Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಮ್ಮ ಅಂತ್ಯಕಾಲವೂ ಆರಂಭವಾಗಿದೆ – ಸಿದ್ದರಾಮಯ್ಯ ವಿರುದ್ಧ ಹೆಚ್‍ಡಿಕೆ ಟ್ವೀಟ್ ವಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಿಮ್ಮ ಅಂತ್ಯಕಾಲವೂ ಆರಂಭವಾಗಿದೆ – ಸಿದ್ದರಾಮಯ್ಯ ವಿರುದ್ಧ ಹೆಚ್‍ಡಿಕೆ ಟ್ವೀಟ್ ವಾರ್

Bengaluru City

ನಿಮ್ಮ ಅಂತ್ಯಕಾಲವೂ ಆರಂಭವಾಗಿದೆ – ಸಿದ್ದರಾಮಯ್ಯ ವಿರುದ್ಧ ಹೆಚ್‍ಡಿಕೆ ಟ್ವೀಟ್ ವಾರ್

Public TV
Last updated: October 16, 2021 11:20 am
Public TV
Share
5 Min Read
SIDDU HDK
SHARE

– ಅಲ್ಪಸಂಖ್ಯಾತರ ಕಲ್ಯಾಣದ ಪೇಟೆಂಟ್ ತೆಗೆದುಕೊಂಡಂತೆ ಪೋಸು
– ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುವ ಸಿದ್ದಹಸ್ತ ಸೂತ್ರಧಾರಿ
– ತೊಟ್ಟಿಲನ್ನೂ ತೂಗಿ, ಮಗು ಚಿವುಟುತ್ತಾ, ಕತ್ತು ಕುಯ್ಯುವ ರಾಜಕಾರಣ
– ಸಿದ್ದಹಸ್ತರೇ ನಿಮಗೆ ಪಾಠ ಕಲಿಸುವ ಜನತಾಪರ್ವ ಆರಂಭವಾಗಿದೆ

ಬೆಂಗಳೂರು: ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ವಾರ್ ಮುಂದುವರಿಸಿದ್ದಾರೆ. ಅಲ್ಪಸಂಖ್ಯಾತರಿಗೆ ಸಿದ್ದರಾಮಯ್ಯ, ಕಾಂಗ್ರೆಸ್ ಮೋಸ ಮಾಡುತ್ತಿದೆ ಎಂದು ಎಚ್‍ಡಿಕೆ ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

images 3

ಅಲ್ಪಸಂಖ್ಯಾತರ ಕಲ್ಯಾಣದ ಪೇಟೆಂಟ್ ತೆಗೆದುಕೊಂಡಂತೆ ಪೋಸು ಕೊಡುವ ‘ಸಿದ್ದಹಸ್ತ’ ಶೂರನ ನಿಜಬಣ್ಣ ಬಯಲು ಮಾಡುವ ಸಂದರ್ಭ ಬಂದಿದೆ. ಸ್ವಾರ್ಥ, ಸ್ವಜನ ಪಕ್ಷಪಾತ, ತಮ್ಮ ಬೆಂಬಲಿಗರ ರಾಜಕೀಯ ಅಭಿವೃದ್ಧಿಗಾಗಿ ಪಕ್ಷಕ್ಕಾಗಿ ಅಹರ್ನಿಷಿ ದುಡಿದ ಅಲ್ಪಸಂಖ್ಯಾತ ನಾಯಕರನ್ನು ಗುರಿ ಇಟ್ಟು ಮುಗಿಸಲಾಗುತ್ತಿದೆ. ತನ್ನೆಲ್ಲ ಸಿದ್ದಕಲೆ, ಸಿದ್ದಸೂತ್ರಗಳೆನ್ನೆಲ್ಲ ಪೋಣಿಸಿ ‘ಅಹಿಂದ’ ಎಂದು ಜನರನ್ನು ಅಡ್ಡದಾರಿ ಹಿಡಿಸಿದ ‘ಸಿದ್ದಹಸ್ತ ಶೂರರು’ ತಮ್ಮ ಸ್ವಪಕ್ಷದಲ್ಲೇ ಮುಸ್ಲೀಂ ನಾಯಕರನ್ನು ಒಬ್ಬೊಬ್ಬರನ್ನಾಗಿಯೇ ಟಾರ್ಗೆಟ್ ಮಾಡುತ್ತಾ ಅಲ್ಪಸಂಖ್ಯಾತರ ಅಂತ್ಯ ರಾಜಕಾರಣದ ಟರ್ಮಿನೇಟರ್ ಆಗಿ ಹೊರಹೊಮ್ಮಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಕೋಟಿಗೊಬ್ಬ-3 ಸಿನಿಮಾ ವಿತರಕರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಸೂರಪ್ಪ ಬಾಬು

ಅಲ್ಪಸಂಖ್ಯಾತರ ಕಲ್ಯಾಣದ ಪೇಟೆಂಟ್ ತೆಗೆದುಕೊಂಡಂತೆ ಪೋಸು ಕೊಡುವ ʼಸಿದ್ದಹಸ್ತʼ ಶೂರನ ನಿಜಬಣ್ಣ ಬಯಲು ಮಾಡುವ ಸಂದರ್ಭ ಬಂದಿದೆ. ಸ್ವಾರ್ಥ, ಸ್ವಜನ ಪಕ್ಷಪಾತ, ತಮ್ಮ ಬೆಂಬಲಿಗರ ರಾಜಕೀಯ ಅಭಿವೃದ್ಧಿಗಾಗಿ ಪಕ್ಷಕ್ಕಾಗಿ ಅಹರ್ನಿಷಿ ದುಡಿದ #ಅಲ್ಪಸಂಖ್ಯಾತ ನಾಯಕರನ್ನು ಗುರಿ ಇಟ್ಟು ಮುಗಿಸಲಾಗುತ್ತಿದೆ! 1/12

— H D Kumaraswamy (@hd_kumaraswamy) October 16, 2021

ನಂಬಿ ಅಧಿಕಾರ ಕೊಟ್ಟ ಪಕ್ಷದ ಕತ್ತನ್ನೇ ಕುಯ್ಯುವ, ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುವ ಸಿದ್ದಹಸ್ತ ಸೂತ್ರಧಾರಿಯ ಒಳ ರಾಜಕೀಯಕ್ಕೆ ಬಲಿಯಾಗುತ್ತಿರುವ ಅಲ್ಪಸಂಖ್ಯಾತ ನಾಯಕರ ದೊಡ್ಡ ಪಟ್ಟಿಯೇ ಇದೆ. ಕಾಂಗ್ರೆಸ್‍ನಲ್ಲಿ ನಡೆದಿರುವ ಅಲ್ಪಸಂಖ್ಯಾತ ನಾಯಕರ ರಾಜಕೀಯ ನರಮೇಧಕ್ಕೆ ಯಾರು ಕಾರಣ ಎಂದು ಜನರಿಗೆ ಗೊತ್ತಾಗಲಿ. 2012ರ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಇಕ್ಬಾಲ್ ಅಹಮದ್ ಸರಡಗಿ ಸೋಲುತ್ತಾರೆ. ಪಕ್ಷೇತರ ಅಭ್ಯರ್ಥಿಯಾಗಿದ್ದ ಭೈರತಿ ಸುರೇಶ್ ತಮ್ಮ ಗೆಲುವಿಗೆ ಬೇಕಿದ್ದ 19 ಮತ ಮೀರಿ 23 ಮತ ಪಡೆದು ಗೆಲ್ಲುತ್ತಾರೆ. ಇಲ್ಲಿ ಸರಡಗಿ ಸೋಲಿಗೆ, ಬೈರತಿ ಸುರೇಶ್ ಗೆಲುವಿಗೆ ಕಾರಣವಾದ ಸಿದ್ದಸೂತ್ರ ಹಣೆದಿದ್ದು ಯಾರು? ಎಂದು ಕ್ರಾಂಂಗ್ರೆಸ್ ಪಕ್ಷವನ್ನು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಹಬ್ಬದಂದು ಹಳೆಯ ಫೋಟೋ ಹಂಚಿಕೊಂಡ ರಮ್ಯಾ- ಅಭಿಮಾನಿಗಳು ಹೇಳಿದ್ದೇನು?

ಚಕ್ರ ತಿರುಗುತ್ತಿದೆ, ನಿಮ್ಮ ಅಂತ್ಯಕಾಲವೂ ಆರಂಭವಾಗಿದೆ. ಅಲ್ಪಸಂಖ್ಯಾತ ಬಾಂಧವರಿಗೆ ನಿಮ್ಮ ನಿಜಬಣ್ಣ ಗೊತ್ತಾಗಿದೆ ಸಿದ್ದಹಸ್ತರೇ. ನಿಮಗೆ ಪಾಠ ಕಲಿಸುವ #ಜನತಾಪರ್ವ ಈಗಷ್ಟೇ ಆರಂಭವಾಗಿದೆ. ಕಾದು ನೋಡಿ… 12/12#ಕಾಂಗ್ರೆಸ್_ಅಲ್ಪಸಂಖ್ಯಾತ_ನಾಯಕರ_ಟರ್ಮಿನೇಟರ್‌ #ಸಿದ್ದಹಸ್ತ #ಸಿದ್ದಸೂತ್ರಧಾರ

— H D Kumaraswamy (@hd_kumaraswamy) October 16, 2021

ಈ ಸಿದ್ದಹಸ್ತರ ಸಿದ್ದಸೂತ್ರ ಅಲ್ಲಿಗೇ ನಿಲ್ಲುವುದಿಲ್ಲ. 2016ರಲ್ಲಿ ಹೆಬ್ಬಾಳ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಹಿರಿಯ ನಾಯಕ ಸಿ.ಕೆ.ಜಾಫರ್ ಷರೀಫ್ ಮೊಮ್ಮಗ ರೆಹಮಾನ್ ಷರೀಫ್ ಅವರಿಗೆ ಅಧಿಕೃತ ಟಿಕೆಟ್ ಕೊಡುತ್ತದೆ. ಆಗ ಭೈರತಿ ಸುರೇಶ್ ಪರ ಲಾಬಿ ಮಾಡಿದ್ದ ಸಿದ್ಧಕಲೆ ಸೂತ್ರಧಾರರು, ಅವರನ್ನೇ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸಿ ಒಳಸುಳಿ ಸೃಷ್ಟಿಸಿ ಷರೀಫರ ಮೊಮ್ಮಗನನ್ನು ಸೋಲಿಸುತ್ತಾರೆ. 2023ರ ಚುನಾವಣೆಯಲ್ಲಿ ಭೈರತಿ ಸುರೇಶ್‍ಗೇ ಹೆಬ್ಬಾಳದ ಕಾಂಗ್ರೆಸ್ ಟಿಕೆಟ್ ಗ್ಯಾರಂಟಿ. ಹಾಗಾದರೆ ಜಾಫರ್ ಷರೀಫರ ಮೊಮ್ಮಗನ ಕಥೆ ಏನು? ಎಂದು ಕಾಂಗ್ರೆಸ್‍ಗೆ ಪ್ರಶ್ನೆಗಳ ಬಾಣವನ್ನು ಬಿಟ್ಟಿದ್ದಾರೆ.

ತನ್ನೆಲ್ಲ ಸಿದ್ದಕಲೆ, ಸಿದ್ದಸೂತ್ರಗಳೆನ್ನೆಲ್ಲ ಪೋಣಿಸಿ ʼಅಹಿಂದʼ ಎಂದು ಜನರನ್ನು ‘ಅಡ್ಡದಾರಿ’ ಹಿಡಿಸಿದ ʼಸಿದ್ದಹಸ್ತ ಶೂರರುʼ ತಮ್ಮ ಸ್ವಪಕ್ಷದಲ್ಲೇ ಮುಸ್ಲೀಂ ನಾಯಕರನ್ನು ಒಬ್ಬೊಬ್ಬರನ್ನಾಗಿಯೇ ಟಾರ್ಗೆಟ್ ಮಾಡುತ್ತಾ ʼಅಲ್ಪಸಂಖ್ಯಾತರ ಅಂತ್ಯ ರಾಜಕಾರಣʼದ #ಟರ್ಮಿನೇಟರ್‌ ಆಗಿ ಹೊರಹೊಮ್ಮಿದ್ದಾರೆ.2/12

— H D Kumaraswamy (@hd_kumaraswamy) October 16, 2021

ಕಳೆದ ಲೋಕಸಭೆ ಚುನಾವಣೆ ನಂತರ ತಮಗೆ ಆಗುತ್ತಿರುವ ಅನ್ಯಾಯ ಪ್ರಶ್ನಿಸಿದ ರೋಷನ್ ಬೇಗ್‍ಗೆ ಶೋಕಾಸ್ ನೊಟೀಸ್ ನೀಡಿ, ತಮ್ಮನ್ನು ಬಹಿರಂಗವಾಗಿ ಪ್ರಶ್ನಿಸಿದರು ಎಂಬ ಕಾರಣಕ್ಕೆ ಅವರನ್ನು ಬೇಕಾಬಿಟ್ಟಿ ನಡೆಸಿಕೊಂಡು ಅಪಮಾನ ಮಾಡುತ್ತಾರೆ ಸಿದ್ದಹಸ್ತರು. ಕೊನೆಗೆ ರೋಷನ್ ಬೇಗ್ ಕಾಂಗ್ರೆಸ್ ಪಕ್ಷದಿಂದಲೇ ದೂರವಾಗುತ್ತಾರೆ. ಮೈಸೂರಿನ ಹಿರಿಯ ನಾಯಕ ತನ್ವೀರ್ ಸೇಠ್ ಅವರನ್ನು ಅಪಮಾನಕರವಾಗಿ ನಡೆಸಿಕೊಂಡಿದ್ದು ಇದೇ ಸಿದ್ದಹಸ್ತರು. ಅಲ್ಲಿನ ಪಾಲಿಕೆಯಲ್ಲಿ ಜಾತ್ಯತೀತ ಶಕ್ತಿಗಳನ್ನು ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ನಡೆಸಿದ ತನ್ವೀರ್ ಮೇಲೆ ಕೂಗಾಡಿದ ಸಿದ್ದಸೂತ್ರ ಪ್ರವೀಣರು, ಇನ್ನಿಲ್ಲದ ಅಪಮಾನ ಮಾಡಿ ನಿಂದಿಸುತ್ತಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ನವದುರ್ಗೆಯರ ವಿಸರ್ಜನಾ ಕಾರ್ಯಕ್ರಮದೊಂದಿಗೆ ಮಂಗಳೂರು ದಸರಾಕ್ಕೆ ತೆರೆ

HDK SIDDU

2012ರ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಇಕ್ಬಾಲ್ ಅಹಮದ್ ಸರಡಗಿ ಸೋಲುತ್ತಾರೆ. ಪಕ್ಷೇತರ ಅಭ್ಯರ್ಥಿಯಾಗಿದ್ದ ಭೈರತಿ ಸುರೇಶ್ ತಮ್ಮ ಗೆಲುವಿಗೆ ಬೇಕಿದ್ದ 19 ಮತ ಮೀರಿ 23 ಮತ ಪಡೆದು ಗೆಲ್ಲುತ್ತಾರೆ!! ಇಲ್ಲಿ ಸರಡಗಿ ಸೋಲಿಗೆ, ಬೈರತಿ ಸುರೇಶ್ ಗೆಲುವಿಗೆ ಕಾರಣವಾದ ʼಸಿದ್ದಸೂತ್ರʼ ಹಣೆದಿದ್ದು ಯಾರು? 4/12

— H D Kumaraswamy (@hd_kumaraswamy) October 16, 2021

ಈಗ ಆಡಿಯೋ ನೆಪದಲ್ಲಿ ಸಲೀಂ ಮೊಹಮದ್ ಬಲಿ ಪಡೆದಾಗಿದೆ. ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಬಿಟ್ಟು ದೊಡ್ಡವರ ರಕ್ಷಣೆ ಮಾಡಲಾಗಿದೆ. ಸಲೀಂ ಹೇಳಿದ್ದೆಲ್ಲವನ್ನೂ ಕೇಳಿಕೊಂಡು ರಸಸ್ವಾದ ಮಾಡಿ ಪುಕ್ಕಟೆ ಮನರಂಜನೆ ಪಡೆದ ವ್ಯಕ್ತಿಗೆ ರಕ್ಷಣೆ ನೀಡಿ ಓರ್ವ ಅಲ್ಪಸಂಖ್ಯಾತ ನಾಯಕನನ್ನು 6 ವರ್ಷ ಉಚ್ಚಾಟಿಸಲಾಗಿದೆ. ಇದು ಯಾವ ಸೀಮೆ ನ್ಯಾಯ? ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಇದೇನಾ ಸಿದ್ದಹಸ್ತರೇ? ತೊಟ್ಟಿಲನ್ನೂ ತೂಗುತ್ತಾ, ಮಗುವನ್ನೂ ಚಿವುಟುತ್ತಾ, ಸಾಧ್ಯವಾದರೆ ಆ ಮಗುವಿನ ಕತ್ತನ್ನೂ ಕುಯ್ಯುತ್ತಾ ನಡೆಸುತ್ತಿರುವ ಇಂಥ ನೀಚ ರಾಜರಾರಣ, ಮುಸ್ಲೀಂ ಬಾಂಧವರಿಗೆ ಈಗ ಗೊತ್ತಾಗಿಬಿಟ್ಟಿದೆ ಎಂದು ಕಾಂಗ್ರೆಸ್ ನಡೆ ಕುರಿತಾಗಿ ಮಾತನಾಡಿ ಆಕ್ರೋಶ ಹೊರಹಾಕಿದ್ದಾರೆ.

HDK SIDDU

ಆಗ ಭೈರತಿ ಸುರೇಶ್ ಪರ ಲಾಬಿ ಮಾಡಿದ್ದ ಸಿದ್ಧಕಲೆ ಸೂತ್ರಧಾರರು, ಅವರನ್ನೇ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸಿ ಒಳಸುಳಿ ಸೃಷ್ಟಿಸಿ ಷರೀಫರ ಮೊಮ್ಮಗನನ್ನು ಸೋಲಿಸುತ್ತಾರೆ! 2023ರ ಚುನಾವಣೆಯಲ್ಲಿ ಭೈರತಿ ಸುರೇಶ್ʼಗೇ ಹೆಬ್ಬಾಳದ ಕಾಂಗ್ರೆಸ್ ಟಿಕೆಟ್ ಗ್ಯಾರಂಟಿ. ಹಾಗಾದರೆ ಜಾಫರ್ ಷರೀಫರ ಮೊಮ್ಮಗನ ಕಥೆ ಏನು?6/12

— H D Kumaraswamy (@hd_kumaraswamy) October 16, 2021

ಇಕ್ಬಾಲ್ ಸರಡಗಿ ಅವರನ್ನು ಸೋಲಿಸಿದಿರಿ, ಜಾಫರ್ ಷರೀಫರ ಮೊಮ್ಮಗನನ್ನು ಮುಗಿಸಿದಿರಿ, ರೋಷನ್ ಬೇಗ್ ವಿರುದ್ಧ ರೋಷ ತೀರಿಸಿಕೊಂಡಿರಿ, ತನ್ವೀರ್ ಸೇಠ್ ಮೇಲೆ ಹಗೆ ಸಾಧಿಸಿದಿರಿ, ಇನ್ನೊಬ್ಬರ ಮೇಲಿನ ಸೇಡನ್ನು ಬಡಪಾಯಿ ಸಲೀಂ ಮೇಲೆ ತಿರುಗಿಸಿ ಒಂದೇ ಕಲ್ಲಿನಲ್ಲಿ 2 ಹಕ್ಕಿ ಹೊಡೆದು ಕಿರಾತಕ ರಾಜಕಾರಣ ಮಾಡಿದಿರಿ. ಚಕ್ರ ತಿರುಗುತ್ತಿದೆ, ನಿಮ್ಮ ಅಂತ್ಯಕಾಲವೂ ಆರಂಭವಾಗಿದೆ. ಅಲ್ಪಸಂಖ್ಯಾತ ಬಾಂಧವರಿಗೆ ನಿಮ್ಮ ನಿಜಬಣ್ಣ ಗೊತ್ತಾಗಿದೆ. ಸಿದ್ದಹಸ್ತರೇ ನಿಮಗೆ ಪಾಠ ಕಲಿಸುವ ಜನತಾಪರ್ವ ಈಗಷ್ಟೇ ಆರಂಭವಾಗಿದೆ. ಕಾದು ನೋಡಿ ಎಂದು ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ.

TAGGED:congresshd kumaraswamyjdspublictvsiddaramaiahtweetwarಕಾಂಗ್ರೆಸ್ಕುಮಾರಸ್ವಾಮಿಜೆಡಿಎಸ್ಪಬ್ಲಿಕ್ ಟಿವಿಬೆಂಗಳೂರುಸರ್ಕಾರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories

You Might Also Like

Jharkhand Ranchi Air Ambulence Crash
Latest

ಜಾರ್ಖಂಡ್‌ನ ರಾಂಚಿಯಲ್ಲಿ ಏರ್ ಅಂಬುಲೆನ್ಸ್ ಪತನ

Public TV
By Public TV
49 minutes ago
ICC Mens T20 World Cup West Indies vs Zimbabwe West Indies won by 107 runs
Cricket

ಸಿಕ್ಸರ್‌, ಬೌಂಡರಿಯಿಂದಲೇ ವಿಂಡೀಸ್‌ಗೆ 178 ರನ್‌ – ಜಿಂಬಾಬ್ವೆ ವಿರುದ್ಧ 107 ರನ್‌ಗಳ ಭರ್ಜರಿ ಜಯ

Public TV
By Public TV
55 minutes ago
big bulletin 23 February 2026 part 1
Big Bulletin

ಬಿಗ್‌ ಬುಲೆಟಿನ್‌ 23 February 2026 ಭಾಗ-1

Public TV
By Public TV
1 hour ago
big bulletin 23 February 2026 part 2
Big Bulletin

ಬಿಗ್‌ ಬುಲೆಟಿನ್‌ 23 February 2026 ಭಾಗ-2

Public TV
By Public TV
1 hour ago
big bulletin 23 February 2026 part 3
Big Bulletin

ಬಿಗ್‌ ಬುಲೆಟಿನ್‌ 23 February 2026 ಭಾಗ-3

Public TV
By Public TV
1 hour ago
Double Decker Bus Overturns In Lucknow
Crime

ಲಕ್ನೋದಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿ – ಐವರು ದುರ್ಮರಣ, 16 ಮಂದಿಗೆ ಗಾಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?