ಡಿಕೆಶಿಯನ್ನು ಸಮಾಧಾನಪಡಿಸಲು ಮುಂದಾದ ಹೈಕಮಾಂಡ್!

Public TV
1 Min Read
DK SHIVAKUMAR

ಬೆಂಗಳೂರು: ಪವರ್ ಫುಲ್ ಇಂಧನ ಖಾತೆ ಕೈ ತಪ್ಪುತ್ತಿದ್ದಂತೆ ಡಿಕೆ ಶಿವಕುಮಾರ್ ಮುನಿಸಿಕೊಂಡಿದ್ದಾರಾ ಎನ್ನುವ ಪ್ರಶ್ನೆ ಈಗ ಎದ್ದಿದೆ.

ಹೌದು. ಬಹುಮತ ಸಾಬೀತು ಪಡಿಸುವ ಸಂದರ್ಭದಲ್ಲಿ ಆಪರೇಷನ್ ಕಮಲದ ಭೀತಿಯಿಂದ ಕಾಂಗ್ರೆಸ್ ಶಾಸಕರನ್ನು ರಕ್ಷಿಸುವ ಹೊಣೆ ಹೊತ್ತಿದ್ದ ಡಿಕೆ ಶಿವಕುಮರ್ ಇಂಧನ ಖಾತೆ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

ಅಸಮಾಧಾನಗೊಂಡಿರುವ ಡಿಕೆಶಿಯನ್ನು ಸಮಾಧಾನ ಪಡಿಸಲು ಹೈಕಮಾಂಡ್ ಈಗ ಮುಂದಾಗಿದ್ದು, ಕೆಪಿಸಿಸಿ ಅಧ್ಯಕ್ಷ ಹುದ್ದೆಯ ಜೊತೆಗೆ ಖಾತೆ ನೀಡಲು ಮಾತುಕತೆ ನಡೆಯುತ್ತಿದೆ ಎನ್ನುವ ವಿಚಾರ ತಿಳಿದುಬಂದಿದೆ. ಕಂದಾಯ, ಬೆಂಗಳೂರು ಅಭಿವೃದ್ಧಿ ಖಾತೆ ಡಿಕೆ ಶಿವಕುಮಾರ್ ಅವರಿಗೆ ಸಿಗುವ ಸಾಧ್ಯತೆಯಿದ್ದು, ದೆಹಲಿಗೆ ಬರುವಂತೆ ಡಿಕೆಶಿಗೆ ಹೈಕಮಾಂಡ್ ಬುಲಾವ್ ನೀಡಿದೆ.

ಇಂಧನ ಖಾತೆ ಸೇರಿದಂತೆ ನಾನು ಯಾವುದೇ ಖಾತೆ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಎಚ್‍ಡಿ ರೇವಣ್ಣ ಜೊತೆ ಮಾತುಕತೆ ನಡೆಸಿಲ್ಲ. ಅವರು ದೊಡ್ಡ ಕುಟುಂಬದ ಮಕ್ಕಳು. ರೇವಣ್ಣ ಜೊತೆ ಮಾತನಾಡಲು ನನಗೆ ಹುಚ್ಚು ಹಿಡಿದಿಲ್ಲ. ಅವರು ದೊಡ್ಡ ನಾಯಕರು ಎಂದು ಡಿಕೆಶಿ ಶುಕ್ರವಾರ ಪ್ರತಿಕ್ರಿಯಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *