Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತಗಳ್ಳತನ ಮಾಡುತ್ತಿರುವುದೇ ಕಾಂಗ್ರೆಸ್ – ದಾಖಲೆ ಸಮೇತ ರಾಗಾಗೆ ಜೆಡಿಎಸ್ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮತಗಳ್ಳತನ ಮಾಡುತ್ತಿರುವುದೇ ಕಾಂಗ್ರೆಸ್ – ದಾಖಲೆ ಸಮೇತ ರಾಗಾಗೆ ಜೆಡಿಎಸ್ ತಿರುಗೇಟು

Bengaluru City

ಮತಗಳ್ಳತನ ಮಾಡುತ್ತಿರುವುದೇ ಕಾಂಗ್ರೆಸ್ – ದಾಖಲೆ ಸಮೇತ ರಾಗಾಗೆ ಜೆಡಿಎಸ್ ತಿರುಗೇಟು

Public TV
Last updated: August 9, 2025 6:34 pm
Public TV
Share
3 Min Read
JDS HM Ramesh Gowda
SHARE

– ರಾಹುಲ್ ಗಾಂಧಿ ಮುಂದೆ 5 ಪ್ರಶ್ನೆಯಿಟ್ಟ ಜೆಡಿಎಸ್
– ಕಾಂಗ್ರೆಸ್ 136 ಕ್ಷೇತ್ರ ಗೆದ್ದಿದೆ, ಹಾಗಾದ್ರೆ ಮತಗಳ್ಳತನದಿಂದ ಗೆದ್ದಿದ್ಯಾ?

ಬೆಂಗಳೂರು: ಮತಗಳ್ಳತನ ಮಾಡಿರುವುದೇ ಕಾಂಗ್ರೆಸ್ (Congress) ಎಂದು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ (H M Ramesh Gowda) ಅವರು ಚುನಾವಣಾ ಆಯೋಗ ಹಾಗೂ ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ಮಾಡಿರುವ ಆರೋಪಕ್ಕೆ ದಾಖಲೆ ಸಮೇತ ಉತ್ತರಿಸುವ ಮೂಲಕ ತಿರುಗೇಟು ನೀಡಿದ್ದಾರೆ. ಅಲ್ಲದೇ ರಾಹುಲ್ ಗಾಂಧಿ ಮುಂದೆ 5 ಪ್ರಶ್ನೆಗಳನ್ನಿಟ್ಟಿದ್ದಾರೆ.

ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಹುಲ್ ಗಾಂಧಿ (Rahul Gandhi) ಅವರು ಆಯೋಗಕ್ಕೆ ಐದು ಪ್ರಶ್ನೆ ಕೇಳಿದ್ದಾರೆ. ಜೆಡಿಎಸ್ ಕೂಡ ಅವರಿಗೆ ಐದು ಪ್ರಶ್ನೆ ಕೇಳುತ್ತದೆ. ನೈತಿಕತೆ ಇದ್ದರೆ ಅವರು ಈ ಪ್ರಶ್ನೆಗಳಿಗೆ ಉತ್ತರ ಕೊಡಲಿ ಎಂದು ಸವಾಲು ಹಾಕಿದ್ದಾರೆ. ಇದನ್ನೂ ಓದಿ: ಬಿಹಾರ ಚುನಾವಣೆ ಹೊತ್ತಲ್ಲೇ 334 ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದಲೇ ತೆಗೆದ ಚುನಾವಣಾ ಆಯೋಗ

ಜೆಡಿಎಸ್‌ನ ಐದು ಪ್ರಶ್ನೆಗಳಾವುವು?
1. ನೀವು ಚುನಾವಣಾ ಆಯೋಗಕ್ಕೆ ಉತ್ತರ ಕೊಡುವುದಕ್ಕೆ ಹೆದರುತ್ತಿರುವುದು ಯಾಕೆ?
2. ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ, ಮಾಗಡಿ, ಕುಣಿಗಲ್ ಸೇರಿ ಅನೇಕ ವಿಧಾನಸಭೆ ಕ್ಷೇತ್ರಗಳಲ್ಲಿ ಗಿಫ್ಟ್ ಕೂಪನ್ ಹಂಚಿ ಗೆದ್ದಿದ್ದೀರಿ. ಇದು ಮತಗಳ್ಳತನ ಅಲ್ಲವೇ?
3. ಗೃಹಲಕ್ಷ್ಮೀ ಗ್ಯಾರಂಟಿಯನ್ನು ಚುನಾವಣಾ ಅಸ್ತ್ರವನ್ನಾಗಿ ಬಳಕೆ ಮಾಡುತ್ತೀರಿ. ಚುನಾವಣೆ ಬಂದ ಕೂಡಲೇ ನಾಲ್ಕೈದು ತಿಂಗಳ ಗೃಹಲಕ್ಷ್ಮೀ ಹಣ ಜಮೆ ಮಾಡುತ್ತೀರಿ. ನಿಯಮಿತವಾಗಿ ಪ್ರತೀ ತಿಂಗಳು ಜಮೆ ಮಾಡುತ್ತಿಲ್ಲ, ಯಾಕೆ? ಇದು ಚುನಾವಣಾ ಅಕ್ರಮ ಅಲ್ಲವೇ?
4. ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 9 ಲೋಕಸಭೆ ಕ್ಷೇತ್ರಗಳಲ್ಲಿ ಮತಗಳ್ಳತನ ಆಗಿಲ್ಲವೇ? ಆಗಿಲ್ಲದಿದ್ರೆ ಮತಗಳ್ಳರಿಗೆ ನಿಮ್ಮ ಮೇಲೆ ವಿಶೇಷ ಪ್ರೀತಿ ಯಾಕೆ?
5. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಸೇರಿ ಅನೇಕ ಕ್ಷೇತ್ರಗಳಲ್ಲಿ ಅತೀ ಕಡಿಮೆ ಅಂತರದಿಂದ ನಿಮ್ಮ ಶಾಸಕರು ಗೆದ್ದಿದ್ದಾರೆ. ಹಾಗಿದ್ದರೆ ಅವರೂ ಮತಗಳ್ಳತನ ಮಾಡಿಯೇ ಗೆಲುವು ಸಾಧಿಸಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

ನೀವು ಚುನಾವಣಾ ಆಯೋಗಕ್ಕೆ ಐದು ಪ್ರಶ್ನೆ ಕೇಳಿದ್ದೀರಿ. ನಾನೂ ನಿಮ್ಮನ್ನು ಐದು ಪ್ರಶ್ನೆ ಕೇಳುತ್ತೇನೆ ಉತ್ತರಿಸಿ. ಎಲೆಕ್ಷನ್ ಕಮಿಷನ್ ಉತ್ತರ ಕೊಡಿ ಎಂದರೆ ನಾನು ನಿಮ್ಮಂತೆಯೇ ಜಾರಿಕೊಳ್ಳುವುದಿಲ್ಲ. ನನ್ನ ಪ್ರಶ್ನೆಗಳಿಗೆ ಉತ್ತರ ಕೊಡಿ ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಖಾಸಗಿ ಶಾಲೆಗಳ ಫೀಸ್ ನಿಯಂತ್ರಣಕ್ಕೆ ಮುಂದಾದ ಸರ್ಕಾರ – ಇನ್ಮುಂದೆ ಶುಲ್ಕ ಏರಿಕೆಗೆ ಅನುಮತಿ ಕಡ್ಡಾಯ

ರಾಹುಲ್ ಗಾಂಧಿ ಅವರು ಲೋಕಸಭೆಯ ಪ್ರತಿಪಕ್ಷ ನಾಯಕ ಎಂಬುದನ್ನು ಮರೆತಿದ್ದಾರೆ. ಅವರು ಲೋಕಸಭೆಯಲ್ಲಿ ಈ ವಿಷಯವನ್ನು ಮಾತನಾಡಬೇಕೇ ಹೊರತು ಹಾದಿ ಬೀದಿಯಲ್ಲಿ ರಂಪ ಮಾಡಬಾರದು. ಬೆಂಗಳೂರಿಗೆ ಬಂದು ಅವರದ್ದೇ ಪಕ್ಷದ ಸರ್ಕಾರ ಇರುವ ರಾಜ್ಯದಲ್ಲಿ ಆಡಳಿತ ತಂತ್ರವನ್ನು ದುರುಪಯೋಗ ಮಾಡಿಕೊಂಡು ಪ್ರತಿಭಟನೆ ಪ್ರಹಸನ ನಡೆಸಿ ಹೋಗಿದ್ದಾರೆ ಎಂದು ಟೀಕಿಸಿದ್ದಾರೆ.

ಜೆಡಿಎಸ್ ಹಾಗೂ ಬಿಜೆಪಿ ಒಟ್ಟಾಗಿ ಲೋಕಸಭೆ ಚುನಾವಣೆ ಎದುರಿಸಿದ್ದೇವು. ಆದರೆ ಎಲ್ಲಾ ಕ್ಷೇತ್ರಗಳನ್ನು ಗೆಲ್ಲಲು ಆಗಲಿಲ್ಲ. ಆದರೂ ನಾವು ಸಾಂವಿಧಾನಿಕ ಸಂಸ್ಥೆಯಾಗಿರುವ ಚುನಾವಣೆ ಆಯೋಗವನ್ನು ದೂರುವ ಕೆಲಸ ಮಾಡಲಿಲ್ಲ. ವಿಧಾನಸಭೆ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷರು 136 ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದ್ದರು. ಇಷ್ಟು ಕರಾರುವಕ್ಕಾಗಿ ಸಂಖ್ಯೆ ಹೇಳಬೇಕು ಎಂದರೆ ಅವರೇನು ಬ್ರಹ್ಮನೇ. ಅವರು ಹೇಳಿದ ಪ್ರಕಾರವೇ 136 ಸ್ಥಾನ ಗೆದ್ದಿದ್ದಾರೆ. ಹಾಗಾದರೆ ಇವರೂ ರಿಗ್ಗಿಂಗ್ ಮಾಡಿ, ಮತಗಳ್ಳತನ ಮಾಡಿ ಗೆದ್ದಿದ್ದಾರಾ ಎಂದು ಪ್ರಶ್ನಿಸಿದ್ದಾರೆ.

ರಾಹುಲ್ ಗಾಂಧಿಯವರು ಅಧಿವೇಶನದಲ್ಲಿ ಇದೆಲ್ಲಾ ಮಾತಾಡಬಹುದಲ್ವ? ಅಲ್ಲಿ ಸಮಯ ಹಾಳು ಮಾಡಿ, ಹಾದಿಬೀದಿಯಲ್ಲಿ ಮಾತಾಡೋದು ಯಾಕೆ? ಅವರಿಗೆ ಕೇವಲ ಬಿಹಾರ ಚುನಾವಣೆಯಲ್ಲಿ ಜನರ ಗಮನ ಬೇರೆಡೆಗೆ ಸೆಳೆದು ಮತ ಗಳಿಕೆ ಮಾಡುವ ಏಕೈಕ ದುರುದ್ದೇಶದಿಂದ ಆಯೋಗದ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ಬಿಹಾರದಲ್ಲಿ ಸೋಲುವ ಹತಾಶೆ ಅವರನ್ನು ಕಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಆ.16ರಂದು ʻಧರ್ಮಸ್ಥಳ ಚಲೋʼ ಅಭಿಯಾನ – ಧರ್ಮಸ್ಥಳದೊಂದಿಗೆ ನಾವಿದ್ದೇವೆ ಎಂದ ಶಾಸಕ ಎಸ್.ಆರ್ ವಿಶ್ವನಾಥ್

ರಾಹುಲ್ ಗಾಂಧಿ ಲೆಕ್ಕ ಸುಳ್ಳು
ರಾಹುಲ್ ಗಾಂಧಿ ಅಸತ್ಯದ ಮಾಹಿತಿ ಇಟ್ಟುಕೊಂಡು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಅವರು ತಮ್ಮ ಪಕ್ಷ ಮತಗಳ್ಳತನದಲ್ಲಿ ತೊಡಗಿತ್ತು ಎಂಬುದನ್ನು ಮರೆಮಾಚುವ ದುರುದ್ದೇಶದಿಂದ ಜನರ ಗಮನ ಬೇರೆಡೆಗೆ ಸೆಳೆಯುವ ನಾಟಕ ಆಡುತ್ತಿದ್ದಾರೆ. ಶಿವಾಜಿನಗರ, ಸರ್ವಜ್ಞನಗರ ಸೇರಿದಂತೆ ನಗರದ ಹಲವಾರು ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತಗಳ್ಳತನ ಮಾಡಿದೆ. ಅದಕ್ಕೆ ದಾಖಲೆಗಳು ಇವೆ ಎಂದು ಕೆಲ ಮಹತ್ವದ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.

ಬೆಂಗಳೂರು ನಗರದಲ್ಲಿ ಕಾಂಗ್ರೆಸ್ ಗೆದ್ದಿರುವ ಬಹುತೇಕ ವಿಧಾನಸಭೆ ಕ್ಷೇತ್ರಗಳಲ್ಲಿ ಮತಗಳ್ಳತನ ನಡೆದಿದೆ. ತಾವು ಅಂತಹ ತಪ್ಪು ಮಾಡಿ ಆಯೋಗದ ಮೇಲೆ ಆರೋಪ ಮಾಡುತ್ತಿದೆ ಕಾಂಗ್ರೆಸ್. ಈ ದಾಖಲೆಗಳ ಬಗ್ಗೆ ರಾಹುಲ್ ಗಾಂಧಿ ಅವರು, ಕಾಂಗ್ರೆಸ್ ನಾಯಕರು ಮಾತನಾಡಬೇಕು. ನಾನು ದಾಖಲೆಗಳನ್ನು ಬಿಡುಗಡೆ ಮಾಡಿದ್ದೇನೆ. ಚರ್ಚೆಗೆ ಬರಲಿ, ನಾನು ತಯಾರಿದ್ದೇನೆ ಎಂದು ಸವಾಲೆಸಿದ್ದಾರೆ.

TAGGED:bengalurucongressHM Ramesh GowdajdsRahul GandhiVote Fraud
Share This Article
Facebook Whatsapp Whatsapp Telegram

Cinema news

Varanasi movie
ರಾಜಮೌಳಿ ನಿರ್ದೇಶನದ ‘ವಾರಣಾಸಿ’ ರಿಲೀಸ್‌ ಡೇಟ್‌ ಔಟ್‌
Cinema Latest South cinema Top Stories
Bengaluru 17th Film Festival
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಚಾಲನೆ
Bengaluru City Cinema Districts Karnataka Latest Sandalwood Top Stories
PRAJWAL DEVARAJ 2
ಸಹೋದರನ ಚಿತ್ರಕ್ಕೆ ನಿರ್ಮಾಪಕನಾದ ಪ್ರಜ್ವಲ್ ದೇವರಾಜ್ – ಚಿತ್ರದ ಫಸ್ಟ್ ಲುಕ್ ಲಾಂಚ್
Cinema Latest Sandalwood Top Stories
actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood

You Might Also Like

donald trump 1
Latest

ಕ್ಯೂಬಾಗೆ ತೈಲ ಪೂರೈಸುವ ರಾಷ್ಟ್ರಗಳಿಗೆ ಹೆಚ್ಚುವರಿ ಸುಂಕ; ಮೆಕ್ಸಿಕೊ ಮೇಲೆ ಒತ್ತಡ ಹೆಚ್ಚಿಸಿದ ಟ್ರಂಪ್

Public TV
By Public TV
11 minutes ago
Miscreants tore down Hindu Samajotsava banners in Sringeri
Chikkamagaluru

ಹಿಂದೂ ಸಮಾಜೋತ್ಸವದ ಫ್ಲೆಕ್ಸ್‌ಗೆ ಬ್ಲೇಡ್‌ – ಕಿಡಿಗೇಡಿಗಳ ವಿರುದ್ಧ ಆಕ್ರೋಶ

Public TV
By Public TV
17 minutes ago
GOVINDARAJU
Bengaluru City

ಚೀಟಿ ವ್ಯವಹಾರದಲ್ಲಿ ವಂಚನೆ; ಕೇಸ್‌ನಿಂದ ಕೈಬಿಡಲು 5 ಲಕ್ಷಕ್ಕೆ ಡೀಲ್ ಮಾಡಿದ್ದ ಇನ್‌ಸ್ಪೆಕ್ಟರ್ ‘ಲೋಕಾ’ ಬಲೆಗೆ

Public TV
By Public TV
28 minutes ago
Bandipur Road 2
Chamarajanagar

ಬಂಡೀಪುರ| ರಾತ್ರಿ ಸಂಚಾರಕ್ಕೆ ಸುರಂಗ ಮಾರ್ಗ?

Public TV
By Public TV
55 minutes ago
Leopard 1
Chamarajanagar

ಚಾಮರಾಜನಗರದಲ್ಲಿ ಮುಂದುವರಿದ ಚಿರತೆ ಹಾವಳಿ – ವ್ಯಕ್ತಿ ಮೇಲೆ ಏಕಾಏಕಿ ದಾಳಿ

Public TV
By Public TV
1 hour ago
tripura security forces demolish ganja plantations worth rs 27 crore in major anti narcotics crackdown
Crime

65 ಎಕರೆ ಅರಣ್ಯ ಭೂಮಿಯಲ್ಲಿ ಬೆಳೆದಿದ್ದ 1.80 ಲಕ್ಷ ಗಾಂಜಾ ಗಿಡಗಳನ್ನು ನಾಶಪಡಿಸಿದ ಭದ್ರತಾ ಪಡೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?