ಭೋಪಾಲ್: ಮೋದಿ ಗ್ಯಾರಂಟಿಗಳ ಮುಂದೆ ತಮ್ಮ ಹುಸಿ ಭರವಸೆಗಳು ಕೆಲಸ ಮಾಡುವುದಿಲ್ಲ ಎಂಬುದು ವಿರೋಧ ಪಕ್ಷವು ಒಪ್ಪಿಕೊಂಡಿದೆ ಎಂದು ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ (Narendra Modi) ವಾಗ್ದಾಳಿ ನಡೆಸಿದ್ದಾರೆ.
ಮಧ್ಯಪ್ರದೇಶದ (Madhya Pradesh) ಬೆತುಲ್ನಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅವರು, ಕೆಲವು ಕಾಂಗ್ರೆಸ್ ನಾಯಕರು ಮನೆಯಲ್ಲಿ ಕುಳಿತಿದ್ದಾರೆ. ಅವರಿಗೆ ಹೊರಗೆ ಹೋಗಲು ಸಹ ಆಗುತ್ತಿಲ್ಲ. ಕಾಂಗ್ರೆಸ್ (Congress) ನಾಯಕರಿಗೆ ಅವರು, ಜನರಿಗೆ ಏನು ಹೇಳುತ್ತಾರೆಂದು ತಿಳಿದಿಲ್ಲ. ಮೋದಿ ಅವರ ಭರವಸೆಗಳ ಮುಂದೆ ತನ್ನ ಹುಸಿ ಭರವಸೆಗಳು ಕೆಲಸ ಮಾಡುವುದಿಲ್ಲ ಎಂದು ಕಾಂಗ್ರೆಸ್ ಒಪ್ಪಿಕೊಂಡಿದೆ ಎಂದು ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ಕರಾಚಿಯಲ್ಲಿ ಬೀಡುಬಿಟ್ಟ ಚೀನಾದ ಜಲಾಂತರ್ಗಾಮಿ, ಯುದ್ಧನೌಕೆ – ಭಾರತಕ್ಕೆ ಇದರ ಸಂದೇಶವೇನು?
ಕಾಂಗ್ರೆಸ್ನ ಭ್ರಷ್ಟಾಚಾರ ಮತ್ತು ಲೂಟಿಯ ಕೈಗಳು ಮಧ್ಯಪ್ರದೇಶದ ಖಜಾನೆಗೆ ತಾಗದಂತೆ ನೋಡಿಕೊಳ್ಳಲು ಈ ಚುನಾವಣೆ ಬಂದಿದೆ. ಕಾಂಗ್ರೆಸ್ನ ಕೈಗೆ ಕದಿಯಲು ಮತ್ತು ಲೂಟಿ ಮಾಡಲು ಗೊತ್ತಿದೆ ಎಂಬುದನ್ನು ನೀವು (ಜನರು) ನೆನಪಿಸಿಕೊಳ್ಳಬೇಕು. ಕಾಂಗ್ರೆಸ್ ಎಲ್ಲೇ ಬಂದರೂ ವಿನಾಶ ತರುತ್ತದೆ ಎಂಬುದು ನಿಮಗೆ ತಿಳಿದಿದೆ ಎಂದು ಹೇಳಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದತಿಯನ್ನು ಕಾಂಗ್ರೆಸ್ ಎಂದಿಗೂ ನಂಬಲಿಲ್ಲ. ರಾಮಮಂದಿರ ನಿರ್ಮಾಣವು ನಿಜವಾಗಲಿದೆ ಎಂದು ಅವರು ಎಂದಿಗೂ ಯೋಚಿಸಿರಲಿಲ್ಲ. ಆದರೆ ನಾವು ಅದನ್ನು ಮಾಡಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಸೀದಿಗೆ ತೆರಳುತ್ತಿದ್ದ ಟಿಎಂಸಿ ನಾಯಕನಿಗೆ ಗುಂಡಿಕ್ಕಿ ಹತ್ಯೆ
ಇದು ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ನನ್ನ ಕೊನೆಯ ರ್ಯಾಲಿಯಾಗಿದೆ. ಚುನಾವಣಾ ಪ್ರಚಾರ ನಾಳೆ ಮುಕ್ತಾಯಗೊಳ್ಳಲಿದೆ. ನಾಳೆ ಬಿರ್ಸಾ ಮುಂಡಾ ಅವರ ಜನ್ಮದಿನವಾಗಿದೆ. ಆದ್ದರಿಂದ ನಾನು ನಾಳೆ ರಾಜ್ಯಕ್ಕೆ ಭೇಟಿ ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ.
ಮಧ್ಯಪ್ರದೇಶದಲ್ಲಿ ನವೆಂಬರ್ 17 ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ. ಮತದಾರರು 230 ವಿಧಾನಸಭಾ ಕ್ಷೇತ್ರಗಳಿಂದ ಶಾಸಕರನ್ನು ಆಯ್ಕೆ ಮಾಡುತ್ತಾರೆ.