Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dakshina Kannada

ಕಾಂಗ್ರೆಸ್ ತಾನು ರಾಮ ವಿರೋಧಿ ಎಂಬುದನ್ನು ಬಹಿರಂಗವಾಗಿ ಒಪ್ಪಿಕೊಂಡಿದೆ: ವೇದವ್ಯಾಸ್ ಕಾಮತ್

Public TV
Last updated: January 11, 2024 9:21 pm
Public TV
Share
2 Min Read
vedavyas kamath e1704988054916
SHARE

ಮಂಗಳೂರು: 500 ವರ್ಷಗಳಿಗೂ ಮಿಗಿಲಾದ ಸುದೀರ್ಘ ಹೋರಾಟದ ನಂತರ ಅಯೋಧ್ಯೆಯಲ್ಲಿ (Ayodhya) ನಿರ್ಮಾಣವಾಗುತ್ತಿರುವ ಜಗತ್ತಿನ ಹಿಂದೂಗಳ ಆರಾಧ್ಯ ದೈವ ಪ್ರಭು ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಗೆ ಅಧಿಕೃತ ಆಹ್ವಾನವಿದ್ದರೂ ಭಾಗವಹಿಸುವುದಿಲ್ಲ ಎಂದು ಘೋಷಿಸಿದ ಕಾಂಗ್ರೆಸ್ (Congress) ತಾನು ಎಂದಿಗೂ ರಾಮ ವಿರೋಧಿ ಎಂಬುದನ್ನು ಬಹಿರಂಗವಾಗಿ ಒಪ್ಪಿಕೊಂಡಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ (D. Vedavyas Kamath)  ಹೇಳಿದ್ದಾರೆ.

ಇತ್ತೀಚಿಗೆ ದೇಶಾದ್ಯಂತ ರಾಮಜಪ ಹೆಚ್ಚುತ್ತಿರುವ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ತಾವು ಕೂಡಾ ರಾಮ ಭಕ್ತರು, ರಾಮಮಂದಿರ (Ram Mandir) ನಿರ್ಮಾಣದಲ್ಲಿ ತಮ್ಮದೂ ಕೊಡುಗೆ ಇದೆ ಎಂದೆಲ್ಲಾ ಹೇಳಿಕೆ ನೀಡಿದ್ದರು. ಈಗ ಕಾಂಗ್ರೆಸ್ ವರಿಷ್ಠರ ಅಧಿಕೃತ ನಿಲುವಿನಿಂದ ಆ ಪಕ್ಷ ಹಿಂದೂಗಳ ಧಾರ್ಮಿಕ ಭಾವನೆಗೆ ಅದೆಷ್ಟು ಬೆಲೆ ಕೊಡುತ್ತದೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಅಂದು ಗುಜರಾತಿನ ಸೋಮನಾಥ ಮಂದಿರದ ಉದ್ಘಾಟನೆಗೆ ಹೋಗದೇ ನೆಹರೂ ಹಾಕಿಕೊಟ್ಟ ಪರಂಪರೆಯನ್ನೇ ಇಂದು ಕಾಂಗ್ರೆಸ್ ಮುಂದುವರಿಸಿದೆ. ಆ ಮೂಲಕ ಹಿಂದೂ ವಿರೋಧಿ ನೀತಿ ಎನ್ನುವುದು ಕಾಂಗ್ರೆಸ್ಸಿನ ಮೂಲ ಸಿದ್ಧಾಂತವೇ ಆಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಪ್ರಾಣ ಪ್ರತಿಷ್ಠಾಪನೆಗೆ ಗೈರಾಗಲು ಕಾಂಗ್ರೆಸ್ ತೀರ್ಮಾನ ದುರ್ದೈವದ ಸಂಗತಿ: ಯಡಿಯೂರಪ್ಪ

ರಾಮ ಮಾಂಸಾಹಾರಿ, ರಾಮ ಹುಟ್ಟಿಯೇ ಇಲ್ಲ, ಅದೊಂದು ಕೇವಲ ಕಾಲ್ಪನಿಕ ಪಾತ್ರ, ರಾಮ ಯಾವ ಎಂಜಿನಿಯರಿಂಗ್ ಕಾಲೇಜಲ್ಲಿ ಓದಿದ್ದ, ಇತ್ಯಾದಿ ರಾಮ ವಿರೋಧಿ ಹೇಳಿಕೆಗಳನ್ನು ಕೊಟ್ಟಿದ್ದ ಕಾಂಗ್ರೆಸ್ ಸಹಜವಾಗಿ ಮಂದಿರದ ಆಹ್ವಾನ ತಿರಸ್ಕರಿಸಿದೆ. ನಮ್ಮ ರಾಜ್ಯದ ಮುಖ್ಯಮಂತ್ರಿಗಳು ಸೇರಿದಂತೆ ಕಾಂಗ್ರೆಸ್ ನಾಯಕರು ಮಾತ್ರ ನಮಗೆ ಮಂದಿರದ ಆಹ್ವಾನ ಸಿಕ್ಕಿಲ್ಲ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಯಾಕೆ ಈ ದ್ವಂದ್ವ ನಿಲುವು? ಜನರನ್ನು ಮೂರ್ಖರನ್ನಾಗಿಸುವ ಪ್ರಯತ್ನವೇ? ಅಷ್ಟಕ್ಕೂ ನಮ್ಮ ಮನೆಯ ಶುಭ ಕಾರ್ಯಕ್ಕೆ ಯಾರ ಆಹ್ವಾನಕ್ಕೂ ಕಾಯುವ ಅಗತ್ಯವಿಲ್ಲ. ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವುದು ರಾಷ್ಟ್ರ ಮಂದಿರ. ಹಾಗಾಗಿಯೇ ದೇಶದಲ್ಲಿ ಈಗಾಗಲೇ ಹಲವು ಮುಸ್ಲಿಮರು ಅಯೋಧ್ಯೆಗೆ ಪಾದಯಾತ್ರೆ, ದೇಣಿಗೆ, ರಾಮಮಂದಿರಕ್ಕೆ ಪೂಜಾ ಪರಿಕರಗಳು, ಜನವರಿ 22ಕ್ಕೆ ಮಸೀದಿಗಳಲ್ಲಿ ದೀಪ ಬೆಳಗುವ ಮೂಲಕ ರಾಷ್ಟ್ರ ಮಂದಿರದ ಸಂಭ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ಕಾಂಗ್ರೆಸ್ ಮಾತ್ರ ತಮ್ಮ ಯೋಗ್ಯತೆ ಏನು ಮತ್ತು ಎಷ್ಟು ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಮತ್ತು ಮೋದಿಯವರನ್ನು ವಿರೋಧಿಸುವ ಭರದಲ್ಲಿ ರಾಮನನ್ನೇ ವಿರೋಧಿಸಲು ಹೊರಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕರ್ನಾಟಕ ಜನರ ಭಾವನೆಗಳಿಗೆ ನೋವುಂಟಾಗಿದೆ; ಸ್ತಬ್ಧಚಿತ್ರಕ್ಕೆ ಅವಕಾಶ ಕಲ್ಪಿಸಿ: ಕೇಂದ್ರ ರಕ್ಷಣಾ ಸಚಿವರಿಗೆ ಸಿಎಂ ಮನವಿ

ಹಿಂದಿನಿಂದಲೂ ರಾಮನಿಗೆ ಅವಮಾನ ಮಾಡಿಕೊಂಡು ಬಂದಂತಹ ಕಾಂಗ್ರೆಸ್ ಇಡೀ ದೇಶದಲ್ಲಿ ಕೇವಲ ಎರಡಂಕಿ ಸೀಟುಗಳಿಗೆ ಇಳಿದಿತ್ತು. ಈಗ ರಾಮನನ್ನು ತಿರಸ್ಕರಿಸಿರುವ ಇವರನ್ನು ದೇಶದ ಜನರು ಮತ್ತೆ ತಿರಸ್ಕರಿಸಲಿದ್ದಾರೆ. ಕಾಂಗ್ರೆಸ್ ಬೇರೆ ಧರ್ಮದವರ ಧಾರ್ಮಿಕ ಭಾವನೆಗಳಿಗೆ ಬೆಲೆ ಕೊಟ್ಟ ಹಾಗೆ ಹಿಂದೂಗಳ ಧಾರ್ಮಿಕ ಭಾವನೆಗಳಿಗೂ ಬೆಲೆ ಕೊಟ್ಟು ಜಾತ್ಯತೀತತೆಯಿಂದ ನಡೆದುಕೊಳ್ಳಬೇಕಿತ್ತು. ಕೇವಲ ಅಲ್ಪಸಂಖ್ಯಾತರ ಮತಕ್ಕಾಗಿ ಹಿಂದೂಗಳ ಹಾಗೂ ರಾಮನ ವಿರುದ್ಧ ಕಾಂಗ್ರೆಸ್ ಅದೆಷ್ಟು ಕೀಳು ಮಟ್ಟಕ್ಕೆ ಇಳಿಯುತ್ತದೆ ಎಂಬುದನ್ನು ಇನ್ನಾದರೂ ಹಿಂದೂಗಳು ಅರ್ಥ ಮಾಡಿಕೊಳ್ಳಬೇಕು ಎಂದು ಹರಿಹಾಯ್ದರು. ಇದನ್ನೂ ಓದಿ: ಜನವರಿ 23ರಿಂದ ಅಯೋಧ್ಯೆಯಲ್ಲಿ 48 ದಿನ ಮಂಡಲೋತ್ಸವ – ಉಡುಪಿ ಪೇಜಾವರ ಶ್ರೀಗಳ ನೇತೃತ್ವ

TAGGED:AyodhyabjpcongressD Vedavyasa KamathMangaluruRam Mandirಅಯೋಧ್ಯೆಕಾಂಗ್ರೆಸ್ಬಿಜೆಪಿಮಂಗಳೂರುರಾಮಮಂದಿರವೇದವ್ಯಾಸ್ ಕಾಮತ್
Share This Article
Facebook Whatsapp Whatsapp Telegram

Cinema Updates

Akhil Akkineni Zainab Ravdjee
ಗರ್ಲ್ ಫ್ರೆಂಡ್ ಝೈನಬ್ ಮದ್ವೆಯಾದ ನಾಗಾರ್ಜುನ ಪುತ್ರ ಅಖಿಲ್
35 minutes ago
shivani swamy
‘ಸರಿಗಮಪ ಸೀಸನ್‌ 21’ರ ವಿನ್ನರ್‌ ಆದ ಬೀದರ್‌ ಪ್ರತಿಭೆ ಶಿವಾನಿ ಸ್ವಾಮಿ
5 hours ago
Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
24 hours ago
rakshitha prem
ಇಷ್ಟು ಜನ ಸೇರ್ತಾರೆ ಅಂತಾ ಗೊತ್ತಿರ್ಲಿಲ್ಲ ಅನ್ನೋದು ಎಷ್ಟು ಸರಿ? – ಕಾಲ್ತುಳಿತ ದುರಂತಕ್ಕೆ ರಕ್ಷಿತಾ ಬೇಸರ
1 day ago

You Might Also Like

vijay mallya k.l.rahul
Cricket

ಈಗ ನಾನು ಇದ್ದಿದ್ರೆ ಕೆ.ಎಲ್‌.ರಾಹುಲ್‌ನ ಆರ್‌ಸಿಬಿಗೆ ಖರೀದಿ ಮಾಡ್ತಿದ್ದೆ: ವಿಜಯ್‌ ಮಲ್ಯ

Public TV
By Public TV
6 minutes ago
BMTC bus hits metro pillar more than 10 injured in Bengaluru
Bengaluru City

ಮೆಟ್ರೋ ಪಿಲ್ಲರ್‌ಗೆ ಡಿಕ್ಕಿಯಾದ ಬಿಎಂಟಿಸಿ ಬಸ್ – 10ಕ್ಕೂ ಹೆಚ್ಚು ಮಂದಿಗೆ ಗಾಯ

Public TV
By Public TV
6 minutes ago
Narendra Modi in Fintech Fest 2024
Latest

`ಆಪರೇಷನ್ ಸಿಂಧೂರ’ ಪಾಕಿಸ್ತಾನಕ್ಕೆ ಸದಾ ಕಾಡಲಿದೆ: ಮೋದಿ

Public TV
By Public TV
1 hour ago
Vijay Mallya
Cricket

‘ಎಣ್ಣೆ’ ಪ್ರಚಾರಕ್ಕಾಗಿ ಆರ್‌ಸಿಬಿ ಖರೀದಿಸಿದೆ: RCB ಬಗ್ಗೆ ವಿಜಯ್‌ ಮಲ್ಯ ಹೇಳಿದ್ದೇನು?

Public TV
By Public TV
2 hours ago
Money 1
Crime

50 ಸಾವಿರ ಸರ್ಕಾರಿ ನೌಕರರಿಗೆ 6 ತಿಂಗಳಿಂದ ವೇತನವೇ ಇಲ್ಲ – 230 ಕೋಟಿ ವಂಚನೆ!

Public TV
By Public TV
2 hours ago
Bilawal Bhutto Zardari
Latest

ಹಫೀಜ್ ಅಬ್ದುರ್ ರೌಫ್ ಉಗ್ರನಲ್ಲ, ಧರ್ಮಗುರು – ವಿಶ್ವಸಂಸ್ಥೆಯಲ್ಲಿ ಪಾಕ್‌ ಮಾಜಿ ಸಚಿವನ ಮೊಂಡುವಾದ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?