ಕುವೆಂಪು, ನಾಡಗೀತೆಗೆ ಅವಮಾನ- ರೋಹಿತ್ ಚಕ್ರತೀರ್ಥರ ಮೇಲೆ ಮುಗಿಬಿದ್ದ ಕಾಂಗ್ರೆಸ್

Public TV
1 Min Read
ROHITH CHAKRATHIRTHA 1

ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಮುಗಿಯುವಂತೆ ಕಾಣುತ್ತಿಲ್ಲ. ಈ ವಿಷಯದಲ್ಲಿ ಪರಸ್ಪರ ಬಹಿರಂಗ ವಾಗ್ವಾದಕ್ಕೆ ಇಳಿದಿರುವ ಬಿಜೆಪಿ-ಕಾಂಗ್ರೆಸ್ ಮುಖಂಡರು ದಿನಾ ಒಂದಿಲ್ಲ ಒಂದು ವಿವಾದಗಳನ್ನು ತೆರೆದಿಡುತ್ತಿದ್ದಾರೆ.

CONGRESS BJP

ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಮೇಲೆ ಮುಗಿಬಿದ್ದಿರುವ ಪ್ರತಿಪಕ್ಷಗಳು ಮತ್ತು ಪ್ರಗತಿಪರರು ಇದೀಗ ರೋಹಿತ್ ಅವರ ಹಳೇ ಪೋಸ್ಟ್ ಒಂದನ್ನು ಹರಿಯಬಿಟ್ಟಿದ್ದಾರೆ. ಕುವೆಂಪು ರಚಿತ ನಾಡಗೀತೆಯನ್ನು ವ್ಯಂಗ್ಯ ಮಾಡಿ ರೋಹಿತ್ ಚಕ್ರತೀರ್ಥ 2017 ರಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಪೋಸ್ಟನ್ನು ಈಗ ನೆನಪಿಸಿದ್ದಾರೆ. ಇದರ ವಿರುದ್ಧ ಪೋಲೀಸ್ ಠಾಣೆಯಲ್ಲಿ ಅಂದು ದೂರು ಕೂಡ ದಾಖಲಾಗಿತ್ತು. ಇದನ್ನೂ ಓದಿ: ಜೈಲಿನಲ್ಲಿದ್ದ ನವಜೋತ್‌ ಸಿಂಗ್‌ ಸಿಧು ಆಸ್ಪತ್ರೆಗೆ ದಾಖಲು

ಕುವೆಂಪು ಮತ್ತು ನಾಡಗೀತೆಗೆ ಅಗೌರವ ತೋರಿದ ವ್ಯಕ್ತಿ ಪಠ್ಯಪರಿಷ್ಕರಣಾ ಸಮಿತಿಗೆ ಅಧ್ಯಕ್ಷರಾಗಿದ್ದಕ್ಕೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಪ್ರಗತಿಪರರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಮನಸ್ಥಿತಿಯ ವ್ಯಕ್ತಿ ಶಿಫಾರಸು ಮಾಡಿರುವುದನ್ನು ಪಠ್ಯದಲ್ಲಿ ಸೇರಿಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರದ ನಡೆಗೂ ತೀವ್ರ ಆಕ್ರೋಶ ವ್ಯಕ್ತಪಡಿಸಿ ವಾಗ್ದಾಳಿ ನಡೆಸಿದ್ದಾರೆ. ಒಟ್ಟಿನಲ್ಲಿ ಶಾಲಾ ಮಕ್ಕಳ ಪಠ್ಯ ಪುಸ್ತಕ ವಿಚಾರ ನಿರಂತರ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗುತ್ತಿರುವುದು ದುರದೃಷ್ಟಕರ.

Share This Article
Leave a Comment

Leave a Reply

Your email address will not be published. Required fields are marked *