Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹನೂರು ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ – ಯಾರಿಗೆ ಒಲಿಯಲಿದೆ ವಿಜಯಮಾಲೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಹನೂರು ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ – ಯಾರಿಗೆ ಒಲಿಯಲಿದೆ ವಿಜಯಮಾಲೆ?

Chamarajanagar

ಹನೂರು ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ – ಯಾರಿಗೆ ಒಲಿಯಲಿದೆ ವಿಜಯಮಾಲೆ?

Public TV
Last updated: May 8, 2023 10:56 am
Public TV
Share
4 Min Read
narendra manjunath hanuru
SHARE

ಚಾಮರಾಜನಗರ: ಚಾಮರಾಜನಗರ (Chamarajanagara) ಜಿಲ್ಲೆಯ ಹನೂರು (Hanuru) ಕ್ಷೇತ್ರ ರಾಜಕೀಯ ಜಿದ್ದಾಜಿದ್ದಿನಲ್ಲಿ ಎರಡು ಮನೆತನಗಳ ನಡುವಿನ ಕಾದಾಟಕ್ಕೆ ಸಾಕ್ಷಿಯಾಗಿತ್ತು. ಆದರೆ ಎರಡು ಮನೆತನಗಳ ಫೈಟ್ ನಡುವೆಯೇ ಈಗ ಮೂರನೇಯವರ ಎಂಟ್ರಿಯಾಗಿದೆ. ಇದೀಗ ಹನೂರು ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಸಂಪ್ರದಾಯಿಕವಾಗಿ ದಿ. ರಾಜೂಗೌಡ ಹಾಗೂ ದಿ. ನಾಗಪ್ಪ ಮನೆತನಗಳು ಹಿಂದಿನಿಂದಲೂ ಚುನಾವಣೆಯಲ್ಲಿ ವಿರೋಧಿಗಳಾಗಿ ಹೋರಾಟ ನಡೆಸಿವೆ. ಆದರೆ ಕಳೆದ ಬಾರಿಯ ಚುನಾವಣೆಯಲ್ಲಿ ಈ ಎರಡು ಮನೆತನಕ್ಕೂ ಸಾಕಷ್ಟು ಫೈಟ್ ಕೊಟ್ಟಿದ್ದ ಜೆಡಿಎಸ್ ಅಭ್ಯರ್ಥಿ, ಈ ಬಾರಿ ಅಖಾಡದಲ್ಲಿರುವುದರಿಂದ ಹನೂರು ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ನಡೆದಿದೆ. ಯಾರೇ ಗೆದ್ದರೂ ಕೂದಲೆಳೆ ಅಂತರ ಅನ್ನೋ ಲೆಕ್ಕಾಚಾರ ರಾಜಕೀಯ ಮೊಗಸಾಲೆಯಲ್ಲಿ ಚರ್ಚೆ ಆಗುತ್ತಿದೆ. ಇದನ್ನೂ ಓದಿ: ಇಂದು ಚುನಾವಣಾ ಬಹಿರಂಗ ಪ್ರಚಾರಕ್ಕೆ ತೆರೆ- ಇಂದಿನಿಂದ ಎಣ್ಣೆ ಸಿಗಲ್ಲ

congress bjp jds

ಹನೂರು ಕ್ಷೇತ್ರದಲ್ಲಿ ಗೆದ್ದವರು
1957 – ಜಿ. ವೆಂಕಟೇಗೌಡ (ಪಕ್ಷೇತರ), 1962 – ಜಿ. ವೆಂಕಟೇಗೌಡ (ಪಕ್ಷೇತರ), 1967 – ಹೆಚ್. ನಾಗಪ್ಪ (ಕಾಂಗ್ರೆಸ್), 1972 – ರಾಜೇಗೌಡ (ಕಾಂಗ್ರೆಸ್), 1978 – ಜಿ. ರಾಜೂಗೌಡ (ಕಾಂಗ್ರೆಸ್), 1983 – ಕೆ.ಪಿ. ಶಾಂತಮೂರ್ತಿ (ಕಾಂಗ್ರೆಸ್), 1985 – ಜಿ. ರಾಜೂಗೌಡ (ಪಕ್ಷೇತರ), 1989 – ಜಿ ರಾಜೂಗೌಡ (ಕಾಂಗ್ರೆಸ್), 1994 – ಹೆಚ್. ನಾಗಪ್ಪ (ಜನತಾ ದಳ), 1999 – ಜಿ. ರಾಜೂಗೌಡ (ಕಾಂಗ್ರೆಸ್), 2004 – ಪರಿಮಳಾ ನಾಗಪ್ಪ (ಜೆಡಿಎಸ್), 2008 – ಆರ್. ನರೇಂದ್ರ (ಕಾಂಗ್ರೆಸ್), 2013 – ಆರ್. ನರೇಂದ್ರ (ಕಾಂಗ್ರೆಸ್), 2018 – ಆರ್. ನರೇಂದ್ರ (ಕಾಂಗ್ರೆಸ್).

2018 ರ ಚುನಾವಣಾ ಫಲಿತಾಂಶ ಏನಿತ್ತು?
ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಶಾಸಕ ಆರ್.ನರೇಂದ್ರ 3,700 ಮತಗಳ ಅಂತರದೊಂದಿಗೆ ಹ್ಯಾಟ್ರಿಕ್‌ ಗೆಲುವು ಸಾಧಿಸಿದ್ದರು. ಇವರು ಒಟ್ಟು 60,444 ಮತ ಗಳಿಸಿದ್ದರು. ಬಿಜೆಪಿಯ ಪ್ರೀತನ್ ನಾಗಪ್ಪ ಅವರು 56,931 ಮತ ಪಡೆದು ಸೋಲನುಭವಿಸಿದ್ದರು. ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಎಂ.ಆರ್.ಮಂಜುನಾಥ್ ಅವರು 44,957 ಮತ ಪಡೆದು ಮೂರನೇ ಸ್ಥಾನಕ್ಕೆ ಕುಸಿದರು. ಇದನ್ನೂ ಓದಿ: ಕೆ.ಆರ್.ನಗರದಲ್ಲಿ ಸಾ.ರಾ.ಮಹೇಶ್ ಪುತ್ರನ ಕಾರಿಗೆ ಕಲ್ಲೇಟು- ಬೆಂಗ್ಳೂರಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ

ಕಾಂಗ್ರೆಸ್ ಪ್ಲಸ್: ದಲಿತರು, ಲಂಬಾಣಿ, ಒಕ್ಕಲಿಗರ ಮತ ಬ್ಯಾಂಕ್ ಭದ್ರ. ಮನೆತನಕ್ಕೆ ಸಿಗುವ ಸಾಂಪ್ರದಾಯಿಕ ಮತ ಬುಟ್ಟಿ ಉಳಿಸಿಕೊಂಡಿರುವುದು. ಕಾಂಗ್ರೆಸ್ ಸರ್ಕಾರ ಬಂದರೆ ಮಂತ್ರಿ ಯೋಗ. ಮಲೆ ಮಹದೇಶ್ವರ ಹುಲಿ ಯೋಜನೆ ಘೋಷಣೆಗೆ ಪ್ರಬಲವಾಗಿ ವಿರೋಧಿಸಿದ್ದು ಪ್ಲಸ್ ಆಗುವ ಸಾಧ್ಯತೆ ಇದೆ.
ಮೈನಸ್: ಕ್ಷೇತ್ರ ವಿಸ್ತೀರ್ಣ ದೊಡ್ಡದಾಗಿದ್ದು ಮೂಲ ಸೌಕರ್ಯ, ರಸ್ತೆ ಸಮಸ್ಯೆ. ಕಾಡಂಚಿನ ಪ್ರದೇಶಗಳಲ್ಲಿ ಆಸ್ಪತ್ರೆ, ರಸ್ತೆ ಸಮಸ್ಯೆ. ಸಮರ್ಪಕವಾದ ರೀತಿಯಲ್ಲಿ ಅಭಿವೃದ್ಧಿ ಮಾಡಿಲ್ಲವೆಂಬ ಆರೋಪವಿದೆ.

bjp congress jds 1

ಬಿಜೆಪಿ ಪ್ಲಸ್: ಲಿಂಗಾಯತ ಪ್ರಾಬಲ್ಯ ಕ್ಷೇತ್ರ, ಲಿಂಗಾಯತ ಮತಗಳು ಬೀಳುವ ನಿರೀಕ್ಷೆ. ನಾಗಪ್ಪ‌ ಕುಟುಂಬಕ್ಕೆ ಈ ಬಾರಿ ಅವಕಾಶ ಕೊಡಬೇಕೆಂಬ ಮಾತು. ಬಿಜೆಪಿ ಪಕ್ಷದ ಹೈಕಮಾಂಡ್ ಬೆನ್ನಿಗೆ ನಿಂತಿದೆ.
ಮೈನಸ್: ಸಾಂಪ್ರದಾಯಿಕ ಮತಗಳು ಒಡೆದಿರುವುದು. ಟಿಕೆಟ್ ವಂಚಿತರಿಂದ ಒಳೇಟು ಸಾಧ್ಯತೆ. ಸ್ಥಳೀಯ ಮುಖಂಡರಲ್ಲಿ ಇಲ್ಲದ ಒಗ್ಗಟ್ಟು, ಪರಿಣಾಮಕಾರಿಯಲ್ಲದ ಪ್ರಚಾರ. ಚುನಾವಣೆ ಸಮೀಪ ಜನರ ಹತ್ತಿರಕ್ಕೆ ಧಾವಿಸಿದ್ದಾರೆಂಬ ಆರೋಪ. ಇದನ್ನೂ ಓದಿ: ಮೋದಿ ರೋಡ್‌ಶೋ; `ಜೈ ಬಜರಂಗಿ’ ಪೋಸ್ಟರ್ ಹಿಡಿದು ಗಮನ ಸೆಳೆದ ಮುಸ್ಲಿಂ ಮಹಿಳೆ

ಜೆಡಿಎಸ್ ಪ್ಲಸ್: ಹೊಸ ಮುಖ, ಕಳೆದ 9 ವರ್ಷಗಳಿಂದ ಕ್ಷೇತ್ರದಲ್ಲಿ ನಿಕಟ ಸಂಪರ್ಕ. ಕೊರೊನಾ ಅವಧಿಯಲ್ಲಿ ಸಹಾಯ ಹಸ್ತ. ಅತ್ಯಲ್ಪ ಅವಧಿಯಲ್ಲಿ ಮತ ಬ್ಯಾಂಕ್ ಭದ್ರ ಮಾಡಿರುವುದು. ಕಳೆದ ಬಾರಿ ಕಡೇ ಕ್ಷಣದಲ್ಲಿ ಅಖಾಡಕ್ಕೆ ಧುಮುಕಿ ಕಡಿಮೆ ಅಂತರದಲ್ಲಿ ಸೋತಿದ್ದು.
ಮೈನಸ್: ಎರಡು ಕುಟುಂಬಗಳ ನಡುವಿನ ಪ್ರತಿಷ್ಠೆಯಾಗಿರುವ ಕ್ಷೇತ್ರದಲ್ಲಿ ಗೆಲ್ಲುವ ಸವಾಲು. ಕುರುಬ ಸಮುದಾಯದ ಅಭ್ಯರ್ಥಿಯಾದರೂ ಕುರುಬ ಮತ ಕಾಂಗ್ರೆಸ್‌ಗೆ ಹೋಗುವ ಭೀತಿ. ಜೆಡಿಎಸ್ ಪಕ್ಷದ ಮತಬ್ಯಾಂಕ್ ಕ್ಷೇತ್ರದಲ್ಲಿ ಇಲ್ಲದಿರೋದು.

ಜಾತಿವಾರು ಲೆಕ್ಕಾಚಾರ ಏನು?
ಕ್ಷೇತ್ರದಲ್ಲಿ ಒಟ್ಟು 2,21,557 ಮತದಾರರಿದ್ದಾರೆ. ಪುರುಷ ಮತದಾರರು – 1,11,960 ಹಾಗೂ ಮಹಿಳೆಯರು – 1,09,581 ಇದ್ದಾರೆ.
ವೀರಶೈವ – 57,000
ದಲಿತ – 45,000
ನಾಯಕ – 9,000
ಉಪ್ಪಾರ – 26,000
ಕುರುಬರು – 18,000
ಮುಸ್ಲಿಂ – 6,000
ಕ್ರಿಶ್ಚಿಯನ್ – 15,000
ಇತರೆ – 20,000
ಒಕ್ಕಲಿಗರು – 11,000

ಪರಿಶಿಷ್ಟ ಜಾತಿ, ಲಿಂಗಾಯತರು, ಕ್ರಿಶ್ಚಿಯನ್ ಹಾಗೂ ಕುರುಬರು, ಗಿರಿಜನರು, ನಾಯಕರು, ಮುಸ್ಲಿಮರು, ಒಕ್ಕಲಿಗ ಹಾಗೂ ಲಂಬಾಣಿ, ಪಡಿಯಚ್ಚಿ ಸಮುದಾಯ ಮತದಾರರು ಮೂರು ಪಾರ್ಟಿಗಳ ಮತಬ್ಯಾಂಕ್‌ಗಳಾಗಿದ್ದಾರೆ.

ಹನೂರು ಕದನ ಕಣ ತ್ರಿಕೋನ ಸ್ಪರ್ಧೆಯಿಂದ ಕೂಡಿದೆ. ಎಲ್ಲರೂ ಕೂಡ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಬಿಜೆಪಿ ಹೈಕಮಾಂಡ್ ಹನೂರು ಕ್ಷೇತ್ರವನ್ನು ಗಂಭೀರವಾಗಿ ಪರಿಗಣಿಸಿ ಒಗ್ಗಟ್ಟಿನಿಂದ ಚುನಾವಣೆ ನಡೆಸುವಂತೆ ಸೂಚಿಸಿದೆ. ಈ ಬಾರಿ ಗೆದ್ದೆ ಗೆಲ್ತೀನಿ ಅನ್ನೋ ವಿಶ್ವಾಸ ಜೆಡಿಎಸ್ ಅಭ್ಯರ್ಥಿಯದ್ದಾಗಿದೆ. ಮತ್ತೊಂದೆಡೆ ಈಗಾಗ್ಲೇ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಜಯಭೇರಿ ಬಾರಿಸಿರುವ ಶಾಸಕ ನರೇಂದ್ರ ಈ ಬಾರಿ ಗೆದ್ರೆ ಮಂತ್ರಿಯಾಗ್ತಾರೆ, ಕ್ಷೇತ್ರದ ಅಭಿವೃದ್ಧಿ ಆಗುತ್ತೆ. ಅವಕಾಶ ಮಿಸ್ ಮಾಡ್ಕೊಬೇಡಿ ಅಂತಾ ಪ್ರಚಾರ ನಡೆಸುತ್ತಿದ್ದು, ಎರಡು ಮನೆತನದಲ್ಲಿ ಒಬ್ಬರಿಗೆ ಮತದಾರ ಮತ್ತೊಮ್ಮೆ ಮಣೆ ಹಾಕ್ತಾನಾ ಅಥವಾ ಮೂರನೇ ವ್ಯಕ್ತಿ ಗೆದ್ದು ಬರ್ತಾನಾ ಎಂಬುದನ್ನ ಕಾದುನೋಡಬೇಕಿದೆ.

TAGGED:bjpcongressHanurujdsKarnataka Election 2023ಕರ್ನಾಟಕ ಚುನಾವಣೆಕಾಂಗ್ರೆಸ್ಜೆಡಿಎಸ್ಬಿಜೆಪಿಹನೂರು
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
40 minutes ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
41 minutes ago
kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
1 hour ago
OMR EXAM
Bengaluru City

ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ OMR ಶೀಟ್ ವೆಬ್‌ಸೈಟ್‌ಗೆ ಅಪ್‌ಲೋಡ್: ಕೆಇಎ

Public TV
By Public TV
1 hour ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
2 hours ago
CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?