crime

ಗಂಡು ಮಗು ಆಗ್ಲಿಲ್ಲ ಅಂತ ಗರ್ಭಿಣಿ ಪತ್ನಿ, ಇಬ್ಬರು ಹೆಣ್ಣುಮಕ್ಕಳ ಹತ್ಯೆಗೈದ ಪಾಪಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?