Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡ, ಬಿಜೆಪಿ ಮೇಲೆ ಆರೋಪ ಹೊರಿಸುವ ಪ್ರಯತ್ನ: ಅಶೋಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡ, ಬಿಜೆಪಿ ಮೇಲೆ ಆರೋಪ ಹೊರಿಸುವ ಪ್ರಯತ್ನ: ಅಶೋಕ್

Bengaluru City

ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡ, ಬಿಜೆಪಿ ಮೇಲೆ ಆರೋಪ ಹೊರಿಸುವ ಪ್ರಯತ್ನ: ಅಶೋಕ್

Public TV
Last updated: May 15, 2024 4:26 pm
Public TV
Share
2 Min Read
R Ashoka 1
SHARE

ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ಪೆನ್‌ಡ್ರೈವ್ ಪ್ರಕರಣದಲ್ಲಿ (Pendrive Case) ಕಾಂಗ್ರೆಸ್ (Congress) ಕೈವಾಡ ಇದೆ. ಇದನ್ನು ಬಿಜೆಪಿ (BJP) ಮೇಲೆ ಹೊರಿಸುವ ಪ್ರಯತ್ನವನ್ನು ಕಾಂಗ್ರೆಸ್‌ನ ಹಿರಿಯ ನಾಯಕರು ಮಾಡುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಹೇಳಿದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ರೇವಣ್ಣ (HD Revanna) ಅವರನ್ನು ಕೂಡಲೇ ಬಂಧಿಸಿದ್ದರೂ, ಚಾಲಕನನ್ನು ಮಾತ್ರ ಬಂಧಿಸಿಲ್ಲ. ಎಸ್‌ಐಟಿ (SIT) ಅಧಿಕಾರಿಗಳು ಪಕ್ಷಪಾತ ಧೋರಣೆಯಿಂದ ಕೆಲಸ ಮಾಡುತ್ತಿದ್ದಾರೆ. ಹೆಚ್‌ಡಿ ಕುಮಾರಸ್ವಾಮಿ ಅವರು ಹೇಳಿದಂತೆ ಇಲ್ಲಿ ತಿಮಿಂಗಿಲವೇ ಇದೆ. ಅದನ್ನು ಬಡಿದು ತಿನ್ನಬೇಕಾ ಬೇಡವಾ ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಕುಟುಂಬ ತೀರ್ಮಾನಿಸಲಿದೆ. ಆದರೆ ಮಾಜಿ ಪ್ರಧಾನಿ ದೇವೇಗೌಡರ ಮೂಲಕ ಇಡೀ ಒಕ್ಕಲಿಗ ಸಮುದಾಯವನ್ನು ಅಪಮಾನಿಸಬೇಕಿತ್ತೇ ಎಂದು ಜನರು ಮಾತನಾಡುತ್ತಿದ್ದಾರೆ. ಆದ್ದರಿಂದ ಬಿಜೆಪಿಯ ಮೇಲೆ ಆರೋಪ ತರುವ ಪ್ರಯತ್ನ ನಡೆದಿದೆ ಎಂದರು. ಇದನ್ನೂ ಓದಿ: ಮೋದಿ ಬೀಳ್ಕೊಡುಗೆಗೆ ದೇಶದ ಜನರು ಸಿದ್ಧವಾಗಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ತನಿಖೆಯ ಪ್ರತಿ ಮಾಹಿತಿ ಮೊದಲು ಕಾಂಗ್ರೆಸ್ ನಾಯಕರಿಗೆ ತಲುಪುತ್ತಿದೆ. ಎಸ್‌ಐಟಿ ಅಧಿಕಾರಿಗಳು ಕಾಂಗ್ರೆಸ್ ನಾಯಕರು ಹೇಳಿದಂತೆ ಕೇಳುತ್ತಿದ್ದಾರೆ. ಆದ್ದರಿಂದ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಆ ನಂತರ ಯಾರೆಲ್ಲಾ ಬಂಧನಕ್ಕೊಳಗಾಗುತ್ತಾರೆ ಎಂದು ನೋಡಲಿ ಎಂದು ಕಿಡಿಕಾರಿದರು. ಇದನ್ನೂ ಓದಿ: ಪಿಓಕೆ ಭಾರತದ ಭಾಗ, ಮರಳಿ ಪಡೆದೇ ಪಡೆಯುತ್ತೇವೆ – ಬಂಗಾಳದಲ್ಲಿ ಅಮಿತ್ ಶಾ ಗುಡುಗು

ಕಾರು ಚಾಲಕ ಎಲ್ಲೋ ನಿಂತು ಸಂದೇಶ ಕಳುಹಿಸುತ್ತಿದ್ದಾನೆ. ಶಾಸಕ ಮಂಜು ಸೇರಿದಂತೆ ಹಲವರ ಮೇಲೆ ಆರೋಪ ಮಾಡಲಾಗಿದೆ. ಕಾಂಗ್ರೆಸ್‌ನವರೇ ಚಾಲಕನನ್ನು ಎಲ್ಲೋ ಇರಿಸಿದ್ದಾರೆ. ಹಾಸನದಲ್ಲಿ ಎಲ್ಲಾ ಕಡೆ ಪೆನ್‌ಡ್ರೈವ್ ಹಂಚಲಾಗಿದೆ ಎಂದ ಮೇಲೆ ಅದು ಬಿಜೆಪಿ ಕಾರ್ಯಕರ್ತರಿಗೆ ತಲುಪಿರಬಹುದು. ಆದರೆ ಕಾಂಗ್ರೆಸ್ ಕಾರ್ಯಕರ್ತರ ಬಳಿಯೂ ವೀಡಿಯೋ ಇದೆ. ಆ ರೀತಿಯಲ್ಲಿ ನೋಡುವುದಾದರೆ ಕಾಂಗ್ರೆಸ್ ಕಾರ್ಯಕರ್ತರನ್ನು ಕೂಡ ಬಂಧಿಸಬೇಕಿತ್ತು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: 400 ಕ್ಕೂ ಅಧಿಕ ಸ್ಥಾನ ಬಂದ್ರೆ ಮಥುರಾ, ಕಾಶಿಯಲ್ಲಿ ಭವ್ಯ ಮಂದಿರ ನಿರ್ಮಾಣ: ಅಸ್ಸಾಂ ಸಿಎಂ

ಮಾಜಿ ಸಚಿವ ರೇವಣ್ಣ ಜೈಲಿಗೆ ಹೋದಾಗ ಕಾಂಗ್ರೆಸ್ ನಾಯಕರು ಹೆಚ್ಚು ಖುಷಿ ಪಟ್ಟಿದ್ದಾರೆ. ಇದು ವ್ಯವಸ್ಥಿತ ಸಂಚಾಗಿದ್ದು, ಎಲ್ಲರೂ ಟೀಮ್ ಮಾಡಿಕೊಂಡಿದ್ದಾರೆ. ಚುನಾವಣೆಯ ದೃಷ್ಟಿಯಿಂದ ಈ ಕೆಲಸ ಮಾಡಿದ್ದಾರೆ. ತಿಮಿಂಗಿಲ ಆಮ್ಲಜನಕಕ್ಕಾಗಿ ಹೊರಗೆ ಬರಲೇಬೇಕು. ಮುಂದೆ ಇದು ತಿಳಿದುಬರಲಿದೆ ಎಂದರು. ಇದನ್ನೂ ಓದಿ: ಡಿಕೆಶಿಗೆ ಹುಟ್ಟುಹಬ್ಬದ ಸಂಭ್ರಮ – ಶುಭ ಕೋರಿದ ಸಿಎಂ

ಫಲಿತಾಂಶದ ಬಳಿಕ ಗೊತ್ತಾಗಲಿದೆ:
ಕಳೆದ ಬಾರಿ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬಂದಾಗ ಕಾಂಗ್ರೆಸ್ ನಾಯಕರು ಏನೂ ಮಾಡಲಿಲ್ಲ. ಆಗ ಬಂದಂತೆ ಮುಂದೆಯೂ ಬಿಟ್ಟು ಬರುತ್ತಾರೆ. ಫಲಿತಾಂಶ ಬಂದ ಬಳಿಕ ಎಲ್ಲವೂ ಗೊತ್ತಾಗುತ್ತದೆ. ಭ್ರಷ್ಟ ಸರ್ಕಾರದ ಪಾಪದ ಕರ್ಮ, ರೈತರ ಆತ್ಮಹತ್ಯೆ, ಮಕ್ಕಳ ಮಾರಾಟ, ಬರಗಾಲದ ಬವಣೆ, ಮೊದಲಾದ ಕಾರಣಗಳಿಂದ ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಬೀಳಿಸುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಗಲುಗನಸು ಕಾಣುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ 90ಕ್ಕೂ ಅಧಿಕ ಶಾಸಕರು ಪಕ್ಷ ಬಿಟ್ಟು ಹೋಗಿದ್ದರು. ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾದ ನಂತರ ಕಾಂಗ್ರೆಸ್‌ಗೆ ಗಂಟುಮೂಟೆ ಕಟ್ಟುವುದೇ ಗತಿ ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ಕೇಸ್‌ ದಾಖಲಾಗುವ ಮೊದಲೇ A2 ಆರೋಪಿಯನ್ನು ಬಂಧಿಸಿದ್ದು ಅನುಮಾನಾಸ್ಪದ – ರೇವಣ್ಣ ಜಾಮೀನು ಆದೇಶದಲ್ಲಿ ಏನಿದೆ?

TAGGED:bengalurubjpcongressPendrive Caseprajwal revannar ashokಆರ್ ಅಶೋಕ್ಕಾಂಗ್ರೆಸ್ಪೆನ್‍ಡ್ರೈವ್ ಪ್ರಕರಣಪ್ರಜ್ವಲ್ ರೇವಣ್ಣಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood
Muddu Gumma Karavali Movie
ಕರಾವಳಿ ಮುದ್ದು ಗುಮ್ಮನಿಗಾಗಿ ಹಾಡಿದ ಸಿದ್ ಶ್ರೀರಾಮ್
Cinema Latest Sandalwood Top Stories
Rakshita Shetty 2
ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂತ ಹೆಚ್ಚೇನು ಬೇಕಿಲ್ಲ: ರಕ್ಷಿತಾ ಶೆಟ್ಟಿ
Cinema Latest Main Post Sandalwood TV Shows

You Might Also Like

Suryakumar Yadav
Cricket

ಒಂದೇ ಓವರ್‌ನಲ್ಲಿ 24 ರನ್‌ ಚಚ್ಚಿ 24 ಇನ್ನಿಂಗ್ಸ್‌ ಬಳಿಕ ಫಿಫ್ಟಿ ಹೊಡೆದ ಸ್ಕೈ

Public TV
By Public TV
1 hour ago
ed enters into nagamangala land scam
Crime

ನಾಗಮಂಗಲ ಭೂ ಹಗರಣಕ್ಕೆ ಇಡಿ ಎಂಟ್ರಿ

Public TV
By Public TV
2 hours ago
PREGNENT
Bengaluru City

ಭ್ರೂಣ ಹತ್ಯೆ ತಡೆಗೆ ಸರ್ಕಾರದ  ದಿಟ್ಟ ಕ್ರಮ – ಮಾಹಿತಿ ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ

Public TV
By Public TV
2 hours ago
Ishan Kishan Suryakumar Yadav
Cricket

ಸೂರ್ಯ, ಕಿಶನ್‌ ಸ್ಫೋಟಕ ಆಟಕ್ಕೆ ಪಾಕ್‌ ದಾಖಲೆ ಉಡೀಸ್‌ – ರನ್‌ ಮಳೆಯಲ್ಲಿ ಗೆದ್ದ ಭಾರತ

Public TV
By Public TV
2 hours ago
Chickpea
Dharwad

ರಾಜ್ಯ ಕಡಲೆ ಬೆಳೆಗಾರರ ಬೆನ್ನಿಗೆ ನಿಂತ ಕೇಂದ್ರ – 1 ಲಕ್ಷ ಮೆಟ್ರಿಕ್ ಟನ್ ಖರೀದಿಗೆ ಅಸ್ತು

Public TV
By Public TV
3 hours ago
Lakkundi Excavation Gadag 2
Districts

ಲಕ್ಕುಂಡಿಯಲ್ಲಿ ಕಬ್ಬಿಣದ ಉಂಡೆ, ಪಚ್ಚೆ ಕಲ್ಲು ಪತ್ತೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?