ನವದೆಹಲಿ: ರೈತರ ‘ದೆಹಲಿ ಚಲೋ’ ಆಂದೋಲನದ ನಡುವೆಯೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಲೋಕಸಭಾ ಚುನಾವಣೆಯನ್ನು ಗುರುಯಾಗಿಸಿಕೊಂಡು ತಮ್ಮ ಮೊದಲ ಗ್ಯಾರಂಟಿಯನ್ನು ಘೋಷಣೆ ಮಾಡಿದ್ದಾರೆ.
ಛತ್ತೀಸ್ಗಢದ ಅಂಬಿಕಾಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರ `ಭಾರತ್ ಜೋಡೋ ನ್ಯಾಯ್ ಯಾತ್ರೆ’ ವೇಳೆ ಮಾತನಾಡಿದ ಖರ್ಗೆ, ಲೋಕಸಭಾ ಚುನಾವಣೆಯ ನಂತರ ಕಾಂಗ್ರೆಸ್ (Congress) ಪಕ್ಷವು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ರೈತರ ಬೇಡಿಕೆಗಳಲ್ಲಿ ಒಂದಾದ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (MSP-Minimum Support Price) ಖಾತರಿಪಡಿಸುವ ಕಾನೂನು ಜಾರಿಗೆ ತರುವುದಾಗಿ ಘೋಷಣೆ ಮಾಡಿದರು. ಅಲ್ಲದೆ ಇದು ನಮ್ಮ ಮೊದಲ ಭರವಸೆ ಎಂದು ಹೇಳಿದರು.
- Advertisement -
- Advertisement -
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಜನರು ಮೋದಿಯವರ “ಗ್ಯಾರಂಟಿ”ಗಳನ್ನು ನಂಬಬಾರದು ಎಂದು ಕರೆ ನೀಡಿದರು. ಇದನ್ನೂ ಓದಿ: ರೈತರ ಪ್ರತಿಭಟನೆ- 1ಕಿ.ಮೀ ಸಾಗಲು ಬರೋಬ್ಬರಿ ಒಂದು ಗಂಟೆ ಕಾದ ವಾಹನಗಳು
- Advertisement -
ಪ್ರಧಾನಿ ಮೋದಿಗೆ (Narendra Modi) ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಮತ್ತು ಅವರು ತಮಗಾಗಿ ಮಾತ್ರ ಕೆಲಸ ಮಾಡುತ್ತಾರೆ ಎಂದು ಖರ್ಗೆ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಬಡವರ ಪಕ್ಷವಾದರೆ, ಬಿಜೆಪಿ ಶ್ರೀಮಂತರ ಪಕ್ಷ ಎಂದು ಕಿಡಿಕಾರಿದರು.