Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಖರ್ಗೆಯನ್ನು ಸಿಎಂ ಮಾಡಲು ಒಪ್ಪದ್ದಕ್ಕೆ ಮಗನಿಗೆ ಸಿಎಂ ಪಟ್ಟ ಸಿಕ್ತು – ಎಚ್‍ಡಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Kalaburagi | ಖರ್ಗೆಯನ್ನು ಸಿಎಂ ಮಾಡಲು ಒಪ್ಪದ್ದಕ್ಕೆ ಮಗನಿಗೆ ಸಿಎಂ ಪಟ್ಟ ಸಿಕ್ತು – ಎಚ್‍ಡಿಡಿ

Kalaburagi

ಖರ್ಗೆಯನ್ನು ಸಿಎಂ ಮಾಡಲು ಒಪ್ಪದ್ದಕ್ಕೆ ಮಗನಿಗೆ ಸಿಎಂ ಪಟ್ಟ ಸಿಕ್ತು – ಎಚ್‍ಡಿಡಿ

Public TV
Last updated: November 11, 2019 3:28 pm
Public TV
Share
2 Min Read
GLB HDD PREES MEET 2 web
SHARE

– ಮೈತ್ರಿ ವೇಳೆ ಸಿಎಂ ಹುದ್ದೆಯ ಮಾತುಕತೆ ಈಗ ಬಹಿರಂಗ
– ಕೈ ನಾಯಕರ ವಿರುದ್ಧವೇ ಎಚ್‍ಡಿಡಿ ಆರೋಪ

ಕಲಬುರಗಿ: ಮಲ್ಲಿಕಾರ್ಜುನ ಖರ್ಗೆಯವರಿಗೆ ಕಾಂಗ್ರೆಸ್ ಹೈಕಮಾಂಡ್ ನಾಯಕರೇ ಸಿಎಂ ಪಟ್ಟ ತಪ್ಪಿಸಿದರು ಎನ್ನುವ ಸ್ಫೋಟಕ ವಿಚಾರವನ್ನು ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಬಹಿರಂಗ ಪಡಿಸಿದ್ದಾರೆ.

ನಾನು ಖರ್ಗೆಯವರನ್ನು ಸಿಎಂ ಮಾಡಲು ಹೇಳಿದೆ. ಆದರೆ ಸೋನಿಯಾ ಗಾಂಧಿ ಖರ್ಗೆ ಬೇಡ ಎಂದು ಹೇಳಿದರು. ಹೀಗಾಗಿ ಕುಮಾರಸ್ವಾಮಿ ಸಿಎಂ ಆಗಿ ಆಯ್ಕೆಯಾದರು ಎಂದು ಸಿಎಂ ಆಯ್ಕೆ ಗುಟ್ಟನ್ನು ಮಾಜಿ ಪ್ರಧಾನಿ ಎಚ್‍ಡಿಡಿ ಬಿಚ್ಚಿಟ್ಟಿದ್ದಾರೆ.

mallikarjuna kharge

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋನಿಯಾ ಗಾಂಧಿ ರಾಹುಲ್ ಗಾಂಧಿಯವರನ್ನು ಕಳುಹಿಸಿ ನಿಮ್ಮ ಮಗ ಮತ ತೆಗೆದುಕೊಳ್ಳಬೇಕು ಎಂದು ನಾವು ಹೇಳಿದ್ದೆವು. ಅಲ್ಲದೆ ಖರ್ಗೆಯವರನ್ನು ಮುಖ್ಯಮಂತ್ರಿ ಮಾಡಿ ಎಂದು ಸಹ ಹೇಳಿದ್ದೆವು. ಆದರೆ ಕಾಂಗ್ರೆಸ್ ಹೈಕಮಾಂಡ್ ಖರ್ಗೆಯವರನ್ನು ಮುಖ್ಯಮಂತ್ರಿ ಮಾಡುವುದಿಲ್ಲ ಎಂದು ಹೇಳಿತು. ಹೈಕಮಾಂಡ್ ಒಪ್ಪಿದರೆ ಸಿಎಂ ಆಗುತ್ತೇನೆ ಎಂದು ಖರ್ಗೆ ಹೇಳಿದ್ದರು ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

ಟಿಕೆಟ್ ಹಂಚುವ ವಿಚಾರದಲ್ಲಿ ಕಾಂಗ್ರೆಸ್ ಅವರಲ್ಲೇ ಗೊಂದಲ ಇದೆ. ನನಗೆ ಈಗಲೂ ನಂಬಿಕೆ ಇದೆ ಬಿಜೆಪಿ ಸರ್ಕಾರಕ್ಕೆ ಅಪಾಯ ಇಲ್ಲ. ಏಕೆಂದರೆ ಕಾಂಗ್ರೆಸ್ ಜೆಡಿಎಸ್ ಒಂದಾಗುವುದಿಲ್ಲ. ಹೀಗಾಗಿ ಬಿಜೆಪಿ ಸರ್ಕಾರಕ್ಕೆ ಅಪಾಯವಿಲ್ಲ ಎಂದರು.

by election 2

ದತ್ತಾತ್ರೇಯ ದೇವಸ್ಥಾನಕ್ಕೆ ಹೋಗಬೇಕು ಎಂದು ಕಲಬುರಗಿಗೆ ಬಂದಿದ್ದೇನೆ. ಇಲ್ಲಿ ಒಂದು ಕಾಲದಲ್ಲಿ ನಮ್ಮ ಶಕ್ತಿ ಬಹಳ ಇತ್ತು. ದುರಂತ ಅಂದರೆ ಈಗ ನಮ್ಮ ಶಕ್ತಿ ಕುಂದಿದೆ. ಹೀಗಾಗಿ ಜನ ಶಕ್ತಿ ಕೊಟ್ಟರೆ ಮತ್ತೆ ಪಕ್ಷ ಕಟ್ಟುತ್ತೇನೆ. ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ನಮ್ಮ ಪಕ್ಷ ಅಸ್ತಿತ್ವ ಉಳಿಸಿಕೊಂಡಿದೆ. ನಾನು ಈಗ ಸೋತಿದ್ದೇನೆ, 13ನೇ ಪಾರ್ಲಿಮೆಂಟ್‍ಗೆ ನಿಲುವುದಿಲ್ಲ ಎಂದು ಹೇಳಿ ಹೊರಗಡೆ ಬಂದಿದ್ದೆ. ಆದರೆ ವಿಧಿ ಎಳೆದುಕೊಂಡು ತುಮಕೂರಿಗೆ ಹೋಗಿ ಚುನಾವಣೆಗೆ ಸ್ಪರ್ಧಿಸುವಂತಾಯಿತು. ಈ ಮೂಲಕ ಮೂರನೇ ಸೋಲು ಕಂಡೆ, ಸೋತರೂ ಈ ವಯಸ್ಸಿನಲ್ಲಿ ಹೋರಾಟ ಮಾಡುತ್ತಿದ್ದೇನೆ ಎಂದು ಹೇಳಿ ಭಾವುಕರಾದರು.

ಹೋರಾಟದಿಂದ ಈ ಪಕ್ಷ ಉಳಿದಿದೆ ಮತ್ತು ಬೆಳೆದಿದೆ. ಹೀಗಾಗಿ ಹೋರಾಡಲು ಇನ್ನಷ್ಟು ಶಕ್ತಿ ಕೊಡು ಎಂದು ದತ್ತಾತ್ರೆಯನ ಪಾದದ ಮೊರೆ ಹೋಗಿದ್ದೇನೆ. ಉಪಚುನಾವಣೆಯಲ್ಲಿ ಎಲ್ಲ ಸ್ಥಾನಗಳಿಗೂ ಅಭ್ಯರ್ಥಿ ಹಾಕುತ್ತೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಆದರೆ ಎಲ್ಲ ಕಡೆ ನಮಗೆ ಪ್ರಬಲ ಅಭ್ಯರ್ಥಿಗಳಿಲ್ಲ. ನಾಲ್ಕು-ಐದು ಕಡೆಗಳಲ್ಲಿ ನಮ್ಮ ಪಕ್ಷ ಹೋರಾಟ ಮಾಡಲಿದೆ. ಉಳಿದ ಕ್ಷೇತ್ರಗಳಲ್ಲಿ ಸಹ ನಮ್ಮ ಅಭ್ಯರ್ಥಿಗಳನ್ನು ಹಾಕುತ್ತೆವೆ. ಗೆಲುವು ಸೋಲು ನಮ್ಮ ಕೈಯಲ್ಲಿ ಇಲ್ಲ ಮತದಾರರು ಅದನ್ನು ನಿರ್ಧರಿಸುತ್ತಾರೆ. ಈಗಾಗಲೇ ಸ್ಥಳೀಯ ಸಂಸ್ಥೆ ಚುನಾವಣೆ ನಡೆಯುತ್ತಿದೆ. ಹೀಗಾಗಿ ಎಲ್ಲ ಕಡೆ ಸಂಚರಿಸಿ ಇಲ್ಲಿಗೆ ಬಂದಿದ್ದೇನೆ. ಕಾಂಗ್ರೆಸ್, ಬಿಜೆಪಿ ಎರಡೂ ಸ್ಥಳೀಯ ಚುನಾವಣೆಯಲ್ಲಿ ನಮಗಿಂತ ಮುಂದಿದ್ದಾರೆ ಎಂದರು.

BJP SULLAI 1

ಮೈತ್ರಿ ಸರ್ಕಾರ ಹೋಗಲು ಕಾರಣ ಏನು ಎಂದು ವಿಶ್ಲೇಷಣೆ ಮಾಡುವುದಿಲ್ಲ. ಬಿಜೆಪಿ ಸಹ ಈಗ ವಾಮಮಾರ್ಗದಿಂದ ಅಧಿಕಾರ ಹಿಡಿದಿದೆ. 5-6 ತಿಂಗಳು ಅಧಿಕಾರಕ್ಕಾಗಿ ಇವರು ಬಂದಿದ್ದಾರೆ. ಸದ್ಯ ಬಿಜೆಪಿಯ 106 ಶಾಸಕರಿದ್ದಾರೆ. ನಾನು ಯಡಿಯೂರಪ್ಪ ಮನೆ ಬಾಗಿಲಿಗೂ ಹೋಗುವುದಿಲ್ಲ. ಸಿದ್ದರಾಮಯ್ಯ ಮನೆ ಬಾಗಿಲಿಗೂ ಹೋಗಲ್ಲ. ಈಗಲೇ ಚುನಾವಣೆ ನಡೆದರೆ ನಾವು ಅಧಿಕಾರಕ್ಕೆ ಬರುವುದಿಲ್ಲ. ಚುನಾವಣೆ ನಡೆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಸಿದ್ದರಾಮಯ್ಯಗೆ ಆ ವರ್ಚಸ್ಸು ಇದೆ ಎಂದು ಹೇಳಿದರು.

TAGGED:bjpby electioncongressHD DevegowdajdsKalaburagiPublic TVsiddaramaiahYediyurappaಉಪ ಚುನಾವಣೆಎಚ್.ಡಿ. ದೇವೇಗೌಡಕಲಬುರಗಿಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಬಿಜೆಪಿಯಡಿಯೂರಪ್ಪಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Dear Comrade
ವಿಜಯ್ ದೇವರಕೊಂಡ-ರಶ್ಮಿಕಾ ನಟನೆಯ ಸಿನಿಮಾ ಹಿಂದಿಯಲ್ಲಿ ರಿಮೇಕ್
Bollywood Cinema Latest Top Stories
vijayalakshmi 1 1
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್ – ಬೆಂಗಳೂರು ಮೂಲದ ವ್ಯಕ್ತಿ ಸೇರಿ ಇಬ್ಬರು ಅರೆಸ್ಟ್
Cinema Karnataka Latest Sandalwood Top Stories
dhanush bigg boss
ಕೊನೆಯ ಕ್ಯಾಪ್ಟನ್ಸಿ ಆಟದಲ್ಲಿ ಮೋಸ ಮಾಡಿದ್ರಾ ಧನುಷ್‌? – ಯಾರಾಗ್ತಾರೆ ಮನೆಯ ಕ್ಯಾಪ್ಟನ್?
Cinema Latest Top Stories TV Shows
RAM CHARAN
ರಂಗಸ್ಥಳಂ ಬಳಿಕ ಒಂದಾಗ್ತಿರೋ ಸೂಪರ್ ಹಿಟ್ ಕಾಂಬಿನೇಷನ್..!
Latest South cinema Top Stories

You Might Also Like

Himachal College Student Dies Of Sexual Assault 4 Including Professor Charged
Crime

ವಿದ್ಯಾರ್ಥಿನಿ ಸಾವಿನ ಬಳಿಕ ಲೆಕ್ಚರ್‌ನ ಕ್ರೌರ್ಯ ಬಯಲು – ದೌರ್ಜನ್ಯದ ಬಗ್ಗೆ ವಿಡಿಯೋ ಮಾಡಿಟ್ಟಿದ್ದ ಯುವತಿ!

Public TV
By Public TV
7 minutes ago
Zameer Ahmed Khan
Bellary

Ballari Firing Case | ತನಿಖೆ ನಡೆಯುತ್ತಿದೆ, ಯಾರನ್ನೂ ಬಿಡಲ್ಲ – ಸಚಿವ ಜಮೀರ್ ವಾರ್ನಿಂಗ್‌

Public TV
By Public TV
32 minutes ago
Siddaramaiah 15
Bellary

ಶಾಸಕ ಭರತ್ ರೆಡ್ಡಿ ಮೇಲೆ ಗರಂ – ಫೋನಿನಲ್ಲಿ ಮಾತನಾಡಲ್ಲ ಎಂದ ಸಿಎಂ

Public TV
By Public TV
40 minutes ago
MC Sudhakar 1
Bengaluru City

ಸಿಎಂ ಸೂಚನೆ ಕೊಟ್ಟರೆ ಕಾಲೇಜು ಹೆಣ್ಣುಮಕ್ಕಳಿಗೆ ಋತುಚಕ್ರ ರಜೆ: ಡಾ. ಎಂ.ಸಿ.ಸುಧಾಕರ್

Public TV
By Public TV
1 hour ago
siddaramaiah
Bellary

ಬಳ್ಳಾರಿ ಗಲಾಟೆ ವಿಚಾರ ತನಿಖೆಗೆ ಸೂಚಿಸಿದ್ದೇನೆ: ಸಿದ್ದರಾಮಯ್ಯ

Public TV
By Public TV
1 hour ago
campus election College
Bengaluru City

ಕಾಲೇಜುಗಳಲ್ಲಿ ಎಲೆಕ್ಷನ್ ನಡೆಸುವ ಉದ್ದೇಶ ಸರ್ಕಾರಕ್ಕಿದೆ: ಶರಣ ಪ್ರಕಾಶ್ ಪಾಟೀಲ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?