Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕಾಂಗ್ರೆಸ್‌ನಿಂದ ರಾಜ್ಯದ ರೈತರಿಗೆ ಆತ್ಮಹತ್ಯೆ ಗ್ಯಾರಂಟಿ: ಬಿ.ಸಿ.ಪಾಟೀಲ್

Public TV
Last updated: October 11, 2023 5:23 pm
Public TV
Share
4 Min Read
BC PATIL
SHARE

ಬೆಂಗಳೂರು: ರಾಜ್ಯದಲ್ಲಿ ರೈತರಿಗೆ ಆತ್ಮಹತ್ಯೆ ಗ್ಯಾರಂಟಿ ನೀಡುವ ಕಾಂಗ್ರೆಸ್ (Congress) ಸರ್ಕಾರವಿದೆ ಎಂದು ರಾಜ್ಯದ ಮಾಜಿ ಸಚಿವ ಬಿ.ಸಿ.ಪಾಟೀಲ್ (BC Patil) ಅವರು ಕಿಡಿಕಾರಿದರು.

ಮಲ್ಲೇಶ್ವರದ (Malleshwaram) ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕದ ಕಾಂಗ್ರೆಸ್ ಸರ್ಕಾರ ರೈತರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಇದರಿಂದ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ವಿದ್ಯುತ್ ಕೊಡಲು ಸಾಧ್ಯವಾಗುತ್ತಿಲ್ಲ. ಲೋಡ್ ಶೆಡ್ಡಿಂಗ್ ಇದೆ. ರಾಜ್ಯದಾದ್ಯಂತ ಬರಗಾಲದ ಛಾಯೆ ಆವರಿಸಿದೆ ಎಂದರು. ಇದನ್ನೂ ಓದಿ: ನಾನು ನನ್ನ ಕ್ಷೇತ್ರದ ಕೆಲಸಕ್ಕಾಗಿ ಯಾರ ಬಳಿ ಬೇಕಾದರೂ ಹೋಗುತ್ತೇನೆ: ಮುನಿರತ್ನ

ಈ ವರ್ಷ ಇದುವರೆಗೂ 11,18,527 ಹೆಕ್ಟೇರ್ ಭೂಮಿಯಲ್ಲಿ ಬೆಳೆ ಹಾನಿ ಸಂಭವಿಸಿದೆ. ಆದರೆ, ಸರ್ಕಾರ ಒಬ್ಬನೇ ಒಬ್ಬ ರೈತರಿಗೆ ಒಂದೇ ಒಂದು ಹೆಕ್ಟೇರ್‌ಗೆ, ಒಂದು ಪೈಸೆ ಪರಿಹಾರವನ್ನೂ ಕೊಟ್ಟಿಲ್ಲ. ಕಳೆದ ವರ್ಷ ನಮ್ಮ ಬಿಜೆಪಿ ಸರ್ಕಾರದ ಅವಧಿಯಲ್ಲಿ 39,74,741 ಹೆಕ್ಟೇರ್ ಭೂಮಿಯಲ್ಲಿ ಅತಿವೃಷ್ಟಿಯಿಂದ ಬೆಳೆ ನಷ್ಟವಾಗಿತ್ತು. ಆಗ ನಾವು ಕೇಂದ್ರದಿಂದ ಬರ ಪರಿಹಾರಕ್ಕಾಗಿ ಕಾಯಲಿಲ್ಲ. ನಿಯಮಾವಳಿ ಪ್ರಕಾರ ಒಂದು ಹೆಕ್ಟೇರ್‌ಗೆ 6,800 ರೂ. ಇದ್ದರೆ, ನಮ್ಮ ಸರ್ಕಾರ 13,600 ರೂ. ಅಂದರೆ ದ್ವಿಗುಣ ಮೊತ್ತದ ಪರಿಹಾರವನ್ನು ಕೊಟ್ಟಿದ್ದೇವೆ. ತೋಟಗಾರಿಕಾ ಬೆಳೆಗೆ 13,000 ರೂ. ಬದಲು 25,000 ರೂ.ಗೆ ಏರಿಸಲಾಗಿತ್ತು ಎಂದು ತಿಳಿಸಿದರು. ಇದನ್ನೂ ಓದಿ: ವರ್ಗಾವಣೆಗಾಗಿ ಶಾಸಕ ಜೆಟಿ ಪಾಟೀಲ್ ಪಿಎ ಬ್ಲ್ಯಾಕ್‌ಮೇಲ್- ದೂರು ದಾಖಲಿಸಿದ ಆರೋಗ್ಯ ಸಚಿವರ ಆಪ್ತ ಕಾರ್ಯದರ್ಶಿ

ನೀರಾವರಿ ಬೆಳೆಗೆ 18,000 ರೂ. ಬದಲು 28,000 ರೂ. ಕೊಟ್ಟಿದ್ದು, ಕಳೆದ ಸಾಲಿನಲ್ಲಿ ಒಟ್ಟು 2,100 ಕೋಟಿ ರೂ. ಅನ್ನು 14,62,841 ರೈತರಿಗೆ ಪರಿಹಾರವಾಗಿ ಕೊಟ್ಟಿದ್ದೇವೆ. ಆಗ ನಾವು ಕೇಂದ್ರ ಸರ್ಕಾರವನ್ನು ಕಾಯುತ್ತ ಕುಳಿತಿರಲಿಲ್ಲ. ನಮ್ಮ ರಾಜ್ಯದ ರೈತರು ಬದುಕಬೇಕು. ರೈತರು ಸಂಕಷ್ಟಕ್ಕೆ, ಅತಿವೃಷ್ಟಿಗೆ ಒಳಗಾಗಿದ್ದಾರೆ, ಬೆಳೆ ಹಾಳಾಗಿದೆ ಎಂದು ಕೂಡಲೇ ನಾವು ಸರ್ವೆ ಪ್ರಾರಂಭಿಸಿ ಅದರ ವರದಿ ಪಡೆದು 48 ಗಂಟೆಯೊಳಗೆ ಪರಿಹಾರವನ್ನು ರೈತರಿಗೆ ವಿತರಿಸಿ ರೈತರನ್ನು ಬದುಕಿಸಿದ್ದೇವೆ. ಅಲ್ಲದೇ ಗರಿಷ್ಠ ಬೆಳೆ ವಿಮೆ ಪರಿಹಾರ ನೀಡಿದ್ದೇವೆ ಎಂದು ಹೇಳಿದರು.

ಇವತ್ತು ರಾಜ್ಯ ಸರ್ಕಾರ ಕೇವಲ ಕೇಂದ್ರದ ಕಡೆ ಬೊಟ್ಟು ಮಾಡುತ್ತಿದೆ. ಕೇಂದ್ರ ಹಣ ಕೊಟ್ಟಿಲ್ಲ. ಕೇಂದ್ರ ಸರ್ಕಾರಕ್ಕೆ ಮನವಿ ಕೊಟ್ಟಿದ್ದೇವೆ ಎನ್ನುತ್ತಿದೆ. ಹಾಗಿದ್ದರೆ ನಿಮ್ಮ ಜವಾಬ್ದಾರಿ ಏನು? ಕೇವಲ ಗ್ಯಾರಂಟಿ ಅನುಷ್ಠಾನವಷ್ಟೇ ನಿಮ್ಮ ಕೆಲಸವೇ? ರಾಜ್ಯದ ರೈತರು ಬದುಕಬೇಕೇ ಅಥವಾ ಬೇಡವೇ ಎಂದು ಪ್ರಶ್ನಿಸಿದರು. ಇದುವರೆಗೆ ಒಬ್ಬರೇ ಒಬ್ಬ ಸಚಿವರು ಒಬ್ಬ ರೈತರ ಹೊಲಕ್ಕೂ ಹೋಗಿಲ್ಲ. ರೈತರ ಬೆಳೆಹಾನಿ ಅಂದಾಜು ಮಾಡಿಲ್ಲ. ಎಷ್ಟು ಬೆಳೆ ನಷ್ಟ ಎಂದು ತಿಳಿಸಿಲ್ಲ. ಸುಮ್ಮನೆ ಊಹಾಪೋಹ ಮಾಡಿ, ಇವರೇ ಲೆಕ್ಕ ಬರೆದುಕೊಂಡು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ ಎನ್ನುತ್ತಿದ್ದಾರೆ. ರಾಜ್ಯ ಸರ್ಕಾರಕ್ಕೆ ರೈತರ ಸಂಬಂಧ ಇಲ್ಲವೇ? ರಾಜ್ಯದ ರೈತರು (Farmers) ನಿಮಗೆ ಮತ ಕೊಟ್ಟಿಲ್ಲವೇ? ಅವರಿಂದಾಗಿ ನೀವು ಅಧಿಕಾರ ಮಾಡುತ್ತಿಲ್ಲವೇ? ರೈತರ ಕುರಿತು ಕಡೆಗಣನೆ ಏಕೆ? ರೈತರ ವಿಷಯದಲ್ಲಿ ಮಲತಾಯಿ ಧೋರಣೆ ಯಾಕೆ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದರು. ಇದನ್ನೂ ಓದಿ: ಸಣ್ಣ ಮಕ್ಕಳ ಹಾಲಿಗೆ 4, ದೊಡ್ಡ ಮಕ್ಕಳ ಕ್ವಾಟರ್‌ಗೆ 40 ರೂ. ಜಾಸ್ತಿ – ಸರ್ಕಾರದ ವಿರುದ್ಧ ಅಶೋಕ್ ಕಿಡಿ

ಕಾಂಗ್ರೆಸ್ ಅವಧಿಯಲ್ಲಿ ಅತಿ ಹೆಚ್ಚು ಆತ್ಮಹತ್ಯೆ:
ಕಾಂಗ್ರೆಸ್ ಸರ್ಕಾರ ಆಡಳಿತ ಇದ್ದಾಗ ಅತಿ ಹೆಚ್ಚು ಆತ್ಮಹತ್ಯೆ ಆಗಿದೆ ಎಂದು ಬಿ.ಸಿ.ಪಾಟೀಲ್ ಅವರು ಅಂಕಿ ಅಂಶಗಳನ್ನು ಮುಂದಿಟ್ಟರು. 2015-16ರಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ಮಾಡುವಾಗ 1,525 ರೈತರು ಆತ್ಮಹತ್ಯೆ ಮಾಡಿಕೊಂಡರೆ, 16-17ರಲ್ಲಿ 1,203 ರೈತರು, 17-18ರಲ್ಲಿ 1,320 ರೈತರು ಆತ್ಮಹತ್ಯೆ ಮಾಡಿಕೊಂಡರು. 18-19ರಲ್ಲಿ ಸರ್ಕಾರ ಬದಲಾಗಿದ್ದು, ಆತ್ಮಹತ್ಯೆ 1,085ಕ್ಕೆ ಇಳಿದಿದೆ. 2019-2020ರಲ್ಲಿ 1,091, 2020-21ರಲ್ಲಿ 855, 2021-22ರಲ್ಲಿ 963 ರೈತರು ಆತ್ಮಹತ್ಯೆ ಮಾಡಿಕೊಂಡರೆ, ಈ ವರ್ಷ ಸೆಪ್ಟೆಂಬರ್ ಅಂತ್ಯದವರೆಗೆ ಈಗಾಗಲೇ 900 ಆತ್ಮಹತ್ಯೆ ಆಗಿದೆ. ಇನ್ನೂ 3 ತಿಂಗಳು ಉಳಿದಿದೆ ಎಂದು ತಿಳಿಸಿದರು.

ರೈತರು ಬೀದಿಗೆ ಬಿದ್ದಿದ್ದಾರೆ. ಆಗಸದತ್ತ ನೋಡುವ ಸ್ಥಿತಿ ಬಂದಿದೆ. ಸರ್ಕಾರದತ್ತ ನೋಡಿದರೂ ಅಲ್ಲಿಂದ ಪರಿಹಾರ ಸಿಗುತ್ತಿಲ್ಲ ಎಂದ ಅವರು, ಸರ್ಕಾರ ಕೇವಲ ಕೇಂದ್ರ ಸರ್ಕಾರದತ್ತ ತೋರಿಸುತ್ತಿದೆ. ಇದು ರೈತವಿರೋಧಿ ಸರ್ಕಾರ ಎಂದು ದೂರಿದರು. ಬರ ವೀಕ್ಷಣೆ ವರದಿ ಸಂಬಂಧ ತಂಡ ಬಂದಿದೆ. ಅವರ ವರದಿ ಸಿಕ್ಕಿದ ಬಳಿಕ ಕೇಂದ್ರ ತನ್ನ ಪಾಲಿನ ಹಣ ಕೊಡುತ್ತದೆ. ಕಳೆದ ವರ್ಷ ನಾವು ಕೇಂದ್ರದ ಪರಿಹಾರ ಮೊತ್ತ ಬರುವ ಮೊದಲೇ ದ್ವಿಗುಣ ಮೊತ್ತವನ್ನು ಕೊಟ್ಟಿದ್ದೇವೆ. ಈ ವರ್ಷ ಯಾಕೆ ಆಗುತ್ತಿಲ್ಲ? ನೀವು ಮಾಡಬೇಕಲ್ಲ? ನಮ್ಮದು ರೈತರನ್ನು ಬದುಕಿಸುವ ಧ್ಯೇಯವಾಗಿತ್ತು ಎಂದರು. ಇದನ್ನೂ ಓದಿ: ಅ.31 ರವರೆಗೆ ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಿ – ಕರ್ನಾಟಕಕ್ಕೆ CWRC ಸೂಚನೆ

ರಾಜ್ಯ ಸರ್ಕಾರ ದಿವಾಳಿ ಆಗಿದೆ. ರಾಜ್ಯ ಸರ್ಕಾರದ ಬಳಿ ಹಣ ಇಲ್ಲ. ಇದ್ದಬದ್ದ ಹಣವನ್ನೆಲ್ಲಾ ಕೇವಲ ಭಾಗ್ಯಗಳಿಗೆ ಕೊಡುತ್ತಿದ್ದಾರೆ. ಭಾಗ್ಯಗಳಿಗೆ ಕೊಡಬೇಡಿ ಎನ್ನುತ್ತಿಲ್ಲ. ಅಕ್ಕಿಯ ದುಡ್ಡನ್ನು ಒಂದು ತಿಂಗಳಿಗಷ್ಟೇ ಕೊಟ್ಟಿದ್ದಾರೆ. ಎರಡನೇ ತಿಂಗಳು ಅರ್ಧಕ್ಕರ್ಧ ಕೊಟ್ಟಿದ್ದಾರೆ. ಭಾಗ್ಯಗಳಿಗೆ ಹಣ ಕೊಡಲು ಆಗುತ್ತಿಲ್ಲ. ಪಡಿತರ ಚೀಟಿಗಳನ್ನು ಒಂದಲ್ಲ ಒಂದು ನೆಪ ಇಟ್ಟುಕೊಂಡು ರದ್ದು ಮಾಡುತ್ತಿದ್ದಾರೆ. ಕಂಡಿಷನ್ ಹಾಕಿ, ಸರ್ವರ್ ಬಂದ್ ಮಾಡುತ್ತಿದ್ದಾರೆ. ಇದರಿಂದ ನೋಂದಣಿ ಸಾಧ್ಯವಾಗುತ್ತಿಲ್ಲ ಎಂದು ಕಿಡಿಕಾರಿದರು.

ಶಾಸಕ ಸಿ.ಕೆ.ರಾಮಮೂರ್ತಿ, ಎಸ್‌ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಶಿವಪ್ರಸಾದ್ ಅವರು ಭಾಗವಹಿಸಿದ್ದರು. ಇದನ್ನೂ ಓದಿ: ಸಿಎಂ ಇಬ್ರಾಹಿಂ ಎಲ್ಲೂ ಹೋಗಲ್ಲ, ಜೆಡಿಎಸ್‌ನಲ್ಲೇ ಇರ್ತಾರೆ: ಜಿ.ಟಿ ದೇವೇಗೌಡ

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:BC PatilbengalurubjpcongressfarmersGUARANTEE SCHEMEಕಾಂಗ್ರೆಸ್ಗ್ಯಾರಂಟಿ ಯೋಜನೆಬಿಜೆಪಿಬಿಸಿ ಪಾಟೀಲ್ಬೆಂಗಳೂರುರೈತರು
Share This Article
Facebook Whatsapp Whatsapp Telegram

Cinema Updates

Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post
Darshan Vijayalakshmi
ಥಾಯ್ಲೆಂಡ್‌ನಲ್ಲಿ ಮ್ಯಾಂಗೋ ಸ್ಟಿಕ್ಕಿ ರೈಸ್ ಸವಿದ ದರ್ಶನ್ ವಿಜಯಲಕ್ಷ್ಮಿ
Cinema Latest Sandalwood Top Stories
Darshan Pavithra
ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
Bengaluru City Cinema Court Latest Main Post National Sandalwood
Darshan Court
ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ
Bengaluru City Cinema Court Latest Main Post National Sandalwood
Appu Cup League
ಅಪ್ಪು ಕಪ್ ಸೀಸನ್ 3; ಜರ್ಸಿ ಅನಾವರಣ
Bengaluru City Cinema Karnataka Latest Top Stories

You Might Also Like

Sowmya Rape and Murder Casee
Crime

ಸೌಮ್ಯ ರೇಪ್ & ಮರ್ಡರ್ ಕೇಸ್ | ಕಣ್ಣೂರು ಸೆಂಟ್ರಲ್ ಜೈಲ್‌ನಿಂದ ಪರಾರಿಯಾಗಿದ್ದ ಆರೋಪಿ ಅರೆಸ್ಟ್

Public TV
By Public TV
6 minutes ago
Chalavadi Narayanaswamy
Bengaluru City

ಬೆಂಗಳೂರು ವಿಶ್ವವಿದ್ಯಾಲಯದ ಸಮಸ್ಯೆಗಳನ್ನ ಪರಿಹಾರ ಮಾಡಿ: ಛಲವಾದಿ ನಾರಾಯಣಸ್ವಾಮಿ

Public TV
By Public TV
10 minutes ago
Bengaluru airport Gold Smuggling
Bengaluru City

ಬೆಂಗಳೂರು | ಪ್ಯಾಸೆಂಜರ್ ಬ್ಯಾಗ್‌ಗೆ ಗೋಲ್ಡ್ ಬಿಸ್ಕೆಟ್ ಅಂಟಿಸಿ ಸ್ಮಗ್ಲರ್ ಎಸ್ಕೇಪ್ – 3.5 ಕೆಜಿ ಚಿನ್ನ ಪತ್ತೆ

Public TV
By Public TV
15 minutes ago
biklu shiva 1
Bengaluru City

ಬಿಕ್ಲು ಶಿವ ಕೊಲೆ ಕೇಸ್; ಬಂಧಿತ ಹಂತಕರ ಮೇಲೆ ರೌಡಿಶೀಟ್‌ ತೆರೆದ ಪೊಲೀಸರು

Public TV
By Public TV
16 minutes ago
voters list election
Latest

ಬಿಹಾರ ಮಾತ್ರವಲ್ಲ ದೇಶಾದ್ಯಂತ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ ಮುಂದಾದ ಚುನಾವಣಾ ಆಯೋಗ

Public TV
By Public TV
30 minutes ago
yathindra siddaramaiah
Latest

ಸದ್ಯಕ್ಕೆ ಮುಡಾ ಸೈಟ್ ವಾಪಸ್ ಕೇಳಲ್ಲ: ಸಿಎಂ ಪುತ್ರ ಯತೀಂದ್ರ ಸ್ಪಷ್ಟನೆ

Public TV
By Public TV
37 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?