Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶವನ್ನು ಒಡೆದು ಆಳುವ ಕಾಂಗ್ರೆಸ್‌ ತುಕ್ಡೆ ತುಕ್ಡೆ ಗ್ಯಾಂಗ್‌ ಲೀಡರ್‌: ನರೇಂದ್ರ ಮೋದಿ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ದೇಶವನ್ನು ಒಡೆದು ಆಳುವ ಕಾಂಗ್ರೆಸ್‌ ತುಕ್ಡೆ ತುಕ್ಡೆ ಗ್ಯಾಂಗ್‌ ಲೀಡರ್‌: ನರೇಂದ್ರ ಮೋದಿ

Public TV
Last updated: February 7, 2022 9:29 pm
Public TV
Share
3 Min Read
narendra modi 2
SHARE

ನವದೆಹಲಿ: ಸಂಸತ್ ಸಾಕ್ಷಿಯಾಗಿ ಕಾಂಗ್ರೆಸ್ ವೈಫಲ್ಯಗಳನ್ನು ಪ್ರಧಾನಿ ಮೋದಿ ಮತ್ತೊಮ್ಮೆ ಬಯಲು ಮಾಡಿದ್ದಾರೆ. ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ಭಾಷಣದ ಮಾಡುವ ವೇಳೆ ಪ್ರಧಾನಿ ಮೋದಿ ಪ್ರತಿ ಮಾತಿನಲ್ಲಿಯೂ ಕಾಂಗ್ರೆಸ್ ಪಕ್ಷವನ್ನು ಚುಚ್ಚಿ ಚುಚ್ಚಿ ತರಾಟೆಗೆ ತಗೊಂಡಿದ್ದಾರೆ.

ದೇಶವನ್ನು ಐವತ್ತು ವರ್ಷದ ಆಳಿದ ಕಾಂಗ್ರೆಸ್ ಪಕ್ಷ ತಮ್ಮ ಅಹಂಕಾರದ ನೀತಿ ಕಾರಣದಿಂದಲೇ ಈಗ ದುಸ್ಥಿತಿಯ ಅಂಚು ತಲುಪಿದೆ. ನೀವು ಜನರ ನಡುವೆ ಇದ್ದಿದ್ದರೇ ನಿಮಗೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಕಾಂಗ್ರೆಸ್ಸಿಗರ ಈಗಿನ ಅಹಂಕಾರದ ವರ್ತನೆ ನೋಡಿದ್ರೆ ಇನ್ನೂ 100 ವರ್ಷ ಕಾಂಗ್ರೆಸ್ ಅಧಿಕಾರಕ್ಕೆ ಬರುವಂತೆ ಕಾಣುತ್ತಿಲ್ಲ ಎಂದು ಮೋದಿ ಲೇವಡಿ ಮಾಡಿದರು.

ಕಾಂಗ್ರೆಸ್ ಪಕ್ಷ ಹೇಗೆ ಹಂತ ಹಂತವಾಗಿ ವಿವಿಧ ರಾಜ್ಯಗಳಿಂದ ಹೇಗೆ ಮಾಯವಾಗುತ್ತಿದೆ ಎಂಬುದನ್ನು ವಿವರಿಸಿದ ಮೋದಿ ಕೋವಿಡ್, ಮೇಕ್ ಇಂಡಿಯಾ, ಆರ್ಥಿಕತೆ, ಹಣದುಬ್ಬರ, ಉದ್ಯಮ ನೀತಿ, ವಿದೇಶಾಂಗ ನೀತಿಗಳ ವಿಚಾರದಲ್ಲಿ ಕಾಂಗ್ರೆಸ್ ನಿಲುವುಗಳನ್ನು ಪ್ರಸ್ತಾಪಿಸಿ ಕಾಂಗ್ರೆಸ್ ಪಕ್ಷದ ನಾಯಕರನ್ನು ಹಿಗ್ಗಾಮುಗ್ಗಾ ಜಾಡಿಸಿದರು.

pm modi lok sabha

ಪ್ರಧಾನಿ ಮೋದಿಯ ಪ್ರತಿ ಮಾತಿಗೂ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿತು. ಇದಕ್ಕೆಲ್ಲಾ ಮೋದಿಯೊಬ್ಬರೇ ತೀಕ್ಷ್ಣ ಮಾತುಗಳಲ್ಲಿಯೇ ತಿರುಗೇಟು ನೀಡಿದರು. ಸದನ ದೇಶದ ಅಭಿವೃದ್ಧಿ ಚರ್ಚೆಗೆ ಮೀಸಲಿರಬೇಕು. ಆದ್ರೆ ನೀವು ಮಾಡುತ್ತಿರುವ ರಾಜಕೀಯಕ್ಕೆ ನಾನು ಉತ್ತರ ನೀಡಲೇಬೇಕಿದೆ. ಅದಕ್ಕೆ ನೀಡುತ್ತಿದ್ದೇನೆ ಅಂತಾ ತಮ್ಮ ಮಾತುಗಳನ್ನು ಸಮರ್ಥನೆ ಮಾಡಿಕೊಂಡರು. ಮೋದಿಗೆ ತಿರುಗೇಟು ನೀಡಬೇಕಿದ್ದ ರಾಹುಲ್ ಗಾಂಧಿ ಸದನಕ್ಕೆ ಗೈರಾಗಿದ್ದರು. ಇದನ್ನೂ ಓದಿ: ಕೋವಿಡ್ ಲಸಿಕೆ ಪಡೆಯಲು ಆಧಾರ್ ಕಡ್ಡಾಯವಲ್ಲ

ಮೋದಿ ಪ್ರಮುಖ ಹೇಳಿಕೆಗಳು
ಕಾಂಗ್ರೆಸ್ ತಮಿಳು ಭಾವನೆಗಳಿಗೆ ಧಕ್ಕೆ ತರಲು ಪ್ರಯತ್ನಿಸಿ ದೇಶವನ್ನು ಒಡೆದು ಆಳಲು ಬಯಸುತ್ತದೆ. ಒಡೆದು ಆಳುವುದು ಅವರ ಡಿಎನ್‌ಎಯಲ್ಲಿದೆ. ಆದರೆ ಜನರಲ್ ಬಿಪಿನ್ ರಾವತ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಬೀದಿ ಬೀದಿಗಳಲ್ಲಿ ಸಾಲುಗಟ್ಟಿನಿಂತ ತಮಿಳುನಾಡು ನಾಗರಿಕರಿಗೆ ನಾನು ಸೆಲ್ಯೂಟ್‌ ಹೊಡೆಯುತ್ತೇನೆ. ಒಡೆದು ಆಳುವ ನೀತಿಯನ್ನು ಮಾಡುತ್ತಿರುವ ಕಾಂಗ್ರೆಸ್‌ ‘ತುಕ್ಡೆ ತುಕ್ಡೆ ಗ್ಯಾಂಗ್‌’ನ (ದೇಶ ವಿಭಜಿಸುವವರ) ನಾಯಕ.

ಗರೀಬಿ ಹಟಾವೋ (ಬಡತನ ನಿರ್ಮೂಲನೆ) ಘೋಷಣೆ ಮಾಡುವ ಮೂಲಕ ಕಾಂಗ್ರೆಸ್ ಹಲವಾರು ಚುನಾವಣೆಗಳನ್ನು ಗೆದ್ದಿದೆ. ಆದರೆ ಬಡತನ ಕೊನೆಗೊಂಡಿಲ್ಲ. ಹೀಗಾಗಿ ಜನರು ಕಾಂಗ್ರೆಸ್ ಅನ್ನು ಹೊರಹಾಕಿದ್ದಾರೆ.

chidambaram

ನಾಗಾಲ್ಯಾಂಡ್‌ 24 ವರ್ಷಗಳ ಹಿಂದೆ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಿತ್ತು. 27 ವರ್ಷಗಳ ಹಿಂದೆ ಒಡಿಶಾ ನಿಮ್ಮನ್ನೇ ಬೆಂಬಲಿಸಿದೆ. 28 ವರ್ಷಗಳ ಹಿಂದೆ ಗೋವಾದಲ್ಲಿ ಪೂರ್ಣ ಬಹುಮತದೊಂದಿಗೆ ಗೆದ್ದಿದ್ದೀರಿ. 1988ರಲ್ಲಿ ತ್ರಿಪುರಾದಲ್ಲಿ ಕಾಂಗ್ರೆಸ್‌ ಗೆದ್ದಿತ್ತು. ಪಶ್ಚಿಮ ಬಂಗಾಳ 1972ರಲ್ಲಿ ನಿಮ್ಮನ್ನು ಬೆಂಬಲಿಸಿದೆ. ತೆಲಂಗಾಣ ರಾಜ್ಯ ರಚನೆಯ ಶ್ರೇಯವನ್ನು ನೀವೇ ಪಡೆದಿದ್ದೀರಿ. ಆದರೆ ಜನ ಮಾತ್ರ ನಿಮ್ಮನ್ನು ಸ್ವೀಕರಿಸಲಿಲ್ಲ.

ಇತ್ತೀಚಿನ ದಿನಗಳಲ್ಲಿ ಪತ್ರಿಕೆಗಳಲ್ಲಿ ಆರ್ಥಿಕತೆಯ ಬಗ್ಗೆ ಕಾಂಗ್ರೆಸ್ಸಿನ ಪಿ ಚಿದಂಬರಂ ಬರೆಯುತ್ತಿದ್ದಾರೆ. ಆದರೆ 2012ರಲ್ಲಿ ಸಾರ್ವಜನಿಕರು ನೀರಿನ ಬಾಟಲಿಗೆ 15 ರೂಪಾಯಿ ಮತ್ತು ಐಸ್ ಕ್ರೀಮ್‌ಗೆ 20 ರೂಪಾಯಿಗಳನ್ನು ಖರ್ಚು ಮಾಡುವಾಗ ತೊಂದರೆಯಾಗುವುದಿಲ್ಲ. ಆದರೆ ಗೋಧಿ ಮತ್ತು ಅಕ್ಕಿಯ ಬೆಲೆಯಲ್ಲಿ 1 ರೂಪಾಯಿ ಏರಿಕೆಯಾದಾಗ ಸಾರ್ವಜನಿಕರು ಸಹಿಸುವುದಿಲ್ಲ ಎಂದು ಹೇಳಿದ್ದರು.

ಪ್ರತಿಪಕ್ಷಗಳು ಇಲ್ಲಿ ಹಣದುಬ್ಬರದ ವಿಷಯವನ್ನು ಎತ್ತಿದ್ದಾರೆ. ಆದರೆ ತಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಎಷ್ಟಿತ್ತು ಎಂಬುದನ್ನು ಪ್ರಸ್ತಾಪಿಸಿದರೆ ಉತ್ತಮ. ಸಾಂಕ್ರಾಮಿಕ ಸಂದರ್ಭದಲ್ಲಿಯೂ ನಮ್ಮ ಸರ್ಕಾರವು ಹಣದುಬ್ಬರವನ್ನು ನಿಭಾಯಿಸಲು ಪ್ರಯತ್ನಿಸಿದೆ. 2014-2020ರ ಅವಧಿಯಲ್ಲಿ ಹಣದುಬ್ಬರ ದರ ಶೇ.5ಕ್ಕಿಂತ ಕಡಿಮೆ ಇತ್ತು. ಕಾಂಗ್ರೆಸ್ ಇಂದು ಅಧಿಕಾರದಲ್ಲಿದ್ದರೆ, ಹಣದುಬ್ಬರ ಏರಿಕೆಗೆ ಕೋವಿಡ್ ಅನ್ನು ದೂಷಿಸಿ ಮುಂದೆ ಸಾಗುತ್ತಿತ್ತು.

corona 16

ಕೋವಿಡ್ ಮೊದಲ ಅಲೆಯ ಸಮಯದಲ್ಲಿ ನೀವು (ಕಾಂಗ್ರೆಸ್) ವಲಸೆ ಕಾರ್ಮಿಕರಿಗೆ ಮುಂಬೈಯಿಂದ ಊರುಗಳಿಗೆ ಹೋಗಲು ಉಚಿತ ರೈಲು ಟಿಕೆಟ್ ನೀಡಿದ್ದೀರಿ. ಈ ಸಮಯದಲ್ಲಿ, ದೆಹಲಿ ಸರ್ಕಾರವು ವಲಸೆ ಕಾರ್ಮಿಕರನನ್ನು ನಗರ ತೊರೆಯುವಂತೆ ಹೇಳಿತು. ಅಲ್ಲದೇ, ಅವರಿಗೆ ಬಸ್ಸುಗಳನ್ನು ಒದಗಿಸಿತು. ಪರಿಣಾಮವಾಗಿ, ಪಂಜಾಬ್, ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಕೋವಿಡ್ ವೇಗವಾಗಿ ಹರಡಿತು.

ಕೆಲವರಿಗೆ ‘ಮೇಕ್ ಇನ್ ಇಂಡಿಯಾ’ದ ಬಗ್ಗೆ ಸಮಸ್ಯೆ ಇದೆ. ಯಾಕೆಂದರೆ ಇದರಲ್ಲಿ ಭ್ರಷ್ಟಚಾರ ಮಾಡಲು ಆಗುವುದಿಲ್ಲ. ಹಣವನ್ನು ಸಂಗ್ರಹಿಸಲು ಸಾಧ್ಯವಾಗುವುದಿಲ್ಲ. ನಾವು ರಕ್ಷಣಾ ಇಲಾಖೆಯ ಎಲ್ಲಾ ಬಾಕಿ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಿದ್ದೇವೆ.

ಪ್ರತಿಪಕ್ಷಗಳು ‘ಮೋದಿ’ ಎಂದು ಹೆಸರನ್ನು ಜಪಿಸದೇ ಒಂದು ಕ್ಷಣವೂ ಬದುಕುವುದಿಲ್ಲ. ಅದಕ್ಕಾಗಿಯೇ ಬೆಳಗ್ಗೆಯಿಂದಲೇ ಮೋದಿಯನ್ನು ಗುರಿಯಾಗಿಸಿ ಟೀಕೆ ಮಾಡುತ್ತಿರುತ್ತವೆ.

Share This Article
Facebook Whatsapp Whatsapp Telegram
Previous Article VACCINE ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ-ಬೆಂಗಳೂರಿನಲ್ಲಿ 2,718 ಮಂದಿಗೆ ಪಾಸಿಟಿವ್, 15 ಮಂದಿ ಸಾವು
Next Article PRATHAP SIMHA ಖಡ್ಗ, ಭಯ, ದಬ್ಬಾಳಿಕೆಯಿಂದ ತನ್ವೀರ್ ಸೇಠ್ ಆಗಿದ್ದಾರೆ: ಪ್ರತಾಪ್ ಸಿಂಹ

Latest Cinema News

Kantara 2
ಕಾಂತಾರ ಚಾಪ್ಟರ್‌-1 ಟ್ರೈಲರ್‌ ಲಾಂಚ್‌ಗೆ ದಿನಾಂಕ, ಸಮಯ ಫಿಕ್ಸ್‌ – ಹೊಂಬಾಳೆ ಫಿಲ್ಮ್ಸ್ಅಧಿಕೃತ ಮಾಹಿತಿ
Bengaluru City Cinema Latest Sandalwood Top Stories
mohanlal 1
ಖ್ಯಾತ ನಟ ಮೋಹನ್ ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ
Cinema Latest Top Stories
Vijay
ತಮಿಳುನಾಡು | ರಾಜೀವ್ ಗಾಂಧಿ ಹಂತಕನನ್ನ ಹಾಡಿ ಹೊಗಳಿದ ದಳಪತಿ ವಿಜಯ್
Cinema Latest Main Post National
Zubeen Garg 1
ಗಾಯಕ ಜುಬೀನ್ ಗಾರ್ಗ್ ಸಾವು | ಕಾರ್ಯಕ್ರಮ ಆಯೋಜಕರ ವಿರುದ್ಧ FIR – ತನಿಖೆಗೆ ಮುಂದಾದ ಅಸ್ಸಾಂ ಸರ್ಕಾರ
Cinema Latest National Top Stories
poonam pandey 1
ರಾಮಾಯಣ ಆಧರಿತ ʻರಾಮಲೀಲಾʼದಲ್ಲಿ ಮಂಡೋದರಿ ಪಾತ್ರಕ್ಕೆ ಪೂನಂ ಪಾಂಡೆ ಆಯ್ಕೆ
Bollywood Cinema Latest Top Stories

You Might Also Like

GST 1
Bengaluru City

GST Revision | ದೇಶದ ಜನತೆಗೆ ದಸರಾ ಗಿಫ್ಟ್‌ – ನಾವು ದಿನನಿತ್ಯ ಬಳಸುವ ಯಾವ ವಸ್ತುಗಳ ಬೆಲೆ ಎಷ್ಟು ಇಳಿಕೆ?

1 hour ago
DK Shivakumar 1
Bengaluru City

ಅನುದಾನ ಪಡೆದೂ ಬಿಜೆಪಿ ಶಾಸಕರು ಏಕೆ ರಸ್ತೆ ಗುಂಡಿ ಮುಚ್ಚಿಲ್ಲ: ಡಿಕೆಶಿ ಪ್ರಶ್ನೆ

2 hours ago
Badruddin K Mani
Districts

ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

3 hours ago
Siddaramaiah 12
Bengaluru City

ಅಕ್ಟೋಬರ್‌ ಒಳಗೆ ಗುಂಡಿ ಮುಚ್ಚದಿದ್ರೆ ಚೀಫ್‌ ಎಂಜಿನಿಯರ್‌ಗಳೇ ಸಸ್ಪೆಂಡ್‌: ಸಿದ್ದರಾಮಯ್ಯ ಖಡಕ್‌ ವಾರ್ನಿಂಗ್‌

3 hours ago
SSLC Exams
Bengaluru City

SSLC, ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

4 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?