Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧರ್ಮಸ್ಥಳ ಷಡ್ಯಂತ್ರ ಕೇಸನ್ನ ರಾಜ್ಯ ಸರ್ಕಾರವೇ NIA ಗೆ ಕೊಡಬೇಕು: ಆರ್‌.ಅಶೋಕ್‌ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಧರ್ಮಸ್ಥಳ ಷಡ್ಯಂತ್ರ ಕೇಸನ್ನ ರಾಜ್ಯ ಸರ್ಕಾರವೇ NIA ಗೆ ಕೊಡಬೇಕು: ಆರ್‌.ಅಶೋಕ್‌ ಆಗ್ರಹ

Bengaluru City

ಧರ್ಮಸ್ಥಳ ಷಡ್ಯಂತ್ರ ಕೇಸನ್ನ ರಾಜ್ಯ ಸರ್ಕಾರವೇ NIA ಗೆ ಕೊಡಬೇಕು: ಆರ್‌.ಅಶೋಕ್‌ ಆಗ್ರಹ

Public TV
Last updated: August 23, 2025 6:10 pm
Public TV
Share
3 Min Read
R Ashok 1
SHARE

– ಇದು ಮತಾಂತರ ಷಡ್ಯಂತ್ರ, ಇಲ್ಲ ಅಂದ್ರೆ ಸಾಬಿ ಸಮೀರ್ ಯಾಕೆ ಬರ್ತಾನೆ?: ವಿಪಕ್ಷ ನಾಯಕ ಪ್ರಶ್ನೆ

ಬೆಂಗಳೂರು: ಧರ್ಮಸ್ಥಳ ಷಡ್ಯಂತ್ರ ಕೇಸನ್ನ ರಾಜ್ಯ ಸರ್ಕಾರವೇ NIA ಗೆ ಕೊಡಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ (R.Ashok) ಸರ್ಕಾರವನ್ನ ಆಗ್ರಹಿಸಿದರು.

ಮಾಸ್ಕ್ ಮ್ಯಾನ್ ಬಂಧನ, ಸುಜಾತ ಭಟ್ ಹೇಳಿಕೆ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳ ಕೇಸ್ ಮೊದಲಿನಿಂದ ಷಡ್ಯಂತ್ರ ಅಂತ ನಾವು ಹೇಳಿದ್ವಿ. ಸರ್ಕಾರ ಅತುರದ ನಿರ್ಧಾರ ಮಾಡಿತು. ದೂರು ಕೊಟ್ಟವನ ಪೂರ್ವ ಪರಿತೆ ನೋಡದೆ, ಯೋಚನೆ ಮಾಡದೇ ಸಿಎಂ ಜೊತೆ ಇರುವ ಪ್ರಗತಿಪರರ ಮಾತು ಕೇಳಿ SIT ಮಾಡಿದ್ರು. SIT ತನಿಖೆಯಿಂದ ಬುರುಡೆ ಬಂತು ಅಷ್ಟೆ. ಸಿಎಂ ಕಾಮನ್‌ಸೆನ್ಸ್ ಉಪಯೋಗ ಮಾಡಬೇಕಿತ್ತು. ಧರ್ಮಸ್ಥಳದ ಭಕ್ತರ ಭಾವನೆಗೆ ನೋವು ಆಗಿದೆ. ಇದನ್ನ ಸಿದ್ದರಾಮಯ್ಯ ವಾಪಸ್ ಕೋಡೊಕೆ ಆಗುತ್ತಾ? ಈ ಸರ್ಕಾರದ್ದು ತಪ್ಪು ಅಂತ ಆಯ್ತು. ಮಾಸ್ಕ್ ಮ್ಯಾನ್ ಬಗ್ಗೆ ಮೊದಲೇ ತನಿಖೆ ಮಾಡಿದ್ರೆ ಮುಗಿದು ಹೋಗ್ತಿತ್ತು ಎಂದು ಸರ್ಕಾರದ ನಡೆ ಖಂಡಿಸಿದರು. ಇದನ್ನೂ ಓದಿ: ಇದು ಅಣ್ಣಪ್ಪ ಸ್ವಾಮಿಯ ಸತ್ಯ ದರ್ಶನ – ಹೆಗ್ಗಡೆ ಮಾತು ಮತ್ತೆ ವೈರಲ್

Dharmasthala Mass Burial Case 6 locals likely to come forward on behalf of the witness

ಅನನ್ಯ ಭಟ್ ಕೇಸ್ ಕೂಡಾ ಸುಳ್ಳು ಅಂತ ಗೊತ್ತಾಗಿದೆ. ಎಲ್ಲರೂ ದುಡ್ಡು ತಗೊಂಡು ಮಾಡಿದ್ದಾರೆ. ಮಾಸ್ಕ್ ಮ್ಯಾನ್ ಹಿಂದೆ ಇರೋನು ಸಮೀರ್. ಸಮೀರ್ ಸೂತ್ರಧಾರ. ಎಲ್ಲರನ್ನೂ ಜೊತೆಗಾರ ಮಾಡಿಕೊಳ್ತಾನೆ. ಪ್ರಗತಿಪರರ ಟೀಂ ಸೆಟಪ್ ಮಾಡಿಕೊಳ್ತಾನೆ. ಡ್ರಾಮಾ ಮಾಡೋಕೆ ಮಾಸ್ಕ್ ಮ್ಯಾನ್, ಅನನ್ಯ ಭಟ್ ಹುಡುಕುತ್ತಾರೆ. ತನಿಖೆ ಹೇಗೆ ಮಾಡಬೇಕು ಅಂತ ಅದನ್ನು ಇವರೇ ನಿರ್ಧಾರ ಮಾಡ್ತಾರೆ. ಭದ್ರತೆ ಕೊಡಬೇಕು ಅಂತ ಹೇಳ್ತಾರೆ. 25 ದಿನ ಸಿಎಂಗೂ ಇಷ್ಟು ಸೆಕ್ಯುರಿಟಿ ಇರಲಿಲ್ಲ. ಮಾಸ್ಕ್ ಮ್ಯಾನ್‌ಗೆ ಇತ್ತು. ಸಿಎಂಗಿಂತ ಹೈ ಸೆಕ್ಯುರಿಟಿ ಕೊಟ್ರು. ಯಾಕೆ ಕೊಟ್ರು? ಮಂಜುನಾಥನನ್ನ ಅವಹೇಳನ ಮಾಡಬೇಕು ಅನ್ನೋದು ಇವರ ಷಡ್ಯಂತ್ರ. ಇದು ಮತಾಂತರ ಷಡ್ಯಂತ್ರ. ಇಲ್ಲ ಅಂದರೆ ಸಾಬಿ ಸಮೀರ್ ಯಾಕೆ ಬರ್ತಾನೆ? ಧರ್ಮಸ್ಥಳದ ಬಗ್ಗೆ ಕೇಳೋಕೆ ಇವರು ಯಾರು ಅಂತ ಕಿಡಿಕಾರಿದರು.

ಅನೇಕ ಕಡೆ ಮಸೀದಿ ಮೇಲೆ ದೂರು ಬಂದಿದೆ. ಯಾವುದಾದ್ರು ಮಸೀದಿ ಅಗೆದ್ರಾ? ಹಿಂದೂಗಳು ಟಾರ್ಗೆಟ್ ಮಾಡಬೇಕು. ಇದು ಸಿಎಂ, ಸಿಎಂ ಸಂಪುಟದ ಕೆಲಸ. ಡಿಕೆ ವೋಟ್‌ಬ್ಯಾಂಕ್‌ಗೆ ಮಾತಾಡ್ತಿದ್ದಾರೆ ಅಷ್ಟೆ. ಇಷ್ಟೆಲ್ಲಾ ಕೇಸ್ ಆಗೋಕೆ ಸಿಎಂ ಕಾರಣ. ಪೊಲೀಸರ ಕೆಲಸ ಬಿಟ್ಟು ಬುರುಡೆ ಹುಡುಕೋಕೆ ಬಿಟ್ರಿ. ತನಿಖೆಗೆ ಕೋಟ್ಯಂತರ ರೂಪಾಯಿ ಖರ್ಚು ಆಗಿದೆ. ಯಾರ್ ಕೊಡ್ತಾರೆ. ಬೆಟ್ಟ ಅಗೆದು ಇಲಿಯೂ ಸಿಗಲಿಲ್ಲ. ಕರ್ನಾಟಕದ ಇತಿಹಾಸದಲ್ಲಿ ಇಂತಹ ಪ್ರಹಸನ ಅಗಿರಲಿಲ್ಲ. ಕಾಂಗ್ರೆಸ್ ಪಕ್ಷ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಮುಸುಕುಧಾರಿ ಮುಖ್ಯ ಅಲ್ಲ, ಇದರ ಹಿಂದೆ ಇರೋರು ಯಾರು ಅಂತ ತನಿಖೆ ಆಗ್ಬೇಕು: ಅಶೋಕ್

Dharmasthala Mass Burial Case

ಬಿಜೆಪಿ ಅವರು ಮೊದಲು ಮಾತಾಡಿಲ್ಲ ಅಂದರು‌‌. ನಾನೇ ಮಾತಾಡಿದ್ದೆ ಮೈಸೂರಿನಲ್ಲಿ. ತನಿಖೆ ಮಾಡಿ ಇದು ಷಡ್ಯಂತ್ರ ಅಂತ ಹೇಳಿದ್ದೆ. ಬಿಜೆಪಿ ಹೋರಾಟ ಮಾಡಿರಲಿಲ್ಲ ಅಂದರೆ ಬುರುಡೆ ತಂದು ಇದೇ ನಿಜ ಅಂತ ಮಾಡೋರು. ನಾವು ಹೋರಾಟ ಮಾಡಿದ್ದಕ್ಕೆ ಇದು ಇಲ್ಲಿಗೆ ಬಂದು ನಿಂತಿದೆ. ಧರ್ಮಸ್ಥಳಕ್ಕೆ ಕಾಂಗ್ರೆಸ್ ಪಕ್ಷ ಮೋಸ ಮಾಡಿದೆ. ಮಾಸ್ಕ್ ಮ್ಯಾನ್ ಬಗ್ಗೆ ಅಸೆಂಬ್ಲಿಯಲ್ಲಿ ನಾನು ಹೇಳಿದ್ದೆ. ಅವನಿಗೆ ಅಮಿಷ ಒಡ್ಡಿದ್ದಾರೆ ಅಂತ. ಈಗ ಬಂಧನ ಆಗಿದೆ. ಮಾಸ್ಕ್ ಮ್ಯಾನ್ ‌ನೋಡಿದ್ರೆ ಪಾಪ ಅನ್ನಿಸುತ್ತೆ. ಮುಸುಕುಧಾರಿ ಮುಖ್ಯ ಅಲ್ಲ. ಇದರ ಹಿಂದೆ ಇರೋರು ಯಾರು ಅಂತ ತನಿಖೆ ಆಗಬೇಕು. ಇವರ ಹಿಂದೆ ಯಾರು ಇದ್ದಾರೆ ಅಂತ ತಿಳಿಯೋಕೆ SIT ಮಾಡಿ. ಕಾಂಗ್ರೆಸ್, ಸಿದ್ದರಾಮಯ್ಯ, ಡಿಕೆಶಿಗೆ ಸತ್ಯ ಹೊರ ಬರೋ ಮನಸು ಇದ್ದರೆ SIT ತನಿಖೆ ಮಾಡಿ. NIA ತನಿಖೆಗೆ ಕೊಡಿ ಎಂದು ಒತ್ತಾಯಿಸಿದರು.

ಇವರು NIA ಗೆ ಕೊಡಲಿಲ್ಲ ಅಂದರೆ ಕಾಂಗ್ರೆಸ್ ಪಾತ್ರ ಇದೆ ಅಂತ ಗೊತ್ತಾಗುತ್ತದೆ. ಅನನ್ಯ ಭಟ್ ಕಳೆದು ಹೋಗಿದ್ದಾಳೆ ಅಂತ ತನಿಖೆ ಮಾಡಿದ್ರೆ ಗೊತ್ತಾಗೋದು. ಪೊಲೀಸರು ತನಿಖೆ ಮಾಡಿಲ್ಲ. ಈ ಸರ್ಕಾರ ಪೊಲೀಸರ ಕೈ ಕಟ್ಟಿ ಹಾಕಿದ್ರು. ಕೇವಲ ಬುರುಡೆ ಹುಡುಕಿ ಅಂತ ಬಿಟ್ಟಿದ್ರು. ಬಂಧನ ಮಾಡಿದ್ರೆ ಸಾಲದು, ಇದರ ಹಿಂದೆ ಇರೋರ ಬಯಲಿಗೆ ಎಳೆಯಬೇಕು. ಈ ದೇಶದಲ್ಲಿ ಇರೋನು ಮಾಡಿರೋದಾ? ಬೇರೆ ದೇಶದಲ್ಲಿ ಇರೋನು ಮಾಡಿರೋದಾ? ತನಿಖೆ ಆಗಲಿ. ಇದು ಲವ್ ಜಿಹಾದ್ ತರಹ ಮತಾಂತರ ಜಿಹಾದ್. SIT ಆಗಲಿ ಇಲ್ಲ. NIA ತನಿಖೆಗೆ ಕೊಡಿ. ರಾಜ್ಯ ಸರ್ಕಾರವೇ NIA ಗೆ ಕೊಟ್ಟು ಬಿಡಲಿ ಎಂದು ಆಗ್ರಹಿಸಿದರು. ಇದನ್ನೂ ಓದಿ: ತಮಿಳುನಾಡಿನಲ್ಲಿ ಹಣದ ಆಮಿಷವೊಡ್ಡಿ ಧರ್ಮಸ್ಥಳಕ್ಕೆ ಕರೆಸಿದ್ದರು: ಸತ್ಯ ಕಕ್ಕಿದ ಚಿನ್ನಯ್ಯ

TAGGED:Dharmasthala CaseNIAr ashoksitಆರ್‌.ಅಶೋಕ್‌ಎನ್‍ಐಎಎಸ್‍ಐಟಿಧರ್ಮಸ್ಥಳ ಪ್ರಕರಣ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Bagalkote 4
Bagalkot

ಬಾಗಲಕೋಟೆ | ಕಲ್ಲು ತೂರಾಟ ನಡೆದ ಮಸೀದಿ ಎದುರೇ ಮತ್ತೆ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

Public TV
By Public TV
3 hours ago
Ahmedabad Modi Stadium
Cricket

ಸತತ 13 ಪಂದ್ಯ ಗೆಲ್ಲುವ ಕನಸು ಭಗ್ನ – ಸೋತರೂ ಮೊದಲ ಸ್ಥಾನದಲ್ಲಿದೆ ಭಾರತ

Public TV
By Public TV
3 hours ago
Ind vs Sa 2
Cricket

ಕಳಪೆ ಬೌಲಿಂಗ್‌, ಬ್ಯಾಟಿಂಗ್‌ಗೆ ಬೆಲೆತೆತ್ತ ಭಾರತ – ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು

Public TV
By Public TV
3 hours ago
suspicions about his pregnant wife
Bengaluru City

ಹೆರಿಗೆ ನಂತರ ಮನೆಗೆ ಬಂದ ಪತ್ನಿಯನ್ನು ಹೊರ ಹಾಕಿದ ಪತಿ ವಿರುದ್ಧ ಕೇಸ್‌

Public TV
By Public TV
4 hours ago
Jasprit Bumrah 2
Cricket

ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಬೂಮ್​ ಬೂಮ್​ ಬೂಮ್ರಾ

Public TV
By Public TV
5 hours ago
Daughter in law prays to God for mother in law to die Raibag Temple 1
Belgaum

ಅತ್ತೆ ಸಾಯಲಿ ಎಂದು ದೇವರ ಮುಂದೆ ಸೊಸೆಯಿಂದ ಪ್ರಾರ್ಥನೆ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?