– ಕಾಂಗ್ರೆಸ್ನಿಂದ ಮನ್ರೇಗಾ ಅಭಿಯಾನದ ವಿರುದ್ಧ ವಾಗ್ದಾಳಿ
ಬೆಂಗಳೂರು: ವಿಬಿಜಿ ರಾಮ್ ಜಿ (ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ) ಬಗ್ಗೆ ರಾಜ್ಯ ಸರ್ಕಾರ ಸುಳ್ಳು ಹೇಳುತ್ತಾ ರಾಜ್ಯದ ಕೂಲಿ ಕಾರ್ಮಿಕರ ದಾರಿತಪ್ಪಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಆರೋಪಿಸಿದ್ದಾರೆ.
ನರೇಗಾ(MG NREGA) ಯೋಜನೆಯನ್ನು ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ ಎಂದು ಪರಿವರ್ತನೆಗೊಳಿಸಲಾಗಿದ್ದು ಇದರಲ್ಲಿಯೂ ಪ್ರತಿಪಕ್ಷದವರು ರಾಜಕೀಯ ಮಾಡುತ್ತಿರುವುದು ಅವರ ಮೌಢ್ಯವನ್ನು ತೋರಿಸುತ್ತದೆ. ಯೋಜನೆ ಪಾರದರ್ಶಕವಾಗಿ ಮತ್ತು ಸಮರ್ಥವಾಗಿ ಜಾರಿಯಾಗುವುದನ್ನು ಸಹಿಸದ ಪ್ರತಿಪಕ್ಷಗಳು ಈ ಯೋಜನೆಯ ಬಗ್ಗೆ ಸುಳ್ಳು ವದಂತಿಗಳನ್ನು ಹರಡುತ್ತಿವೆ ಎಂದು ಜೋಶಿ ವಾಗ್ದಾಳಿ ನಡೆಸಿದರು.
ನರೇಗಾ ಯೋಜನೆಯಲ್ಲಿ ಪ್ರತಿವರ್ಷ ನೂರು ದಿನಗಳ ಉದ್ಯೋಗ ಖಾತರಿಯಿತ್ತು. ಈಗ 125 ದಿನಗಳಿಗೆ ಹೆಚ್ಚಳ ಮಾಡಲಾಗಿದೆ. ಇದರಿಂದ ಗ್ರಾಮೀಣ ಜನರಿಗೆ ಉದ್ಯೋಗವಕಾಶದ ಭರವಸೆಯೊಂದಿಗೆ ಆದಾಯದ ಭದ್ರತೆಯು ಹೆಚ್ಚಾಗಲಿದೆ. ಮುಂದೆಯೂ ಆಯಾ ಗ್ರಾಮ ಪಂಚಾಯತಗಳೇ ಯೋಜನೆಯ ಕೇಂದ್ರವಾಗಿರಲಿದೆ. ಆದರೆ, ಇದನ್ನು ಕೇಂದ್ರ ಸರ್ಕಾರ ನಿರ್ಧಾರ ಮಾಡುತ್ತದೆ ಎಂಬ ಭೀತಿಯನ್ನು ಕಾಂಗ್ರೆಸ್ ಮೂಡಿಸುತ್ತಿದೆ ಎಂದ ಸಚಿವರು, ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅನುಕೂಲ ಮಾಡಿಕೊಡಲು ವರ್ಷದಲ್ಲಿ 60 ದಿನಗಳ ಬಿಡುವು ನೀಡಲಾಗಿದೆ. ಇಂತಹ ರೈತ ಸ್ನೇಹಿ ನಿಯಮಕ್ಕೆ ರಾಜ್ಯ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ ಕೃಷಿ ವಿರೋಧಿ ನೀತಿ ಅನುಸರಿಸುತ್ತಿದೆ ಎಂದರು. ಇದನ್ನೂ ಓದಿ: ಓಂ ಶಕ್ತಿ ಮಾಲಾಧಾರಿಗಳ ಮೇಲೆ ನಾಲ್ಕೈದು ಜನ ಚಿಕ್ಕ ಹುಡುಗರಿಂದ ಕಲ್ಲೆಸೆತ: ಪರಮೇಶ್ವರ್
ಹಿಂದೆ ಕೂಲಿಕಾರರ ಹೆಸರು ಹೇಳಿ ನರೇಗಾ ಯೋಜನೆ ದುರ್ಬಳಕೆ ಮಾಡಲಾಗುತ್ತಿತ್ತು. ಅದಕ್ಕಾಗಿ ಬಯೋಮೆಟ್ರಿಕ್ ತಂತ್ರಜ್ಞಾನ ಬಳಕೆ ಕಡ್ಡಾಯ ಮಾಡಲಾಗಿದೆ. ರಾಜ್ಯ ಸರ್ಕಾರಗಳು ಅನಗತ್ಯ ವೆಚ್ಚ ಕಡಿಮೆ ಮಾಡಲು ಭ್ರಷ್ಟಾಚಾರಕ್ಕೆ ಕಡಿವಾಣ ಕೇಂದ್ರ ಮತ್ತು ರಾಜ್ಯ ಸರ್ಕಾರ 60:40 ಅನುಪಾತದಲ್ಲಿ ನಿಗದಿ ಮಾಡಲಾಗಿದೆ ಎಂದು ತಿಳಿಸಿದರು.
ಸರ್ಕಾರದ ಆಡಳಿತಾತ್ಮಕ ಹಿತದೃಷ್ಟಿಯಿಂದ ಮತ್ತು ಕಾಲಾನುಕಾಲಕ್ಕೆ ಯೋಜನೆಗಳಲ್ಲಿ ಪಾರದರ್ಶಕತೆ ಮತ್ತು ಪರಿಣಾಮ ತರುವ ನಿಟ್ಟಿನಲ್ಲಿ ಕೆಲ ಯೋಜನೆಗಳಲ್ಲಿ ಅಗತ್ಯ ಪರಿಷ್ಕರಣೆ ತರುವುದು ಅವಶ್ಯವಾಗಿರುತ್ತದೆ. ಈ ಬದಲಾವಣೆಯ ಮುಖ್ಯ ಉದ್ದೇಶ ಜನರ ಜೀವನೋಪಾಯವನ್ನು ಬಲಪಡಿಸುವ ಕಲ್ಯಾಣ (Welfare) ಮತ್ತು ಮೂಲ ಸೌಕರ್ಯ ಅಭಿವೃದ್ಧಿ Infrastructure development) ಇವೆರಡನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕಿದೆ. ಇವೆರೆಡೂ ಒಂದಕ್ಕೊಂದು ಪೂರಕ ಮತ್ತು ಅನಿವಾರ್ಯ ಎಂದರು. ಇದನ್ನೂ ಓದಿ: ಬೆಂಗಳೂರಿನ 500 ಕಿ.ಮೀ ರಸ್ತೆಗಳಿಗೆ ವೈಟ್ ಟಾಪಿಂಗ್ ಭಾಗ್ಯ

